NEWSನಮ್ಮಜಿಲ್ಲೆರಾಜಕೀಯ

ಮೈಸೂರು ಜಿಲ್ಲಾ ಜನರ ಸಮಸ್ಯೆಗೆ ಸ್ಪಂದಿಸದ ಉಸ್ತುವಾರಿ ಸಚಿವರ ಬದಲಾಯಿಸಿ: ಕುರುಬೂರು ಶಾಂತಕುಮಾರ್ ಒತ್ತಾಯ

ವಿಜಯಪಥ ಸಮಗ್ರ ಸುದ್ದಿ

ಮೂಸೂರು: ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಜಿಲ್ಲೆಯ ಜನರ ಸಮ್ಯೆಗೆ ಸ್ಪಂದಿಸುತ್ತಿಲ್ಲ ಹೀಗಾಗಿ ಅವರನ್ನು ಕೂಡಲೇ ಬದಲಾವಣೆ ಮಾಡಬೇಕೆಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಒತ್ತಾಯಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಈ ಕುರಿತು ಹೇಳಿಕೆ ನೀಡಿರುವ ಅವರು, ಮಾನವೀಯ ಮೌಲ್ಯಗಳಿಗೆ ಸ್ಪಂದಿಸದ ಜಿಲ್ಲಾ ಉಸ್ತುವಾರಿ ಸಚಿವರು ಈ ಜಿಲ್ಲೆಗೆ ಅವಶ್ಯಕತೆ ಇಲ್ಲ. ಕಳೆದ ಹಲವಾರು ದಿನಗಳಿಂದ ಆನೆ, ಚಿರತೆ ಹಾಗೂ ಹುಲಿಗಳಿಂದ ಅಮಾಯಕ ಮುಗ್ಧ ಜೀವಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಇದಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎಂಬಂತೆ ಕಾಲ ಹರಣ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ರಸ್ತೆ ಬದಿಯಲ್ಲಿ ಚಾಕಲೇಟ್ ತರಲು ಹೋದ ಪುಟ್ಟ ಬಾಲಕನ ಸಾವು ಮಾನವೀಯ ಮೌಲ್ಯಗಳು ಇರುವ ಮನುಷ್ಯರಿಗೆ ಕಣ್ಣಂಚಿನಲ್ಲಿ ನೀರು ಬರುತ್ತಿದೆ. ಮಹಿಳೆಯರು ಸೇರಿದಂತೆ ಪುಟ್ಟ ಪುಟ್ಟ ಬಾಲಕರು ದಿನದಿಂದ ದಿನಕ್ಕೆ ಜೀವ ಕಳೆದುಕೊಳ್ಳುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಕಾಡಂಚಿನ ಪ್ರದೇಶಗಳಿಗೆ ಭೇಟಿ ನೀಡಿ ಸಮಸ್ಯೆ ಆಲಿಸಿಬೇಕು. ಅಲ್ಲಿವ ಪ್ರಸ್ತು ವಸ್ತುಸ್ಥಿತಿ ನೋಡಿ ಅಧಿಕಾರಿಗಳ ಜತೆ ಚರ್ಚಿಸಿ ಕಾಡಿನಿಂದ ಪ್ರಾಣಿಗಳು ಹೊರಬರದಂತೆ ಹಾಗೂ ನಾಡಿನಲ್ಲಿರುವ ಚಿರತೆಗಳನ್ನು ಸೆರೆಹಿಡಿದು ಕಾಡಿಗೆ ಬಿಡುವ ಕಾರ್ಯಕ್ಕೆ ಚುರುಕು ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಹೀಗೆ ಮಾಡದಿರುವುದರಿಂದ ಈಗ ಹೋಗಿರುವ ಜೀವಗಳ ಜತೆಗೆ ಮತ್ತಷ್ಟು ಜೀವಗಳು ಕಾಡು ಪ್ರಾಣಿಗಳಿಗೆ ಬಲಿಯಾಗಲಿವೆ. ಆ ರೀತಿ ಆಗಲಿ ಎಂದು ಕಾಯುತ್ತಿದ್ದಾರಾ ಸಚಿವರು ಎಂದು ಪ್ರನಿಸಿದ್ದಾರೆ. ಇನ್ನು ಬಾಲಕರು, ಮಹಿಳೆಯರು, ರೈತರು, ಶೋಷಿತ ಸಮುದಾಯಗಳು ಜೀವ ಕಳೆದುಕೊಳ್ಳುತ್ತಿದ್ದಾರೆ. ರೈತರು ಹೊಲಗದ್ದೆಗಳಿಗೆ ತೆರಳಿ ಕೆಲಸ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ.

ಸಂಜೆ 6ರ ನಂತರ ಮನೆಯಿಂದ ಹೊರಬರದಂತೆ ಕಟ್ಟೆಚರ ವಹಿಸಲಾಗುತ್ತಿದೆ. ಕಣ್ಣ ಮುಚ್ಚಾಲೆ ಆಡುವ ವಿದ್ಯುತ್ ಕಂಪನಿಗಳಿಂದ ರೈತರಿಗೆ ಬಾರಿ ಅನಾನುಕೂಲ ಉಂಟಾಗಿದೆ. ವಿದ್ಯುತ್ ಬಂದಾಗ ಹೊಲಗದ್ದೆಗಳಿಗೆ ತೆರಳಿ ಪಂಪ್ಸೆಟ್ ಆನ್ ಮಾಡಬೇಕು ಇಲ್ಲದಿದ್ದರೆ ರೈತರು ಬೆಳೆ ಬೆಳೆಯಲು ಸಾಧ್ಯವಿಲ್ಲ. ಎಷ್ಟು ದಿನ ಮನೆಯಲ್ಲಿ ಇರಲು ಸಾಧ್ಯ. ಜಿಲ್ಲಾ ಉಸ್ತುವಾರಿ ಸಚಿವರು ಅಧಿಕಾರಿಗಳ ತ್ರೈಮಾಸಿಕ ಸಭೆ ನಡೆಸಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದರೆ ಈ ದುರ್ಘಟನೆಗಳು ನಡೆಯುತ್ತಿರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಗಣರಾಜ್ಯೋತ್ಸವ ದಿನದಂದು ಧ್ವಜಾರೋಹಣ ಮಾಡಿ ಮತ್ತೆ ಬೆಂಗಳೂರಿಗೆ ಹೋಗುವ ಸಚಿವರು ಮೈಸೂರು ಜಿಲ್ಲೆಗೆ ಅವಶ್ಯಕತೆ ಇಲ್ಲ. ಇವರು ಜನರ ಸಾವು ನೋವು ಹಾಗೂ ಕಷ್ಟಗಳಿಗೆ ಸ್ಪಂದಿಸದ ಸಚಿವರು ಧ್ವಜಾರೋಹಣ ನೆರವೇರಿಸಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯಗಳಿಗೆ ಅವಮಾನ ಮಾಡುವ ಬದಲು ಸರ್ಕಾರ ಇವರನ್ನು ತಕ್ಷಣದಿಂದಲೇ ಬದಲಾವಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