NEWSಬೆಂಗಳೂರುಸಂಸ್ಕೃತಿ

215ನೇ ಫಲಪುಷ್ಪ ಪ್ರದರ್ಶನಕ್ಕೆ ಲಾಲ್​​ಬಾಗ್​ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪ್ರತಿವರ್ಷದಂತೆ ಗಣರಾಜ್ಯೋತ್ಸವದ ನಿಮಿತ್ತ ಲಾಲ್​​ಬಾಗ್​ನಲ್ಲಿ ಆಯೋಜಿಸಲಾಗಿರುವ 215ನೇ ಫಲಪುಷ್ಪ ಪ್ರದರ್ಶನದಲ್ಲಿ ಅರಳಿರುವ ಬಸವಣ್ಣನ ಪ್ರತಿರೂಪಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಚಾಲನೆ ನೀಡಿದರು.

ತೋಟಗಾರಿಕೆ ಇಲಾಖೆ ವತಿಯಿಂದ ಲಾಲ್‌ಬಾಗ್‌ನ ಗಾಜಿನ ಮನೆಯಲ್ಲಿ ಗುರುವಾರ (ಜ.18) ಆಯೋಜಿಸಿದ್ದ ವಿಶ್ವಗುರು ಬಸವಣ್ಣ ಮತ್ತು ವಚನ ಸಾಹಿತ್ಯಾಧಾರಿತ ಗಣರಾಜ್ಯೋತ್ಸವ ಫಲ ಪುಷ್ಪ ಪ್ರದರ್ಶನ 2024 ಅನ್ನು ಉದ್ಘಾಟಿಸಿ ಬಳಿಕ ವೀಕ್ಷಿಸಿದರು.

ಈ ಬಾರಿ ಫಲಪುಷ್ಟ ಪ್ರದರ್ಶನದಲ್ಲಿ ಬಸವಣ್ಣ, ಅಲ್ಲಮಪ್ರಭು, ಅಕ್ಕಮಹಾದೇವಿ, ಚನ್ನಬಸವಣ್ಣ ಪ್ರತಿರೂಪ ಅರಳಿವೆ. ಲಾಲ್​ಬಾಗ್​ನ ಗಾಜಿನಮನೆಯಲ್ಲಿ ಸೇವಂತಿಗೆ, ಗುಲಾಬಿ ಹೂವುಗಳಿಂದ ಅನುಭವ ಮಂಟಪ ನಿರ್ಮಾಣವನ್ನೂ ಮಾಡಲಾಗಿದೆ. 8 ಬಗೆಯ 32 ಲಕ್ಷ ಹೂವುಗಳನ್ನು ಬಳಕೆ ಮಾಡಲಾಗಿದ್ದು, ಜನವರಿ 28ರವರೆಗೂ ಪ್ರತಿದಿನ ಬೆಳಗ್ಗೆ 6.30ರಿಂದ ಸಂಜೆ 7.30ರವರೆಗೆ ಫಲಪುಷ್ಪ ಪ್ರದರ್ಶನವನ್ನು ಸಾರ್ವಜನಿಕರು ವೀಕ್ಷಿಸಬಹುದಾಗಿದೆ.

ಫಲಪುಷ್ಟ ಪ್ರದರ್ಶನ ಉದ್ಘಾಟನೆ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹಲವಾರು ಸ್ವಾಮೀಜಿಗಳು ನನ್ನನ್ನು ಭೇಟಿ‌ ಮಾಡಿದ ವೇಳೆ ಸಾಂಸ್ಕೃತಿಕ ನಾಯಕ ಅಂತ ಬಸವಣ್ಣನವರನ್ನು ಕರೆಯಬೇಕು ಎಂದು ಒತ್ತಾಯ ಮಾಡಿದರು. ಹೀಗಾಗಿ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಿದ್ದೇವೆ. ಇನ್ಮುಂದೆ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಕರೆಯಲಾಗುತ್ತದೆ ಎಂದು ಘೋಷಣೆ ಮಾಡಿದರು.

ಇನ್ನು ಶಿಕಾರಿಪುರದಲ್ಲಿರುವ 46 ಎಕರೆ ಜೈಲಿನ ಜಾಗಕ್ಕೆ ಅಲ್ಲಮಪ್ರಭು ಎಂದು ನಾಮಕರಣ ಮಾಡಿದ್ದೇವೆ ಎಂದ ಅವರು, ಲಾಲ್​ಬಾಗ್​ನಲ್ಲಿ ಎಂದಿನಂತೆ ಗಣರಾಜ್ಯೋತ್ಸವದ ಪ್ರಯುಕ್ತ ಫಲಪುಷ್ಪ ಪ್ರದರ್ಶನವನ್ನು ಆಯೋಜನೆ ಮಾಡಲಾಗಿದೆ. 12ನೇ ಶತಮಾನದಲ್ಲಿ ಸಮಾನತೆಯನ್ನು ನಿರ್ಮಿಸಿ ಜಾತಿ ಪದ್ಧತಿ ಹೋಗಲಾಡಿಸುವ ನಿಟ್ಟಿನಲ್ಲಿ ಬಸವಣ್ಣನವರು ಹೋರಾಡಿದ್ದರು ಎಂದು ತಿಳಿಸಿದರು.

ಇಂದು ಬಸವಣ್ಣ, ಅಲ್ಲಮಪ್ರಭು, ಅಕ್ಕಮಹಾದೇವಿ, ಚನ್ನಬಸವಣ್ಣ ಪ್ರತಿರೂಪ ಅರಳಿಸಿ ಬಸವಣ್ಣನವರ ಸಂದೇಶವನ್ನು ಜನರಿಗೆ ತಲುಪಿಸುವ ಕೆಲಸವನ್ನು ತೋಟಗಾರಿಕೆ ಇಲಾಖೆ ಮಾಡಿದೆ. ಬೆಂಗಳೂರು ಜನರು ಇದರ ಸದುಪಯೋಗ ಪಡೆದುಕೊಳ್ಳಿ. ಫಲಪುಷ್ಪ ಪ್ರದರ್ಶನದಲ್ಲಿ ಹಲವು ಬೆಳವಣಿಗೆಯ ಪರಿಚಯಿಸುವ ಕೆಲಸ ತೋಟಗಾರಿಕೆ ಇಲಾಖೆ ಮಾಡುತ್ತಿದೆ ಎಂದು ಸಿದ್ದರಾಮಯ್ಯ ಕರೆ ನೀಡಿದರು.

Leave a Reply

error: Content is protected !!
LATEST
KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