NEWS

ಜೆಸಿ ರಸ್ತೆ ವೈಟ್ ಟಾಪಿಂಗ್ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಮಹೇಶ್ವರ್ ರಾವ್ ತಾಕೀತು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ಜೆಸಿ ರಸ್ತೆಯಲ್ಲಿ ಕೈಗೆತ್ತಿಕೊಂಡಿರುವ ವೈಟ್ ಟಾಪಿಂಗ್ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಿ ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಜೆಸಿ ರಸ್ತೆಯಲ್ಲಿರುವ ವೈಟ್ ಟಾಪಿಂಗ್ ಕಾಮಗಾರಿ ನಡೆಯುವ ಸ್ಥಳಕ್ಕೆ ಇಂದು ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲಿಸಿದ ಅವರು, ರಸ್ತೆಯ ಮಿನರ್ವ ವೃತ್ತದಿಂದ ಟೌನ್ ಹಾಲ್ ವರೆಗೆ 1 ಕಿ.ಮೀ ಉದ್ದದ ರೆಸ್ತೆಯನ್ನು ವೈಟ್ ಟಾಪಿಂಗ್ ಕಾಮಗಾರಿ ಕೈಗೆತ್ತಿಕೊಂಡಿದ್ದು, ರಸ್ತೆಯ ಅರ್ಧ ಭಾಗದಲ್ಲಿ ಕಾಮಗಾರಿ ಪ್ರಾರಂಭಿಸಿ ಉಳಿದರ್ಧ ಭಾಗದಲ್ಲಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗಿರುವುದನ್ನು ಗಮನಿಸಿ, ಶೀಘ್ರಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಬೆಂಕು ಎಂದು ಹೇಳಿದರು.

15 ಮೀ. ರಸ್ತೆಯ ಅಗಲ ಹಾಗೂ ಕನಿಷ್ಠ 2.50 ಮೀ. ಅಗಲದ ಪಾದಚಾರಿ ಮಾರ್ಗ: ಕಾಮಗಾರಿ ನಡೆಸುವ ವೇಳೆ ಬಫರ್ ಜೋನ್ ಒಳಗೊಂಡಂತೆ ಎಲ್ಲಾ ಕಡೆಗಳಲ್ಲಿ 15 ಮೀ. ರಸ್ತೆಯ ಅಗಲವನ್ನು ಹಾಗೂ 2.50 ಮೀ. ಗಿಂತ ಕಡಿಮೆ ಇರದಂತೆ ಪಾದಚಾರಿ ಮಾರ್ಗದ ಅಗಲ ಇರುವಂತೆ ರಸ್ತೆ ನಿರ್ಮಿಸಲು ಕಟ್ಟುನಿಟ್ಟಿನ ಆದೇಶ ಮಾಡಿದರು.

ರಸ್ತೆಯ ಎರಡೂ ಬದಿಯಲ್ಲಿ ಮಳೆ‌‌ ನೀರು ಕೊಳವೆ ನಿರ್ಮಾಣ: ರಸ್ತೆಯ ಮೇಲೆ ನೀರು ನಿಂತು ಸಮಸ್ಯೆಗಳಾಗದಂತಿರಲು ರಸ್ತೆಯ ಎರಡು ಬದಿಯಲ್ಲಿ ಮಳೆ ನೀರು ಗಾಲುವೆಗಾಗಿ 1000 ಮೀ. ವ್ಯಾಸದ ಆರ್.ಸಿ.ಸಿ ಎನ್.ಪಿ-3 ಕೊಳವೆ ಮಾರ್ಗ ಹಾಗೂ ಹೆಚ್.ಡಿ.ಪಿ.ಇ ಡಕ್ಟ್ ವಿದ್ಯುತ್ ಕೇಬಲ್‌ಗಾಗಿ 200 ಮೀ. ವ್ಯಾಸದ 3 ಸಂಖ್ಯೆ ಹಾಗೂ ಓ.ಎಫ್.ಸಿ ಕೇಬಲ್‌ಗಾಗಿ 100 ಮೀ. ವ್ಯಾಸದ 2 ಸಂಖ್ಯೆ ಅಳವಡಿಸಲಾಗಿದೆ. ಇನ್ನೂ ಜಲಮಂಡಳಿಯ ವತಿಯಿಂದ ರಸ್ತೆಯ ಎರಡೂ ಬದಿಗಳಲ್ಲಿ ಒಳಚರಂಡಿ ಕೊಳವೆ ಮಾರ್ಗ ಹಾಗೂ ಕುಡಿಯುವ ನೀರಿನ ಕೊಳವೆ ಮಾರ್ಗ ವ್ಯವಸ್ಥೆಯನ್ನು ಮಾಡಲಾಗಿದೆ.

ಅ.31 ರೊಳಗಾಗಿ ಕಾಮಗಾರಿ ಪೂರ್ಣ: ಜೆಸಿ ರಸ್ತೆಯಲ್ಲಿ ನಡೆಯುತ್ತಿರುವ ವೈಟ್ ಟಾಪಿಂಗ್ ಕಾಮಗಾರಿಯನ್ನು ಸೆಪ್ಟೆಬಂರ್ 2 ರಂದು ಬಿ-ಸ್ಮೈಲ್ ಗೆ ಹಸ್ತಾಂತರಿಸಲಾಯಿತು. ಆ ಬಳಿಕ ವಾಹನ ಸಂಚಾರಕ್ಕೆ ಯಾವುದೇ ಅಡಚಣೆಯಾಗದಂತೆ ಕಾಮಗಾರಿಗೆ ವೇಗ ನೀಡಲಾಗಿದೆ. ಒಂದು ಭಾಗದಲ್ಲಿ ಕೈಗೆತ್ತಿಕೊಂಡಿರುವ ಕಾಮಗಾರಿಯನ್ನು ಸೆಪ್ಟೆಂಬರ್ 30 ರೊಳಗಾಗಿ ಪೂರ್ಣಗೊಳಿಸಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು. ಉಳಿದರ್ಧ ಭಾಗವನ್ನು ಅಕ್ಟೋಬರ್ 31 ರೊಳಗಾಗಿ ಪೂರ್ಣಗೊಳಿಸಲಾಗುವುದೆಂದು ಬಿಸ್ಮೈಲ್ ತಾಂತ್ರಿಕ ನಿರ್ದೇಶಕರಾದ ಡಾ.ಬಿ.ಎಸ್. ಪ್ರಹ್ಲಾದ್ ತಿಳಿಸಿದರು.

Megha
the authorMegha

Leave a Reply

error: Content is protected !!
Latest news
ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