NEWS

ರಸ್ತೆ ಗುಂಡಿಗೆ ಮಗು ಬಲಿ: ರಸ್ತೆ ಸರಿಯಿಲ್ಲ ಅಂತಾ ಪ್ರತಿಭಟಿಸಿದವರ ವಿರುದ್ಧವೇ FIR ಅಮಾಯಕರ ವಿರುದ್ಧ ಸರ್ಕಾರದ ದರ್ಪ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ರಾಜಧಾನಿಯ ಮಹದೇವಪುರದಲ್ಲಿ ರಸ್ತೆ ಗುಂಡಿಗೆ ಮಗು ಬಲಿಯಾಗಿದ್ದಕ್ಕೆ ರಸ್ತೆ ಸರಿಯಿಲ್ಲ ಅಂತಾ ಪ್ರತಿಭಟಿಸಿದವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಅಮಾಯಕರ ವಿರುದ್ಧ ಸರ್ಕಾರ ದರ್ಪತೋರುತ್ತಿದೆ.

ಮಹದೇವಪುರದಲ್ಲಿ ಅವೈಜ್ಞಾನಿಕ ಕಾಮಗಾರಿಗೆ ಎರಡು ವರ್ಷದ ತ್ರಿಶೂಲ್ ಎಂಬ ಮಗು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಫೆ.16ರಂದು ಹಳೇಹಳ್ಳಿ ರಸ್ತೆ ತಡೆದು ನೂರಾರು ಜನರು ಪ್ರತಿಭಟನೆ ನಡೆಸಿದ್ದರು. ಆದರೀಗ ರಸ್ತೆ ತಡೆದು ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದಡಿ ಮಗುವಿನ ಸಂಬಂಧಿಕರು ಸೇರಿ 10ಕ್ಕೂ ಹೆಚ್ಚು ಮಂದಿ ಮೇಲೆ ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ FIR ದಾಖಲಿಸಲಾಗಿದೆ.

ರಾಜ್ಯ ಸರ್ಕಾರದ ಈ ಧೋರಣೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದು, ಕಂದನ ಕಳೆದುಕೊಂಡ ಸಂಬಂಧಿಕರು ರಸ್ತೆ ಸರಿ ಮಾಡುವಂತೆ ಕೇಳಿಕೊಂಡಿದ್ದು ತಪ್ಪಾ, ನ್ಯಾಯ ಕೊಡಿ ಅಂತ ಕೇಳಿದ್ದೇ ತಪ್ಪಾ ಎಂದು ಪ್ರಶ್ನಿಸಿದ್ದಾರೆ.

ಅಲ್ಲದೆ ಪೊಲೀಸರಿಗೆ ಈ ರೀತಿ ಹೇಗೆ ಎಫ್‌ಐಆರ್‌ ಹಾಕುಲು ಮನಸ್ಸು ಬಂತು ಇವರ ಮನೆಯಲ್ಲಿ ಈ ರೀತಿಯ ಘಟನೆಯಿಂದ ಪ್ರಾಣಹಾನಿಯಾಗಿದ್ದರೂ ಇದೇ ರೀತಿ ಮಾಡುತ್ತಿದ್ದರಾ ಎಂದು ಜನರು ಪೊಲೀಸರ ನಡೆಗೂ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಇನ್ನು ಸರ್ಕಾರ ಮಾಡಿರುವ ತಪ್ಪಿಗೆ ಸಂಬಂಧಪಟ್ಟ ಸಚಿವರು ಹಾಗೂ ಸಿಎಂ ಒಳಗೊಂಡಂತೆ ಅಧಿಕಾರಿಗಳ ವಿರುದ್ಧ ಪ್ರಕರಣದಾಖಲಿಸಬೇಕಿತ್ತು. ಕಾರಣ ಖಾಸಗಿ ವ್ಯಕ್ತಿಯ ಸ್ವತ್ತಿನಲ್ಲಿ ಈ ರೀತಿ ಆದರೆ ಯಾರನ್ನು ಹೊಣೆ ಮಾಡುತ್ತಿದ್ದರು ಹೇಳಿ? ಅದೇ ರೀತಿ ಸರ್ಕಾರ ನಡೆಸುತ್ತಿರುವವರನ್ನು ಇದೆಲ್ಲಿ ಸೇರಿಸಬೇಕು ಎಂದು ಆಗ್ರಹಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ: ಶೇ.84ರಷ್ಟು ವಿದ್ಯಾರ್ಥಿಗಳು ಪಾಸ್‌ ಮೊದಲ ದಿನದ ಸಾರಿಗೆ ನೌಕರರ ಪಾದಯಾತ್ರೆ ಯಶಸ್ವಿ, ನಾಳೆ ಬೆಳಗ್ಗೆ 6 ಗಂಟೆಯಿಂದ ಮುಂದುವರಿಕೆ KSRTC: ಇಂದು ಸಾರಿಗೆ ಸಚಿವರ ಭೇಟಿಯಾದ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳು KSRTC: ಸಾರಿಗೆ ನೌಕರರ ಪಾದಯಾತ್ರೆ ಯಶಸ್ವಿಗಾಗಿ ಬೇರೆ ಸಂಘಟನೆಗಳೂ ಸಾಥ್‌! ಆಟೋ ಗ್ಯಾಸ್ ಕೊರತೆ - ವದಂತಿಗಳಿಗೆ ಕಿವಿಗೊಡಬೇಡಿ - ಸಾರ್ವಜನಿಕರಿಗೆ ಕರೆ