ಬೆಂಗಳೂರು: ಯಲಹಂಕ ವಲಯ ವ್ಯಾಪ್ತಿಯಲ್ಲಿ ಪಾದಚಾರಿ ಮಾರ್ಗಗಳನ್ನು ದುರಸ್ತಿಗೊಳಿಸಿ ಸುಗಮ ಪಾದಚಾರಿಗಳನ್ನು ನಿರ್ಮಾಣ ಮಾಡಲು ಯಲಹಂಕ ವಲಯ ಆಯುಕ್ತ ಕರೀಗೌಡ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಲಯದ ಸಂದೀಪ್ ಉನ್ನಿ ಕೃಷ್ಣನ್ ರಸ್ತೆಯಲ್ಲಿ ಇಂದು ಪಾದಚಾರಿ ಮಾರ್ಗಗಳನ್ನು ಪರಿಶೀಲನೆ ನಡೆಸಿದ ಅವರು, ಪಾದಚಾರಿ ಮಾರ್ಗದಲ್ಲಿ ಇರುವ ಸಮಸ್ಯೆಗಳನ್ನು ಒಂದು ವಾರದೊಳಗಾಗಿ ದುರಸ್ತಿಗೊಳಿಸಿ ಛಾಯಾಚಿತ್ರದೊಂದಿಗೆ ವರದಿ ನೀಡಲು ಸೂಚಿಸಿದರು.
ಪಾದಚಾರಿ ಮಾರ್ಗದಲ್ಲಿ ಒತ್ತುವರಿ ಮಾಡಿಕೊಂಡಿರುವುದನ್ನು ಗಮನಿಸಿ ಕೂಡಲೇ ಒತ್ತುವರಿ ತೆರವು ಮಾಡಿಸಿ ಪುನಃ ಒತ್ತುವರಿಯಾಗದಂತೆ ನೋಡಿಕೊಳ್ಳಬೇಕು. ಪಾದಚಾರಿ ಮಾರ್ಗದಲ್ಲಿ ಅಳವಡಿಸಿರುವ ಇಂಟರ್ ಲಾಕಿಂಗ್ ಟೈಲ್ಸ್ ಗಳು ಹಾಳಾಗಿದ್ದು, ಅದನ್ನು ಕುಡಲೆ ದುರಸ್ತಿಗೊಳಿಸಲು ಸೂಚಿಸಿದರು.
ಯಲಹಂಕ ನ್ಯೂ ಟೌನ್ ಬಳಿ ರಸ್ತೆ ಬದಿ ಚರಂಡಿಗೆ ನೀರು ಹೋಗಲು ವ್ಯವಸ್ಥೆ ಮಾಡಿರುವ ಗ್ರೇಟಿಂಗ್ಸ್ ಬಳಿ ಸ್ವಚ್ಛತೆ ಮಾಡಿ ನಿರಂತವಾಗಿ ಸ್ವಚ್ಛವಾಗಿರುವಂತೆ ನೋಡಿಕೊಳ್ಳಬೇಕು. ಜೊತೆಗೆ ಸೈಡ್ ಡ್ರೈನ್ ಗಳಲ್ಲಿ ಹೂಳೆತ್ತಿ ಸ್ವಚ್ಛತೆ ಕಾಪಾಡಿ ರಸ್ತೆಯಲ್ಲಿ ಬೀಳುವ ನೀರು ಚರಂಡಿಗಳಿಗೆ ಸರಾಗವಾಗಿ ಹರಿದು ಹೋಗುವ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು.
3 ಕಿ.ಮೀ ನಡಿಗೆ:ಯಲಹಂಕ ನ್ಯೂ ಟೌನ್ ಸಂದೀಪ್ ಉನ್ನಿ ಕೃಷ್ಣನ್ ರಸ್ತೆ, ಜಲಮಂಡಳಿ ಕಛೇರಿಯಿಂದ ಅಟ್ಟೂರು ಬಳಿ ಇರುವ ತಿರುಮಲ ಡಾಬಾದ ಮೂಲಕ ಜಿಕೆವಿಕೆ ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆಯವರೆ ಸುಮಾರು 3.00 ಕಿ.ಮೀ ರಸ್ತೆಯ ಪಾದಚಾರಿ ಮಾರ್ಗವನ್ನು ನಡಿಗೆಯ ಮೂಲಕ ಅಧಿಕಾರಿಗಳೊಂದಿಗೆ ಪರಿಶೀಲಿಸಿದರು.
ಈ ವೇಳೆ ಕಾರ್ಯಪಾಲಕ ಅಭಿಯಂತರರಾದ ಸುಧಾಕರ್, ಸಹಾಯಕ ಕಾರ್ಯಪಾಲಕ ಅಭಿಯಂತರರು ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
Related

You Might Also Like
ಬೆಂ.ಗ್ರಾಮಾಂತರ: ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಆಗಮ- ವಾಹನ, ಸಾರ್ವಜನಿಕರ ಪ್ರವೇಶ ನಿಷೇಧ: ಡಿಸಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ನಾಳೆ (ಜೂ.20) ಬೆಂಗಳೂರು ಉತ್ತರ ತಾಲೂಕಿನ ನಗರೂರು ಗ್ರಾಮದಲ್ಲಿನ ಬಿ.ಜಿ.ಎಸ್ ಆಸ್ಪತ್ರೆಯ ನೂತನ ಘಟಕದ ಕಟ್ಟಡ...
ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ
ಬೆಂಗಳೂರು: ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ಸಂಸ್ಥೆಯು ಆರು ತಿಂಗಳ ಅವಧಿಯ ರೆಗ್ಯುಲರ್ ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿ ಪ್ರವೇಶಕ್ಕೆ ಅರ್ಜಿ...
