NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರ ಪರ ಉಪವಾಸ ಸತ್ಯಾಗ್ರಹ ಕುಳಿತು ಅಸ್ವಸ್ಥಗೊಂಡ ನಾಗರಿಕ- ಆಸ್ಪತ್ರೆಗೆ ದಾಖಲು

ಸಂಸ್ಥೆಗೆ ಸಂಬಂಧವೇ ಇಲ್ಲದ ಬಸವರಾಜು l ನೌಕರರ ಪರವಾಗಿ ಪ್ರಾಣ ಪಣಕ್ಕಿಟ್ಟು ಉಪವಾಸ

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ಇಲ್ಲಿನ ಸುವರ್ಣ ಸೌಧದ ಮುಂಭಾಗ ಸಾರಿಗೆ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹಕ್ಕೆ ಸಾರ್ವಜನಿಕರೊಬ್ಬರು ಬೆಂಬಲ ನೀಡಿ ಉಪವಾಸ ಕುಳಿತು ಅಸ್ವಸ್ಥರಾಗಿ ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಳೆದ ಇದೇ ಡಿ.19ರಂದು ಆರಂಭವಾದ ಉಪವಾಸ ಸತ್ಯಾಗ್ರಹದ ದಿನದಿಂದಲೇ ಸಾರಿಗೆ ನೌಕರರ ಪರವಾಗಿ ಅನ್ನ ಆಹಾರ ಬಿಟ್ಟು ಉಪವಾಸ ಕುಳಿತಿದ್ದ ಸೇಡಂ ಮೂಲಕದ ಬಸವರಾಜು ಎಂಬುವರೆ ನೌಕರರ ಪರ ತಮ್ಮ ಪ್ರಾಣದ ಹಂಗುತೊರೆದು ಉಪವಾಸ ಕುಳಿತಿದ್ದರು.

ಸಾರಿಗೆ ನೌಕರರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಸಿಡಿದೆದ್ದಿರುವ ಬಸವರಾಜು ಅವರು ನನ್ನ ಪ್ರಾಣಹೋದರೂ ಸರಿಯೇ ನೌಕರರ ನ್ಯಾಯಯುತವಾದ ಬೇಡಿಕೆ ಈಡೇರಿಸುವವರೆಗೂ ಹೋರಾಟ ಮಾಡುತ್ತೇನೆ ಎಂದು ಹೇಳಿದ್ದಾರೆ.

ಹೀಗಾಗಿ ಡಿ.19ರಿಂದ ಸಾರಿಗೆ ನೌಕರರು ಮಾಡುತ್ತಿರುವ ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸಿ ತಾವು ಉಪವಾಸ ಕುಳಿತಿದ್ದರು. ಕಳೆದ ನಾಲ್ಕು ದಿನದಿಂದ ಆಹಾರ ಸೇವಿಸದೆ ಇದ್ದಿದ್ದರಿಂದ ಇಂದು ಮಧ್ಯಾಹ್ನ ಅಸ್ವಸ್ಥಗೊಂಡಿದ್ದಾರೆ. ಈ ವೇಳೆ ಅವರನ್ನು ಜಿಲ್ಲಾಸ್ಪತ್ರೆಗೆ ಆಂಬುಲೆನ್ಸ್‌ ಮೂಲಕ ಕರೆದುಕೊಂಡು ಹೋಗಿ ಐಸಿಯೂನಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ. ಸದ್ಯ ಈಗ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು ಆರೋಗ್ಯದಲ್ಲಿ ತುಸು ಚೇತರಿಕೆ ಕಂಡು ಬಂದಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಇನ್ನು ಸಾರಿಗೆ ನೌಕರರಿಗೆ ಒಳ್ಳೆಯದಾಗಲಿ ಎಂಬ ಉದ್ದೇಶದಿಂದ ಸಂಸ್ಥೆಗೆ ಸಂಬಂಧಪಡದ ವ್ಯಕ್ತಿಯೊಬ್ಬರು ತಮ್ಮ ಪ್ರಾಣದ ಹಂಗನ್ನು ತೊರೆದು ಉಪವಾಸ ಕುಳಿತಿದ್ದಾರೆ. ಇವರ ಈ ಹೋರಾಟ ಇತರ ನೌಕರರಿಗೆ ಮಾದರಿಯಾಗಿದೆ. ಹೀಗಾಗಿ ಉಳಿದ ನೌಕರರು ತಮ್ಮ ಸ್ವಪ್ರತಿಷ್ಠೆಯನ್ನು ಬದಿಗೊತ್ತಿ ನಿಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ನೀವೇ ಸತ್ಯಾಗ್ರಹವನ್ನು ಬೆಂಬಲಿಸಬೇಕಿದೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