ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಸಿಎಂ, ಡಿಸಿಎಂರ ತರಾಟೆಗೆ ತೆಗೆದುಕೊಂಡ: ಸಾಯಿ ಲೇಔಟ್ ನಿವಾಸಿಗಳು

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಳೆ ಹಾನಿ ಪ್ರದೇಶಗಳಿಗೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಸಾಯಿ ಲೇಔಟ್ ನಿವಾಸಿಗಳು ಸಿಎಂ, ಡಿಸಿಎಂರನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.
ಸಾಯಿ ಲೇಔಟ್ಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಅವರನ್ನು ರಸ್ತೆ ಮಧ್ಯೆಯೇ ತಡೆದು ಪ್ರಶ್ನಿಸಿದರು. ಬನ್ನಿ ಮಳೆಯಿಂದ ತೊಂದರೆಯಾದ ಮನೆಗಳಿಗೆ ಭೇಟಿ ನೀಡಿ. ದೂರದಿಂದ ನೋಡಿದ್ರೆ ಏನು ಗೊತ್ತಾಗುತ್ತೆ ಎಂದು ಸ್ಥಳೀಯ ಮಹಿಳೆಯರು ಒತ್ತಾಯಿಸಿದರು.
ಬಿಬಿಎಂಪಿ ಅಧಿಕಾರಿಗಳು ಸಾರ್ವಜನಿಕರನ್ನು ಸಮಾಧಾನ ಪಡಸಲು ಯತ್ನಿಸಿದರು. ಇವರು ಕಷ್ಟ ಸುಖ ಕೇಳಲು ಬಂದಿಲ್ಲ ಎಂದು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದರು. ಗೊಂದಲದ ವಾತಾವರಣ ಹಿನ್ನಲೆ, ಸಾರ್ವಜನಿಕ ಮನವಿಯನ್ನು ಸರಿಯಾಗಿ ಆಲಿಸದೆ ತೆರಳಿದ ಸಿಎಂ, ಡಿಸಿಎಂ ವಿರುದ್ಧ ಸ್ಥಳೀಯರ ಆಕ್ರೋಶ ಹೆಚ್ಚಾಯಿತು.
ಈ ನಡುವೆ ಸಿಎಂ ಸಮಸ್ಯೆ ಬಗ್ಗೆ ವಿವರಣೆ ಪಡೆದು ಸಮಾಧಾನ ಮಾಡಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು. ಮಳೆ ಮತ್ತು ಪ್ರವಾಹ ಪೀಡಿತ ಸ್ಥಳ ವೀಕ್ಷಿಸಿ, ಸಾಯಿ ಲೇಔಟ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರಿಂದ ಸಮಸ್ಯೆ ಆಲಿಸಿ, ಮನವಿ ಸ್ವೀಕರಿಸಿದರು. ಬಳಿಕ ಮನವಿಯಲ್ಲಿರುವ ಸಮಸ್ಯೆಗಳ ಬಗ್ಗೆ ಗಂಭೀರ ಗಮನ ಹರಿಸಿ ತಕ್ಷಣಕ್ಕೆ ಸಾಧ್ಯವಿರುವ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಇನ್ನು ಮಾನ್ಯತಾ ಟೆಕ್ ಪಾರ್ಕ್ ಬಳಿಯ ವೀರಣ್ಣನ ಪಾಳ್ಯಗೆ ಭೇಟಿ ನೀಡಿದ ಸಿಎಂ, ರಾಜಕಾಲುವೆ ಒತ್ತುವರಿ ತೆರವಿಗೆ ಖಡಕ್ ಸೂಚನೆ ನೀಡಿದರು. ರಾಜಕಾಲುವೆ ಹೂಳೆತ್ತುವ ಕಾಮಗಾರಿ ವೀಕ್ಷಿಸಿದ ಸಿಎಂ, ಡಿಸಿಎಂ ಮುಲಾಜಿಲ್ಲದೆ ಒತ್ತುವರಿ ತೆರವು ಮಾಡಿ ಎಂದು ಸೂಚಿಸಿದರು.
