NEWSಬೆಂಗಳೂರು

GBA ದಕ್ಷಿಣ: ಮಳೆ ಬಂದಾಗ ಹೆಚ್ಚು ನೀರು ನಿಲ್ಲುವ ಪ್ರದೇಶಗಳಿಗೆ ಆಯುಕ್ತ ರಮೇಶ್ ಭೇಟಿ

ರಾಗಿಗುಡ್ಡ - ರಾಘವೇಂದ್ರ ಸ್ವಾಮಿ ಮಠ ಜಂಕ್ಷನ್ ಬಳಿ ಅಂಡರ್ ಪಾಸ್ ನಿರ್ಮಾಣಕ್ಕೆ ಚಿಂತನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಗರದ ಪ್ರಮುಖ ಸಂಚಾರ ದಟ್ಟಣೆಯ ಪ್ರದೇಶಗಳಿಗೆ ಹಾಗೂ ಮಳೆ ಬಂದಾಗ ಹೆಚ್ಚು ನೀರು ನಿಲ್ಲುವ ಪ್ರದೇಶಗಳಿಗೆ ಇಂದು ಭೇಟಿ ನೀಡಿ ಸಾರ್ವಜನಿಕ ಸುಗಮ ಸಂಚಾರಕ್ಕಾಗಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸ್ಥಳ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನವನ್ನು ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಆಯುಕ್ತ ಕೆ.ಎನ್. ರಮೇಶ್ ನೀಡಿದರು

ರಾಗಿಗುಡ್ಡ – ರಾಘವೇಂದ್ರ ಸ್ವಾಮಿ ಮಠ ಜಂಕ್ಷನ್ ಬಳಿ ಅಂಡರ್ ಪಾಸ್ ನಿರ್ಮಾಣಕ್ಕೆ ಚಿಂತನೆ: ರಾಗಿಗುಡ್ಡ ಡಬಲ್ ಡೆಕ್ಕರ್ ಫ್ಲೈಓವರ್‌ನ ಡೌನ್-ರ್ಯಾಂಪ್ ಬಳಿ ಉಂಟಾಗುತ್ತಿರುವ ಸಂಚಾರ ದಟ್ಟಣೆಯನ್ನು ಸೂಕ್ಷ್ಮವಾಗಿ ಗಮನಿಸಿದ ಆಯುಕ್ತರು, ಈ ಭಾಗದಲ್ಲಿ ವಾಹನಗಳ ಸುಗಮ ಸಂಚಾರಕ್ಕಾಗಿ ರಾಘವೇಂದ್ರ ಸ್ವಾಮಿ ಮಠದ ಜಂಕ್ಷನ್ ಬಳಿ ಉದ್ದೇಶಿತ ಕೆಳಸೇತುವೆ ನಿರ್ಮಾಣದ ಕುರಿತು ಟ್ರಾಫಿಕ್ ಪೊಲೀಸ್ ಹಾಗೂ ತಾಂತ್ರಿಕ ತಂಡದೊಂದಿಗೆ ಚರ್ಚಿಸಿ, ಪ್ರಾಥಮಿಕ ವರದಿ ಪರಿಶೀಲಿಸಿದರು.

ಸಿಲ್ಕ್ ಬೋರ್ಡ್ ಜಂಕ್ಷನ್ – ನೀರು ನಿಲ್ಲುವ ಸಮಸ್ಯೆಗೆ ಕಡಿವಾಣ ಹಾಕಿ: ನಗರದ ಪ್ರಮುಖ ಜಂಕ್ಷನ್ ಆದ ಸಿಲ್ಕ್ ಬೋರ್ಡ್‌ನಲ್ಲಿ ಮಳೆಗಾಲದಲ್ಲಿ ಜೋರು ಮಳೆ ಬಂದಾಗ ಉಂಟಾಗುವ ನೀರು ನಿಲ್ಲುವ ಸ್ಥಳಗಳಿಗೆ ಭೇಟಿ ನೀಡಿದ ಆಯುಕ್ತರು, ಅದಕ್ಕೆ ಕಾರಣವಾದ ತಾಂತ್ರಿಕ ಲೋಪಗಳನ್ನು ಶೀಘ್ರ ಪತ್ತೆ ಹಚ್ಚಿ ಮಳೆನೀರು ಸರಾಗವಾಗಿ ಹರಿದು ಹೋಗಲು ರಾಜಕಾಲುವೆ ಹಾಗೂ ಚರಂಡಿಗಳ ದುರಸ್ತಿಗೆ ತಕ್ಷಣದ ಕ್ರಮ ಕೈಗೊಳ್ಳಲು ಸೂಚಿಸಿದರು.

