ಏ.5ರಂದು ಸಾರಿಗೆ ನೌಕರರ 38 ತಿಂಗಳ ವೇತನ ಹಿಂಬಾಕಿ, 2024ರ ವೇತನ ಪರಿಷ್ಕರಣೆ ಕುರಿತು ಸಿಎಂ ಅಧ್ಯಕ್ಷತೇಲಿ ಸಭೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಅಧಿಕಾರಿಗಳು/ನೌಕರರ 38 ತಿಂಗಳ ವೇತನ ಹಿಂಬಾಕಿ ಪಾವತಿ ಹಾಗೂ 2024ರ ಜನವರಿ 1ರಿಂದ ಆಗಬೇಕಿರುವ ವೇತನ ಪರಿಷ್ಕರಣೆ ಸಂಬಂಧ ಇದೇ ಏ.5ರಂದು ಸಿಎಂ ನೌಕರರ ಸಂಘಟನೆಗಳ ಸಭೆ ಕರೆದಿದ್ದಾರೆ.
ಸಭೆಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಸಿಎಂ ಗೃಹ ಕಚೇರಿ ಕಾವೇರಿಯಲ್ಲಿ ಏ.5ರ ಬೆಳಗ್ಗೆ 11ಗಂಟೆಗೆ ಆಯೋಜಿಸಲಾಗಿದೆ. ಹೀಗಾಗಿ ಸಭೆಗೆ ಎಲ್ಲ ಸಂಘಟನೆಗಳ ಪದಾಧಿಕಾರಿಗಳು ಹಾಜರಾಗಲು ಕೋರಿದ್ದಾರೆ.
ಈ ನಡುವೆ ಸ್ಥಳಾವಕಾಶದ ಲಭ್ಯತೆಯ ದೃಷ್ಠಿಯಿಂದ ಪ್ರತಿ ಕಾರ್ಮಿಕ ಸಂಘಟನೆಯಿಂದ ಒಬ್ಬ ಪದಾಧಿಕಾರಿ ಮಾತ್ರ ಹಾಜರಾಗಬೇಕು ಎಂದು ಕೆಎಸ್ಆರ್ಟಿಸಿಯ ಸಿಬ್ಬಂದಿ ಮತ್ತು ಜಾಗೃತಾ ದಳದ ನಿರ್ದೇಶಕರು ಇಂದು (ಏ.1) ಎಲ್ಲ ಸಂಘಟನೆಗಳ ಪದಾಧಿಕಾರಿಗಳಿಗೂ ಸೂಚನೆ ನೀಡಿದ್ದಾರೆ.
ಇನ್ನು ಈ ಸಂಬಂಧ ಸಾರಿಗೆ ಕಾರ್ಮಿಕರ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಹಾಗೂ ಸಾರಿಗೆ ನೌಕರರ ಸಂಘನೆಗಳ ಒಕ್ಕೂಟದ ಪದಾಧಿಕಾರಿಗಳಿಗೆ ಆಹ್ವಾನ ಪತ್ರವನ್ನು ಇಂದು ರವಾನಿಸಿದ್ದಾರೆ.
ಏ.5ರಂದು ಸಿಎಂ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿಯಲ್ಲಿ ಗುರುತಿಸಿಕೊಂಡಿರುವ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸಾರಿಗೆ ನೌಕರರ ಒಕ್ಕೂಟದಲ್ಲಿ ಗುರುತಿಸಿಕೊಂಡಿರುವ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.
ಈ ನಡುವೆ ಜಂಟಿ ಕ್ರಿಯಾ ಸಮಿತಿಯವರು 4 ವರ್ಷಕ್ಕೊಮ್ಮೆ ಮಾಡುತ್ತಿರುವ ಅಗ್ರಿಮೆಂಟ್ ಆಗಬೇಕು ಎಂಬ ಒತ್ತಾಯ ಮಾಡಿದರೆ ಇತ್ತ ನೌಕರರ ಒಕ್ಕೂಟ ನಮಗೆ ಈ ನಾಲ್ಕು ವರ್ಷಕ್ಕೊಮ್ಮೆ ಆಗುತ್ತಿರುವ ಅಗ್ರಿಮೆಂಟ್ ಬೇಡ ಚುನಾವಣೆ ಸಂದರ್ಭದಲ್ಲಿ ತಾವೇ ನೌಕರರಿಗೆ ಕೊಟ್ಟಿರುವ ಭರವಸೆಯಂತೆ ಸರಿ ಸಮಾನ ವೇತನ ಜಾರಿ ಮಾಡಿ ಎಂಬ ಭಿನ್ನ ಬೇಡಿಕೆಗಳನ್ನು ಸಿಎಂ ಮುಂದೆ ಇಡಲಿದ್ದಾರೆ ಎನ್ನಲಾಗಿದೆ.
