NEWSನಮ್ಮಜಿಲ್ಲೆನಮ್ಮರಾಜ್ಯ

ಏ.5ರಂದು ಸಾರಿಗೆ ನೌಕರರ 38 ತಿಂಗಳ ವೇತನ ಹಿಂಬಾಕಿ, 2024ರ ವೇತನ ಪರಿಷ್ಕರಣೆ ಕುರಿತು ಸಿಎಂ ಅಧ್ಯಕ್ಷತೇಲಿ ಸಭೆ 

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಅಧಿಕಾರಿಗಳು/ನೌಕರರ 38 ತಿಂಗಳ ವೇತನ ಹಿಂಬಾಕಿ ಪಾವತಿ ಹಾಗೂ 2024ರ ಜನವರಿ 1ರಿಂದ ಆಗಬೇಕಿರುವ ವೇತನ ಪರಿಷ್ಕರಣೆ ಸಂಬಂಧ ಇದೇ ಏ.5ರಂದು ಸಿಎಂ ನೌಕರರ ಸಂಘಟನೆಗಳ ಸಭೆ ಕರೆದಿದ್ದಾರೆ.

ಸಭೆಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಸಿಎಂ ಗೃಹ ಕಚೇರಿ ಕಾವೇರಿಯಲ್ಲಿ ಏ.5ರ ಬೆಳಗ್ಗೆ 11ಗಂಟೆಗೆ ಆಯೋಜಿಸಲಾಗಿದೆ. ಹೀಗಾಗಿ ಸಭೆಗೆ ಎಲ್ಲ ಸಂಘಟನೆಗಳ ಪದಾಧಿಕಾರಿಗಳು ಹಾಜರಾಗಲು ಕೋರಿದ್ದಾರೆ.

ಈ ನಡುವೆ ಸ್ಥಳಾವಕಾಶದ ಲಭ್ಯತೆಯ ದೃಷ್ಠಿಯಿಂದ ಪ್ರತಿ ಕಾರ್ಮಿಕ ಸಂಘಟನೆಯಿಂದ ಒಬ್ಬ ಪದಾಧಿಕಾರಿ ಮಾತ್ರ ಹಾಜರಾಗಬೇಕು ಎಂದು ಕೆಎಸ್‌ಆರ್‌ಟಿಸಿಯ ಸಿಬ್ಬಂದಿ ಮತ್ತು ಜಾಗೃತಾ ದಳದ ನಿರ್ದೇಶಕರು ಇಂದು (ಏ.1) ಎಲ್ಲ ಸಂಘಟನೆಗಳ ಪದಾಧಿಕಾರಿಗಳಿಗೂ ಸೂಚನೆ ನೀಡಿದ್ದಾರೆ.

ಇನ್ನು ಈ ಸಂಬಂಧ ಸಾರಿಗೆ ಕಾರ್ಮಿಕರ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಹಾಗೂ ಸಾರಿಗೆ ನೌಕರರ ಸಂಘನೆಗಳ ಒಕ್ಕೂಟದ ಪದಾಧಿಕಾರಿಗಳಿಗೆ ಆಹ್ವಾನ ಪತ್ರವನ್ನು ಇಂದು ರವಾನಿಸಿದ್ದಾರೆ.

ಏ.5ರಂದು ಸಿಎಂ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿಯಲ್ಲಿ ಗುರುತಿಸಿಕೊಂಡಿರುವ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸಾರಿಗೆ ನೌಕರರ ಒಕ್ಕೂಟದಲ್ಲಿ ಗುರುತಿಸಿಕೊಂಡಿರುವ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.

