ಮೈಸೂರು: ಕೇಂದ್ರ ಹಾಗೂ ಪಂಜಾಬ್ ಸರ್ಕಾರಗಳ ರೈತ ವಿರೋಧಿ ದೋರಣೆ ಖಂಡಿಸಿ ಮೈಸೂರ ನ್ಯಾಯಾಲಯದ ಆರವರಣದಲ್ಲಿ ಇಂದು ರೈತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರ ಹಾಗೂ ಪಂಜಾಬ್ ಸರ್ಕಾರಗಳು ದಬ್ಬಾಳಿಕೆ, ದೌರ್ಜನ್ಯ ನೀತಿ ಅನುಸರಿಸುತ್ತಿರುವುದನ್ನು ಖಂಡಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘ ಭಾನುವಾರ ಸಂಜೆ ಮೈಸೂರಿನ ನ್ಯಾಯಾಲಯದ ಮುಂದೆ ಇರುವ ಗಾಂಧಿ ಪ್ರತಿಮೆ ಮುಂದೆ ಮೇಣದ ಹಿಡಿದು ಪ್ರತಿಭಟನೆ ನಡೆಸಿದರು.
ಈ ವೇಳೆ ಪಂಜಾಬಿನ ಕನೋರಿ ಬಾರ್ಡರ್ನಲ್ಲಿ ಒಂದು ವರ್ಷದಿಂದಲೂ ನ್ಯಾಯಯುತ ಹಕ್ಕುಗಳಾದ ಎಂಎಸ್ಪಿ ಕಾಯ್ದೆ ಗ್ಯಾರಂಟಿ ಕಾನೂನು ಜಾರಿ, ದೇಶದ ರೈತರ ಸಂಪೂರ್ಣ ಸಾಲ ಮನ್ನಾ, 60 ವರ್ಷ ತುಂಬಿದ ರೈತರಿಗೆ ಪಿಂಚಣಿ) ಎಂಬಿತ್ಯಾದಿ ಕಾನೂನು ಜಾರಿ ಮಾಡುವಂತೆ ಒತ್ತಾಯಿಸಿ ಚಳವಳಿ ನಡೆಸಲಾಗುತ್ತಿದೆ.
ಆದರೆ ಈ ಹೋರಾಟವನ್ನು ಹತ್ತಿಕ್ಕುವ ಸಲುವಾಗಿ ನಮ್ಮ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಸಂಘಟನೆಯ ರಾಷ್ಟ್ರೀಯ ರೈತ ಮುಖಂಡ ಜಗಜಿತ್ ಸಿಂಗ್ ದಲೈವಾಲ ಹಾಗೂ ಮತ್ತಿತರ ನೂರಾರು ರೈತ ಮುಖಂಡರನ್ನು ಬಂಧಿಸಿ ಚಳವಳಿಯನ್ನು ವಿಫಲ ಗೊಳಿಸಲು ಯತ್ನಿಸುತ್ತಿರುವ ಪಂಜಾಬ್ ಹಾಗೂ ಕೇಂದ್ರ ಸರ್ಕಾರದ ಧೋರಣೆಯನ್ನು ವಿರೋಧಿಸುತ್ತೇವೆ ಎಂದು ಕಿಡಿಕಾರಿದರು.
ಇನ್ನು ಕೂಡಲೇ ಬಂಧನ ಮಾಡಿರುವ ರೈತರು ಹಾಗೂ ರೈತ ಮುಖಂಡರನ್ನು ಬಿಡುಗಡೆ ಮಾಡಬೇಕು ಹಾಗೂ ಹೋರಾಟ ಮಾಡುತ್ತಿರುವ ರೈತರ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಆಗ್ರಹಿಸಿರು.
