ಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ 500 ಕೋಟಿ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟನ್ನು ಇಂದು ವಿತರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ಬಿಎಂಟಿಸಿ ಬಸ್ನಲ್ಲಿ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ 500ನೇ ಕೋಟಿಯ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟನ್ನು ವಿತರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಲಾಗಿತ್ತು. 2023ರಮೇ 20 ರಂದು ಸರ್ಕಾರ ಅಸ್ತಿತ್ವಕ್ಕೆ ಬಂದ ತಕ್ಷಣ ಜಾರಿಗೊಳಿಸಲು ಸಚಿವ ಸಂಪುಟದಲ್ಲಿ ಕೈಗೊಂಡ ತೀರ್ಮಾನದಂತೆ ಜೂನ್ 11 ರಂದು ಶಕ್ತಿ ಯೋಜನೆಗೆ ಚಾಲನೆ ನೀಡಲಾಯಿತು. ಅಂದಿನಿಂದ ರಾಜ್ಯದ ಮಹಿಳೆಯರಿಗೆ ಸರ್ಕಾರಿ ಬಸ್ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಲಾಗಿದೆ ಎಂದು ವಿವರಿಸಿದರು.
ಕಾಂಗ್ರೆಸ್ ಸರ್ಕಾರ ರಾಜ್ಯದ ಎಲ್ಲ ಮಹಿಳೆಯರಿಗೆ ರಾಜ್ಯದೊಳಗೆ ಉಚಿತ ಬಸ್ ಪ್ರಯಾಣವನ್ನು ಒದಗಿಸುವ ನಿಟ್ಟಿನಲ್ಲಿ ‘ಶಕ್ತಿ’ ಯೋಜನೆಯನ್ನು 2023ರ ಜೂನ್ 11ರಿಂದ ಜಾರಿ ಮಾಡಿದೆ. ಈ ಯೋಜನೆಯಡಿಯಲ್ಲಿ ಕೆಎಸ್ಆರ್ಟಿಸಿ, ಬಿಎಂಟಿಸಿ, ಕೆಕೆಆರ್ಟಿಸಿ ಮತ್ತು ಎನ್ಡಬ್ಲ್ಯೂಕೆಆರ್ಟಿಸಿ ಸಾರಿಗೆ ಬಸ್ಗಳಲ್ಲಿ ಮಹಿಳೆಯರು ರಾಜ್ಯದೊಳಗೆ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ.
ರಾಜ್ಯದ ಸಾರಿಗೆ ನಿಗಮಗಳ ಬಸ್ಗಳಲ್ಲಿ ಪ್ರತಿನಿತ್ಯ ಒಂದು ಕೋಟಿಗೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದಾರೆ. ಅದರಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ 80 ಲಕ್ಷ ಇದ್ದು, ‘ಶಕ್ತಿ ಯೋಜನೆ’ಯಡಿ ಪ್ರತಿನಿತ್ಯ 20 ಕೋಟಿ ರೂ.ಗಳಷ್ಟು ಉಚಿತ ಟಿಕೆಟನ್ನು ಮಹಿಳೆಯರಿಗೆ ವಿತರಿಸಲಾಗುತ್ತಿದೆ ಎಂದು ತಿಳಿಸಿದರು.
ಬಿಎಂಟಿಸಿ ಬಸ್ನಲ್ಲಿ ಮಹಿಳೆಯರಿಗೆ ಸಿಎಂ ಟಿಕೆಟ್ ವಿತರಿಸುತ್ತಿದ್ದ ವೇಳೆ ಜತೆಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಾಥ್ ನೀಡಿದರು.
ಇನ್ನು ಸಿಎಂ ಮಧ್ಯಾಹ್ನ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಕೆಕೆಆರ್ಟಿಸಿ ಬಸ್ಗೆ ಪೂಜೆ ನೆರವೇರಿಸಿ, ಮಹಿಳಾ ಪ್ರಯಾಣಿಕರಿಗೆ ಉಚಿತ ಟಿಕೆಟ್ ವಿತರಿಸಿ, ನಂತರ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸಿ, ಲಿಂಬೆ ಅಭಿವೃದ್ಧಿ ಮಂಡಳಿಯ ಲಾಂಛನವನ್ನು ಬಿಡುಗಡೆಗೊಳಿಸಿದರು.
ʼಶಕ್ತಿʼ ಯೋಜನೆಯು ನಾಡಿನ ಮಹಿಳೆಯರಿಗೆ ಆರ್ಥಿಕವಾಗಿ ಬಲ ತುಂಬಿದ್ದು, ಬೀದರ್ನಿಂದ ಚಾಮರಾಜನಗರದ ವರೆಗೆ ಎಲ್ಲ ತಾಲೂಕಿನ ಎಲ್ಲ ಗ್ರಾಮಗಳಿಗೂ ಯಶಸ್ವಿಯಾಗಿ ತಲುಪಿದೆ.
500 ಕೋಟಿ ಬಾರಿ ಮಹಿಳೆಯರು ಉಚಿತವಾಗಿ ಸಾರಿಗೆ ಬಸ್ಗಳಲ್ಲಿ ಪ್ರಯಾಣ ಮಾಡಿದ್ದು, ನಾಡಿನೆಲ್ಲೆಡೆ ಶಕ್ತಿ ಸಂಚಾರವನ್ನೇ ಸೃಷ್ಟಿಸಿದೆ. #shakti#guaranteesarkara pic.twitter.com/HDu6EabksE
— CM of Karnataka (@CMofKarnataka) July 14, 2025
Related

You Might Also Like
BMTC ಚಾಲನಾ ಸಿಬ್ಬಂದಿಗಳ ಡ್ಯೂಟಿ ರೋಟಾ ಕೌನ್ಸೆಲಿಂಗ್ಗೆ ಸಿಟಿಎಂ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ, ಈಶಾನ್ಯ, ವಾಯುವ್ಯ ಹಾಗೂ ಕೇಂದ್ರೀಯ ವಲಯದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಚಾಲನಾ ಸಿಬ್ಬಂದಿಗಳನ್ನು ಹೊಸದಾಗಿ ಕೌನ್ಸೆಲಿಂಗ್...