ಮಾನ್ಯತಾ ಟೆಕ್, ಇಬ್ಸು, ಮ್ಯಾನ್ ಫೋ ಹಾಗೂ ಕಾರ್ಲೆ ಖಾಸಗಿ ಬಿಲ್ಡರ್ಗಳು ರಾಜಕಾಲುವೆ ಒತ್ತುವರಿ ಮಾಡಿರುವುದನ್ನು ಅಧಿಕಾರಿಗಳು ವಿವರಿಸಿದರು. ಈ ವೇಳೆ ನೋಟಿಸ್ ಕೊಟ್ಟಿಲ್ಲವೇ, ಒತ್ತುವರಿ ಆಗಿರುವುದನ್ನು ನೋಡಿಕೊಂಡು ಕುಳಿತಿದ್ದೀರಾ ಎಂದು ಸಿಎಂ ಖಾರವಾಗಿ ಪ್ರಶ್ನಿಸಿದರು. ಬಳಿಕ ಎಷ್ಟೇ ದೊಡ್ಡ ಬಿಲ್ಡರ್ ಆಗಿದ್ದರೂ ಮುಲಾಜು ನೋಡಬೇಡಿ, ರಾಜಕಾಲುವೆ ಒತ್ತುವರಿ ತೆರವುಗೊಳಿಸಿ ಎಂದು ಸ್ಪಷ್ಟ ಸೂಚನೆ ನೀಡಿದರು.
ಎಚ್ಬಿಆರ್ ಲೇಔಟ್ ಭೇಟಿ: ಬಳಿಕ ಸಿಎಂ ಸಿದ್ದರಾಮಯ್ಯ HBR ಲೇಔಟ್ 5ನೇ ಬ್ಲಾಕ್ಗೆ ಭೇಟಿ ನೀಡಿ ತುಂಬಿ ಹರಿಯುತ್ತಿರುವ ರಾಜಕಾಲುವೆ ಪ್ರದೇಶ ವೀಕ್ಷಿಸಿದರು. ಸಚಿವ ಕೆ.ಜೆ.ಜಾರ್ಜ್ ಸಮಸ್ಯೆ ಬಗ್ಗೆ ಸಿಎಂ ಹಾಗೂ ಡಿಸಿಎಂಗೆ ಮಾಹಿತಿ ನೀಡಿದರು.
ರಾಜಕಾಲುವೆಯ ಹರಿವಿನ ಹಾದಿಯಲ್ಲಿ ರೈಲ್ವೇ ಟ್ರಾಕ್ ಇರುವ ಕಡೆ ಆಗಿರುವ ಬಾಟಲ್ ನೆಕ್ ಸರಿಪಡಿಸಲು, ವಿಸ್ತರಿಸಲು ಸೂಚನೆ ನೀಡಿದರು. ಬಾಧಿತ ಪ್ರದೇಶಗಳಲ್ಲಿ ಬೇಸ್ಮೆಂಟ್ ಪಾರ್ಕಿಂಗ್, ಕೆಳ ಹಂತದಲ್ಲಿ ಮನೆ ನಿರ್ಮಾಣಕ್ಕೆ ಅವಕಾಶ ನೀಡದಂತೆ ನಗರ ಯೋಜನೆಯಲ್ಲಿ ಬದಲಾವಣೆ ತರುವ ದಿಕ್ಕಿನಲ್ಲಿ ಸೂಚಿಸಿದರು.
ವಡ್ಡರಪಾಳ್ಯ ಲೇಔಟ್, ಗೆದ್ದಲಹಳ್ಳಿಯಲ್ಲಿ ಪರಿಶೀಲನೆ: ಬಳಿಕ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ವಡ್ಡರಪಾಳ್ಯ ಬಡಾವಣೆಗೆ ಭೇಟಿ ನೀಡಿ ರಾಜಕಾಲುವೆ ವೀಕ್ಷಣೆ ಮಾಡಿದರು. ರಾಜಕಾಲುವೆ ವಿಸ್ತೀರ್ಣ 29 ಮೀಟರ್ ಆಗಿದ್ದು, ಬೆಂಗಳೂರಿನ ಅತಿ ದೊಡ್ಡ ರಾಜಕಾಲುವೆಯಾಗಿದೆ.
ಆದರೆ ಗೆದ್ದಲಹಳ್ಳಿಯ ಕಾಲುವೆ ಬಾಟಲ್ ನೆಕ್ ಇದ್ದು, ಕೇವಲ 8 ಮೀಟರ್ ಇದೆ. ಆದ್ದರಿಂದ ಮೇಲಿನಿಂದ ರಾಜಕಾಲುವೆಯಲ್ಲಿ ಹರಿದು ಬರುವ ನೀ+ರು ಈ ಬಾಟಲ್ ನೆಕ್ನಲ್ಲಿ ತುಂಬಿ ಹರಿದು ಸಾಯಿ ಲೇಔಟ್ಗೆ ನುಗ್ಗುತ್ತದೆ ಎಂದು ಅಧಿಕಾರಿಗಳು ವಿವರಿಸಿದರು.
