ಚಿಕ್ಕಬಳ್ಳಾಪುರ: ನಗರದ ನೂತನ ಕನ್ನಡ ಭವನದಲ್ಲಿ ಮೇ 28ರ ಬುಧವಾರ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಈವರೆಗೂ ಬಹುತೇಕ ಕಸಾಪ ಸದಸ್ಯರಿಗೆ ಹಾಗೂ ಈ ಹಿಂದಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸೇವೆ ಸಲ್ಲಿಸಿದವರಿಗೆ ಆಹ್ವಾನ ಪತ್ರಿಕೆ ತಲುಪಿಸುವಲ್ಲಿ ಪರಿಷತ್ನ ಪದಾಧಿಕಾರಿಗಳು ನಿರುತ್ಸಾಹ ತೋರಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಕನ್ನಡ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿಯೇ ಕನ್ನಡ ಸಾಹಿತ್ಯ ಪರಿಷತ್ನ ಜಿಲ್ಲಾ ಸಮ್ಮೇಳನ ನಡೆಯಲು ಎಲ್ಲ ತಯಾರಿ ನಡೆದಿದ್ದು ಎರಡು ದಿನಗಳ ಕಾರ್ಯಕ್ರಮ ಎಂದು ತೋರಿಸಿಕೊಳ್ಳುವ ಹುನ್ನಾರ ನಡೆದಿದೆ. ಅಲ್ಲದೆ ಮೊದಲನೇ ಅಂದರೆ ಇಂದು ಮಂಗಳವಾರ ಸಾಹಿತ್ಯ ಪರಿಷತ್ನ ಕಾರ್ಯಕ್ರಮಗಳು ಅಷ್ಟಕಷ್ಟೆ.
ಕಾರಣ ಕನ್ನಡ ಭವನ ಉದ್ಘಾಟನೆ ಕಾರ್ಯಕ್ರಮವನ್ನು ಜಿಲ್ಲಾಡಳಿತದಿಂದ ಆಯೋಜಿದ್ದು, ದಿನವಿಡಿ ಇದರ ಕಾರ್ಯಕ್ರಮವೇ ಮೇಲ್ಪಂಕ್ತಿಗೆ ಬರಲಿದೆ ನಾಮ್ ಕೇ ವಾಸ್ತೆಗಾಗಿ ಸಾಹಿತ್ಯ ಸಮ್ಮೇಳನ ನಡೆಸಲು ಎಲ್ಲ ತಯಾರಿ ನಡೆದಿದೆ ಇದು ಪದಾಧಿಕಾರಿಗಳ ಪೂರ್ವಗ್ರಹ ಪೀಡಿತ ಕಾರ್ಯಕ್ರಮ ಎಂದು ಹಲವು ಸಾಹಿತಿಗಳು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ
ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಅರ್ಥಪೂರ್ಣವಾಗಿ ನಡೆಯಲು ಕನ್ನಡ ಸಾಹಿತ್ಯ ಪರಿಷತ್ನಲ್ಲಿ ಸೇವೆ ಸಲ್ಲಿಸಿದವರನ್ನು ವಿವಿಧ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳ ಪೂರ್ವಭಾವಿ ಸಭೆ ಕರೆದು ವ್ಯವಸ್ಥಿತವಾಗಿ ಮಾಡಿಲ್ಲ. ಒಂದು ತಿಂಗಳ ಹಿಂದೆ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವ ಕುರಿತಾಗಿ ತೀರ್ಮಾನ ಆಗಿತ್ತಾದ್ರೂ ಪೋಪ್ ನಿಧನದಿಂದಾಗಿ ಅಂದು ಈ ಕಾರ್ಯಕ್ರಮ ಮುಂದೂಡಲ್ಪಟ್ಟಿತ್ತು,
ಇದಲ್ಲದೆ ಕನ್ನಡ ಸಾಹಿತ್ಯ ಪರಿಷತ್ನಿಂದ ಸಾಹಿತ್ಯಸಕ್ತರನ್ನು ಸೇರಿಸಿಕೊಂಡು ಕಾರ್ಯಕ್ರಮ ಮಾಡದೆ ಇರುವುದು ಒಂದು ಕಡೆಯಾದರೆ, ಸಾಹಿತ್ಯ ಪರಿಷತ್ನಿಂದ ಮಾಡಿದ ಬಹುತೇಕ ಎಲ್ಲ ಕಾರ್ಯಕ್ರಮಗಳು ಕೇವಲ ಒಂದು ರಂಗಮಂದಿರಕ್ಕೆ ಸೀಮಿತವಾಗಿವೆ. ಇದೊಂದು ಶಾಲೆ ಕಾಲೇಜುಗಳಿಗೆ ಮಾತ್ರ ಸೀಮಿತ ಎನ್ನುಮತ್ತಿತ್ತು ಹೀಗಾಗಿ ಸಾಹಿತ್ಯಸಕ್ತರ ಹಿತವನ್ನೇ ಬಯಸದೆ ಪರಿಷತ್ತಿನ ಕಾರ್ಯಕ್ರಮಗಳು ಗಡಿ ಹಂಚಿನಲ್ಲಿರುವ ಈ ಭಾಗದಲ್ಲಿ ಹೆಚ್ಚು ನಡೆಬೇಕಿತ್ತು. ಆದರೆ ಆಗಲಿಲ್ಲ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತಗಗ ಮಾಜಿ ಅಧ್ಯಕ್ಷರೊಬ್ಬರು ತಮ್ಮ ಅಸಮಾಧಾನ ಹೊರಹಾಕಿದರು.
