- ಘನತ್ಯಾಜ್ಯ ನಿರ್ವಹಣೆಯಲ್ಲಿ ಕಾರ್ಯನಿರ್ವಹಿಸುವ ಮುಂಚೂಣಿ ಕಾರ್ಮಿಕರಿಗೆ ತರಬೇತಿ
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್ಲಾ ತ್ಯಾಜ್ಯ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಶಿಬಿರಗಳನ್ನು ನಡೆಸಲು ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಬಿ.ಎಸ್.ಡಬ್ಲ್ಯೂ.ಎಂ.ಎಲ್ ನ ಅಧ್ಯಕ್ಷ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು ಘನ ತ್ಯಾಜ್ಯ ನಿರ್ವಹಣಾ ನಿಯಮಿತ (ಬಿ.ಎಸ್.ಡಬ್ಲ್ಯೂ.ಎಂ.ಎಲ್), ಸಿ40 ನಗರಗಳ ಸಹಯೋಗ, ಸೆನ್ಸಿಂಗ್ ಲೋಕಲ್ ನೇತೃತ್ವ ಹಾಗೂ ಸಾಹಸ್ ಸಂಸ್ಥೆಯ ಸಹಕಾರದೊಂದಿಗೆ ಇಂದು ಬಿ.ಎಸ್.ಡಬ್ಲ್ಯೂ.ಎಂ.ಎಲ್ ಕಛೇರಿಯಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ನಗರದಲ್ಲಿ ಘನತ್ಯಾಜ್ಯ ವಿಭಾಗದಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರಿಗೆ ಆರೋಗ್ಯ ತಪಾಸಣಾ ಶಿಬಿರಗಳನ್ನು ನಡೆಸುವ ಮೂಲಕ, ಆರೋಗ್ಯ ಸಮಸ್ಯೆಗಳನ್ನು ಪತ್ತೆಹಚ್ಚಿ, ತುರ್ತು ವೈದ್ಯಕೀಯ ಸಹಾಯ ಮಾಡಲು ತಿಳಿಸಿದರು.
ತ್ಯಾಜ್ಯ ಕಾರ್ಮಿಕರು ಹಾಗೂ ಮೇಲ್ವಿಚಾರಣೆ ಅಧಿಕಾರಿಗಳೊಂದಿಗೆ ಪ್ರತಿ ತಿಂಗಳು ಸಭೆಗಳನ್ನು ನಡೆಸಬೇಕು. ಆ ಮೂಲಕ, ತಕ್ಷಣದ ಸಮಸ್ಯೆಗಳನ್ನು ಪತ್ತೆಹಚ್ಚಿ, ಸಂವಹನಕ್ಕೆ ವೇದಿಕೆ ಒದಗಿಸಿ ಒಟ್ಟಿಗೆ ಸಮಸ್ಯೆ ಪರಿಹಾರ ತಂತ್ರ ರೂಪಿಸಲು ಸೂಚಿಸಿದರು.
ಪಾಲಿಕೆ ವ್ಯಾಪ್ತಿಯಲ್ಲಿ ಗುರುತಿಸಲಾದ ಒಣ ತ್ಯಾಜ್ಯ ಸಂಗ್ರಹಣಾ ಘಟಕಗಳನ್ನು ಬಲಪಡಿಸುವುದರ ಜೊತೆಗೆ, ಘಟಕಗಳಲ್ಲಿ ಕಾರ್ಯನಿರ್ವಹಿಸುವ ಕೆಲಸಗಾರರನ್ನು ಉದ್ಯಮಿಗಳಾಗುವ ವ್ಯವಸ್ಥೆಯನ್ನು ಮಾಡಲಾಗುವುದು. ಜೊತೆಗೆ ಗುರುತಿನ ಚೀಟಿಗಳನ್ನು ಕೂಡಾ ನವೀಕರಣ ಮಾಡಿ ನೀಡಲಾಗುವುದು ಎಂದು ತಿಳಿಸಿದರು.
ಬೆಂಗಳೂರು ಹವಾಮಾನ ಕ್ರಿಯೆ ಮತ್ತು ಸ್ಥಿತಿಸ್ಥಾಪಕತ್ವ ಯೋಜನೆಯಡಿ ತ್ಯಾಜ್ಯ ನಿರ್ವಹಣೆಯಲ್ಲಿ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗಾಗಿ ಹವಾಮಾನ ಕ್ರಿಯೆಯ ಕುರಿತಾಗಿ ತರಬೇತಿ ಹಾಗೂ ಸಂವಾದ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದು ಅಭಿನಂದನೆಗಳನ್ನು ತಿಳಿಸಿದರು.
