NEWSನಮ್ಮರಾಜ್ಯಸಿನಿಪಥ

ಬಳ್ಳಾರಿಯಲ್ಲಿ ಯೋಗಾಚರಿಸಿದ ಸಿಎಂ ಸಿದ್ದರಾಮಯ್ಯ – ನಟಿ ಶ್ರೀಲೀಲಾ ಸಾಥ್‌

ವಿಜಯಪಥ ಸಮಗ್ರ ಸುದ್ದಿ

ಬಳ್ಳಾರಿ: ಜಿಲ್ಲೆಯ ಸಂಡೂರ ತಾಲೂಕಿನ ತೋರಣಗಲ್ ಬಳಿಯ ಜಿಂದಾಲ್ ವಿದ್ಯಾನಗರದಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಯೋಗಾಭ್ಯಾಸ ಮಾಡುವ ಮೂಲಕ ಆಚರಿಸಿದರು.

ಸಾಮೂಹಿಕ ಯೋಗ ಪ್ರದರ್ಶನದಲ್ಲಿ ಸಾವಿರಾರು ಮಂದಿ ಪಾಲ್ಗೊಂಡಿದ್ದರು. ನಟಿ ಶ್ರೀಲೀಲಾ, ಸಚಿವ ಸಂತೋಷ ಲಾಡ್, ಸಂಸದ ಈ. ತುಕಾರಾಂ ಜಿಲ್ಲೆಯ ಶಾಸಕರು ಹಾಗೂ ಮುಖಂಡರು ಸಿಎಂಗೆ ಸಾಥ್‌ ನೀಡಿದರು.

ವಚನಾನಂದ ಶ್ರೀಗಳ ನೇತೃತ್ವದಲ್ಲಿ ಯೋಗ ಕಾರ್ಯಕ್ರಮ ಆರಂಭವಾಯಿತು. ಅವಧೂತ ವಿನಯ್ ಗುರೂಜಿ ಅವರು ಯೋಗ ಕಾರ್ಯಕ್ರಮ ನಿರ್ವಹಣೆ ಮಾಡಿದರು. ವಿವಿಧ ಯೋಗಾಸನಗಳ ಸೂಚನೆ ನೀಡುತ್ತಾ, ತಾವೂ ಯೋಗ ಆಸನಗಳ ಪ್ರದರ್ಶನ ನಡೆಸಿಕೊಟ್ಟರು.

ಇದೇ ವೇಳೆ ಸಾಂಪ್ರದಾಯಿಕವಾಗಿ ಪಂಚೆ ಶಲ್ಯ ಧರಿಸಿದ್ದ ಸಿದ್ದರಾಮಯ್ಯ ಅವರು ವಚನಾನಂದ ಶ್ರೀಗಳ ಸೂಚನೆಯಂತೆ ಏಕಾಗ್ರತೆಯಿಂದ ಯೋಗ ಪ್ರದರ್ಶನ ಮಾಡಿದರು. ವೇದಿಕೆಯಲ್ಲಿ ನಟಿ ಶ್ರೀಲೀಲಾ ಸಹ ತದೇಕಚಿತ್ತದಿಂದ ಯೋಗ ಮಾಡಿದರು. ಸಾಮೂಹಿಕ ಯೋಗ ಪ್ರದರ್ಶನದಲ್ಲಿ ಅಂತಾರಾಷ್ಟ್ರೀಯ ಕ್ರೀಡಾಪಟುಗಳೂ ಪಾಲ್ಗೊಂಡಿದ್ದರು.

ಯೋಗ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಸಿಎಂ ಹೊಸಪೇಟೆಯ ಡಿಸಿ ಕಚೇರಿಯಲ್ಲಿ ಆಯೋಜನೆಗೊಂಡಿರುವ ಕೆಡಿಪಿ ಸಭೆಗೆ ತೆರಳಿದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