NEWSನಮ್ಮಜಿಲ್ಲೆನಮ್ಮರಾಜ್ಯ

ಭದ್ರಾ ಮೇಲ್ದಂಡೆ ಯೋಜನೆಗೆ ತ್ವರಿತ ಅನುಷ್ಠಾನಕ್ಕೆ ಆಗ್ರಹಿಸಿ ಚಿತ್ರದುರ್ಗ ಬಂದ್ – ಶಾಲೆ, ಕಾಲೇಜು ರಜೆ

ವಿಜಯಪಥ ಸಮಗ್ರ ಸುದ್ದಿ

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಯ ತ್ವರಿತ ಅನುಷ್ಠಾನಕ್ಕೆ ಒತ್ತಾಯಿಸಿ ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಇಂದು (ಮಂಗಳವಾರ) ಕರೆ ನೀಡಿರುವ ಚಿತ್ರದುರ್ಗ ನಗರ ಬಂದ್‌ಗೆ ಬೆಂಬಲ ವ್ಯಕ್ತವಾಗಿದ್ದು, ಸಾರಿಗೆ ಸಂಚಾರದಲ್ಲಿ ವ್ಯತ್ಯಯವಾಗಿದ್ದರಿಂದ ಕೆಲ ಖಾಸಗಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಇಂದು ಗಾಂಧಿ ವೃತ್ತದಲ್ಲಿ ಸೇರಿದ ಪ್ರತಿಭಟನಕಾರರು ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬಯಲುಸೀಮೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸುವ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರುತ್ತಿವೆ ಎಂದು ಆರೋಪಿಸಿದರು. ರಾಜ್ಯದ ಯಾವುದೇ ನೀರಾವರಿ ಯೋಜನೆ ಇಷ್ಟೊಂದು ನಿರ್ಲಕ್ಷ್ಯಕ್ಕೆ ಒಳಗಾಗಿಲ್ಲ ಎಂದು ದೂರಿದರು.

ಬಂದ್‌ಗೆ ಬಿಜೆಪಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸೇರಿ 20ಕ್ಕೂ ಹೆಚ್ಚು ಸಂಘ ಸಂಸ್ಥೆಗಳು ಬೆಂಬಲ‌ ವ್ಯಕ್ತಪಡಿಸಿದ್ದು, ಆಟೋ, ಖಾಸಗಿ ಬಸ್ ಸಂಚಾರ ಕೂಡ ಸ್ಥಗಿತಗೊಂಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ ಟಿಸಿ) ಬಸ್‌ಗಳು ನಗರದ ಹೊರ ಭಾಗದ ಹೆದ್ದಾರಿಯಲ್ಲಿ ಸಂಚರಿಸುತ್ತಿವೆ.

ಚಿತ್ರದುರ್ಗದ ಗಾಂಧಿ ವೃತ್ತ, ಮೆದೇಹಳ್ಳಿ ರಸ್ತೆ, ಸಂತೆಹೊಂಡದ ಬಳಿ ಬೆಳಗ್ಗೆ ಜಮಾಯಿಸಿದ ಪ್ರತಿಭಟನಕಾರರು ವ್ಯಾಪಾರ ವಹಿವಾಟು ಸ್ಥಗಿತಗೊಳಿಸಲು ಮನವಿ ಮಾಡಿದರು. ನಸುಕಿನಿಂದಲೇ ಆರಂಭವಾಗಿದ್ದ ತರಕಾರಿ, ಹೂ ಹಾಗೂ ಹಣ್ಣು ಮಾರುಕಟ್ಟೆ ಬಂದ್ ಮಾಡಿಸಲಾಯಿತು. ಖಾಸಗಿ ಬಸ್ ನಿಲ್ದಾಣಕ್ಕೆ ತೆರಳಿದ ಕೆಲವರು ಸಂಚಾರಕ್ಕೆ ಅಡ್ಡಿಪಡಿಸಿದರು. ಆಟೋ ಚಾಲಕರ ಮನವೊಲಿಸಿ ಬಂದ್‌ಗೆ ಬೆಂಬಲ ಕೋರಿದರು.

ಸಾರಿಗೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದರಿಂದ ಕೆಲ ಖಾಸಗಿ ಶಾಲೆ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಯಿತು. ಸರ್ಕಾರಿ ಶಾಲಾ ಕಾಲೇಜು ವಿದ್ಯಾರ್ಥಿಗಳು ಕಾಲ್ನಡಿಗೆಯಲ್ಲಿ ಸಾಗುತ್ತಿರುವುದು ಸಾಮಾನ್ಯವಾಗಿದೆ. ನಗರದ ವಿವಿಧ ಬಡಾವಣೆಗಳಿಗೆ ತೆರಳಿ ಬಂದ್ ಬೆಂಬಲಿಸುವಂತೆ ಮನವಿ ಮಾಡಲಾಗುತ್ತಿದೆ. ಹೋಟೆಲ್, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಬಂದ್ ಆಗಿವೆ.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ ನಿರಂತರ ಮಳೆ- BBMP ಎಲ್ಲ ಅಧಿಕಾರಿಗಳು ಸನ್ನದ್ಧರಾಗಿ: ತುಷಾರ್ ಗಿರಿನಾಥ್