5 ವಲಯಗಳಲ್ಲಿ ತರಬೇತಿ: ನಗರದ ಪೂರ್ವ, ಪಶ್ಚಿಮ, ದಕ್ಷಿಣ, ಬೊಮ್ಮನಹಳ್ಳಿ ಹಾಗೂ ಮಹದೇವಪುರ ವಲಯ ಸೇರಿದಂತೆ ಐದು ವಲಯಗಳಲ್ಲಿ 600ಕ್ಕಿಂತ ಹೆಚ್ಚು ಮುಂಚೂಣಿಯ ತ್ಯಾಜ್ಯ ಕಾರ್ಮಿಕರು ಹಾಗೂ ಅಧಿಕಾರಿಗಳಿಗೆ ಮೂರು ಹಂತದ ತರಬೇತಿಗಳನ್ನು ನೀಡಲಾಗಿದೆ. ಮಾರ್ಚ್–ಜೂನ್ 2025ರ ನಡುವೆ ನಡೆದ ಸಾಮಾಜಿಕ ಸಂವಾದದ ಮೂಲಕ 75 ತ್ಯಾಜ್ಯ ಕಾರ್ಮಿಕರು ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಹಂಚಿಕೊಂಡು ಪರಿಹಾರ ಮಾರ್ಗಗಳನ್ನು ರೂಪಿಸಿದ್ದಾರೆ.
ಮುಂಚೂಣಿ ಕಾರ್ಮಿಕರಿಗೆ ತರಬೇತಿ ನೀಡುವ ಉದ್ದೇಶ: ಘನ ತ್ಯಾಜ್ಯ ನಿರ್ವಹಣೆಯು ಬೆಂಗಳೂರು ಹವಾಮಾನ ಕ್ರಿಯೆ ಮತ್ತು ಸ್ಥಿತಿಸ್ಥಾಪಕತ್ವ ಯೋಜನೆಯ(BCAP) ಪ್ರಮುಖ ಅಂಶವಾಗಿದೆ. ಈ ಹಿನ್ನೆಲೆಯಲ್ಲಿ ತ್ಯಾಜ್ಯ ವಿಭಾಗದಲ್ಲಿ ಕಾರ್ಯನಿವಹಿಸುತ್ತಿರುವ ಕಿರಿಯ ಆರೋಗ್ಯ ಪರಿವೀಕ್ಷಕರು, ಮಾರ್ಷಲ್ಗಳು, ಲಿಂಕ್ ವರ್ಕರ್ಸ್ಗಳು ಹಾಗೂ ಒಣ ತ್ಯಾಜ್ಯ ಸಂಗ್ರಹಣಾ ಘಟಕದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಆಯಾ ವಲಯಮಟ್ಟದಲ್ಲಿ ತರಬೇತಿಗಳನ್ನು ಆಯೋಜಿಸಿ, ಅವರಿಗೆ ತ್ಯಾಜ್ಯ ವಿಲೇವಾರಿ, ಬಲ್ಕ್ ವೇಸ್ಟ್, ತ್ಯಾಜ್ಯದಿಂದ ಆದಾಯ ಗಳಿಸುವ, ಸುರಕ್ಷಾ ಕ್ರಮಗಳನ್ನು ಕೈಗೊಳ್ಳುವ ಸೇರಿದಂತೆ ಇನ್ನಿತರೆ ವಿಷಯಗಳ ಕುರಿತು ಸಮಗ್ರ ಮಾಹಿತಿ ನೀಡಲಾಗುತ್ತದೆ.
ಈ ವೇಳೆ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್, ಪ್ರೀತಿ ಗೆಹ್ಲೋಟ್, ವಲಯ ಆಯುಕ್ತರಾದ ಸ್ನೇಹಲ್, ರಮೇಶ್, ದಿಗ್ವಿಜಯ್ ಬೋಡ್ಕೆ, ಬಿ.ಎಸ್.ಡಬ್ಲ್ಯೂ.ಎಂ.ಎಲ್ ನ ಮುಖ್ಯ ಕಾರ್ಯಾಚರಣೆ ಅಧಿಕಾರಿ ರಮಾಮಣಿ, ಮುಖ್ಯ ಅಭಿಯಂತರರಾದ ಲೋಕೇಶ್, ಬಸವರಾಜ್ ಕಬಾಡೆ, ಮಾರ್ಷಲ್ಗಳು, ಲಿಂಕ್ ವರ್ಕರ್ಸ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Related

You Might Also Like
ಕುಷ್ಠರೋಗ ಮುಕ್ತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಿ: ಡಾ.ಪ್ರದೀಪ್ತಾ ಕುಮಾರ್ ನಾಯಕ್
ಬೆಂಗಳೂರು: ಮನುಷ್ಯನ ಆರೋಗ್ಯಕ್ಕೆ ಸಂಬಂಧಿಸಿದಂತೆ ಕುಷ್ಠರೋಗವು ಒಂದು ಬಾಧಿತ ರೋಗವಾಗಿದ್ದು, ಕುಷ್ಠರೋಗ ಮುಕ್ತ ಸಮಾಜ ನಿರ್ಮಿಸಲು ಅಧಿಕಾರಿಗಳು ನಿರಂತರ ಕಾರ್ಯ ಪ್ರವೃತ್ತರಾಗಿರಬೇಕು ಎಂದು ಕೇಂದ್ರ ಮಾನವ ಹಕ್ಕುಗಳ...
