NEWS

ಜೆಸಿ ರಸ್ತೆ ವೈಟ್ ಟಾಪಿಂಗ್ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಮಹೇಶ್ವರ್ ರಾವ್ ತಾಕೀತು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ಜೆಸಿ ರಸ್ತೆಯಲ್ಲಿ ಕೈಗೆತ್ತಿಕೊಂಡಿರುವ ವೈಟ್ ಟಾಪಿಂಗ್ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಿ ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಜೆಸಿ ರಸ್ತೆಯಲ್ಲಿರುವ ವೈಟ್ ಟಾಪಿಂಗ್ ಕಾಮಗಾರಿ ನಡೆಯುವ ಸ್ಥಳಕ್ಕೆ ಇಂದು ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲಿಸಿದ ಅವರು, ರಸ್ತೆಯ ಮಿನರ್ವ ವೃತ್ತದಿಂದ ಟೌನ್ ಹಾಲ್ ವರೆಗೆ 1 ಕಿ.ಮೀ ಉದ್ದದ ರೆಸ್ತೆಯನ್ನು ವೈಟ್ ಟಾಪಿಂಗ್ ಕಾಮಗಾರಿ ಕೈಗೆತ್ತಿಕೊಂಡಿದ್ದು, ರಸ್ತೆಯ ಅರ್ಧ ಭಾಗದಲ್ಲಿ ಕಾಮಗಾರಿ ಪ್ರಾರಂಭಿಸಿ ಉಳಿದರ್ಧ ಭಾಗದಲ್ಲಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗಿರುವುದನ್ನು ಗಮನಿಸಿ, ಶೀಘ್ರಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಬೆಂಕು ಎಂದು ಹೇಳಿದರು.

15 ಮೀ. ರಸ್ತೆಯ ಅಗಲ ಹಾಗೂ ಕನಿಷ್ಠ 2.50 ಮೀ. ಅಗಲದ ಪಾದಚಾರಿ ಮಾರ್ಗ: ಕಾಮಗಾರಿ ನಡೆಸುವ ವೇಳೆ ಬಫರ್ ಜೋನ್ ಒಳಗೊಂಡಂತೆ ಎಲ್ಲಾ ಕಡೆಗಳಲ್ಲಿ 15 ಮೀ. ರಸ್ತೆಯ ಅಗಲವನ್ನು ಹಾಗೂ 2.50 ಮೀ. ಗಿಂತ ಕಡಿಮೆ ಇರದಂತೆ ಪಾದಚಾರಿ ಮಾರ್ಗದ ಅಗಲ ಇರುವಂತೆ ರಸ್ತೆ ನಿರ್ಮಿಸಲು ಕಟ್ಟುನಿಟ್ಟಿನ ಆದೇಶ ಮಾಡಿದರು.

ರಸ್ತೆಯ ಎರಡೂ ಬದಿಯಲ್ಲಿ ಮಳೆ‌‌ ನೀರು ಕೊಳವೆ ನಿರ್ಮಾಣ: ರಸ್ತೆಯ ಮೇಲೆ ನೀರು ನಿಂತು ಸಮಸ್ಯೆಗಳಾಗದಂತಿರಲು ರಸ್ತೆಯ ಎರಡು ಬದಿಯಲ್ಲಿ ಮಳೆ ನೀರು ಗಾಲುವೆಗಾಗಿ 1000 ಮೀ. ವ್ಯಾಸದ ಆರ್.ಸಿ.ಸಿ ಎನ್.ಪಿ-3 ಕೊಳವೆ ಮಾರ್ಗ ಹಾಗೂ ಹೆಚ್.ಡಿ.ಪಿ.ಇ ಡಕ್ಟ್ ವಿದ್ಯುತ್ ಕೇಬಲ್‌ಗಾಗಿ 200 ಮೀ. ವ್ಯಾಸದ 3 ಸಂಖ್ಯೆ ಹಾಗೂ ಓ.ಎಫ್.ಸಿ ಕೇಬಲ್‌ಗಾಗಿ 100 ಮೀ. ವ್ಯಾಸದ 2 ಸಂಖ್ಯೆ ಅಳವಡಿಸಲಾಗಿದೆ. ಇನ್ನೂ ಜಲಮಂಡಳಿಯ ವತಿಯಿಂದ ರಸ್ತೆಯ ಎರಡೂ ಬದಿಗಳಲ್ಲಿ ಒಳಚರಂಡಿ ಕೊಳವೆ ಮಾರ್ಗ ಹಾಗೂ ಕುಡಿಯುವ ನೀರಿನ ಕೊಳವೆ ಮಾರ್ಗ ವ್ಯವಸ್ಥೆಯನ್ನು ಮಾಡಲಾಗಿದೆ.

ಅ.31 ರೊಳಗಾಗಿ ಕಾಮಗಾರಿ ಪೂರ್ಣ: ಜೆಸಿ ರಸ್ತೆಯಲ್ಲಿ ನಡೆಯುತ್ತಿರುವ ವೈಟ್ ಟಾಪಿಂಗ್ ಕಾಮಗಾರಿಯನ್ನು ಸೆಪ್ಟೆಬಂರ್ 2 ರಂದು ಬಿ-ಸ್ಮೈಲ್ ಗೆ ಹಸ್ತಾಂತರಿಸಲಾಯಿತು. ಆ ಬಳಿಕ ವಾಹನ ಸಂಚಾರಕ್ಕೆ ಯಾವುದೇ ಅಡಚಣೆಯಾಗದಂತೆ ಕಾಮಗಾರಿಗೆ ವೇಗ ನೀಡಲಾಗಿದೆ. ಒಂದು ಭಾಗದಲ್ಲಿ ಕೈಗೆತ್ತಿಕೊಂಡಿರುವ ಕಾಮಗಾರಿಯನ್ನು ಸೆಪ್ಟೆಂಬರ್ 30 ರೊಳಗಾಗಿ ಪೂರ್ಣಗೊಳಿಸಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು. ಉಳಿದರ್ಧ ಭಾಗವನ್ನು ಅಕ್ಟೋಬರ್ 31 ರೊಳಗಾಗಿ ಪೂರ್ಣಗೊಳಿಸಲಾಗುವುದೆಂದು ಬಿಸ್ಮೈಲ್ ತಾಂತ್ರಿಕ ನಿರ್ದೇಶಕರಾದ ಡಾ.ಬಿ.ಎಸ್. ಪ್ರಹ್ಲಾದ್ ತಿಳಿಸಿದರು.

Megha
the authorMegha

Leave a Reply

error: Content is protected !!
Latest news
NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ ಗೃಹಲಕ್ಷ್ಮಿ ಹಣ ಮೃತರ ಖಾತೆಗೆ ಜಮೆ ಆಗದಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆ ಅಧ್ಯಕ್ಷ ತಾಕೀತು ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್‌: ಬಿಲ್‌ಗಳಿಗೆ ಕನಿಷ್ಠ 15 ದಿನಗಳ ಪಾವತಿ ಅವಧಿ ಕಡ್ಡಾಯ ಮಾಡಿ KERC ಆದೇಶ- ಜೂನ್‌... BMTC KSRTC ನಿವೃತ್ತ ನೌಕರರ ಪ್ರತಿಭಟನೆ: ಕನಿಷ್ಠ ಪಿಂಚಣಿ 7500 ರೂ. ನೀಡಲು ಆಗ್ರಹ