CRIMEಕೃಷಿ

ಕಾಡಿನೊಳಗೆ ರೆಸಾರ್ಟ್ ನಿರ್ಮಾಣ- ನಾಡಿಗೆ ಬರುವ ಕಾಡು ಪ್ರಾಣಿಗಳಿಂದ ಮಾನವರ ಹತ್ಯೆ: ಕುರುಬೂರು ಶಾಂತಕುಮಾರ್‌ ಕಿಡಿ

ವಿಜಯಪಥ ಸಮಗ್ರ ಸುದ್ದಿ

ಸರಗೂರು: ಅರಣ್ಯದ ಒಳಗೆ ರೆಸಾರ್ಟ್ ಗಳ ನಿರ್ಮಾಣ ಮಾಡುತ್ತಿರುವುದರಿಂದ ಕಾಡು ಪ್ರಾಣಿಗಳು ಕಾಡಿನಿಂದ ನಾಡಿಗೆ ಬಂದು ಮಾನವರ ಹತ್ಯೆ ಮಾಡುತ್ತಿವೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಕಿಡಿಕಾರಿದ್ದಾರೆ.

ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳ ನಿಯೋಗದ ಜತೆ ಇಂದು ಮೃತರ ಮನೆಗೆ ಭೇಟಿ ಕೊಟ್ಟು ಸಾಂತ್ವನ ಹೇಳಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದರು.

ಮೋಜಿಗಾಗಿ ಕಾಡಿನ ಒಳಗೆ ರೆಸಾರ್ಟ್ ನಿರ್ಮಾಣ ಮಾಡಿ ಜನರ ಸಂಚಾರ ಹೆಚ್ಚಾದ ಕಾರಣ ಪ್ರಾಣಿಗಳು ಗಾಬರಿಯಿಂದ ನಾಡಿಗೆ ಬಂದು ಮಾನವರ ಹತ್ಯೆ ಮಾಡುತ್ತಿವೆ ಎಂದ ಅವರು, ಹುಲಿ ದಾಳಿಗೆ ಪ್ರಾಣ ಕಳೆದುಕೊಂಡ ರಾಜಶೇಖರಪ್ಪ ಕುಟುಂಬಕ್ಕೆ ಸರ್ಕಾರ ತಕ್ಷಣ ಐವತ್ತು ಲಕ್ಷ ಪರಿಹಾರ ನೀಡಿ ಅವರ ಕುಟುಂಬಕ್ಕೆ ಸರ್ಕಾರಿ ಹುದ್ದೆ ನೀಡಬೇಕು ಎಂದು ಒತ್ತಾಯಿಸಿದರು.

ನಿಯೋಗದಲ್ಲಿ ಬರಡನಪುರ ನಾಗರಾಜ್, ಮಾರ್ಬಳ್ಳಿ ನೀಲಕಂಠಪ್ಪ, ವಕೀಲರಾದ ರವಿಕುಮಾರ್, ಹಂಪಾಪುರ ರಾಜೇಶ್, ಸರಗೂರು ಅಜಿತ್ ಕುಮಾರ್, ಸುರೇಶ್ ಶೆಟ್ಟಿ, ಕುರುಬೂರು ಸಿದ್ದೇಶ್, ದೇವನೂರು ವಿಜಯೇಂದ್ರ, ದೊಡ್ಡಕಾಟೂರು ಮಹದೇವಸ್ವಾಮಿ, ಕುರುಬೂರು ಪ್ರದೀಪ್, ಅಂಬಳೆ ಮಂಜುನಾಥ್, ಕೋಟೆ ಸುನಿಲ್, ಚುಂಚುರಾಯನ ಉಂಡಿ ನಂಜುಂಡಸ್ವಾಮಿ, ಸಿದ್ದರಾಮ, ಮಂಜು, ಸೋಮ ಇನ್ನು ಮುಂತಾದವರಿದ್ದರು.

Megha
the authorMegha

Leave a Reply

error: Content is protected !!
Latest news
KSRTC ಮೈಸೂರು ಡಿಸಿಗೆ- RC, FC ಚಾಲಕ ನಿರ್ವಾಹಕರ ಜವಾಬ್ದಾರಿನಾ?: ಹೇ ತಲೆಕೆಟ್ಟ ಡಿಸಿ ನೀನು ನಿಜವಾಗಲು ಜವಾಬ್ದಾರಿಯಿಂ... ಭಾರೀ ಮಳೆಗೆ ನೆಲಕಚ್ಚಿದ ಪರಂಗಿ ಅಡಿಕೆ ಗಿಡಗಳು -ಅಪಾರ ಪ್ರಮಾಣದ ಬೆಳೆ ಹಾನಿ ರೈತರ ಗೋಳಾಟ ಪ್ರೀತಿ ನಿರಾಕರಿಸಿದ್ದಕ್ಕೆ ಹೈಟೆನ್ಷನ್ ಕಂಬ ಹತ್ತಿ ಕುಳಿತಿರುವ ಪಾಗಲ್‌ ನಾಳೆಯಿಂದ ಹಮ್ಮಿಕೊಂಡಿದ್ದ ಅರ್ನಿದಿಷ್ಟವಾಧಿ ಸಾರಿಗೆ ನೌಕರರ ಮುಷ್ಕರ ವಾಪಸ್‌: ಜಂಟಿ ಕ್ರಿಯಾ ಸಮಿತಿ ಜಂಟಿ ಕ್ರಿಯಾ ಸಮಿತಿಗೆ ಶಾಕ್‌: KSRTC ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಹೈ ಕೋರ್ಟ್‌ ತಡೆ ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿದ್ದ ಮುಷ್ಕರದಿಂದ ಹಿಂದೆ ಸರಿದ ಮತ್ತೊಂದು KSRTC ನೌಕರರ ಸಂಘ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದ ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಸಾವು ಇಂದು ರಾತ್ರಿ 8.30ರಿಂದ 9.30ರವರೆಗೆ KSRTC ಎಂಡಿ ಅಕ್ರಮ್‌ ಪಾಷರ ಭೇಟಿ ಮಾಡಿ ಗೌಪ್ಯ ಸಭೆ ನಡೆಸಿದ ಜಂಟಿ ಮುಖಂಡರು! ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿದ್ದ ಮುಷ್ಕರದಿಂದ ಹಿಂದೆ ಸರಿದ KSRTC ಪ.ಜಾ.-ಪ.ಪಂ ನೌಕರರ ಸಂಘ ಗುಡುಗು ಸಿಡಿಲಿನ ಆರ್ಭಟ: ಮನೆ ಮುಂದೆ ನಿಂತಿದ್ದ ಶಿಕ್ಷಕ ಹೃದಯಾಘಾತಕ್ಕೆ ಬಲಿ