ನಮ್ಮಜಿಲ್ಲೆ

CM BSY ಕಿಮ್ಸ್ ಭೇಟಿ: ಪಾಟೀಲ ಪುಟ್ಟಪ್ಪ ಆರೋಗ್ಯ ವಿಚಾರಣೆ

ವಿಜಯಪಥ ಸಮಗ್ರ ಸುದ್ದಿ

ಹುಬ್ಬಳ್ಳಿ:   ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ ( ಕಿಮ್ಸ್ ) ಯಲ್ಲಿ ಕಳೆದ ಫೆ.10 ರಿಂದ ಚಿಕಿತ್ಸೆ ಪಡೆಯುತ್ತಿರುವ , ಹಿರಿಯ ಪತ್ರಕರ್ತ, ರಾಜ್ಯಸಭೆ ಮಾಜಿ ಸದಸ್ಯ ನಾಡೋಜ ಡಾ.ಪಾಟೀಲ ಪುಟ್ಟಪ್ಪ ಅವರ ಆರೋಗ್ಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ  ಖುದ್ದಾಗಿ ಭೇಟಿ ನೀಡಿ ವಿಚಾರಿಸಿದರು.

ಕಿಮ್ಸ್ ನಲ್ಲಿ ಪಾಟೀಲ ಪುಟ್ಟಪ್ಪನವರಿಗೆ ಉತ್ತಮ ಚಿಕಿತ್ಸೆ ದೊರೆಯುತ್ತಿದೆ.ಸಾಧ್ಯವಾದಷ್ಟು ಇನ್ನೂ ಹೆಚ್ಚಿನ ಪ್ರಯತ್ನ ಮಾಡಿ ಎಂದು ಮುಖ್ಯಮಂತ್ರಿಗಳು ಸಲಹೆ ನೀಡಿದರು.

 ಕಿಮ್ಸ್ ವೈದ್ಯಶಾಸ್ತ್ರ ಒಳರೋಗಿ ವಿಭಾಗದಲ್ಲಿ ದಾಖಲಾಗಿರುವ ನಾಡೋಜ ಪಾಪು ಅವರು, ವಿಪರೀತ ಜ್ವರ,ಉಸಿರಾಟ ತೊಂದರೆ ಹಾಗೂ ಆಯತಪ್ಪಿ ಬಿದ್ದ ಪರಿಣಾಮ ತಲೆಗೆ ಪೆಟ್ಟಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ದೀರ್ಘ ಕಾಲದ ಪುಪ್ಪಸ ತೊಂದರೆ ಹಾಗೂ ತಲೆಯಲ್ಲಿ ರಕ್ತಸ್ರಾವ ಉಂಟಾಗಿದ್ದರಿಂದ ಚಿಕಿತ್ಸೆ ಮಾಡಲಾಗಿದೆ.ಕಿಡ್ನಿ ತೊಂದರೆ, ರಕ್ತ ಹೀನತೆ ಹಾಗೂ ಸೋಂಕು ಕಂಡು ಬಂದಿದ್ದು ಎಲ್ಲಾ ಕಾಯಿಲೆಗಳಿಗೆ ಚಿಕಿತ್ಸೆ ನೀಡಲಾಗಿದೆ.ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದ್ದರಿಂದ ಶಸ್ತ್ರಚಿಕಿತ್ಸೆ ಮಾಡಲಾಯಿತು ಶಸ್ತ್ರಚಿಕಿತ್ಸೆ ನಂತರ ಆರೋಗ್ಯ ಗಂಭೀರವಾಗಿದೆ.ಕೃತಕ ಉಸಿರಾಟ ಯಂತ್ರ ( ವೆಂಟಿಲೇಟರ್) ಅಳವಡಿಸಲಾಗಿದೆ.ದೀರ್ಘ ಕಾಲ ಹಾಸಿಗೆ ಹಿಡಿದ ಪರಿಣಾಮ ಪಲ್ಮನರಿ ಥ್ರಂಬೋ ಎಂಬೋಲಿಸಂ ಆಗಿದೆ ಎಂದು ತಜ್ಞ ವೈದ್ಯ ಪ್ರೊ.ಡಿ.ಎಂ.ಕಬಾಡಿ ವಿವರಿಸಿದರು.

ಪಾಟೀಲ ಪುಟ್ಟಪ್ಪನವರ ಮಕ್ಕಳಾದ ಅಶೋಕ, ಮಂಜುಳಾ ಹಾಗೂ ಶೈಲಜಾ ಅವರಿಂದಲೂ ಮುಖ್ಯಮಂತ್ರಿಗಳು ಮಾಹಿತಿ ಪಡೆದರು.

ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್, ಗೃಹಸಚಿವ ಬಸವರಾಜ ಬೊಮ್ಮಾಯಿ, ಸಂಸದೆ ಶೋಭಾ ಕರಂದ್ಲಾಜೆ, ವಿಧಾನಪರಿಷತ್ ಸದಸ್ಯ ಲೆಹರ್ ಸಿಂಗ್, ಜಿಲ್ಲಾಧಿಕಾರಿ ದೀಪಾ ಚೋಳನ್, ಪೊಲೀಸ್ ಆಯುಕ್ತ ಆರ್.ದಿಲೀಪ್,ಜಿಪಂ ಸಿಇಓ ಡಾ.ಬಿ.ಸಿ.ಸತೀಶ, ಮಹಾನಗರಪಾಲಿಕೆ ಆಯುಕ್ತ ಡಾ.ಸುರೇಶ ಇಟ್ನಾಳ, ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಅಂತರಠಾಣಿ, ವೈದ್ಯಕೀಯ ನಿರ್ದೇಶಕ ಡಾ.ಅರುಣಕುಮಾರ್, ಮುಖ್ಯ ಆಡಳಿತಾಧಿಕಾರಿ ರಾಜಶ್ರೀ ಜೈನಾಪುರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಶವಂತ ಮದೀನಕರ್, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ಸುಜಾತಾ ಹಸವಿಮಠ ಮತ್ತಿತರರು ಇದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