ಆದ್ದರಿಂದ 8 ಮೀಟರ್ ಬಾಟಲ್ ನೆಕ್ ಇರುವ ರೈಲ್ವೇ ವೆಂಟ್ಅನ್ನು ವಿಸ್ತರಿಸಲು ಸೂಚನೆ ನೀಡಲಾಯಿತು. ನಿನ್ನೆ ದಿನ ರೈಲ್ವೇಯವರು ಈ ವೆಂಟ್ ವಿಸ್ತರಣೆಗೆ ಬಿಡಿಎಗೆ ಅನುಮತಿ ನೀಡಿದ್ದಾರೆ. ಜೊತೆಗೆ ಕಾಲುವೆ ನಿರ್ವಹಣೆ ಮಾಡದ ಗುತ್ತಿಗೆದಾರರಿಂದ ವಿವರಣೆ ಕೇಳುವಂತೆ ಸೂಚಿಸಲಾಯಿತು.
Related

You Might Also Like
ಪ್ರಣವ್ ಮೊಹಾಂತಿ ಅವರ ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ಸರ್ಕಾರ ತೀರ್ಮಾನಿಸಿಲ್ಲ: ಗೃಹ ಸಚಿವ ಡಾ. ಜಿ.ಪರಮೇಶ್ವರ ಸ್ಪಷ್ಟನೆ
ಬೆಂಗಳೂರು: ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಎಸ್ಐಟಿ ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ಅವರ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರ್ಕಾರ...
ಅತ್ತ ದರಿ ಇತ್ತ ಪುಲಿ ಎತ್ತ ಹೋಗಲಿ ಎಂಬ ಸ್ಥಿತಿಯಲ್ಲಿ ಸಾರಿಗೆ ನೌಕರರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗಲು ಬಹುತೇಕ ನೌಕರರು ಸಿದ್ಧರಿದ್ದಾರೆ. ಆದರೆ, ನಾವು ಡ್ಯೂಟಿ...
KSRTC: ಮುಷ್ಕರಕ್ಕೆ ಹೋದರೆ ಹುಷಾರ್ – ಸಾರಿಗೆ ನೌಕರರಿಗೆ ಅಧಿಕಾರಿಗಳ ಎಚ್ಚರಿಕೆ!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗದಂತೆ ಈಗಾಗಲೇ ಅಧಿಕಾರಿಗಳು ನೌಕರರಿಗೆ ಎಚ್ಚರಿಕೆ ಕೊಡುತ್ತಿದ್ದಾರೆ. ನಾಲ್ಕೂ...
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ...
EPS Pensioners Protest: ಅಧಿವೇಶನ ಮುಗಿಯುವುದರೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ನಂಜುಂಡೇಗೌಡ ಎಚ್ಚರಿಕೆ
ಬೆಂಗಳೂರು: ಇದೇ ಜುಲೈ 21ರಿಂದ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೊದಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಎಂಟಿಸಿ...
ಸಮಾನ ವೇತನಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಧರಣಿ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ಮುಖಂಡರ ಬಂಧನ
ಸಾರಿಗೆ ನೌಕರರ ಹೋರಾಟ ಹತ್ತಿಕ್ಕಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವ ಬದಲಿಗೆ ದೌರ್ಜನ್ಯ ಎಸಗಿದ ಕಾಂಗ್ರೆಸ್ ಸರ್ಕಾರ ಬೆಂಗಳೂರು: ಸಮಾನ ವೇತನ,...
ರೈತರು ಮರ ಕಟಾವು ಮಾಡುವ ನಿಯಮ ಸರಳಗೊಳಿಸಿ: ಅತ್ತಹಳ್ಳಿ ದೇವರಾಜ್ ಒತ್ತಾಯ
ಮೈಸೂರು: ರೈತರು ತಮ್ಮ ಜಮೀನಿನಲ್ಲಿ ಇರುವ ಮರ ಕಟಾವು ಮಾಡಿ ಸಾಗಾಣಿಕೆ ಮಾಡಿಕೊಳ್ಳುವ ನಿಯಮ ಸರಳೀಕರಣ ಗೊಳಿಸಿಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕ್ರಮ ಕೈಗೊಳ್ಳಬೇಕು...
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಗ್ರಾಮದಲ್ಲೇ ಬೀಡುಬಿಟ್ಟ ವೈದ್ಯರ ತಂಡ
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳದಲ್ಲಿ ನಡೆದಿದೆ. ಗ್ರಾಮಕ್ಕೆ ಗ್ರಾಮ ಪಚಾಯಿತಿಯಿಂದ ಸರಬರಾಜು ಮಾಡಿರುವ ನೀರು...
KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ-ಧರಣಿ ಸತ್ಯಾಗ್ರಹ ಆರಂಭ
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ಇಂದಿನಿಂದ (ಜು.29)...