ಹೀಗಾಗಿ ಸಿಎಂ ಸಿದ್ದರಾಮಯ್ಯ ಅವರು ತಮ್ಮದೇ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟಿರುವ ಭರವಸೆಯಂತೆ ಸರಿ ಸಮಾನ ವೇತನ ಜಾರಿಮಾಡಲು ಒಪ್ಪಿಗೆ ಸೂಚಿಸುತ್ತಾರೋ ಇಲ್ಲ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳ ಬೇಡಿಕೆಯಾದ ಅಗ್ರಿಮೆಂಟ್ ಮಾಡುವುದಕ್ಕೆ ಬಯಸುತ್ತಾರೋ ಎಂಬುದಕ್ಕೆ ಈ 5ರಂದು ಸ್ಪಷ್ಟ ಉತ್ತರ ಸಿಗದಿದ್ದರೂ ಮುಂದಿನ ದಿನಗಳಲ್ಲಿ ಸಿಗಲಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.
ಇನ್ನು ಸಿಎಂ ಸಿದ್ದರಾಮಯ್ಯ ಅವರು ಕೂಡ ಸಾರಿಗೆ ನೌಕರರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ವಿಪಕ್ಷ ನಾಯಕರಾಗಿದ್ದ ವೇಳೆ ನೋಡಿದ್ದು ಈ ಜಂಜಾಟವನ್ನು ದೂರ ಮಾಡಲು ನಾವು ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟಿರುವ ಭರವಸೆಯಂತೆ ಸರಿ ಸಮಾನ ವೇತನ ಮಾಡೇ ಬಿಡೋಣ ಎಂದು ಸಾರಿಗೆ ಸಚಿವರ ಬಳಿ ಒಂದು ಸುತ್ತಿನ ಮಾತುಕತೆಯನ್ನು ನಡೆಸಿರುವುದಾಗಿ ತಿಳಿದು ಬಂದಿದೆ.
Related

You Might Also Like
NWKRTC: UPI ಮೂಲಕ ಹೆಚ್ಚು ಟಿಕೆಟ್ ವಿತರಿಸಿದ ನಿರ್ವಾಹಕರ ಅಭಿನಂದಿಸಿದ ಎಂಡಿ ಪ್ರಿಯಾಂಗಾ
ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ಗಳಲ್ಲಿ ಪ್ರಯಾಣಿಕರಿಗೆ UPI ಮೂಲಕ ಹೆಚ್ಚು ಟಿಕೆಟ್ ವಿತರಣೆ ಮಾಡಿದ ನಿರ್ವಾಹಕರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಪ್ರಿಯಾಂಗಾ ಪ್ರಶಂಸನಾ...
KKRTC ಅಧಿಕಾರಿ-ಸಿಬ್ಬಂದಿಗಳು ಕಚೇರಿಗೆ ಭೇಟಿ ನೀಡುವಾಗ ಈ ನಿಯಮ ಪಾಲಿಸಬೇಕು: ಸಂಸ್ಥೆಯ ಎಂಡಿ ಸುಶೀಲಾ ನಿರ್ದೇಶನ
ಕಲಬುರಗಿ: ನಿಗಮದ ಅಧಿಕಾರಿ-ಸಿಬ್ಬಂದಿಗಳು ವೈಯಕ್ತಿಕ ಕಾರ್ಯಗಳಿಗಾಗಿ ಕಚೇರಿಗೆ ಭೇಟಿ ನೀಡುವಾಗ ಈ ನಿಯಮಗಳನ್ನು ಪಾಲಿಸಬೇಕು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಬಿ.ಸುಶೀಲಾ...
KSRTC ಬಡ ಸಾರಿಗೆ ನೌಕರರ ಮೇಲೆ ಎಸ್ಮಾ ಜಾರಿ ಸಲ್ಲ: ಸಾರಿಗೆ ಸಚಿವರು ಪರಿಶೀಲಿಸಿ- ಅಧಿವೇಶನದಲ್ಲಿ ಶಾಸಕರ ಆಗ್ರಹ
ಬೆಂಗಳೂರು: ರಾಜ್ಯ ಸಾರಿಗೆ ಇಲಾಖೆಯಿಂದ ಕರ್ನಾಟಕ ರಾಜ್ಯ ಅತ್ಯವಶ್ಯಕ ಸೇವೆ ವಿಧೇಯಕವನ್ನು ಮಂಡಿಸುವ ಸಂದರ್ಭದಲ್ಲಿ ರಾಜ್ಯದ ಸಾರಿಗೆ ನೌಕರರ ಮೇಲೆ ಎಸ್ಮಾ ಕಾಯಿದೆಯನ್ನು ಜಾರಿ ಮಾಡುತ್ತಿರುವ ಬಗ್ಗೆ...