ಕೇಂದ್ರ ಹಾಗೂ ಪಂಜಾಬ್ ಸರ್ಕಾರಕ್ಕೆ ಎಚ್ಚರಿಸುತ್ತೇವೆ ಕಡೆಗಣಿಸಿದರೆ ದಕ್ಷಿಣ ಭಾರತದ ರೈತ ಸಂಘಟನೆಗಳು ಪಂಜಾಬ್ – ಹರಿಯಾಣದ ರೈತರ ಜತೆಗೂಡಿ ಪಂಜಾಬ್ ಸರ್ಕಾರದ ವಿರುದ್ಧ ದೆಹಲಿಯಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬರಡನಪುರ ನಾಗರಾಜ್, ಜಿಲ್ಲಾ ಕಾರ್ಯಾಧ್ಯಕ್ಷ ಕಿರಗಸೂರು ಶಂಕರ್, ಜಿಲ್ಲಾ ಉಪಾಧ್ಯಕ್ಷ ಮಾರ್ಬಳ್ಳಿ ನೀಲಕಂಠಪ್ಪ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಪರಶಿವಮೂರ್ತಿ, ಕುರುಬೂರು ಸಿದ್ದೇಶ್, ಪ್ರದೀಪ್, ಬನ್ನೂರು ಸೂರಿ, ಚುಂಚರಾಯನ ಹುಂಡಿ ಗಿರೀಶ್, ಹೆಗ್ಗೂರು ರಂಗರಾಜು, ವಾಜ್ ಮಂಗಲ ಮಹದೇವು, ನಾಗೇಂದ್ರ,ದೊಡ್ಡ ಕಾಟೂರ್ ನಾಗೇಶ್ ಮಾರ್ಬಳ್ಳಿ ಬಸವರಾಜು, ವಿ ನಾಗೇಂದ್ರ ಮುಂತಾದವರು ಭಾಗವಹಿಸಿದ್ದರು.
Related

You Might Also Like
KSRTC ನೌಕರರ ವೇತನ ಹೆಚ್ಚಳ ಸಂಬಂಧದ ಪ್ರಕರಣ: ಜು.16ಕ್ಕೆ ಮುಂದೂಡಿದ ಹೈಕೋರ್ಟ್
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ವೇತನ ಹೆಚ್ಚಳ ಸಂಬಂಧ ಸರ್ಕಾರ ಹಾಗೂ ಸಾರಿಗೆ ನಿಗಮಗಳ ಆಡಳಿತ ಮಂಡಳಿ ವಿರುದ್ಧ ಕಳೆದ ಮಾರ್ಚ್ನಲ್ಲಿ...
ನಂದಿ ಬೆಟ್ಟದಲ್ಲಿ 14ನೇ ಸಚಿವ ಸಂಪುಟ ಸಭೆ: ಇನ್ನು ಮುಂದೆ ಬೆಂಗಳೂರು ಉತ್ತರ ಜಿಲ್ಲೆಯಾದ ಬೆಂಗಳೂರು ಗ್ರಾಮಾಂತರ ಜಿಲ್ಲೆ
ಎತ್ತಿನಹೊಳೆ ಯೋಜನೆಗೆ ಒಟ್ಟು 23,251 ಕೋಟಿ ರೂ. ಪರಿಷ್ಕೃತ ಅಂದಾಜು ಮಾಡಲಾಗಿದ್ದು, ಇಲ್ಲಿಯವರೆಗೂ 17,147 ಕೋಟಿ ರೂ. ಖರ್ಚಾಗಿದೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ...
KSRTC ಬಸ್ ಪಲ್ಟಿ: ಯುವತಿಗೆ ಕೈ ಮುರಿತ- ಒಬ್ಬರ ತಲೆಗೆ ಗಂಭೀರ ಪೆಟ್ಟು ಸೇರಿ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪಲ್ಟಿ ಹೊಡೆದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡಿದ್ದರೆ, 20ಕ್ಕೂ ಹೆಚ್ಚು ಪ್ರಯಾಣಿಕರು ಸಣ್ಣಪುಟ್ಟ...