ಬನಶಂಕರಿ ದೇವಸ್ಥಾನ ಜಂಕ್ಷನ್ – ವೃತ್ತಾಕಾರದ ಸ್ಕೈವಾಕ್ ನಿರ್ಮಾಣಕ್ಕೆ ಸಿದ್ಧತೆ: ಬನಶಂಕರಿ ಜಂಕ್ಷನ್‌ನಲ್ಲಿ ಪಾದಚಾರಿಗಳ ಸುರಕ್ಷತೆಗಾಗಿ ನಿರ್ಮಿಸಲು ಉದ್ದೇಶಿಸಿರುವ ವೃತ್ತಾಕಾರದ ಸ್ಕೈ ವಾಕ್ ನಿರ್ಮಾಣದ ಕಾಮಗಾರಿ ಪ್ರಾರಂಭದ ಹಂತದಲ್ಲಿ ಇದ್ದು, ಈ ಸಂಬಂಧ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನ ನೀಡಿದರು.

ಬೆಂಗಳೂರು ದಕ್ಷಿಣ ಭಾಗವನ್ನು ಟ್ರಾಫಿಕ್ ದಟ್ಟಣೆಯಿಂದ ಮುಕ್ತಗೊಳಿಸಲು ಹಾಗೂ ಸುಸಜ್ಜಿತ ಮೂಲಸೌಕರ್ಯದ ಪ್ರದೇಶವನ್ನಾಗಿ ಮಾಡಲು ಪಾಲಿಕೆಯು ಬದ್ಧವಾಗಿದೆ ಎಂದು ಈ ಸಂದರ್ಭದಲ್ಲಿ ಆಯುಕ್ತರು ತಿಳಿಸಿದರು.

ಈ ವೇಳೆ ಪಾಲಿಕೆಯ ಮುಖ್ಯ ಅಭಿಯಂತರರಾದ ಬಸವರಾಜ ಕಬಾಡೆ, ಕೆ ವಿ ರವಿ ಹಾಗೂ ಪೊಲೀಸ್‌ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಇನ್ನಿತರರು ಉಪಸ್ಥಿತರಿದ್ದರು.

Megha
the authorMegha

Leave a Reply

error: Content is protected !!
Latest news
ಬೇಕಾಬಿಟ್ಟಿ ಗ್ಯಾರಂಟಿಗಳ ಕೊಡುವುದರಿಂದ ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ: ಸರ್ಕಾರಗಳಿಗೆ ಎಚ್ಚರಿಕೆ ನೀಡಿ ವಿತ್ತ... ಲಾರಿ ಓವರ್‌ಟೇಕ್‌ ಮಾಡುವ ವೇಳೆ ಚಾಲಕನ ನಿಯಂತ್ರ ಕಳೆದುಕೊಂಡ ಕಾರು ಪಲ್ಟಿ: ದಂಪತಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, ಆತಂಕಬೇಡ: ಸಿಎಂ ಶಿವಕುಮಾರ್‌ ಭರವಸೆ KSRTC ಕನಕಪುರ ಘಟಕದಲ್ಲಿ ಚಾಲಕನ ಮೇಲೆ ಹಲ್ಲೆ ಮಾಡಿದ ನಾಲ್ವರ ಅಮಾನತು ಸಿಎಂ ತವರಲ್ಲೇ KSRTC ಚಾಲನಕನ ಮೇಲೆ ಹಲ್ಲೆ, ಗೂಂಡಾ ವರ್ತನೆ: ಡಿಎಂ ಎದುರೇ ಘಟಕದಲ್ಲಿ ರೌಡಿಸಂ ನೌಕರನ ವಿರುದ್ಧ ಸಾಬೀತಾಗಿರುವ ದುರ್ನಡತೆಗೆ ಹೋಲಿಸಿದರೆ ಆತನ ವಜಾ ಮಾಡಿರುವುದು ಕಾನೂನುಬಾಹಿರ,ಅತ್ಯಂತ ಕಠಿಣ ಶಿಕ್ಷೆ: ಸು... ತಜ್ಞರ ಸಲಹೆ ಪಡೆದು ಪಾಲಿಕೆ ಆಯವ್ಯಯ ಅನುದಾನ ಬಳಕೆ : GBA ದಕ್ಷಿಣ ಆಯುಕ್ತ BMTC: ಜೂನ್‌ 18ರೊಳಗೆ ನಿವೃತ್ತ ನೌಕರರು ಏ-2018 ರಿಂದ ಜು-2018ರವರೆಗಿನ ತುಟ್ಟಿಭತ್ಯೆ ಪಡೆಯಲು ಬ್ಯಾಂಕ್‌ ಖಾತೆ ವಿವರ ... ಕುಡಿಯುವ ನೀರು ಸಮಸ್ಯೆ ಉಂಟಾದಲ್ಲಿ ಅಧಿಕಾರಿಗಳೇ ಹೊಣೆ: ಸಚಿವ ಖಂಡ್ರೆ ಎಚ್ಚರಿಕೆ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶಿಕ್ಷಣವೊಂದೇ ಆಯುಧ: ನ್ಯಾ. ಶ್ರೀಶೈಲ್ ಭೀಮಸೇನ ಬಾಗಡಿ