NEWSಆರೋಗ್ಯನಮ್ಮರಾಜ್ಯ

ನ್ಯೂ ಇಯರ್​ ಪಾರ್ಟಿಗೆ ಮಕ್ಕಳು, ಗರ್ಭಿಣಿಯರಿಗೆ ನಿಷೇಧ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಈ ಬಾರಿ ಹೊಸ ವರ್ಷದ ಸಂಭ್ರಮಕ್ಕೆ ಕೊರೊನಾ ಕರಿ ನೆರಳು ಆವರಿಸಿದ್ದು, ರಾಜ್ಯ ಸರ್ಕಾರ ಕೊರೊನಾ ರೂಲ್ಸ್​ ಜಾರಿ ಮಾಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನ ಎಂಜಿ ರಸ್ತೆಯಲ್ಲಿ ಹೊಸ ವರ್ಷಾಚರಣೆ ವೇಳೆಯೂ ಮಾಸ್ಕ್​​ ಧರಿಸೋದು ಕಡ್ಡಾಯವಾಗಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಅಷ್ಟೇ ಅಲ್ಲ, ರಾಜ್ಯಾದ್ಯಂದ ನ್ಯೂ ಇಯರ್​ ಪಾರ್ಟಿಗೆ ಮಕ್ಕಳು ಮತ್ತು ಗರ್ಭಿಣಿಯರಿಗೆ ನಿಷೇಧ ಹೇರಲಾಗಿದೆ. ಉಳಿದಂತೆ ಪಾರ್ಟಿಯಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬರೂ ಕೊರೊನಾ ರೂಲ್ಸ್​ ಪಾಲಿಸಬೇಕು. ಮಾಸ್ಕ್​ ಧರಿಸಿಯೇ ಇರಬೇಕು.

ಕೋವಿಡ್ ನಿಯಂತ್ರಣಾ ಕುರಿತು ತಜ್ಞವೈದ್ಯರ ತಂಡದೊಂದಿಗೆ ಚರ್ಚಿಸಲಾಗಿದ್ದು ಚೀನಾ ಮತ್ತು ಬೇರೆ ಬೇರೆ ದೇಶದಲ್ಲಿ ಕೋವಿಡ್​ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ದೇಶದಲ್ಲೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವ ಆರ್​. ಅಶೋಕ್ ತಿಳಿಸಿದ್ದಾರೆ.

ಇನ್ನು ರಾಜ್ಯದ ಸಿನಿಮಾ ಥಿಯೇಟರ್​ಗಳಲ್ಲಿ ಮಾಸ್ಕ್​ ಧರಿಸಿವುದು ಕಡ್ಡಾಯ. ಶಾಲಾ-ಕಾಲೇಜುಗಳ ತರಗತಿಯೊಳಗೆ ಎಲ್ಲರೂ ಕಡ್ಡಾಯವಾಗಿ ಮಾಸ್ಕ್​ ಧರಿಸಬೇಕು. ವಿಮಾನದಲ್ಲಿ ಬರುವ ಪ್ರಯಾಣಿಕರ ತಪಾಸಣೆಗಾಗಿ ಮಂಗಳೂರಿನ ವೆನ್​ಲಾಕ್​ ಮತ್ತು ಬೆಂಗಳೂರಿನ ಬೌರಿಂಗ್​​​ ಆಸ್ಪತ್ರೆಯಲ್ಲಿ ವ್ಯವಸ್ಥೆ ಮಾಡಲಾಗಿದೆ. ಪಬ್​, ಕ್ಲಬ್​, ಬಾರ್​ಗಳಲ್ಲೂ ಮಾಸ್ಕ್​ ಕಡ್ಡಾಯ ಎಂದು ತಿಳಿಸಿದ್ದಾರೆ.

ಪ್ರತಿಯೊಬ್ಬರಿಗೂ ಸ್ಯಾನಿಟೈಸರ್​ ಬಳಕೆ ಕಡ್ಡಾಯ. ರೆಸಾರ್ಟ್​ಗಳಲ್ಲಿ ಕೊರೊನಾ ರೂಲ್ಸ್​ಗಳನ್ನು ಕಡ್ಡಾಯವಾಗಿ ಫಾಲೋ ಮಾಡಬೇಕು. ಬಾರ್​​ ಸಿಬ್ಬಂದಿ ಮಾತ್ರವಲ್ಲ ಬಾರ್​ಗೆ ಬರೋ ಗ್ರಾಹಕರಿಗೂ ಡಬಲ್​​ ಡೋಸ್​ ಹಾಕಿಸಿಕೊಂಡಿರಬೇಕು. ಈ ರೂಲ್ಸ್​ ಪಾರ್ಟಿಗಳಿಗೂ ಅನ್ವಯ ಎಂದು ಅಶೋಕ್​ ತಿಳಿಸಿದ್ದಾರೆ.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