ಕರ್ನಾಟಕ ವಿಕಾಸ ರಂಗದ ಕೊಡಗು ಜಿಲ್ಲಾಧ್ಯಕ್ಷರಾಗಿ KSRTC ನಿವೃತ್ತ ನೌಕರ, ಸಾಹಿತಿ ವೈಲೇಶ್ ನೇಮಕ
ಕೊಡಗು: ಕರ್ನಾಟಕ "ವಿಕಾಸ ರಂಗ"ವು ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿಯ ಸಂವರ್ಧನೆಗಾಗಿ, ನೆಲ-ಜಲದ ರಕ್ಷಣೆಗಾಗಿ ಶ್ರಮಿಸುವ ಧ್ಯೇಯೋದ್ಧೇಶಗಳೊಂದಿಗೆ ರಾಜ್ಯಮಟ್ಟದಲ್ಲಿ ಅಸ್ತಿತ್ವಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಕೊಡಗು...
ನಂದಿಗಿರಿಯ ಯೋಗ – ಭೋಗ ನಂದೀಶ್ವರರ ಸನ್ನಿಧಿಯಲಿ ಸಚಿವ ಸಂಪುಟ ಸಭೆ
ನಂದಿ ಗಿರಿಯಲ್ಲಿ ನಡೆಯುತಿರುವ ವೈಭೋಗವ ಕಂಡ ಬೆಳಗಿನ ಚುಮು ಚುಮು ಚಳಿಯಿಂದ ಮೈಮುದುರಿ ಮಲಗಿದ್ದ ಸೂರ್ಯದೇವ ತನ್ನ ಕಿರಣಗಳನು ನಿಧಾನವಾಗಿ ಪಸರಿಸಲು ಪ್ರಯತ್ನಿಸಿದರೂ ಬೆಟ್ಟಕ್ಕೆ ಹೊದಿಕೆಯಾಗಿದ್ದ ಮಂಜು...
BMTC ನೌಕರರಿಗೆ ಸಾರಿಗೆ ಸಚಿವರಿಂದ ಪಿಂಚಣಿ ಪಾವತಿ ಆದೇಶ ಪತ್ರ ವಿತರಣೆ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಹಾಗೂ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಸಹಯೋಗದೊಂದಿಗೆ ಜೂನ್-2025ರ ಮಾಹೆಯ ಸಂಸ್ಥೆಯ 100ಕ್ಕೂ ಹೆಚ್ಚು ಅರ್ಹ ನೌಕರರಿಗೆ ಪ್ರಯಾಸ್ ಯೋಜನೆಯಡಿ...
KKRTC ಕೊಪ್ಪಳ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಯಾಗಿ ಜಾಧವ್ ರಾಜೇಂದ್ರ ಬಾಹುರಾವ್ ತಾತ್ಕಾಲಿಕ ನೇಮಕ
ಕೊಪ್ಪಳ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕೊಪ್ಪಳ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಯಾಗಿ ಜಾಧವ್ ರಾಜೇಂದ್ರ ಬಾಹುರಾವ್ ಅವರನ್ನು ತಾತ್ಕಾಲಿಕವಾಗಿ ನೇಮಿಸಿ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು (CPM)...
ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ 20ಕ್ಕೂ ಹೆಚ್ಚು ಜನರು ಮೃತ: ಸರ್ಕಾರ ಗಂಭೀರವಾಗಿ ಪರಿಗಣಿಸಿದೆ – ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕಳೆದೊಂದು ತಿಂಗಳಿನಲ್ಲಿ ಹಾಸನ ಜಿಲ್ಲೆಯೊಂದರಲ್ಲೇ ಇಪ್ಪತ್ತಕ್ಕೂ ಅಧಿಕ ಮಂದಿ ಹೃದಯಾಘಾತದಿಂದ ಮೃತಪಟ್ಟಿರುವ ವಿಚಾರವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು...
KSRTC ನೌಕರರ ವೇತನ ಹೆಚ್ಚಳ ಪ್ರಕರಣ: ನಾಳೆ ಹೈ ಕೋರ್ಟ್ನಲ್ಲಿ ವಿಚಾರಣೆ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ವೇತನ ಹೆಚ್ಚಳ ಸಂಬಂಧ ಸರ್ಕಾರ ಹಾಗೂ ಸಾರಿಗೆ ನಿಗಮಗಳ ಆಡಳಿತ ಮಂಡಳಿ ವಿರುದ್ಧ ಕಳೆದ ಮಾರ್ಚ್ನಲ್ಲಿ...