NEWSಆರೋಗ್ಯನಮ್ಮರಾಜ್ಯಸಿನಿಪಥ

ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನಟ ಶಿವರಾಜ್ ಕುಮಾರ್ ಅವರ ನಾಗವಾರದ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು.

ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಅವರು ಒಂದು ತಿಂಗಳ ಬಳಿಕ ಅಮೆರಿಕದಿಂದ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಕ್ಯಾನ್ಸರ್ ಹಿನ್ನೆಲೆಯಲ್ಲಿ ಶಿವಣ್ಣ ಅವರು ಅಮೆರಿಕಾಗೆ ಚಿಕಿತ್ಸೆಗಾಗಿ ಹೋಗಿದ್ದರು. ನಿನ್ನೆ ನಿವಾಸಕ್ಕೆ ಬಂದಿರುವ ಶಿವಣ್ಣ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಮಾಡಿದ್ದಾರೆ.

ಹೌದು, ನಿನ್ನೆ ನಟ ಶಿವರಾಜ್‌ ಕುಮಾರ್‌ ಅವರು ಅಮೆರಿಕದಿಂದ ವಾಪಸ್ ಬೆಂಗಳೂರಿಗೆ ಬಂದಿದ್ದು, ಅವರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ಏರ್​ಪೋರ್ಟ್​ನಲ್ಲಿ ಹೂಮಳೆ ಸುರಿಸಿ, ಕೇಕ್ ಕಟ್​ ಮಾಡಿ ಫ್ಯಾನ್ಸ್ ಖುಷಿ ಪಡುವ ಮೂಲಕ ಸ್ವಾಗತಿಸಿದರು. ಕ್ಯಾನ್ಸರ್ ಚಿಕಿತ್ಸೆ ಪಡೆದು ವಾಪಸ್ ಆಗಿರುವ ಶಿವರಾಜ್ ಕುಮಾರ್ ಅವರ ಆರೋಗ್ಯ ವಿಚಾರಿಸಲು ಸಿಎಂ ಸಿದ್ದರಾಮಯ್ಯ ನೇರವಾಗಿ ನಿವಾಸಕ್ಕೆ ಭೇಟಿ ಕೊಟ್ಟಿದ್ದಾರೆ.

2024 ಡಿಸೇಂಬರ್ 18ರಂದು ಚಿಕಿತ್ಸೆಗಾಗಿ ಅಮೆರಿಕಗೆ ತೆರಳಿದ್ದ ಶಿವರಾಜ್‌ಕುಮಾರ್ ಅವರಿಗೆ ಚಿಕಿತ್ಸೆ ಯಶಸ್ವಿಯಾಗಿ ಬೆಂಗಳೂರಿಗೆ ಮರಳಿರುವ ಅವರ ಆರೋಗ್ಯ ವಿಚಾರಿಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಶಸ್ತ್ರಚಿಕಿತ್ಸೆಯ ಬಳಿಕ ಅವರ ಆರೋಗ್ಯವನ್ನು ವಿಚಾರಿಸಲು ಇಂದು ಭೇಟಿ ಮಾಡಿದ್ದೇನೆ. ಅವರ ಶಸ್ತ್ರ ಚಿಕಿತ್ಸೆಯ ಮರುದಿನವೇ ಅವರಿಗೆ ಕರೆಯಾಡಿ ಆರೋಗ್ಯ ವಿಚಾರಿಸಿದಾಗ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು ತೊಂದರೆ ಇಲ್ಲ ಎಂದು ತಿಳಿಸಿದ್ದರು ಎಂದು ಹೇಳಿದರು.

ಆಪರೇಷನ್ ಆದ ನೆಕ್ಸ್ಟ್ ಡೇ ಫೋನ್ ಮಾಡಿದ್ದೆ. ಆಪರೇಷನ್ ಚೆನ್ನಾಗಿ ಆಗಿದೆ ತೊಂದರೆ ಇಲ್ಲ ಅಂತ ಡಾಕ್ಟರ್ ಹೇಳಿದ್ದಾರೆ. ಈಗ ಆಪರೇಷನ್ ಸಕಸ್ಸ್ ಆಗಿದೆ. ಅವರು ಮುಂದಿನ ತಿಂಗಳಿನಿಂದ ಶೂಟಿಂಗ್ ಎಲ್ಲ ಹೋಗ್ತಾರಂತೆ. ಸದ್ಯಕ್ಕೆ ಶಿವಣ್ಣ ಆರೋಗ್ಯವಾಗಿದ್ದಾರೆ ಎಂದರು.