NWKRTC: 45 ವರ್ಷದ ಮಹಿಳೆಗೆ ಅನುಕಂಪದ ಆಧಾರದಡಿ ಹುದ್ದೆಕೊಡಿ- ಹೈಕೋರ್ಟ್ ಆದೇಶ
ಬೆಂಗಳೂರು: ವಯೋಮಿತಿ ಮೀರಿದ ಮಹಿಳೆಗೆ ವಿಶೇಷ ಪ್ರಕರಣವೆಂದು ಅನುಕಂಪದ ಹುದ್ದೆ ನೀಡಬೇಕು ಎಂದು ಹೈಕೋರ್ಟ್ ಮಹತ್ವ ಆದೇಶ ಹೊರಡಿಸಿದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೌಕರನ...
BBMP: ಗಣೇಶ ಮೂರ್ತಿ ವಿಸರ್ಜನೆಗೆ 41ಕೆರೆಗಳು, 489 ಸಂಚಾರಿ ವಾಹನಗಳ ವ್ಯವಸ್ಥೆ
ಬೆಂಗಳೂರು: ಗಣೇಶ ಮೂರ್ತಿ ವಿಸರ್ಜನೆಗಾಗಿ ಕೆರೆ ಅಂಗಳ, ತಾತ್ಕಾಲಿಕ ಕಲ್ಯಾಣಿ, ಸಂಚಾರಿ ವಾಹನ (ಮೊಬೈಲ್ ಟ್ಯಾಂಕ್)/ ಗಳ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ. 41ಕೆರೆ,...
ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಕಲಾವಿದರು-ಕಲಾತಂಡದವರಿಂದ ಅರ್ಜಿ ಆಹ್ವಾನ
ಶಿವಮೊಗ್ಗ: ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವ ಕಲಾವಿದರು ಅಥವಾ ಕಲಾ ತಂಡದವರಿಂದ ಅರ್ಜಿ ಆಹ್ವಾನಿಸಲಾಗಿದೆ. ಇದು ಮಹಾನಗರ ಪಾಲಿಕೆವತಿಯಿಂದ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬಯಸುವ...
NWKRTC: ಆ.22ರಿಂದ 26ರವರೆಗೆ ಹೆಚ್ಚುವರಿ 265 ವಿಶೇಷ ಸಾರಿಗೆ ಬಸ್ಗಳ ಸೌಲಭ್ಯ
ಬೆಂಗಳೂರು: ಗಣೇಶ ಚತುರ್ಥಿ ಸಮೀಪಿಸುತ್ತಿರುವ ಹಿನ್ನೆಲೆ ಸಾರ್ವಜನಿಕರು ತಮ್ಮ ಊರುಗಳಿಗೆ ತೆರಳುವುದರಿಂದ ಹೆಚ್ಚುವರಿ 265 ವಿಶೇಷ ಸಾರಿಗೆ ಬಸ್ಸುಗಳು ಬೆಂಗಳೂರಿನಿಂದ ರಾಜ್ಯ ಹಾಗೂ ಅಂತರರಾಜ್ಯಗಳಿಗೆ ಕಾರ್ಯಾಚರಣೆ ನಡೆಸಲಿವೆ....
BMTC: ಸ್ಕೂಟರ್ ಸ್ಕಿಡ್ಆಗಿ ಬಿದ್ದ ಬಾಲಕಿ ಬಸ್ ಹಿಂದಿನ ಚಕ್ರಕ್ಕೆ ಸಿಲುಕಿ ಸಾವು
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್ 10 ವರ್ಷದ ಬಾಲಕಿ ಮೇಲೆ ಹರಿದ ಪರಿಣಾಮ ಆಕೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಯಲಹಂಕ ಕೋಗಿಲು ಕ್ರಾಸ್...
ಆದಿ ಜಾಂಬವ ಅಭಿವೃದ್ಧಿ ನಿಗಮದಲ್ಲಿ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ
ಬೆಂಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ 2025-26ನೇ ಸಾಲಿಗೆ ಸಂಬಂಧಿಸಿದಂತೆ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಅಭಿವೃದ್ದಿಗಾಗಿ ಆದಿ ಜಾಂಬವ ಅಭಿವೃದ್ಧಿ ನಿಗಮಗದಿಂದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ಫಲಾಪೇಕ್ಷಿಗಳಿಂದ...
ಉತ್ತರಾಖಂಡ್ನ 6ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ-ಸದಸ್ಯರ ನಿಯೋಗ ಗ್ರಾಮಾಂತರ ಜಿಲ್ಲೆಗೆ ಭೇಟಿ
ಬೆಂಂಗಳೂರು ಗ್ರಾಮಾಂತರ: ಉತ್ತರಾಖಂಡ್ ರಾಜ್ಯದ 6ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ರವಿಶಂಕರ್, ಸದಸ್ಯರಾದ ಜಂಗ್ಪಂಗಿ, ಎಂ.ಸಿ. ಜೋಷಿ ಅವರ ನಿಯೋಗವು ಅಧ್ಯಯನಕ್ಕಾಗಿ ಇಂದು ಜಿಲ್ಲೆಗೆ ಭೇಟಿ...