ಬೆಂಗಳೂರು: ಮಳೆಗಾಲದ ವೇಳೆ ಯಾವುದೇ ರೀತಿಯ ಸಮಸ್ಯೆಗಳಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಎಲ್ಲ ವಿಭಾಗಗಳ ಇಂಜಿನಿಯರ್ಗಳಿಗೆ, ಅರಣ್ಯ ವಿಭಾಗದ ಅಧಿಕಾರಿಗಳಿಗೆ ಪಶ್ಚಿಮ ವಲಯದ ವಲಯ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ತಾಕೀತು ಮಾಡಿದರು.
ಪಶ್ಚಿಮ ವಲಯ ವ್ಯಾಪ್ತಿಯಲ್ಲಿ ಮಳೆಗಾಲಕ್ಕೆ ತೆಗೆದುಕೊಳ್ಳಬೇಕಿರುವ ಮುಂಜಾಗ್ರತಾ ಕ್ರಮಗಳ ಕುರಿತು ಇಂದು ಪಶ್ಚಿಮ ವಲಯ ಕಚೇರಿಯ ಸಭಾಂಗಣದಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಮಾತನಾಡಿದರು.
ಮಳೆಗಾಲದ ವೇಳೆ ಪಶ್ಚಿಮ ವಲಯ ವ್ಯಾಪ್ತಿಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳು ಹಾಗೂ ರಸ್ತೆಗಳಲ್ಲಿ ಜಲಾವೃತವಾಗುವ ಪ್ರದೇಶಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ರಸ್ತೆ ಬದಿಯ ಚರಂಡಿಗಳಲ್ಲಿರುವ ಹೂಳನ್ನು ಸಂಪೂರ್ಣವಾಗಿ ತೆರವುಗೊಳಿಸಿ ಮಳೆ ನೀರು ಸರಾಗವಾಗಿ ಹರಿದುಹೋಗುವಂತೆ ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು ತಿಳಿಸಿದರು.
ಪಶ್ಚಿಮ ವಲಯದಲ್ಲಿ ಬರುವ ಎಲ್ಲ ವಿಧಾನ ಸಭಾ ಕ್ಷೇತ್ರಗಳಲ್ಲಿ ಬರುವ ನೀರುಗಾಲುವೆ ಹಾಗೂ ಚರಂಡಿಗಳಲ್ಲಿ ನಿರಂತರವಾಗಿ ಹೂಳೆತ್ತಬೇಕು. ಅಲ್ಲದೆ 6 ಉಪ ವಿಭಾಗಗಳಲ್ಲಿ ತೆರೆದಿರುವ ನಿಯಂತ್ರಣ ಕೊಠಡಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ನಾಗರಿಕರಿಂದ ಬರುವ ದೂರುಗಳಿಗೆ ತ್ವರಿತವಾಗಿ ಸ್ಪಂದಿಸಿ ಕೂಡಲೇ ಇತ್ಯರ್ಥಪಡಿಸಲು ಸೂಚಿಸಿದರು.
ಕಾಮಗಾರಿಗೆ ಅಂದಾಜು ಪಟ್ಟಿ ಸಿದ್ದಪಡಿಸಿ: ಮಳೆಗಾಲದ ವೇಳೆ ಕೆ.ಆರ್.ಮಾರುಕಟ್ಟೆ ಹಾಗೂ ವಾಹನಗಳ ನಿಲುಗಡೆಯ ಸ್ಥಳದಲ್ಲಿ ನೀರು ನಿಲ್ಲುವುದರಿಂದ ವ್ಯಾಪಾರಸ್ತರು ಹಾಗೂ ಗ್ರಾಹಕರು/ನಾಗರಿಕರಿಗೆ ಸಾಕಷ್ಟು ಸಮಸ್ಯೆಯಾಗಲಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲಿಸಿ ಕಾಮಗಾರಿ ನಡೆಸಲು ಅಂದಾಜು ಪಟ್ಟಿ ಸಿದ್ದಪಡಿಸಲು ಅಧಿಕಾರಿಗಳು ಸೂಚಿಸಿದರು.
ಈ ವೇಳೆ ವಲಯ ಜಂಟಿ ಆಯುಕ್ತರಾದ ಸಂಗಪ್ಪ, ಮುಖ್ಯ ಅಭಿಯಂತರರಾದ ಶಶಿಕುಮಾರ್, ಕಾರ್ಯಪಾಕ ಅಭಿಯಂತರರು, ಕಂದಾಯ ಅಧಿಕಾರಿಗಳು, ಆರೋಗ್ಯ ವೈದ್ಯಾಧಿಕಾರಿ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
Related

You Might Also Like
ಹಾಳಾಗಿರುವ ಒಳಚರಂಡಿ ಸ್ಲ್ಯಾಬ್ ಬದಲಾಯಿಸಿ: ಅಧಿಕಾರಿಗಳಿಗೆ ಸ್ನೇಹಲ್ ತಾಕೀತು
ಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯಲ್ಲಿ ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಲು ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ಜಲಮಡಂಳಿ ಅಧಿಕಾರಿಗಳಿಗೆ ತಾಕೀತು ಮಾಡಿದರು. ಪೂರ್ವ ವಲಯ...
ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ: ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ವಸ್ತ್ರದ್ ಸಲಹೆ
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಸ್ವೀಪ್ ಕಾರ್ಯ ಚಟುವಟಿಕೆಗಳನ್ನು ನಿರಂತರವಾಗಿ ಕೈಗೊಳ್ಳುವ ಮೂಲಕ ಮತದಾರರಿಗೆ ಜಾಗೃತಿ ಮೂಡಿಸಿ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ...
ಗ್ರಾಪಂ- ಮನೆ ಬಾಗಿಲಿಗೆ ಇ-ಸ್ವತ್ತು ಖಾತೆ ವಿತರಣೆ: ಜಿಪಂ ಸಿಇಒ ಡಾ.ಅನುರಾಧ
ಪಂಚಾಯತ್ ರಾಜ್ ಇಲಾಖೆಯಿಂದ ಮಹತ್ವಕಾಂಕ್ಷಿ ಕಾರ್ಯಕ್ರಮ ಗ್ರಾಮಠಾಣಾ ವ್ಯಾಪ್ತಿಯ ಮನೆ ಬಾಗಿಲಿಗೇ ಈ ಸ್ವತ್ತು ಖಾತೆ ನೀಡುವ ಯೋಜನೆ ಆರಂಭ ಬೆಂಗಳೂರು ಗ್ರಾಮಾಂತರ: ಪಂಚಾಯತ್ ರಾಜ್ ಮತ್ತು...
ರೈತರಿಗಾಗಿ ಜಿಲ್ಲಾ ಮಟ್ಟದ ಮಾವು- ಹಲಸು ಮೇಳ: ಸಚಿವ ಮುನಿಯಪ್ಪ
ಬೆಂಗಳೂರು ಗ್ರಾಮಾಂತರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ...
ಖಾಸಗಿ ಕಂಪನಿಯ ಮುಖ್ಯ ಕಾನೂನು ಸಲಹೆಗಾರರಾಗಿ ನೇಮಕಗೊಂಡ ವಕೀಲ ಶಿವರಾಜುರಿಗೆ ಅಭಿನಂದನೆಗಳು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಹಲವು ನೌಕರರು ಸೇರಿದಂತೆ ಇತರರಿಗೆ ಉಚಿತವಾಗಿ ಕಾನೂನು ಸೇವೆ ನೀಡಿದ ಫಲವಾಗಿ ವಕೀಲರಾದ ಎಚ್.ಬಿ.ಶಿವರಾಜು ಅವರಿಗೆ ಕೈ...
KSRTC ನೂತನ ಎಂಡಿ ಅಕ್ರಮ್ ಪಾಷಗೆ ಸ್ವಾಗತ ಕೋರಿದ ನಿಗಮದ ಪ್ರಭಾರ ಎಂಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಐಎಎಸ್ ಅಧಿಕಾರಿ ಅಕ್ರಮ್ ಪಾಷ ಇಂದು ಅಧಿಕಾರ ಸ್ವೀಕರಿಸಿದರು. ನಿಗಮದ ಪ್ರಭಾರ ಎಂಡಿಯಾಗಿದ್ದ ಬಿಎಂಟಿಸಿ...
ಟೇಕಾಫ್ ಆದ ಕೆಲವೇ ಕ್ಷಣದ ಏರ್ ಇಂಡಿಯಾ ವಿಮಾನ ಪತನ: ಇಬ್ಬರು ಸೇಫ್
ಅಹಮದಾಬಾದ್: ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನ ಪತನಗೊಂಡ ಘಟನೆಗೆ ಸಂಬಂಧಿಸಿದಂತೆ 240 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ವಿಮಾನದಲ್ಲಿ...
KSRTC ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಅಕ್ರಮ್ ಪಾಷ ನೇಮಕ: ಸರ್ಕಾರ ಆದೇಶ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಅಕ್ರಂಪಾಷಾ ಅವರನ್ನು ನೇಮಿಸಿ ಸರ್ಕಾರ ಗುರುವಾರ (ಜೂ.12) ಆದೇಶ ಹೊರಡಿಸಿದೆ. ಇದೇ ಜೂನ್ 2ರ ಸೋಮವಾರ...
NWKRTC: ವರುಣನ ಅಬ್ಬರಕ್ಕೆ ಕಾರವಾರದ ಬಸ್ ಡಿಪೋ ಜಲಾವೃತ- ಮಳೆ ನೀರಿನಲ್ಲೇ ನಿಂತು ಹೆರಿಗೆ ಮಾಡಿಸಿದ ವೈದ್ಯರು
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಧಾರಾಕರ ಮಳೆಯಾಗುತ್ತಿದ್ದು, ಈ ಮಳೆಗೆ ವಾಯುವ್ಯ ರಸ್ತೆ ಸಾರಿಗೆ ನಿಮಗದ ಘಟಕ ಸಂಪೂರ್ಣ ಜಲಾವೃತವಾಗಿದ್ದು, ಬಸ್ಗಳನ್ನು ತೆಗೆಯುವುದಕ್ಕೂ ಸಿಬ್ಬಂದಿ ಪರದಾಡಿತ...