ಈ ನಡುವೆ ಜಂಟಿ ಕ್ರಿಯಾ ಸಮಿತಿಯವರು 4 ವರ್ಷಕ್ಕೊಮ್ಮೆ ಮಾಡುತ್ತಿರುವ ಅಗ್ರಿಮೆಂಟ್‌ ಆಗಬೇಕು ಎಂಬ ಒತ್ತಾಯ ಮಾಡಿದರೆ ಇತ್ತ ನೌಕರರ ಒಕ್ಕೂಟ ನಮಗೆ ಈ ನಾಲ್ಕು ವರ್ಷಕ್ಕೊಮ್ಮೆ ಆಗುತ್ತಿರುವ ಅಗ್ರಿಮೆಂಟ್‌ ಬೇಡ ಚುನಾವಣೆ ಸಂದರ್ಭದಲ್ಲಿ ತಾವೇ ನೌಕರರಿಗೆ ಕೊಟ್ಟಿರುವ ಭರವಸೆಯಂತೆ ಸರಿ ಸಮಾನ ವೇತನ ಜಾರಿ ಮಾಡಿ ಎಂಬ ಭಿನ್ನ ಬೇಡಿಕೆಗಳನ್ನು ಸಿಎಂ ಮುಂದೆ ಇಡಲಿದ್ದಾರೆ ಎನ್ನಲಾಗಿದೆ.

ಹೀಗಾಗಿ ಸಿಎಂ ಸಿದ್ದರಾಮಯ್ಯ ಅವರು ತಮ್ಮದೇ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟಿರುವ ಭರವಸೆಯಂತೆ ಸರಿ ಸಮಾನ ವೇತನ ಜಾರಿಮಾಡಲು ಒಪ್ಪಿಗೆ ಸೂಚಿಸುತ್ತಾರೋ ಇಲ್ಲ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳ ಬೇಡಿಕೆಯಾದ ಅಗ್ರಿಮೆಂಟ್‌ ಮಾಡುವುದಕ್ಕೆ ಬಯಸುತ್ತಾರೋ ಎಂಬುದಕ್ಕೆ ಈ 5ರಂದು ಸ್ಪಷ್ಟ ಉತ್ತರ ಸಿಗದಿದ್ದರೂ ಮುಂದಿನ ದಿನಗಳಲ್ಲಿ ಸಿಗಲಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ಇನ್ನು ಸಿಎಂ ಸಿದ್ದರಾಮಯ್ಯ ಅವರು ಕೂಡ ಸಾರಿಗೆ ನೌಕರರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ವಿಪಕ್ಷ ನಾಯಕರಾಗಿದ್ದ ವೇಳೆ ನೋಡಿದ್ದು ಈ ಜಂಜಾಟವನ್ನು ದೂರ ಮಾಡಲು ನಾವು ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟಿರುವ ಭರವಸೆಯಂತೆ ಸರಿ ಸಮಾನ ವೇತನ ಮಾಡೇ ಬಿಡೋಣ ಎಂದು ಸಾರಿಗೆ ಸಚಿವರ ಬಳಿ ಒಂದು ಸುತ್ತಿನ ಮಾತುಕತೆಯನ್ನು ನಡೆಸಿರುವುದಾಗಿ ತಿಳಿದು ಬಂದಿದೆ.

Deva
the authorDeva

Leave a Reply

error: Content is protected !!
Latest news
ಟನ್‌ ಕಬ್ಬಿಗೆ 3650 ರೂ. ಎಫ್ಆರ್‌ಪಿ ದರ ಘೋಷಣೆ ಮಾಡಿರುವ ಕೇಂದ್ರ ಸರ್ಕಾರದ ನಡೆ ಸಲ್ಲ- 4500 ರೂ. ನಿಗದಿಗೊಳಿಸಬೇಕು: ಕ... KKRTC ವಿಜಯಪುರ: ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರಬರ ಭ್ರಷ್ಟಾಚಾರ ಸಾಬೀತು- ಆದರೂ ಕ್ರಮ ತೆಗೆದುಕೊಳ್ಳದ ಎಂಡ... KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KKRTC: ನೋಡಿ ಎಂಡಿ ಅವರೇ ನಿಮ್ಮ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳು ಮೇ 1ರಂದು ರಜೆ ತೆಗೆದುಕೊಂಡರೆ ಆಬ್ಸೆಂಟ್‌ ಹಾಕುವ ...