CRIMENEWS

ಚಿಕ್ಕಬಳ್ಳಾಪುರ: ಖಾಸಗಿ ಬಸ್‌ ಕಾರು ನಡುವೆ ಭೀಕರ ಅಪಘಾತ- ಇಬ್ಬರು ಸಜೀವದಹನ

ವಿಜಯಪಥ ಸಮಗ್ರ ಸುದ್ದಿ

ಚಿಕ್ಕಬಳ್ಳಾಪುರ: ಖಾಸಗಿ ಬಸ್‌ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರು ಹೊತ್ತಿ ಉರಿದಿದ್ದು, ಈ ವೇಳೆ ಕಾರಿನಲ್ಲಿದ್ದ ಐವರಲ್ಲಿ ಇಬ್ಬರು ಸಜೀವ ದಹನವಾಗಿದ್ದು ಮೂವರು ಗ್ರೇಟ್‌ ಎಸ್ಕೇಪ್‌ ಆಗಿದ್ದಾರೆ.

ಜಿಲ್ಲೆಯ ಚಿಂತಾಮಣಿ ತಾಲೂಕಿನ ಗೋಪಲ್ಲಿ ಗೇಟ್‌ ಬಳಿ ಈ ಅವಘಡ ನಡೆದಿದ್ದು, ಅಪಘಾತದಲ್ಲಿ ಆಂಧ್ರಪದೇಶದ ಮದನಪಲ್ಲಿಯ ನಿವಾಸಿಗಳು ಸಜೀವ ದಹನವಾಗಿರುವವರು  ಅವರಲ್ಲಿ ಒಬ್ಬ ಮಹಿಳೆ ಹಾಗೂ ಪುರುಷ ಸಜೀವ ದಹನವಾಗಿದ್ದಾರೆ. ಗುರುತು ಪತ್ತೆಯಾಗಿಲ್ಲ.

ಇನ್ನು ಅದೃಷ್ಟವಶಾತ್ ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಖಾಸಗಿ ಬಸ್‌ನಲ್ಲಿದ್ದ ಪ್ರಯಾಣಿಕರಲ್ಲಿ ಕೆಲವರಿಗೆ ಸಣ್ಣಪುಟ್ಟಗಾಯಗಳಾಗಿದ್ದು ಬಚಾವಾಗಿದ್ದಾರೆ.

ವಿಷಯ ತಿಳಿಯುತ್ತಿದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿಯನ್ನು ನಂದಿಸಿದ್ದಾರೆ. ಆದರೆ, ಅಷ್ಟರಲ್ಲೇ ಇಬ್ಬರು ಸಜೀವ ದಹನವಾಗಿದ್ದರು. ಈ ಘಟಬೆ ಸಂಬಂಧ ಕೆಂಚಾರ್ಲಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Deva
the authorDeva

Leave a Reply

error: Content is protected !!
Latest news
ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ: ಶೇ.84ರಷ್ಟು ವಿದ್ಯಾರ್ಥಿಗಳು ಪಾಸ್‌ ಮೊದಲ ದಿನದ ಸಾರಿಗೆ ನೌಕರರ ಪಾದಯಾತ್ರೆ ಯಶಸ್ವಿ, ನಾಳೆ ಬೆಳಗ್ಗೆ 6 ಗಂಟೆಯಿಂದ ಮುಂದುವರಿಕೆ KSRTC: ಇಂದು ಸಾರಿಗೆ ಸಚಿವರ ಭೇಟಿಯಾದ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳು KSRTC: ಸಾರಿಗೆ ನೌಕರರ ಪಾದಯಾತ್ರೆ ಯಶಸ್ವಿಗಾಗಿ ಬೇರೆ ಸಂಘಟನೆಗಳೂ ಸಾಥ್‌! ಆಟೋ ಗ್ಯಾಸ್ ಕೊರತೆ - ವದಂತಿಗಳಿಗೆ ಕಿವಿಗೊಡಬೇಡಿ - ಸಾರ್ವಜನಿಕರಿಗೆ ಕರೆ ಚಿತ್ರದುರ್ಗ: ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಸಾರಿಗೆ ನೌಕರರ ಪಾದಯಾತ್ರೆ ಆರಂಭ ಮುಳ್ಳಯ್ಯನಗಿರಿಗೆ ಪ್ರವಾಸಕ್ಕೆ ಬಂದಿದ್ದ 16 ವರ್ಷದ ವಿದ್ಯಾರ್ಥಿನಿ ನಾಪತ್ತೆ