ಶಿವರಾಜ್ ಕುಮಾರ್: ಇಲ್ಲಿಂದ ಹೋಗಬೇಕಾದರೆ ಸ್ವಲ್ಪ ಎಮೋಷನಲ್ ಆಗಿದ್ದೆ. ಆಪರೇಷನ್ ಅಂದರೆ ಅಷ್ಟೂ ಸುಲಭವಲ್ಲ. ಎಲ್ಲರ ಸಪೋರ್ಟ್​ ಇದ್ದರೂ ಅಮೆರಿಕಕ್ಕೆ ಹೋಗುವಾಗ ಕೊಂಚ ಭಯ ಇತ್ತು. ಆದರೆ ವೈದ್ಯರು ಮಾತನಾಡಿದ ಮೇಲೆ ಧೈರ್ಯ ಬಂತು. ಸಂಬಂಧಿಕರು, ಗೆಳೆಯರು, ವರುಣ್, ಡಿಕೆಡಿ ಬ್ಲಾಕ್ ಇದೆಯಲ್ಲ ಅನುಶ್ರೀ, ಎಚ್​.ಡಿ ಪ್ರಕಾಶ್, ವಿಜಯ್ ರಾಘವೇಂದ್ರ, ಅರ್ಜುನ್ ಜನ್ಯ, ರಮೇಶ್ ರೆಡ್ಡಿ, ಶ್ರೀಕಾಂತ್, ನಾಗಿ ಸೇರಿ ತುಂಬಾ ಜನ ಹಿಂದೆ ಇದ್ದರು.

ಇದರಿಂದ ಇನ್ನಷ್ಟು ಧೈರ್ಯ ಬಂತು. ಏನ್ ಆಗಬಹುದು, ಹೇಗೆ ಆಗುತ್ತೆ ಎಂಬ ಭಯ ಇತ್ತು. ಡಾಕ್ಟರ್ ಮನು ಅವರು ನಿಮ್ಮ ಧೈರ್ಯ ಮೆಚ್ಚಲೇಬೇಕು. ಆಸ್ಪತ್ರೆಯಲ್ಲಿ ಎಲ್ಲ ಸರ್ಜರಿ ಮುಗಿದ ಮೇಲೆ 3-4 ದಿನಗಳ ನಂತರ ವರದಿ ಬಂತು. ಅದರಲ್ಲಿ ಕ್ಯಾನ್ಸರ್​ ಫ್ರೀ ಅಂತ ವರದಿ ಬಂದಿದ್ದರಿಂದ ಹೆಚ್ಚು ಖುಷಿ ಆಗಿತ್ತು.

ಆರು ಸರ್ಜರಿಗಳನ್ನು ಒಟ್ಟಿಗೆ ಮಾಡಿದ್ದಾರೆ. 190 ಸ್ಟಿಚ್ ಹಾಕಿರುವುದು ನನಗೆ ಗೊತ್ತಿಲ್ಲ. ಆಸ್ಪತ್ರೆಯಲ್ಲಿ ಅದೆಲ್ಲ ಕೇಳುವ ಪರಿಸ್ಥಿತಿ ಇರಲಿಲ್ಲ. ಡಾಕ್ಟರ್ ಈ ಬಗ್ಗೆ ಯಾವುದನ್ನೂ ನಮ್ಮ ಬಳಿ ಹೇಳಲ್ಲ. ಎರಡನೇ ದಿನದಿಂದ ವಾಕ್ ಶುರು ಮಾಡಿದೆ. ಆ ಎನರ್ಜಿ ಎಲ್ಲಿಂದ ಬಂತೋ ಗೊತ್ತಿಲ್ಲ, ಅಭಿಮಾನಿಗಳಷ್ಟೇ ಅಲ್ಲ ಇಂಡಸ್ಟ್ರೀಯವರು ಧೈರ್ಯ ತುಂಬಿದರು ಎಂದು ಹೇಳಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