ಕನ್ನಡ ಸಾಹಿತ್ಯ ಪರಿಷತ್ ಆಯೋಜಿಸುವ ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡಿಗರಿಗೆ, ಸಾಹಿತ್ಯ ಪ್ರೇಮಿಗಳಿಗೆ ಕನ್ನಡ ಹಬ್ಬವಾಗಬೇಕಿತ್ತು. ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಅಭಿವೃದ್ಧಿಗೆ ಮೀಸಲಾದ ಅತಿದೊಡ್ಡ ಕಾರ್ಯಕ್ರಮವೇ ಕನ್ನಡ ಸಾಹಿತ್ಯ ಸಮ್ಮೇಳನ.
ಕನ್ನಡಿಗರ ಅದರಲ್ಲೂ ಗಡಿ ಅಂಚಿನಲ್ಲಿರುವ ಈ ಭಾಗದಲ್ಲಿ ಕನ್ನಡ ಭಾಷೆಯ ಐಕ್ಯತೆಯ ಪ್ರತೀಕವಾಗಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಬೇಕಿತ್ತು, ಸಾಹಿತ್ಯಾಸಕ್ತರ, ಕವಿಗಳ, ಲೇಖಕರ, ಕಲಾವಿದರ ಮತ್ತು ಸಾಂಸ್ಕೃತಿಕ ಉತ್ಸಾಹಿಗಳ ಸಮಾಗಮವಾಗಿಸದೇ ಕೇವಲ ನಾಮ್ ಕೇ ವಾಸ್ತೆ ಎಂಬಂತೆ ಸಮ್ಮೇಳನ ಮಾಡಲು ಮುಂದಾಗಿರುವ ಬಗ್ಗೆ ಹಿರಿಯ ಸಾಹಿತಿಯೊಬ್ಬರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇಂದಿನಿಂದ ಎರಡು ದಿನಗಳ ಕಾಲ ನಡೆಯುವ ಕನ್ನಡ ಸಾಹಿತ್ಯ ಪರಿಷತ್ನ ಕಾರ್ಯಕ್ರಮಗಳಲ್ಲಿ ಒಂದು ದಿನವೆಲ್ಲ ಜಿಲ್ಲಾಡಳಿತ ಆಯೋಜಿಸಿರುವ ಕನ್ನಡ ಭವನ ಉದ್ಘಾಟನೆ ಕಾರ್ಯಕ್ರಮ, ಇನ್ನು ಸಾಹಿತ್ಯ ಪರಿಷತ್ನ ಘೋಷ್ಠಿ, ಪರಿಷತ್ತಿನ ಧ್ವಜಾರೋಹಣ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳು ಎಷ್ಟರ ಮಟ್ಟಿಗೆ ನಡೆದಾವು?
ಸರಿಯಾಗಿ ಸಾಹಿತಿಗಳಿಗೆ, ಪರಿಷತ್ನ ಸದಸ್ಯರಿಗೆ ಕನ್ನಡ ಪರ ಸಂಘಟನೆ ಯವರಿಗೆ ಹಾಗೂ ಬಹುತೇಕ ಮಾಧ್ಯಮದವರಿಗೆ, ಈ ಹಿಂದಿನ ಪರಿಷತ್ನ ಪದಾಧಿಕಾರಿಗಳಿಗೆ, ಮಹಿಳಾ ಘಟಕದ ಈ ಹಿಂದಿನ ಪದಾಧಿಕಾರಿಗಳಿಗೆ ಸದಸ್ಯರಿಗೆ ಆಹ್ವಾನ ತಲುಪಿಸುವಲ್ಲಿ ಧೋರಣೆಯಿಂದ ಎಡತಾಕಿದ್ದಾರೆ. ಹೀಗಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಸಮ್ಮೇಳನ “ಲೆಕ್ಕಕುಂಟು ಆಟಕ್ಕಿಲ್ಲ” ಎನ್ನುವ ಮನೋಭಾವನೆ ಹೊಂದಿ ಸಾಹಿತ್ಯಸಕ್ತರ ಅಸಮಾಧಾನದೊಂದಿಗೆ ಸಮ್ಮೇಳನ ಮಾಡಿ ಮುಗಿಸಲು ಎಲ್ಲ ಸಿದ್ಧತೆ ನಡೆದಿದೆ.
