ಶಿವಮೊಗ್ಗ: ಪತಿಯನ್ನು ಹತ್ಯೆಮಾಡಿದ ಪತ್ನಿ ಸೇರಿದಂತೆ ಇಬ್ಬರಿಗೆ ಮರಣದಂಡನೆ ಹಾಗೂ ಮತ್ತೊಬ್ಬನಿಗೆ ಏಳುವರ್ಷ ಜೈಲು ಶಿಕ್ಷೆ ವಿಧಿಸಿ ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.
ನ್ಯಾಯಮೂರ್ತಿ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ಅವರಿದ್ದ ಪೀಠ ಈ ತೀರ್ಪು ನೀಡಿದ್ದು, ಅಂತರಗಂಗೆಯಲ್ಲಿ ಶಾಲಾ ಶಿಕ್ಷಕಿಯಾಗಿದ್ದ ಲಕ್ಷ್ಮೀ ಹಾಗೂ ಆಕೆಯ ಪ್ರಿಯಕರ ಕೃಷ್ಣಮೂರ್ತಿ ಮತ್ತು ಶಿವರಾಜ್ ಶಿಕ್ಷೆಗೆ ಗುರಿಯಾದ ಅಪರಾಧಿಗಳು.
ಸೊರಬದ ಇಮ್ತಿಯಾಜ್ ಎಂಬ ಶಿಕ್ಷಕ ಗುಲ್ಬರ್ಗದಲ್ಲಿ ಕೆಲಸ ಮಾಡುವಾಗ ಪ್ರೀತಿಸಿ, ಲಕ್ಷ್ಮೀಯನ್ನು ರಿಜಿಸ್ಟರ್ ಮ್ಯಾರೇಜ್ ಆಗಿದ್ದರು. ಇವರಿಗೆ ಒಂದು ಗಂಡು ಮಗು ಸಹ ಇತ್ತು. ನಂತರ ಇಮ್ತಿಯಾಜ್ ಸೊರಬದ ತೆಲಗುಂದ ಗ್ರಾಮಕ್ಕೆ ವರ್ಗಾವಣೆಯಾಗಿದ್ದರು.
ಭದ್ರಾವತಿಯ ಅಂತರಗಂಗೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಕಾರಣ ಲಕ್ಷ್ಮೀ ಭದ್ರಾವತಿಯ ಜನ್ನಾಪುರದ ಎನ್ಟಿಬಿ ಕಚೇರಿ ಸಮೀಪದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಳು. ಆಕೆಯ ಪತಿ ಇಮ್ತಿಯಾಜ್ ಆಗಾಗ ಸೊರಬದಿಂದ ಅಲ್ಲಿಗೆ ಬಂದುಹೋಗುತ್ತಿದ್ದರು.
ಲಕ್ಷ್ಮೀ ಮನೆಯ ಪಕ್ಕದಲ್ಲಿಯೆ ಆಕೆಯ ಬಾಲ್ಯದ ಗೆಳೆಯ ಕೃಷ್ಣಮೂರ್ತಿ ಎಂಬಾತ ಮನೆಮಾಡಿಕೊಂಡಿದ್ದ. ಲಕ್ಷ್ಮೀ ಹಾಗೂ ಕೃಷ್ಣಮೂರ್ತಿ ನಡುವೆ ಹೆಚ್ಚಿನ ಒಡನಾಟ ಕಂಡುಬಂದ ಕಾರಣ ಇಮ್ತಿಯಾಜ್ ತನ್ನ ಪತ್ನಿಗೆ ಇದು ಸರಿಯಲ್ಲ ಎಂದು ಬುದ್ಧಿಹೇಳುತ್ತಿದ್ದರು. ಈ ವಿಷಯ ಇಮ್ತಿಯಾಜ್ ಮನೆಯವರಿಗೂ ಸಹ ತಿಳಿದು ಆವರೂ ಸಹ ಲಕ್ಷ್ಮೀಗೆ ಬುದ್ದಿವಾದ ಹೇಳಿದ್ದರು.
2016ರಲ್ಲಿ ಇಮ್ತಿಯಾಜ್ ಪತ್ನಿ ಲಕ್ಷ್ಮೀಯನ್ನು ರಂಜಾನ್ ಹಬ್ಬಕ್ಕೆ ಕರೆತರುವುದಾಗಿ ಜನ್ನಾಪುರಕ್ಕೆ ಬಂದಿದ್ದರು. ಆಗ ಆಕೆ ಕೃಷ್ಣಮೂರ್ತಿಯೊಂದಿಗೆ ಸಲುಗೆಯಿಂದಿರುವುದು ನೋಡಿ ಆಕೆಯೊಂದಿಗೆ ಜಗಳವಾಡಿದ್ದರು. ಹೀಗಾಗಿ 2016 ಜುಲೈ 7 ರಂದು ರಾತ್ರಿ 7:30 ರ ಸಮಯದಲ್ಲಿ ಈ ಕುರಿತಂತೆ ಲಕ್ಷ್ಮೀಗೂ ಇಮ್ತಿಯಾಜ್ಗೂ ಜಗಳವಾಗಿದೆ.
ಆಗ ಲಕ್ಷ್ಮೀ ತನ್ನ ಸ್ನೇಹಿತ ಕೃಷ್ಣಮೂರ್ತಿ ಜೊತೆ ಸೇರಿ ಇಮ್ತಿಯಾಜ್ ಅವರನ್ನು ರಾಡಿನಿಂದ ಹೊಡೆದು ಕೊಲೆ ಮಾಡಿದ್ದಳು. ನಂತರ ಮತ್ತೋರ್ವ ಶಿವರಾಜ್ ಎಂಬಾತನ ನೆರವನ್ನು ಪಡೆದುಕೊಂಡು ಮೂವರೂ ಸೇರಿ ಇಮ್ತಿಯಾಜ್ ಮೃತದೇಹವನ್ನು ಭದ್ರಾ ನದಿಗೆ ಎಸೆದಿದ್ದರು. ಕೊಲೆಯಾದ ಮಾರನೆ ದಿನ ಲಕ್ಷ್ಮೀ, ಇಮ್ತಿಯಾಜ್ ಸಹೋದರನಿಗೆ ಫೋನ್ ಮಾಡಿ ಕೂಡಲೆ ಬರುವಂತೆ ಹೇಳಿದ್ದಳು.
ಇಮ್ತಿಯಾಜ್ ಸಹೋದರ ಭದ್ರಾವತಿಯ ಲಕ್ಷ್ಮೀ ಮನೆಗೆ ಬಂದಾಗ ಆಕೆ ಅಳುತ್ತಾ ರಾತ್ರಿ ನನಗೂ ನಿಮ್ಮಣ್ಣ ಇಮ್ತಿಯಾಜ್ಗೂ ಜಗಳವಾಯಿತು. ಆ ಸಿಟ್ಟಿನ ಬರದಲ್ಲಿ ನಾನು ಕಬ್ಬಿಣದ ರಾಡಿನಿಂದ ಅವನ ತಲೆಗೆ ಹೊಡೆದೆ. ಅದರಿಂದ ಅವನು ಸತ್ತುಹೋದ. ಆಗ ನಾನು ಪಕ್ಕದ ಮನೆಯ ಕೃಷ್ಣಮೂರ್ತಿ ಹಾಗೂ ಶಿವರಾಜ್ ಅವರ ಬಳಿ ಸಹಾಯ ಕೇಳಿ, ಅವರ ಸಹಾಯದಿಂದ ಇಮ್ತಿಯಾಜ್ ದೇಹವನ್ನು ಭದ್ರಾ ನಾಲೆಗೆ ಹಾಕಿದೆ. ಈಗ ನೀವೇ ನಮ್ಮನ್ನು ಕಾಪಾಡಬೇಕು ಎಂದು ಕೇಳಿಕೊಂಡಿದ್ದಳು.
ಇಮ್ತಿಯಾಜ್ ಸಹೋದರ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಲಕ್ಷ್ಮೀ, ಕೃಷ್ಣಮೂರ್ತಿ, ಶಿವರಾಜ್ ವಿರುದ್ಧ ದೂರು ಸಲ್ಲಿಸಿದ್ದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಲಕ್ಷ್ಮೀ, ಕೃಷ್ಣಮೂರ್ತಿ ಮತ್ತು ಶಿವರಾಜ್ ಈ ಮೂವರು ಆರೋಪಿಗಳನ್ನು ಬಂಧಿಸಿ, ತನಿಖೆ ನಡೆಸಿ ನ್ಯಾಯಾಲಯಕ್ಕೆ ಆರೋಪ ಪಟ್ಟಿಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಲಯ ಪ್ರಮುಖ ಅಪರಾಧಿ ಲಕ್ಷ್ಮೀ ಹಾಗೂ ಕೃಷ್ಣಮೂರ್ತಿಗೆ ಕೊಲೆಗಾಗಿ ಮರಣದಂಡನೆ ಹಾಗೂ ಶಿವರಾಜ್ಗೆ ಸಾಕ್ಷಿ ನಾಶಪಡಿಸಲು ಯತ್ನಿಸಿದ ಆರೋಪಕ್ಕೆ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಮರಣ ದಂಡನೆ ಶಿಕ್ಷೆ ಜತೆಗೆ ಮತ್ತು 13 ಲಕ್ಷ ದಂಡವನ್ನು ವಿಧಿಸಿದ್ದು ಇದರಲ್ಲಿ 10 ಲಕ್ಷ ಹಣವನ್ನು ಮೃತನ ತಾಯಿಗೆ ಪರಿಹಾರವಾಗಿ ನೀಡಬೇಕು. ಉಳಿದ 3 ಲಕ್ಷ ಹಣವನ್ನ ದಂಡವಾಗಿ ಪಾವತಿಸಬೇಕು ಎಂದು ಆದೇಶಿಸಲಾಗಿದೆ.
Related

You Might Also Like
ಕುಷ್ಠರೋಗ ಮುಕ್ತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಿ: ಡಾ.ಪ್ರದೀಪ್ತಾ ಕುಮಾರ್ ನಾಯಕ್
ಬೆಂಗಳೂರು: ಮನುಷ್ಯನ ಆರೋಗ್ಯಕ್ಕೆ ಸಂಬಂಧಿಸಿದಂತೆ ಕುಷ್ಠರೋಗವು ಒಂದು ಬಾಧಿತ ರೋಗವಾಗಿದ್ದು, ಕುಷ್ಠರೋಗ ಮುಕ್ತ ಸಮಾಜ ನಿರ್ಮಿಸಲು ಅಧಿಕಾರಿಗಳು ನಿರಂತರ ಕಾರ್ಯ ಪ್ರವೃತ್ತರಾಗಿರಬೇಕು ಎಂದು ಕೇಂದ್ರ ಮಾನವ ಹಕ್ಕುಗಳ...
NWKRTC: 45 ವರ್ಷದ ಮಹಿಳೆಗೆ ಅನುಕಂಪದ ಆಧಾರದಡಿ ಹುದ್ದೆಕೊಡಿ- ಹೈಕೋರ್ಟ್ ಆದೇಶ
ಬೆಂಗಳೂರು: ವಯೋಮಿತಿ ಮೀರಿದ ಮಹಿಳೆಗೆ ವಿಶೇಷ ಪ್ರಕರಣವೆಂದು ಅನುಕಂಪದ ಹುದ್ದೆ ನೀಡಬೇಕು ಎಂದು ಹೈಕೋರ್ಟ್ ಮಹತ್ವ ಆದೇಶ ಹೊರಡಿಸಿದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೌಕರನ...
