NEWS

ಜೆಸಿ ರಸ್ತೆ ವೈಟ್ ಟಾಪಿಂಗ್ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಮಹೇಶ್ವರ್ ರಾವ್ ತಾಕೀತು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ಜೆಸಿ ರಸ್ತೆಯಲ್ಲಿ ಕೈಗೆತ್ತಿಕೊಂಡಿರುವ ವೈಟ್ ಟಾಪಿಂಗ್ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಿ ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಜೆಸಿ ರಸ್ತೆಯಲ್ಲಿರುವ ವೈಟ್ ಟಾಪಿಂಗ್ ಕಾಮಗಾರಿ ನಡೆಯುವ ಸ್ಥಳಕ್ಕೆ ಇಂದು ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲಿಸಿದ ಅವರು, ರಸ್ತೆಯ ಮಿನರ್ವ ವೃತ್ತದಿಂದ ಟೌನ್ ಹಾಲ್ ವರೆಗೆ 1 ಕಿ.ಮೀ ಉದ್ದದ ರೆಸ್ತೆಯನ್ನು ವೈಟ್ ಟಾಪಿಂಗ್ ಕಾಮಗಾರಿ ಕೈಗೆತ್ತಿಕೊಂಡಿದ್ದು, ರಸ್ತೆಯ ಅರ್ಧ ಭಾಗದಲ್ಲಿ ಕಾಮಗಾರಿ ಪ್ರಾರಂಭಿಸಿ ಉಳಿದರ್ಧ ಭಾಗದಲ್ಲಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗಿರುವುದನ್ನು ಗಮನಿಸಿ, ಶೀಘ್ರಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಬೆಂಕು ಎಂದು ಹೇಳಿದರು.

15 ಮೀ. ರಸ್ತೆಯ ಅಗಲ ಹಾಗೂ ಕನಿಷ್ಠ 2.50 ಮೀ. ಅಗಲದ ಪಾದಚಾರಿ ಮಾರ್ಗ: ಕಾಮಗಾರಿ ನಡೆಸುವ ವೇಳೆ ಬಫರ್ ಜೋನ್ ಒಳಗೊಂಡಂತೆ ಎಲ್ಲಾ ಕಡೆಗಳಲ್ಲಿ 15 ಮೀ. ರಸ್ತೆಯ ಅಗಲವನ್ನು ಹಾಗೂ 2.50 ಮೀ. ಗಿಂತ ಕಡಿಮೆ ಇರದಂತೆ ಪಾದಚಾರಿ ಮಾರ್ಗದ ಅಗಲ ಇರುವಂತೆ ರಸ್ತೆ ನಿರ್ಮಿಸಲು ಕಟ್ಟುನಿಟ್ಟಿನ ಆದೇಶ ಮಾಡಿದರು.

ರಸ್ತೆಯ ಎರಡೂ ಬದಿಯಲ್ಲಿ ಮಳೆ‌‌ ನೀರು ಕೊಳವೆ ನಿರ್ಮಾಣ: ರಸ್ತೆಯ ಮೇಲೆ ನೀರು ನಿಂತು ಸಮಸ್ಯೆಗಳಾಗದಂತಿರಲು ರಸ್ತೆಯ ಎರಡು ಬದಿಯಲ್ಲಿ ಮಳೆ ನೀರು ಗಾಲುವೆಗಾಗಿ 1000 ಮೀ. ವ್ಯಾಸದ ಆರ್.ಸಿ.ಸಿ ಎನ್.ಪಿ-3 ಕೊಳವೆ ಮಾರ್ಗ ಹಾಗೂ ಹೆಚ್.ಡಿ.ಪಿ.ಇ ಡಕ್ಟ್ ವಿದ್ಯುತ್ ಕೇಬಲ್‌ಗಾಗಿ 200 ಮೀ. ವ್ಯಾಸದ 3 ಸಂಖ್ಯೆ ಹಾಗೂ ಓ.ಎಫ್.ಸಿ ಕೇಬಲ್‌ಗಾಗಿ 100 ಮೀ. ವ್ಯಾಸದ 2 ಸಂಖ್ಯೆ ಅಳವಡಿಸಲಾಗಿದೆ. ಇನ್ನೂ ಜಲಮಂಡಳಿಯ ವತಿಯಿಂದ ರಸ್ತೆಯ ಎರಡೂ ಬದಿಗಳಲ್ಲಿ ಒಳಚರಂಡಿ ಕೊಳವೆ ಮಾರ್ಗ ಹಾಗೂ ಕುಡಿಯುವ ನೀರಿನ ಕೊಳವೆ ಮಾರ್ಗ ವ್ಯವಸ್ಥೆಯನ್ನು ಮಾಡಲಾಗಿದೆ.

ಅ.31 ರೊಳಗಾಗಿ ಕಾಮಗಾರಿ ಪೂರ್ಣ: ಜೆಸಿ ರಸ್ತೆಯಲ್ಲಿ ನಡೆಯುತ್ತಿರುವ ವೈಟ್ ಟಾಪಿಂಗ್ ಕಾಮಗಾರಿಯನ್ನು ಸೆಪ್ಟೆಬಂರ್ 2 ರಂದು ಬಿ-ಸ್ಮೈಲ್ ಗೆ ಹಸ್ತಾಂತರಿಸಲಾಯಿತು. ಆ ಬಳಿಕ ವಾಹನ ಸಂಚಾರಕ್ಕೆ ಯಾವುದೇ ಅಡಚಣೆಯಾಗದಂತೆ ಕಾಮಗಾರಿಗೆ ವೇಗ ನೀಡಲಾಗಿದೆ. ಒಂದು ಭಾಗದಲ್ಲಿ ಕೈಗೆತ್ತಿಕೊಂಡಿರುವ ಕಾಮಗಾರಿಯನ್ನು ಸೆಪ್ಟೆಂಬರ್ 30 ರೊಳಗಾಗಿ ಪೂರ್ಣಗೊಳಿಸಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು. ಉಳಿದರ್ಧ ಭಾಗವನ್ನು ಅಕ್ಟೋಬರ್ 31 ರೊಳಗಾಗಿ ಪೂರ್ಣಗೊಳಿಸಲಾಗುವುದೆಂದು ಬಿಸ್ಮೈಲ್ ತಾಂತ್ರಿಕ ನಿರ್ದೇಶಕರಾದ ಡಾ.ಬಿ.ಎಸ್. ಪ್ರಹ್ಲಾದ್ ತಿಳಿಸಿದರು.

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