KSRTC: ಆಗಸ್ಟ್ 5ರಿಂದ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಪಕ್ಕ!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ಶೇ.15ರಷ್ಟು ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಪಾವತಿ ಹಾಗೂ 2024ರ ಜನವರಿ 1ರಿಂದ ಆಗಬೇಕಿರುವ...
ಆ.5ರಿಂದ ಅನಿರ್ದಿಷ್ಟಾವಧಿ ಸಾರಿಗೆ ಮುಷ್ಕರ: ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ಶೇ.15ರಷ್ಟು ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಪಾವತಿ ಹಾಗೂ 2024ರ ಜನವರಿ 1ರಿಂದ ಆಗಬೇಕಿರುವ...
KSRTC ಬಸ್ಗಳ ನಡುವೆ ಮುಖಾಮುಖಿ ಡಿಕ್ಕಿ: ಹಲವು ಪ್ರಯಾಣಿಕರಿಗೆ ಗಾಯ
ಹಾಸನ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಸಕಲೇಶಪುರ ತಾಲೂಕಿನ ವೆಂಕಟಿಹಳ್ಳಿ ಗ್ರಾಮದ ಬಳಿ ಇಂದು ಬೆಳಗ್ಗೆ ನಡೆದಿದೆ....
ಚಲಿಸುತ್ತಿದ್ದ ಬಸ್ನಲ್ಲೇ ಗಂಡು ಮಗುವಿಗೆ ಜನ್ಮನೀಡಿ ಕಿಟಕಿಯಿಂದ ಎಸೆದ ಪಾಪಿ ತಾಯಿ
ಮುಂಬೈ: ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿ ಬಸ್ನಲ್ಲೇ ಮಗುವಿಗೆ ಜನ್ಮನೀಡಿ ಬಳಿಕ ಕಿಟಕಿಯಿಂದ ಆ ನಮಜಾತ ಶಿಶುವನ್ನು ಎಸೆದು ಕೊಂದಿರುವ ಘಟನೆ ಮಹಾರಾಷ್ಟ್ರದ ಪರ್ಭಾನಿ ನಗರದ ಪತ್ರಿ-ಸೇಲು ರಸ್ತೆಯಲ್ಲಿ...
ಕೃಷಿ ಭೂಮಿ ಕಳೆದು ಕೊಳ್ಳುತ್ತಿರುವ ರೈತರಿಗೆ ನ್ಯಾಯ ಸಮ್ಮತ ಪರಿಹಾರ ನೀಡಲು ಪಟ್ಟು: ಡಿಸಿ ಕಚೇರಿ ಬಳಿ ರೈತ ಮುಖಂಡರ ಪ್ರತಿಭಟನೆ
ಮೈಸೂರು: 66/11 ಕೆ.ವಿ. ಮತ್ತು 220 ಕೆವಿ ಸಾಮರ್ಥ್ಯದ ವಿದ್ಯುತ್ ಪ್ರಸರಣ ನಿಗಮದ ತಂತಿ ರೈತರ ಜಮೀನಿನ ಮೇಲೆ ಹಾದು ಹೋಗಿರುವುದರಿಂದ ಕೃಷಿ ಭೂಮಿ ಕಳೆದು ಕೊಳ್ಳುತ್ತಿರುವ...
ಬಿ.ಸರೋಜಾದೇವಿ ಮೇರು ನಟಿ: ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಬಿ.ಸರೋಜಾದೇವಿ ಒಬ್ಬ ಮೇರು ನಟಿ. ಪಂಚಭಾಷೆ ತಾರೆಯಾಗಿ ಕನ್ನಡ, ತಮಿಳು, ತೆಲುಗು, ಹಿಂದಿ ಭಾಷೆಗಳಲ್ಲಿ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿದ್ದ ಅದ್ಭುತ ನಟಿ ಎಂದು ಮುಖ್ಯಮಂತ್ರಿ...
ದೇವನಹಳ್ಳಿ ತಾಲೂಕಿನ ಭೂಸ್ವಾಧೀನ ಪ್ರಕ್ರಿಯೆ ಸಂಪೂರ್ಣ ಕೈಬಿಟ್ಟಿದ್ದೇವೆ: ಸಿಎಂ
ಬೆಂಗಳೂರು: ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ತಮ್ಮ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಭಾಂಗಣದಲ್ಲಿ...
KKRTC ವೋಲ್ವೋ ಬಸ್ – ಟ್ರಕ್ ನಡುವೆ ಭೀಕರ ಅಪಘಾತ: ಚಾಲಕನ ಕಾಲಿಗೆ ತೀವ್ರಪೆಟ್ಟು
ಚಿತ್ರದುರ್ಗ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವೋಲ್ವೋ ಬಸ್ ಹಾಗೂ ಟ್ರಕ್ ನಡುವೆ ಇಂದು ಮುಂಜಾನೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬಸ್ ಚಾಲಕನ ಕಾಲು ಮುರಿದಿದ್ದು,...