ಮಾವಿನ ಬೆಂಬೆಲ ಬೆಲೆ ನಿಗದಿಗೆ ಆಹಾರ ಸಚಿವ ಮುನಿಯಪ್ಪ ಒತ್ತಾಯ
ಬೆಂಗಳೂರು: ಮಾವಿಗೆ ಬೆಂಬಲ ಬೆಲೆ ಷೋಷಣೆ ಮಾಡಲು ಸರ್ಕಾರವನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ಒತ್ತಾಯಿಸಿದ್ದಾರೆ. ಇಂದು ನಡೆದ ಸಚಿವ ಸಂಪುಟದ...
ವಿವೇಚನಾತ್ಮಕವಾಗಿ ನೈಸರ್ಗಿಕ ಸಂಪತ್ ಬಳಸಿದರಷ್ಟೇ ಉಳಿಗಾಲ: ಸಚಿವ ಈಶ್ವರ ಖಂಡ್ರೆ
ಪಳೆಯುಳಿಕೆ ಇಂಧನಕ್ಕೆ ಪರ್ಯಾಯವಾಗಿ ನವೀಕೃತ ಮತ್ತು ಜೈವಿಕ ಇಂಧನ ಬಳಕೆಗೆ ಕರೆ ಬೆಂಗಳೂರು: ಪರಿಸರ ಸ್ನೇಹಿಯಾದ ನವೀಕರಿಸಬಹುದಾದ ಮತ್ತು ಜೈವಿಕ ಇಂಧನ ಬಳಕೆಗೆ ಹೆಚ್ಚಿನ ಒತ್ತು ನೀಡುವ...
KKRTC ಕಂಡಕ್ಟರ್ ಮೇಲೆ ಹಲ್ಲೆ: ಮೂವರಿಗೆ ₹75 ಸಾವಿರ ದಂಡ- ಕಟ್ಟಲಾಗದಿದ್ದರೆ 6 ತಿಂಗಳು ಜೈಲು ಶಿಕ್ಷೆ- ಕೋರ್ಟ್ ಮಹತ್ವದ ತೀರ್ಪು
ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ನಿರ್ವಾಹಕರ ಮೇಲೆ ಹಲ್ಲೆ ಮಾಡಿದ ಮೂವರಿಗೆ ಅಫಜಲಪುರ ಪ್ರಧಾನ ದಿವಾಣಿ ನ್ಯಾಯಾಲಯ ಮತ್ತು ಜೆಎಂಎಫ್ಸಿ ನ್ಯಾಯಾಲಯ ತಲಾ...
KKRTC ವಿಜಯಪುರ: ತಂದೆ ನಿಧನರಾದ ನಾಲ್ಕೇ ದಿನಕ್ಕೆ ಡ್ಯೂಟಿಗೆ ಬರಬೇಕಿತ್ತು ಅಂತ ಚಾಲಕನಿಗೆ ಗೈರುಹಾಜರಿ ಮಾಡಿದ ಡಿಸಿ ನಾರಾಯಣಪ್ಪ ಕುರುಬರ
ಒಟ್ಟು 58 ದಿನ ರಜೆಯಲ್ಲಿದ್ದ ಚಾಲಕ ಕಂ ನಿರ್ವಾಹಕನಿಗೆ ಹಿಂದೆ ಮುಂದೆ ಗೈರು ಹಾಜರಿ ತೋರಿಸಿ 7ದಿನ ರಜೆ ಮಂಜೂರು ಮಾಡಿದ ಡಿಸಿಯ ನಡೆ ಅನುಮಾನಕ್ಕೆ ಎಡೆ...
BMTC: ಯುವತಿ ಮೇಲೆ ಬಸ್ ನುಗ್ಗಿಸಲು ಯತ್ನ ಪ್ರಕರಣದ FIRಗೆ ಹೈ ಕೋರ್ಟ್ ತಡೆ
ಬಿಎಂಟಿಸಿ ಚಾಲಕನ ಪರ ವಕ್ಕಾಲತ್ತು ವಹಿಸಿದ್ದ ಸುಪ್ರೀಂ ಕೋರ್ಟ್ ಹಾಗೂ ಹೈ ಕೋರ್ಟ್ ವಕೀಲ ಎಚ್.ಬಿ.ಶಿವರಾಜು ಬಹುತೇಕ ಸಾರಿಗೆ ನೌಕರರ ಎಲ್ಲ ಪ್ರಕರಣಗಳಲ್ಲೂ ಜಾಣ್ಮೆಯ ವಾದ ಮಂಡಿಸಿ...
KSRTC ನೂತನ 2000 ಚಾಲಕ ಕಂ ನಿರ್ವಾಹಕರಿಗೆ ನಿಯೋಜನಾ ಆದೇಶ ಪತ್ರ ವಿತರಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಎಂಟು ವರ್ಷಗಳ ಬಳಿಕ ಬೃಹತ್ ನೇಮಕಾತಿ ನಡೆದಿದ್ದು, 2000 ಚಾಲಕ ಕಂ ನಿರ್ವಾಹಕ ಅಭ್ಯರ್ಥಿಗಳ ನೇಮಕಾತಿಯು ಪಾರದರ್ಶಕವಾಗಿ ಮಾಡಲಾಗಿದೆ....
ಜೂ.21ರಂದು 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಡಿಸಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಜಿಲ್ಲಾ ಮಟ್ಟದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ 21 ರಂದು ದೇವನಹಳ್ಳಿ ಟೌನ್ ನಲ್ಲಿರುವ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ....