ಬೆಂಗಳೂರು: ನಟ ದರ್ಶನ್ ಅವರಿಗೆ ಸಿನಿಮಾ ಚಿತ್ರೀಕರಣಕ್ಕಾಗಿ ವಿದೇಶಕ್ಕೆ ತೆರಳಲು 57ನೇ ಸಿಸಿಎಚ್ ನ್ಯಾಯಾಲಯ ಅನುಮತಿ ನೀಡಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 2ನೇ ಆರೋಪಿಯಾಗಿರುವ ದರ್ಶನ್ ಅವರಿಗೆ ಜೂನ್ 1ರಿಂದ 25ರವರೆಗೆ ದುಬೈ ಹಾಗೂ ಯುರೋಪ್ಗೆ ಹೋಗಲು ಅನುಮತಿ ಕೋರಿ ಸಿಆರ್ಪಿಸಿ ಸೆಕ್ಷನ್ 439(1) (b)ರಡಿ ದರ್ಶನ್ ಪರವಾಗಿ ಸುನಿಲ್ ಕುಮಾರ್ ಎಂಬವರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.
ಈ ವೇಳೆ ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ವಿಶೇಷ ಸರ್ಕಾರಿ ಅಭಿಯೋಜಕರು, ಹತ್ಯೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ದರ್ಶನ್ ಅವರಿಗೆ ವಿದೇಶಕ್ಕೆ ತೆರಳಲು ಅನುಮತಿ ನೀಡಿದರೆ ವಾಪಸ್ ಬರುವುದು ಅನುಮಾನ ಹೀಗಾಗಿ ಅನುಮತಿ ಕೊಡಬೇಡಿ ಎಂದು ನಿನ್ನೆ ವಾದಿಸಿದ್ದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ಇಂದಿಗೆ ಆದೇಶ ಕಾಯ್ದಿರಿಸಿತ್ತು.
ಜೈಮಾತಾ ಕಂಬೈನ್ ಪ್ರೊಡಕ್ಷನ್ ಅಡಿ ನಿರ್ಮಾಣವಾಗುತ್ತಿರುವ ‘ಡೆವಿಲ್’ ಸಿನಿಮಾ ಚಿತ್ರೀಕರಣಕ್ಕಾಗಿ ಇಂದು 25 ದಿನಗಳವರೆಗೆ ವಿದೇಶಕ್ಕೆ ದರ್ಶನ್ ತೆರಳಲು ನ್ಯಾಯಾಲಯ ಅನುಮತಿ ನೀಡಿ ಆದೇಶ ಹೊರಡಿಸಿದೆ.
ಈ ಮೊದಲು ಜಾಮೀನು ನೀಡುವಾಗ ಬೆಂಗಳೂರು ಬಿಟ್ಟು ಎಲ್ಲಿಗೂ ತೆರಳುವಂತಿಲ್ಲ ಎಂದು ನ್ಯಾಯಾಲಯ ಸೂಚಿಸಿತ್ತು. ಬಳಿಕ ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಗೆ ಸಿನಿಮಾ ಚಿತ್ರೀಕರಣಕ್ಕಾಗಿ ಹೋಗಲು ಅವಕಾಶ ನೀಡಿ ಜಾಮೀನಿನ ಷರತ್ತು ಸಡಿಲಿಸಿತ್ತು. ಇದೀಗ ವಿದೇಶಕ್ಕೆ ತೆರಳಲು ಅನುಮತಿ ನೀಡಿದ್ದು ಅಭಿಮಾನಿಗಳಿಗೂ ಖುಷಿ ತಂದಿದೆ.
Related

You Might Also Like
ಹಾಳಾಗಿರುವ ಒಳಚರಂಡಿ ಸ್ಲ್ಯಾಬ್ ಬದಲಾಯಿಸಿ: ಅಧಿಕಾರಿಗಳಿಗೆ ಸ್ನೇಹಲ್ ತಾಕೀತು
ಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯಲ್ಲಿ ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಲು ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ಜಲಮಡಂಳಿ ಅಧಿಕಾರಿಗಳಿಗೆ ತಾಕೀತು ಮಾಡಿದರು. ಪೂರ್ವ ವಲಯ...
ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ: ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ವಸ್ತ್ರದ್ ಸಲಹೆ
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಸ್ವೀಪ್ ಕಾರ್ಯ ಚಟುವಟಿಕೆಗಳನ್ನು ನಿರಂತರವಾಗಿ ಕೈಗೊಳ್ಳುವ ಮೂಲಕ ಮತದಾರರಿಗೆ ಜಾಗೃತಿ ಮೂಡಿಸಿ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ...
ಗ್ರಾಪಂ- ಮನೆ ಬಾಗಿಲಿಗೆ ಇ-ಸ್ವತ್ತು ಖಾತೆ ವಿತರಣೆ: ಜಿಪಂ ಸಿಇಒ ಡಾ.ಅನುರಾಧ
ಪಂಚಾಯತ್ ರಾಜ್ ಇಲಾಖೆಯಿಂದ ಮಹತ್ವಕಾಂಕ್ಷಿ ಕಾರ್ಯಕ್ರಮ ಗ್ರಾಮಠಾಣಾ ವ್ಯಾಪ್ತಿಯ ಮನೆ ಬಾಗಿಲಿಗೇ ಈ ಸ್ವತ್ತು ಖಾತೆ ನೀಡುವ ಯೋಜನೆ ಆರಂಭ ಬೆಂಗಳೂರು ಗ್ರಾಮಾಂತರ: ಪಂಚಾಯತ್ ರಾಜ್ ಮತ್ತು...
ರೈತರಿಗಾಗಿ ಜಿಲ್ಲಾ ಮಟ್ಟದ ಮಾವು- ಹಲಸು ಮೇಳ: ಸಚಿವ ಮುನಿಯಪ್ಪ
ಬೆಂಗಳೂರು ಗ್ರಾಮಾಂತರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ...
ಖಾಸಗಿ ಕಂಪನಿಯ ಮುಖ್ಯ ಕಾನೂನು ಸಲಹೆಗಾರರಾಗಿ ನೇಮಕಗೊಂಡ ವಕೀಲ ಶಿವರಾಜುರಿಗೆ ಅಭಿನಂದನೆಗಳು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಹಲವು ನೌಕರರು ಸೇರಿದಂತೆ ಇತರರಿಗೆ ಉಚಿತವಾಗಿ ಕಾನೂನು ಸೇವೆ ನೀಡಿದ ಫಲವಾಗಿ ವಕೀಲರಾದ ಎಚ್.ಬಿ.ಶಿವರಾಜು ಅವರಿಗೆ ಕೈ...
KSRTC ನೂತನ ಎಂಡಿ ಅಕ್ರಮ್ ಪಾಷಗೆ ಸ್ವಾಗತ ಕೋರಿದ ನಿಗಮದ ಪ್ರಭಾರ ಎಂಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಐಎಎಸ್ ಅಧಿಕಾರಿ ಅಕ್ರಮ್ ಪಾಷ ಇಂದು ಅಧಿಕಾರ ಸ್ವೀಕರಿಸಿದರು. ನಿಗಮದ ಪ್ರಭಾರ ಎಂಡಿಯಾಗಿದ್ದ ಬಿಎಂಟಿಸಿ...
ಟೇಕಾಫ್ ಆದ ಕೆಲವೇ ಕ್ಷಣದ ಏರ್ ಇಂಡಿಯಾ ವಿಮಾನ ಪತನ: ಇಬ್ಬರು ಸೇಫ್
ಅಹಮದಾಬಾದ್: ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನ ಪತನಗೊಂಡ ಘಟನೆಗೆ ಸಂಬಂಧಿಸಿದಂತೆ 240 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ವಿಮಾನದಲ್ಲಿ...
KSRTC ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಅಕ್ರಮ್ ಪಾಷ ನೇಮಕ: ಸರ್ಕಾರ ಆದೇಶ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಅಕ್ರಂಪಾಷಾ ಅವರನ್ನು ನೇಮಿಸಿ ಸರ್ಕಾರ ಗುರುವಾರ (ಜೂ.12) ಆದೇಶ ಹೊರಡಿಸಿದೆ. ಇದೇ ಜೂನ್ 2ರ ಸೋಮವಾರ...
NWKRTC: ವರುಣನ ಅಬ್ಬರಕ್ಕೆ ಕಾರವಾರದ ಬಸ್ ಡಿಪೋ ಜಲಾವೃತ- ಮಳೆ ನೀರಿನಲ್ಲೇ ನಿಂತು ಹೆರಿಗೆ ಮಾಡಿಸಿದ ವೈದ್ಯರು
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಧಾರಾಕರ ಮಳೆಯಾಗುತ್ತಿದ್ದು, ಈ ಮಳೆಗೆ ವಾಯುವ್ಯ ರಸ್ತೆ ಸಾರಿಗೆ ನಿಮಗದ ಘಟಕ ಸಂಪೂರ್ಣ ಜಲಾವೃತವಾಗಿದ್ದು, ಬಸ್ಗಳನ್ನು ತೆಗೆಯುವುದಕ್ಕೂ ಸಿಬ್ಬಂದಿ ಪರದಾಡಿತ...