Related

You Might Also Like
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ...
EPS Pensioners Protest: ಅಧಿವೇಶನ ಮುಗಿಯುವುದರೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ನಂಜುಂಡೇಗೌಡ ಎಚ್ಚರಿಕೆ
ಬೆಂಗಳೂರು: ಇದೇ ಜುಲೈ 21ರಿಂದ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೊದಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಎಂಟಿಸಿ...
ಸಮಾನ ವೇತನಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಧರಣಿ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ಮುಖಂಡರ ಬಂಧನ
ಸಾರಿಗೆ ನೌಕರರ ಹೋರಾಟ ಹತ್ತಿಕ್ಕಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವ ಬದಲಿಗೆ ದೌರ್ಜನ್ಯ ಎಸಗಿದ ಕಾಂಗ್ರೆಸ್ ಸರ್ಕಾರ ಬೆಂಗಳೂರು: ಸಮಾನ ವೇತನ,...
ರೈತರು ಮರ ಕಟಾವು ಮಾಡುವ ನಿಯಮ ಸರಳಗೊಳಿಸಿ: ಅತ್ತಹಳ್ಳಿ ದೇವರಾಜ್ ಒತ್ತಾಯ
ಮೈಸೂರು: ರೈತರು ತಮ್ಮ ಜಮೀನಿನಲ್ಲಿ ಇರುವ ಮರ ಕಟಾವು ಮಾಡಿ ಸಾಗಾಣಿಕೆ ಮಾಡಿಕೊಳ್ಳುವ ನಿಯಮ ಸರಳೀಕರಣ ಗೊಳಿಸಿಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕ್ರಮ ಕೈಗೊಳ್ಳಬೇಕು...
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಗ್ರಾಮದಲ್ಲೇ ಬೀಡುಬಿಟ್ಟ ವೈದ್ಯರ ತಂಡ
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳದಲ್ಲಿ ನಡೆದಿದೆ. ಗ್ರಾಮಕ್ಕೆ ಗ್ರಾಮ ಪಚಾಯಿತಿಯಿಂದ ಸರಬರಾಜು ಮಾಡಿರುವ ನೀರು...
KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ-ಧರಣಿ ಸತ್ಯಾಗ್ರಹ ಆರಂಭ
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ಇಂದಿನಿಂದ (ಜು.29)...
ಅಂಗವಿಕಲರ ಬಸ್ಪಾಸ್ ಸೇರಿ ಎಲ್ಲ ಸರ್ಕಾರಿ ಸೌಲಭ್ಯಗಳಿಂದ ವಂಚಿತ ಅಂಗವಿಕಲ ಭೀಮಪ್ಪನಿಗೆ ಬೇಕಿದೆ ಸರ್ಕಾರದ ಆಸರೆ !
ತುಮಕೂರು: ಜಿಲ್ಲೆ ಹೊಸಹಳ್ಳಿ ಗ್ರಾಮ, ರೆಡ್ಡಿಹಳ್ಳಿ ಗ್ರಾಮಪಂಚಾಯಿತಿ ಮಿಡಿಗೆಸಿ, ಮಧುಗಿರಿ ತಾಲೂಕಿನ ಅಂಗವಿಕಲ ಭೀಮಪ್ಪನಿಗೆ ಸರ್ಕಾರಿ ಸೌಲಭ್ಯ ಸಿಗಬೇಕಿದೆ. ಪೋಲಿಯೋಗೆ ಒಳಗಾಗಿರುವ ಭೀಮಪ್ಪನಿಗೆ ಬೆರಳಿನ ಗುರುತು ಸಹ...
ನೀರಿನ ಒಳಹರಿವು ಹೆಚ್ಚಾದ ಹಿನ್ನೆಲೆ ತಲಕಾಡು ನಿಸರ್ಗ ಧಾಮಕ್ಕೆ ಬರುವ ಪ್ರವಾಸಿಗರಿಗೆ ನಿರ್ಬಂಧ
ಮೈಸೂರು: ನೀರಿನ ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ, ಜಿಲ್ಲೆಯ ತಿ.ನರಸೀಪುರ ತಾಲೂಕಿನ ತಲಕಾಡು ನಿಸರ್ಗ ಧಾಮಕ್ಕೆ ಬರುವ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ತಾಲೂಕು ಆಡಳಿತ ಆದೇಶ ಹೊರಡಿಸಿದೆ. ಕೆಅರ್ಎಸ್,...
KSRTC: ನಾಳೆಯಿಂದ ಸಾರಿಗೆ ನೌಕರರ ಉಪವಾಸ-ಧರಣಿ ಸತ್ಯಾಗ್ರಹ: ಚಂದ್ರಶೇಖರ್
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ನಾಳೆಯಿಂದ (ಜು.29)...