BBMP: ಗಣೇಶ ಮೂರ್ತಿ ವಿಸರ್ಜನೆಗೆ 41ಕೆರೆಗಳು, 489 ಸಂಚಾರಿ ವಾಹನಗಳ ವ್ಯವಸ್ಥೆ
ಬೆಂಗಳೂರು: ಗಣೇಶ ಮೂರ್ತಿ ವಿಸರ್ಜನೆಗಾಗಿ ಕೆರೆ ಅಂಗಳ, ತಾತ್ಕಾಲಿಕ ಕಲ್ಯಾಣಿ, ಸಂಚಾರಿ ವಾಹನ (ಮೊಬೈಲ್ ಟ್ಯಾಂಕ್)/ ಗಳ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ. 41ಕೆರೆ,...
ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಕಲಾವಿದರು-ಕಲಾತಂಡದವರಿಂದ ಅರ್ಜಿ ಆಹ್ವಾನ
ಶಿವಮೊಗ್ಗ: ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವ ಕಲಾವಿದರು ಅಥವಾ ಕಲಾ ತಂಡದವರಿಂದ ಅರ್ಜಿ ಆಹ್ವಾನಿಸಲಾಗಿದೆ. ಇದು ಮಹಾನಗರ ಪಾಲಿಕೆವತಿಯಿಂದ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬಯಸುವ...
NWKRTC: ಆ.22ರಿಂದ 26ರವರೆಗೆ ಹೆಚ್ಚುವರಿ 265 ವಿಶೇಷ ಸಾರಿಗೆ ಬಸ್ಗಳ ಸೌಲಭ್ಯ
ಬೆಂಗಳೂರು: ಗಣೇಶ ಚತುರ್ಥಿ ಸಮೀಪಿಸುತ್ತಿರುವ ಹಿನ್ನೆಲೆ ಸಾರ್ವಜನಿಕರು ತಮ್ಮ ಊರುಗಳಿಗೆ ತೆರಳುವುದರಿಂದ ಹೆಚ್ಚುವರಿ 265 ವಿಶೇಷ ಸಾರಿಗೆ ಬಸ್ಸುಗಳು ಬೆಂಗಳೂರಿನಿಂದ ರಾಜ್ಯ ಹಾಗೂ ಅಂತರರಾಜ್ಯಗಳಿಗೆ ಕಾರ್ಯಾಚರಣೆ ನಡೆಸಲಿವೆ....
BMTC: ಸ್ಕೂಟರ್ ಸ್ಕಿಡ್ಆಗಿ ಬಿದ್ದ ಬಾಲಕಿ ಬಸ್ ಹಿಂದಿನ ಚಕ್ರಕ್ಕೆ ಸಿಲುಕಿ ಸಾವು
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್ 10 ವರ್ಷದ ಬಾಲಕಿ ಮೇಲೆ ಹರಿದ ಪರಿಣಾಮ ಆಕೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಯಲಹಂಕ ಕೋಗಿಲು ಕ್ರಾಸ್...
ಆದಿ ಜಾಂಬವ ಅಭಿವೃದ್ಧಿ ನಿಗಮದಲ್ಲಿ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ
ಬೆಂಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ 2025-26ನೇ ಸಾಲಿಗೆ ಸಂಬಂಧಿಸಿದಂತೆ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಅಭಿವೃದ್ದಿಗಾಗಿ ಆದಿ ಜಾಂಬವ ಅಭಿವೃದ್ಧಿ ನಿಗಮಗದಿಂದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ಫಲಾಪೇಕ್ಷಿಗಳಿಂದ...
ಉತ್ತರಾಖಂಡ್ನ 6ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ-ಸದಸ್ಯರ ನಿಯೋಗ ಗ್ರಾಮಾಂತರ ಜಿಲ್ಲೆಗೆ ಭೇಟಿ
ಬೆಂಂಗಳೂರು ಗ್ರಾಮಾಂತರ: ಉತ್ತರಾಖಂಡ್ ರಾಜ್ಯದ 6ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ರವಿಶಂಕರ್, ಸದಸ್ಯರಾದ ಜಂಗ್ಪಂಗಿ, ಎಂ.ಸಿ. ಜೋಷಿ ಅವರ ನಿಯೋಗವು ಅಧ್ಯಯನಕ್ಕಾಗಿ ಇಂದು ಜಿಲ್ಲೆಗೆ ಭೇಟಿ...