CRIMEಕೃಷಿ

ಕಾಡಿನೊಳಗೆ ರೆಸಾರ್ಟ್ ನಿರ್ಮಾಣ- ನಾಡಿಗೆ ಬರುವ ಕಾಡು ಪ್ರಾಣಿಗಳಿಂದ ಮಾನವರ ಹತ್ಯೆ: ಕುರುಬೂರು ಶಾಂತಕುಮಾರ್‌ ಕಿಡಿ

ವಿಜಯಪಥ ಸಮಗ್ರ ಸುದ್ದಿ

ಸರಗೂರು: ಅರಣ್ಯದ ಒಳಗೆ ರೆಸಾರ್ಟ್ ಗಳ ನಿರ್ಮಾಣ ಮಾಡುತ್ತಿರುವುದರಿಂದ ಕಾಡು ಪ್ರಾಣಿಗಳು ಕಾಡಿನಿಂದ ನಾಡಿಗೆ ಬಂದು ಮಾನವರ ಹತ್ಯೆ ಮಾಡುತ್ತಿವೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಕಿಡಿಕಾರಿದ್ದಾರೆ.

ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳ ನಿಯೋಗದ ಜತೆ ಇಂದು ಮೃತರ ಮನೆಗೆ ಭೇಟಿ ಕೊಟ್ಟು ಸಾಂತ್ವನ ಹೇಳಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದರು.

ಮೋಜಿಗಾಗಿ ಕಾಡಿನ ಒಳಗೆ ರೆಸಾರ್ಟ್ ನಿರ್ಮಾಣ ಮಾಡಿ ಜನರ ಸಂಚಾರ ಹೆಚ್ಚಾದ ಕಾರಣ ಪ್ರಾಣಿಗಳು ಗಾಬರಿಯಿಂದ ನಾಡಿಗೆ ಬಂದು ಮಾನವರ ಹತ್ಯೆ ಮಾಡುತ್ತಿವೆ ಎಂದ ಅವರು, ಹುಲಿ ದಾಳಿಗೆ ಪ್ರಾಣ ಕಳೆದುಕೊಂಡ ರಾಜಶೇಖರಪ್ಪ ಕುಟುಂಬಕ್ಕೆ ಸರ್ಕಾರ ತಕ್ಷಣ ಐವತ್ತು ಲಕ್ಷ ಪರಿಹಾರ ನೀಡಿ ಅವರ ಕುಟುಂಬಕ್ಕೆ ಸರ್ಕಾರಿ ಹುದ್ದೆ ನೀಡಬೇಕು ಎಂದು ಒತ್ತಾಯಿಸಿದರು.

ನಿಯೋಗದಲ್ಲಿ ಬರಡನಪುರ ನಾಗರಾಜ್, ಮಾರ್ಬಳ್ಳಿ ನೀಲಕಂಠಪ್ಪ, ವಕೀಲರಾದ ರವಿಕುಮಾರ್, ಹಂಪಾಪುರ ರಾಜೇಶ್, ಸರಗೂರು ಅಜಿತ್ ಕುಮಾರ್, ಸುರೇಶ್ ಶೆಟ್ಟಿ, ಕುರುಬೂರು ಸಿದ್ದೇಶ್, ದೇವನೂರು ವಿಜಯೇಂದ್ರ, ದೊಡ್ಡಕಾಟೂರು ಮಹದೇವಸ್ವಾಮಿ, ಕುರುಬೂರು ಪ್ರದೀಪ್, ಅಂಬಳೆ ಮಂಜುನಾಥ್, ಕೋಟೆ ಸುನಿಲ್, ಚುಂಚುರಾಯನ ಉಂಡಿ ನಂಜುಂಡಸ್ವಾಮಿ, ಸಿದ್ದರಾಮ, ಮಂಜು, ಸೋಮ ಇನ್ನು ಮುಂತಾದವರಿದ್ದರು.

Megha
the authorMegha

Leave a Reply

error: Content is protected !!
Latest news
8ನೇ ವೇತನ ಆಯೋಗ: ಸಲಹೆ ಸಂಗ್ರಹಕ್ಕೆ ಸರ್ಕಾರ ಕೊಟ್ಟಿದ್ದ ಗಡುವು ಇಂದಿಗೆ ಮುಕ್ತಾಯ- ವರದಿ ಸಲ್ಲಿಕೆಯೊಂದೇ ಬಾಕಿ ಬೇಕಾಬಿಟ್ಟಿ ಗ್ಯಾರಂಟಿಗಳ ಕೊಡುವುದರಿಂದ ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ: ಸರ್ಕಾರಗಳಿಗೆ ಎಚ್ಚರಿಕೆ ನೀಡಿ ವಿತ್ತ... ಲಾರಿ ಓವರ್‌ಟೇಕ್‌ ಮಾಡುವ ವೇಳೆ ಚಾಲಕನ ನಿಯಂತ್ರ ಕಳೆದುಕೊಂಡ ಕಾರು ಪಲ್ಟಿ: ದಂಪತಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, ಆತಂಕಬೇಡ: ಸಿಎಂ ಶಿವಕುಮಾರ್‌ ಭರವಸೆ KSRTC ಕನಕಪುರ ಘಟಕದಲ್ಲಿ ಚಾಲಕನ ಮೇಲೆ ಹಲ್ಲೆ ಮಾಡಿದ ನಾಲ್ವರ ಅಮಾನತು ಸಿಎಂ ತವರಲ್ಲೇ KSRTC ಚಾಲನಕನ ಮೇಲೆ ಹಲ್ಲೆ, ಗೂಂಡಾ ವರ್ತನೆ: ಡಿಎಂ ಎದುರೇ ಘಟಕದಲ್ಲಿ ರೌಡಿಸಂ ನೌಕರನ ವಿರುದ್ಧ ಸಾಬೀತಾಗಿರುವ ದುರ್ನಡತೆಗೆ ಹೋಲಿಸಿದರೆ ಆತನ ವಜಾ ಮಾಡಿರುವುದು ಕಾನೂನುಬಾಹಿರ,ಅತ್ಯಂತ ಕಠಿಣ ಶಿಕ್ಷೆ: ಸು... ತಜ್ಞರ ಸಲಹೆ ಪಡೆದು ಪಾಲಿಕೆ ಆಯವ್ಯಯ ಅನುದಾನ ಬಳಕೆ : GBA ದಕ್ಷಿಣ ಆಯುಕ್ತ BMTC: ಜೂನ್‌ 18ರೊಳಗೆ ನಿವೃತ್ತ ನೌಕರರು ಏ-2018 ರಿಂದ ಜು-2018ರವರೆಗಿನ ತುಟ್ಟಿಭತ್ಯೆ ಪಡೆಯಲು ಬ್ಯಾಂಕ್‌ ಖಾತೆ ವಿವರ ... ಕುಡಿಯುವ ನೀರು ಸಮಸ್ಯೆ ಉಂಟಾದಲ್ಲಿ ಅಧಿಕಾರಿಗಳೇ ಹೊಣೆ: ಸಚಿವ ಖಂಡ್ರೆ ಎಚ್ಚರಿಕೆ