NEWSನಮ್ಮಜಿಲ್ಲೆರಾಜಕೀಯ

ಕಮಿಷನ್ ದಂಧೆ : ಆಣೆ ಮಾಡಲು ಜೆಡಿಎಸ್‌ ಶಾಸಕರಿಗೆ ಸಂಸದೆ ಸುಮಲತಾ ಅಂಬರೀಶ್ ಸವಾಲು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ದಾಖಲೆಗಳನ್ನು ಇಟ್ಟುಕೊಂಡು ಮೇಲುಕೋಟೆಗೆ ಬನ್ನಿ. ದಾಖಲೆ ಸಮೇತ ಆಣೆ-ಪ್ರಮಾಣ ಮಾಡೋಣ, ಯಾರು ಏನು ಅಂತಾ ಗೊತ್ತಾಗುತ್ತದೆ ಎಂದು ಜೆಡಿಎಸ್‌ ಶಾಸಕರಿಗೆ ಸಂಸದೆ ಸುಮಲತಾ ಅಂಬರೀಶ್ ಸವಾಲು ಹಾಕಿದ್ದಾರೆ.

ಸರ್ಕಾರದ ಅನುದಾನದ ಕಾಮಗಾರಿಗಳಲ್ಲಿ ಕಮಿಷನ್ ದಂಧೆ ಮಾಡುತ್ತಿರುವ ಬಗ್ಗೆ ಜೆಡಿಎಸ್‌ ಶಾಸಕರು ಮತ್ತು ಸಂಸದೆ ಸುಮಲತಾ ಅಂಬರೀಶ್ ನಡುವಿನ ವಾಗ್ವಾದ ತಾರಕಕ್ಕೇರಿದ್ದು, ಈ ಸಂಬಂಧ ತಾಲೂಕಿನ ಬಿ.ಹೊಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ ಮುಂದೆ ಆಣೆ ಪ್ರಮಾಣ ಮಾಡಲು ಬನ್ನಿ ಎಂದು ಸವಾಲು ಹಾಕಿದರು.

ಇನ್ನು ಆಣೆ ಮಾಡಲು ಸಿದ್ಧವಿದ್ದರೆ ಬನ್ನಿ ಯಾರು ಕಮಿಷನ್ ತೆಗೆದುಕೊಳ್ಳುತ್ತಾರೆ ಎಂದು ತಿಳಿಯುತ್ತದೆ. ಸುಮ್ಮನೆ ಏನೂ ಆರೋಪ ಮಾಡಬಾರದು. ದಾಖಲೆಗಳನ್ನು ತಂದು ಆಣೆ-ಪ್ರಮಾಣ ಮಾಡಿ ಎಂದು ಶಾಸಕರಿಗೆ ತಿರುಗೇಟು ನೀಡಿದರು.

ನನ್ನ ಸಂಸದೆ ಸರ್ಟಿಫಿಕೇಟ್ ತರುತ್ತೇನೆ. ಅವರು ಅವರ ಶಾಸಕರ ಸರ್ಟಿಫಿಕೇಟ್ ತೆಗೆದುಕೊಂಡು ಮೇಲುಕೋಟೆಗೆ ಬರಲಿ. ಅಲ್ಲಿ ಆಣೆ-ಪ್ರಮಾಣ ಮಾಡಿ ಮಾತನಾಡೋಣ. ಯಾರು ನಿಜ ಹೇಳ್ತಾ ಇದ್ದಾರೆ, ಯಾರು ಸುಳ್ಳು ಹೇಳ್ತಾರೆ ಎಂದು ಜನರಿಗೂ ಗೊತ್ತಾಗುತ್ತದೆ ಅಲ್ಲವೇ ಎಂದು ಹೇಳಿದರು.

ಇನ್ನು ನಾನು ಏನೂ ಸಾಬೀತು ಮಾಡಲು ಹೋಗ್ತಾ ಇಲ್ಲ. ಧೈರ್ಯವಿದ್ದರೆ ಮಾಧ್ಯಮಗಳ ಮುಂದೆಯೂ ಬರಲಿ. ದಾಖಲೆಗಳನ್ನು ತರಲು ಕಮಿಷನ್ ಕೊಟ್ಟಿರುವವರೇ ರೆಡಿ ಇದ್ದಾರೆ. ನಾನೇ ಸುಮ್ಮನೆ ಇರಿ ಎಂದು ಹೇಳಿದ್ದೇನೆ. ಇಲ್ಲ ಅಂದರೆ ನಿಮ್ಮ ಗುತ್ತಿಗೆ ಕೆಲಸ ಹಾಳಗುತ್ತೆ ಎಂದು ಹೇಳಿದ್ದೇನೆ. ಇಲ್ಲ ನಾವು ನಿಮ್ಮ ಸಫೋರ್ಟ್ ಆಗಿ ಇರುತ್ತೇವೆ ಎಂದು ಗುತ್ತಿಗೆದಾರರ ಸಂಘ ಹೇಳಿದೆ ಎಂದು ತಿಳಿಸಿದರು.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...