ತಿರುವಳ್ಳೂರು: ತಮಿಳುನಾಡಿನ ತಿರುವಳ್ಳೂರಿನ ಬಳಿ ಮೈಸೂರು- ದರ್ಭಾಂಗ್ ಎಕ್ಸ್ಪ್ರೆಸ್ ರೈಲು ಮತ್ತು ಗೂಡ್ಸ್ ಟ್ರೈನ್ ಡಿಕ್ಕಿಯಾಗಿ ಭಾರೀ ಅನಾಹುತ ಸಂಭವಿಸಿದೆ. ದುರ್ಘಟನೆಯಲ್ಲಿ 19 ಮಂದಿ ಗಂಭೀರವಾಗಿ ಗಾಯಗೊಂಡಿದ್ದು 50 ಕ್ಕೂ ಪ್ರಯಾಣಿಕಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.
ಸದ್ಯ ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜತೆಗೆ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ರಕ್ಷಣೆಯನ್ನು ಮಾಡಲಾಗುತ್ತಿದೆ. ಒಟ್ಟು 45 ಮಂದಿ ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಲಾಗುತ್ತಿದೆ.
ರೈಲ್ವೇ ಇಲಾಖೆಯ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಈ ಸಂಬಂಧ ಮಾತನಾಡಿದ್ದು, ರೈಲು ಅಪಘಾತದಲ್ಲಿ 19 ಮಂದಿ ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡವರೂ ಔಟ್ ಆಫ್ ಡೇಂಜರ್. ಅದೃಷ್ಟವಶಾತ್ ಯಾವ ಸಾವು-ನೋವು ಆಗಿಲ್ಲ ಎಂದು ತಿಳಿಸಿದ್ದಾರೆ.
ಇನ್ನು 13 ಬೋಗಿಗಳು ಹಳಿ ತಪ್ಪಿರುವ ಬಗ್ಗೆ ಮಾಹಿತಿ ಇದೆ. ತುಂಬಾ ಒಳ್ಳೆಯ ದಿನ, ಈ ಅಪಘಾತದಲ್ಲಿ ದೊಡ್ಡ ಅನಾಹುತ ಆಗಿಲ್ಲ. ಎಲ್ಲ ಪ್ರಯಾಣಿಕರನ್ನೂ ಮೆಮು ಟ್ರೈನ್ ಮೂಲಕ ಶಿಫ್ಟ್ ಮಾಡಲಾಗಿದೆ. ಪ್ರಯಾಣಿಕರಿಗೆ ಊಟ, ಉಳಿಯುವ ವ್ಯವಸ್ಥೆ ಮಾಡಲಾಗಿದೆ. ದೇವರ ದಯೆಯಿಂದ ದೊಡ್ಡ ಅನಾಹುತ ತಪ್ಪಿದೆ. ಯಾವ ಕಾರಣಕ್ಕೆ ಅಪಘಾತವಾಯಿತು ಎಂದು ತನಿಖೆ ಆಗಬೇಕಿದೆ, ಮಾಡುತ್ತೇವೆ ಎಂದು ತಿಳಿಸಿದ್ದಾರೆ.