NEWSನಮ್ಮಜಿಲ್ಲೆಬೆಂಗಳೂರು

BMTC ಚಾಲನಾ ಸಿಬ್ಬಂದಿಗಳ ಡ್ಯೂಟಿ ರೋಟಾ ಕೌನ್ಸೆಲಿಂಗ್‌ಗೆ ಸಿಟಿಎಂ ಆದೇಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ, ಈಶಾನ್ಯ, ವಾಯುವ್ಯ ಹಾಗೂ ಕೇಂದ್ರೀಯ ವಲಯದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಚಾಲನಾ ಸಿಬ್ಬಂದಿಗಳನ್ನು ಹೊಸದಾಗಿ ಕೌನ್ಸೆಲಿಂಗ್ ಮಾಡಿ, ಡ್ಯೂಟಿ ರೋಟಾ ಪದ್ಧತಿಯನ್ನು ಜಾರಿಗೊಳಿಸುವಂತೆ ಮುಖ್ಯ ಸಂಚಾರ ವ್ಯವಸ್ಥಾಪಕರು ಇಂದು ಆದೇಶ ಹೊರಡಿಸಿದ್ದಾರೆ.

ಈ ವಿಷಯಕ್ಕೆ ಸಂಬಂಧಿಸಿದಂತೆ, ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳನ್ನು ಮಾರ್ಗಗಳಿಗೆ ನಿಯೋಜಿಸುವಾಗ ಪಾರದರ್ಶಕತೆಯನ್ನು ಕಾಯ್ದುಕೊಳ್ಳಲು, ಸಾರಿಗೆ ಆದಾಯ ಸೋರಿಕೆಯನ್ನು ತಡೆಗಟ್ಟಲು ಚಾಲನಾ ಸಿಬ್ಬಂದಿಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಉದ್ದೇಶದಿಂದ ಹಾಗೂ ನಿಷ್ಪಕ್ಷಪಾತವಾದ ಮಾರ್ಗ ನಿಯೋಜನೆಗಾಗಿ ಡ್ಯೂಟಿ ರೋಟಾ ಪದ್ಧತಿಯನ್ನು (Duty Rota System) ಜಾರಿಗೆ ತರಲಾಗಿದೆ.

ಅದರಂತೆ ಈ ಆದೇಶದನ್ವಯ ಮಾರ್ಗಸೂಚಿಗಳನ್ನು ಅನುಸರಿಸಿ, 15-08-2025 ರಿಂದ ಜಾರಿಗೆ ಬರುವಂತೆ ಡ್ಯೂಟಿ ರೋಟಾ ಪದ್ಧತಿಯನ್ನು ನವೀಕರಿಸಿ ಪುನರ್ ನಿಗದಿಗೊಳಿಸಲು ಕೆಳಕಂಡಂತೆ ಕಾಲಮಿತಿಯನ್ನು ನಿಗದಿಪಡಿಸಲಾಗಿದೆ.

ಅದರಲ್ಲಿ 28-07-2025 ರೊಳಗೆ ಜೇಷ್ಠತಾ ಪಟ್ಟಿಯನ್ನು ಪ್ರದರ್ಶಿಸುವುದು. 31-07-2025 ರೊಳಗೆ ಡ್ಯೂಟಿ ರೋಟಾ ಬ್ಲಾಕ್‌ಗಳನ್ನು ಪ್ರದರ್ಶಿಸುವುದು. ಜೇಷ್ಠತಾ ಪಟ್ಟಿಯಲ್ಲಿ ಆಕ್ಷೇಪಣೆಗಳೇನಾದರೂ ಇದ್ದಲ್ಲಿ 01-08-2025 ರೊಳಗೆ ಪಡೆಯುವುದು. 03-08-2025 ರೊಳಗೆ ಜೇಷ್ಠತಾ ಪಟ್ಟಿಯನ್ನು ಸರಿಪಡಿಸುವುದು.

ಆ ಬಳಿಕ ಅಂದರೆ 04-08-2025 ರಿಂದ 11-08-2025 ರೊಳಗೆ ಕೌನ್ಸೆಲಿಂಗ್ ಸಭೆ ನಡೆಸುವುದು. ಇದೆಲ್ಲ ಪೂರ್ಣಗೊಂಡ ಮೇಲೆ 15-08-2025 ರಿಂದ ಹೊಸ ಡ್ಯೂಟಿ ರೋಟಾ ಪದ್ಧತಿಯನ್ನು ಜಾರಿಗೊಳಿಸಬೇಕು ಎಂದು ಮುಖ್ಯ ಸಂಚಾರ ವ್ಯವಸ್ಥಾಪಕರು ಆದೇಶದಲ್ಲಿ ಸ್ಪಷ್ಟವಾಗಿ ತಿಳಿಸಿದ್ದಾರೆ.

ಅನುಸೂಚಿಗಳಿಗೆ ಪರಿಷ್ಕೃತ ಸೇರ್ಪಡೆ: ಈಗಾಗಲೇ ತಿಳಿಸಿರುವಂತೆ ಸಾಮಾನ್ಯ ಪಾಳಿ ಅನುಸೂಚಿಗಳಿಗೆ ಕರ್ತವ್ಯ ನಿಯೋಜನೆ ಸಂಬಂಧ ನಿರ್ವಾಹಕರಿಗೆ 24,000 ರೂ. ಹಾಗೂ ಚಾಲಕ-ಕಂ-ನಿರ್ವಾಹಕರಿಗೆ 27,000 ರೂ. ಮೂಲ ವೇತನವನ್ನು ನಿಗದಿಪಡಿಸಲಾಗಿದೆ. ಅಂದರೆ 24,000 ರೂ.ಗಳಿಗಿಂತ ಅಧಿಕ ಮೂಲವೇತನ ಹೊಂದಿದ ನಿರ್ವಾಹಕರನ್ನು ಹಾಗೂ 27,000 ರೂ.ಗಳಿಗಿಂತ ಅಧಿಕ ಮೂಲ ವೇತನ ಹೊಂದಿದ ಚಾಲಕರು, ಚಾಲಕ-ಕಂ-ನಿರ್ವಾಹಕರನ್ನು ಸಾಮಾನ್ಯ ಪಾಳಿ ಅನುಸೂಚಿಗಳ ಕರ್ತವ್ಯಕ್ಕೆ ನಿಯೋಜಿಸದಂತೆ ಕ್ರಮ ವಹಿಸಬೇಕು ಎಂದು ತಿಳಿಸಿದ್ದಾರೆ.

ಇನ್ನು ಶನಿವಾರ ಹಾಗೂ ಭಾನುವಾರಗಳಂದು ನಿಗದಿಪಡಿಸಿದ ಯೋಜನಾ ರದ್ದತಿ ಪ್ರಯಾಣಕ್ಕೆ ಅನುಗುಣವಾಗಿ, ಅನುಸೂಚಿಗಳ ಬ್ಲಾಕ್‌ಗಳನ್ನು ತಯಾರಿಸಿಕೊಳ್ಳಬೇಕು ಎಂದು ಆದೇಶ ಹೊರಡಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಈ PDF ನೋಡಬಹುದು Dutyrota order

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