BMTC ಬಸ್ ಬಾಗಿಲಿಗೆ ಸಿಲುಕಿದ ಕೈ- ಬಿದ್ದು ಚಕ್ರಕ್ಕೆ ಸಿಲುಕಿ ಪ್ರಯಾಣಿಕ ಸಾವು
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಎಲೆಕ್ಟ್ರಿಕ್ ಬಸ್ ಚಕ್ರಕ್ಕೆ ಸಿಲುಕಿ ಪ್ರಯಾಣಿಕ ಮೃತಪಟ್ಟಿರುವ ಘಟನೆ ಇಂದು ಜಯನಗರದ 4ನೇ ಬ್ಲಾಕ್ನಲ್ಲಿ ನಡೆದಿದೆ. ಸಂಪಂಗಿ (64) ಮೃತಪಟ್ಟವರು....
ರೀಲ್ಸ್, ವಿಡಿಯೋ ಮಾಡುವ ವಕೀಲರಿಗೆ ಶಿಸ್ತು ಕ್ರಮದ ಎಚ್ಚರಿಕೆ ಕೊಟ್ಟ ವಕೀಲರ ಪರಿಷತ್
ಬೆಂಗಳೂರು: ವೃತ್ತಿನಿರತ ವಕೀಲರು ತಮ್ಮನ್ನು ತಾವೇ ಉನ್ನತೀಕರಿಸಿಕೊಳ್ಳುವಂತಹ ಪ್ರಚಾರದ ಯಾವುದೇ ರೀಲ್ಗಳು ಮತ್ತು ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್ ಲೋಡ್ ಮಾಡಿದ್ದರೆ ಅಂತಹ ಆಕ್ಷೇಪಾರ್ಹ ರೀಲ್ಗಳು, ವಿಡಿಯೋಗಳನ್ನು...
KKRTC ಬಸ್ – ಟಿಪ್ಪರ್ ನಡುವೆ ಭೀಕರ ಅಪಘಾತ: ಕಂಡಕ್ಟರ್ ಸ್ಥಳದಲ್ಲೇ ಸಾವು, ಚಾಲಕ ಸೇರಿ ಹಲವರಿಗೆ ಗಾಯ
ಹೊಸಪೇಟೆ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್ ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಿರ್ವಾಹಕ ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ ಚಿಲಕನಹಟ್ಟಿ (ಮರಿಯಮ್ಮನಹಳ್ಳಿ)...
KSRTC ನೌಕರರು ಮುಷ್ಕರ ನಡೆಸಿದರೆ ಕಠಿಣ ಕ್ರಮ: 2035ರವರೆಗೆ ಎಸ್ಮಾ ವಿಸ್ತರಣೆ – ಚರ್ಚೆ ಇಲ್ಲದೇ ಸದನದಲ್ಲಿ ವಿಧೇಯಕ ಅಂಗೀಕಾರ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರು ಮುಷ್ಕರ ನಡೆಸಿದರೆ ಕಠಿಣ ಕ್ರಮ ಕೈಗೊಳ್ಳುವ ಎಸ್ಮಾ ಕಾಯ್ದೆ 10 ವರ್ಷಗಳ ಅವಧಿಗೆ ವಿಸ್ತರಣೆಯಾಗುವ ಅತ್ಯಾವಶ್ಯಕ...
ರೈತರ ಸಮಸ್ಯೆ ಬಗೆ ಹರಿಸಲು ಒತ್ತಾಯಿಸಿ ಡಿಸಿ ಕಚೇರಿ ಮುಂದೆ ರೈತ ಮುಖಂಡರ ಪ್ರತಿಭಟನೆ
ಮೈಸೂರು: ರೈತರ ಸಮಸ್ಯೆ ಬಗೆ ಹರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ರಾಜ್ಯ ರೈತ ಸಂಘಟನೆಗಳ ಒಕ್ಕೂಟ , ರಾಜ್ಯ ಕಬ್ಬು ಬೆಳೆಗಾರರ ಸಂಘದ...
KSRTC ನೌಕರರ ಸಾಮಾನ್ಯ ಮರಣ ಪ್ರಕರಣಕ್ಕಿದ್ದ 10 ಲಕ್ಷ ರೂ. ಪರಿಹಾರ ಮೊತ್ತ 14 ಲಕ್ಷ ರೂ.ಗಳಿಗೆ ಏರಿಸಿ ಎಂಡಿ ಆದೇಶ
ಪರಿಷ್ಕರಿಸಿದ 14 ಲಕ್ಷ ರೂ. ಪರಿಹಾರ ಮೊತ್ತ ಸೆಪ್ಟೆಂಬರ್ 1-2025ರಿಂದ ಜಾರಿ ಬೆಂಗಳೂರು: 10 ಲಕ್ಷ ರೂ.ಗಳಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಕುಟುಂಬ...