NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರಿಗೆ ಶೇ.15ರಷ್ಟು ವೇತನ ಹೆಚ್ಚಳ  ಆದೇಶ ವಾಪಸ್‌ ಪಡೆದು ಶೇ.20ರವರೆಗೆ ಹೆಚ್ಚಳದ ಗ್ರೀನ್‌ ಸಿಗ್ನಲ್‌ಕೊಟ್ಟ ಸಿಎಂ

ನಾಳೆ ಇಲ್ಲ ನಾಡಿದ್ದು ಬದಲಾದ ವೇತನ ಹೆಚ್ಚಳದ ಆದೇಶ ಸಾಧ್ಯತೆ!

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾರಿಗೆ ನೌಕರರಿಗೆ ಸರ್ಕಾರ ಶುಕ್ರವಾರ ರಾತ್ರಿ ಶೇ.15ರಷ್ಟು ವೇತನ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಜಂಟಿ ಕ್ರಿಯಾ ಸಮಿತಿ ಇದೇ ಮಾ.21ರಿಂದ ಹಮ್ಮಿಕೊಂಡಿದ್ದ ಮುಷ್ಕರವನ್ನು ವಾಪಸ್‌ ಪಡೆಯಲಾಗಿದೆ ಎಂದು ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಇಂದು ಸಂಜೆ 4 ಗಂಟೆಯಿಂದ ರಾತ್ರಿ ಸುಮಾರು 9.30ರವರೆಗೂ ಶಾಂತಿನಗರದಲ್ಲಿರುವ ಸಾರಿಗೆ ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ಎಂಡಿ ಮತ್ತು ಸಾರಿಗೆ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳೊಂದಿಗೆ ಸುದೀರ್ಘವಾಗಿ ನಡೆದ ಗೌಪ್ಯಸಭೆಯಲ್ಲಿ ಸರ್ಕಾರ ಶೇ.17ರಿಂದ ಶೇ.20ರಷ್ಟು ವೇತನ ಹೆಚ್ಚಳ ಮಾಡುವ ಭರವಸೆ ನೀಡಿದೆ ಎಂದು ತಿಳಿದು ಬಂದಿದೆ.

ಶನಿವಾರ ಸಾರಿಗೆ ಕೇಂದ್ರ ಕಚೇರಿಯಲ್ಲಿ ನಡೆದ ಗೌಪ್ಯ ಸಭೆಯ ಬಳಿಕ ಹೊರಬಂದು ಸುದ್ದಿಗಾರರೊಂದಿಗೆ ಮಾತನಾಡಿದ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳು.

ಅಲ್ಲದೆ 1/1/2020ರಿಂದ ಈ ವೇತನ ಹೆಚ್ಚಳ ಜಾರಿಗೆ ಬರುವಂತೆ ನಾಳೆ ಬೆಳಗ್ಗೆ ಅಥವಾ ಸೋಮವಾರ (ಮಾ.20) ಆದೇಶವನ್ನು ಸರ್ಕಾರ ಹೊರಡಿಸಲಿದೆ ಎಂದು ತಿಳಿದು ಬಂದಿದೆ. ಅಂದರೆ ನಿನ್ನೆ (ಮಾ.17) ರಾತ್ರಿ ಸರ್ಕಾರ ಹೊರಡಿಸಿದ್ದ ಶೇ.15ರಷ್ಟು ವೇತನ ಹೆಚ್ಚಳವನ್ನು ವಾಪಸ್‌ ಪಡೆದು ಮತ್ತೆ ಶೇ.17ರಿಂದ20ರವರೆಗೆ ಹೆಚ್ಚಿಸಿ ಆದೇಶ ಹೊರಡಿಸಲಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ಇನ್ನು ಪ್ರಮುಖವಾಗಿ 2021 ಏಪ್ರಿಲ್‌ನಲ್ಲಿ ನಡೆದ ಮುಷ್ಕರದ ವೇಳೆ ನೌಕರರು ಮತ್ತು ಅವರ ಕುಟುಂಬದವರ ವಿರುದ್ಧ ದಾಖಲಾಗಿರುವ ಪೊಲೀಸ್‌ ಪ್ರಕರಣಗಳನ್ನೆಲ್ಲ ವಾಪಸ್‌ ಪಡೆಯುವುದಾಗಿ ದೂರವಾಣಿ ಮೂಲಕ ಕೆಎಸ್‌ಆರ್‌ಟಿಸಿ ಎಂಡಿ ಅನ್ಬುಕುಮಾರ್‌ ಅವರ ಜತೆ ಮಾತನಾಡಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು ಒಪ್ಪಿಕೊಂಡಿದ್ದು, ಎಫ್‌ಐಆರ್‌ ಆಗಿರುವ 57 ನೌಕರರಿಗೂ ಮತ್ತೆ ಕರ್ತವ್ಯಕ್ಕೆ ತೆಗೆದುಕೊಳ್ಳಬೇಕು ಎಂಬ ಒತ್ತಾಯಕ್ಕೂ ಸರ್ಕಾರ ಮಣಿದಿದೆ ಎಂದು ತಿಳಿದು ಬಂದಿದೆ.

ಅಲ್ಲದೆ 1 ಜನವರಿ 2020ರಿಂದ ವೇತನ ಹೆಚ್ಚಳ ಜಾರಿಗೆ ಬರುವಂತೆ ಆದೇಶ ಮಾಡಬೇಕು. ಜತೆಗೆ ಏನು ಈ 38 ತಿಂಗಳ ಹಿಂಬಾಕಿಯನ್ನು ಕೊಡಬೇಕು ಎಂದು ಸಮಿತಿ ಪದಾಧಿಕಾರಿಗಳು ಸಭೆಯಲ್ಲಿ ಕೇಳಿದ್ದಕ್ಕೆ ಎಂಡಿ ಅವರು ಸರ್ಕಾರ ಒಪ್ಪಿಕೊಂಡಿದ್ದು ನಾವು 1/1/2020ರಿಂದಲೇ ಜಾರಿಗೆ ಬರುವಂತೆ ವೇತನ ಹೆಚ್ಚಳ ಮಾಡುತ್ತೇವೆ, ಜತೆಗೆ ಹಿಂಬಾಕಿಯನ್ನು ಕೊಡುತ್ತೇವೆ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.

ಹೀಗಾಗಿ ಇದೇ ಮಾ.21ರಿಂದ ಕರೆ ನೀಡಿದ್ದ ಅನಿರ್ದಿಷ್ಟಾವಧಿ ಸಾರಿಗೆ ಮುಷ್ಕರವನ್ನು ಕೈ ಬಿಡಲಾಗಿದೆ ಎಂದು ಸಮಿತಿಯ ಪದಾಧಿಕಾರಿಗಳು ಘೋಷಣೆ ಮಾಡಿದ್ದು, ಯುಗಾದಿಗೆ ನೌಕರರಿಗೆ ಸಿಹಿ ಸುದ್ದಿ ನೀಡುವ ಜತೆಗೆ ಹಬ್ಬಕ್ಕೆ ದೂರದೂರಿಗೆ ಹೋಗುವ ಪ್ರಯಾಣಿಕರಿಗೂ ಅನುಕೂಲವಾಗುವ ನಿಟ್ಟಿನಲ್ಲಿ ಸರ್ಕಾರ ಒಪ್ಪಿಕೊಂಡಿರುವುದು ಸಂತಸ ತಂದಿದೆ ಎಂದು ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ.

Leave a Reply

error: Content is protected !!
LATEST
ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