NEWSಸಂಸ್ಕೃತಿ

ಮತ್ತೊಮ್ಮೆ ಸಾಂಸ್ಕೃತಿಕ ನಿನಾದ: ‘ಪರಮ್ ವಿಹಾರ’ ವೇದಿಕೆಯಲ್ಲಿ ಸುಗಮ ಸಂಗೀತ-ನೃತ್ಯ ಸಂಗಮ

ಸುಚಿತ್ರಾ ಸಿನೆಮಾ ಅಕಾಡೆಮಿಯಲ್ಲಿ ಸಾಂಸ್ಕೃತಿಕ ಸೌರಭ̤ ನಿಕಿತಾ ಭಾರದ್ವಾಜ್‌ರಿಂದ ಸುಶ್ರಾವ್ಯ ಸುಗಮ ಸಂಗೀತ. ಪ್ರಮೋದ್, ರಮೇಶ್ ಅವರ ಅದ್ಭುತ ವಾದ್ಯಸಂಗೀತ. ಗೀತ ದೀಪಕ್ ಶಿಷ್ಯರಿಂದ ಭರತನಾಟ್ಯ ವೈಭವ. ಮೋನಿಷಾ ಕಾಂತರಾಜು ಶಿಷ್ಯರಿಂದ ನೃತ್ಯ ನಮನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜಧಾನಿಯ ಪ್ರಮುಖ ಸಾಂಸ್ಕೃತಿಕ ಕೇಂದ್ರಗಳಲ್ಲೊಂದಾದ ಬನಶಂಕರಿಯ ‘ಸುಚಿತ್ರಾ ಸಿನೆಮಾ ಮತ್ತು ಕಲ್ಚರಲ್ ಅಕಾಡೆಮಿ’ಯಲ್ಲಿ ಮತ್ತೊಂದು ಆಕರ್ಷಕ ಕಲಾ ಸಂಜೆ ಅನಾವರಣಗೊಳ್ಳಲು ಸಿದ್ಧವಾಗಿದೆ.

‘ಪರಮ್ ಫೌಂಡೇಶನ್’ ವತಿಯಿಂದ ಆಯೋಜಿಸಲಾಗುತ್ತಿರುವ ‘ಪರಮ್ ವಿಹಾರ’ ಸಾಂಸ್ಕೃತಿಕ ಸರಣಿ ಕಾರ್ಯಕ್ರಮವು ಇದೇ ಜೂನ್ 28ರ ಭಾನುವಾರ ಸಂಜೆ 6 ಗಂಟೆಯಿಂದ ಜರುಗಲಿದೆ. ಉದಯೋನ್ಮುಖ ಕಲಾವಿದರಿಗೆ ವೇದಿಕೆ ಕಲ್ಪಿಸುವ ಈ ಅಪರೂಪದ ಗಾನ-ನೃತ್ಯ ಜುಗಲ್ಬಂದಿಗೆ ಬೆಂಗಳೂರಿನ ಕಲಾಪ್ರೇಮಿಗಳು ಸಾಕ್ಷಿಯಾಗಲಿದ್ದಾರೆ.

ಸುಶ್ರಾವ್ಯ ಕಂಠದಲ್ಲಿ ಮೂಡಲಿರುವ ಸುಗಮ ಸಂಗೀತ ಲಹರಿ: ಕಾರ್ಯಕ್ರಮದ ಆರಂಭದಲ್ಲಿ ಗಾಯಕಿ ನಿಕಿತಾ ಭಾರದ್ವಾಜ್ ಅವರ ಸುಗಮ ಸಂಗೀತ ಗಾಯನ ಪ್ರಸ್ತುತಿ ನಡೆಯಲಿದೆ. ಹಿತವಾದ ಸಾಹಿತ್ಯ ಮತ್ತು ಮಧುರ ನಾದದ ಮೂಲಕ ಶ್ರೋತೃಗಳನ್ನು ರಂಜಿಸಲಿರುವ ಈ ಕಛೇರಿಗೆ ತಬಲಾದಲ್ಲಿ ಪ್ರಮೋದ್ ಗಬ್ಬೂರ್ ಹಾಗೂ ಕೀಬೋರ್ಡ್‌ನಲ್ಲಿ ರಮೇಶ್ ಟಿ.ಎಸ್. ಸಾಥ್ ನೀಡಲಿದ್ದಾರೆ.

ನಯನಮನೋಹರ ಭರತನಾಟ್ಯ ವೈಭವ: ಗಾಯನದ ನಾದಲಹರಿಯ ನಂತರ ಶಾಸ್ತ್ರೀಯ ನೃತ್ಯದ ಅದ್ಭುತ ಪ್ರದರ್ಶನಗಳು ಸಭಿಕರನ್ನು ಕಣ್ಮನ ಸೆಳೆಯಲಿವೆ. ಮೊದಲಿಗೆ ‘ಸಂಗೀತ ನಾಟ್ಯ ಕಲಾಲಯ’ ಸಂಸ್ಥೆಯ ನಿರ್ದೇಶಕರಾದ ಗುರು ಶ್ರೀಮತಿ ಸಂಗೀತ ದೀಪಕ್ ಅವರ ಶಿಷ್ಯವೃಂದದಿಂದ ಆಕರ್ಷಕ ಭರತನಾಟ್ಯ ಪ್ರದರ್ಶನ ಮೂಡಿಬರಲಿದೆ. ಇದರ ಬೆನ್ನಲ್ಲೇ ‘ಈಷಾ ನಾಟ್ಯಶಾಲಾ’ ಸಂಸ್ಥೆಯ ನಿರ್ದೇಶಕರಾದ ಗುರು ಶ್ರೀಮತಿ ಮೋನಿಷಾ ಕಾಂತರಾಜು ಅವರ ಶಿಷ್ಯರಿಂದ ಭರತನಾಟ್ಯ ಶೈಲಿಯಲ್ಲಿ ಸಮೂಹ ನೃತ್ಯ ಪ್ರದರ್ಶನಗಳು ರಂಗದ ಮೇಲೆ ಅನಾವರಣಗೊಳ್ಳಲಿವೆ.

ಹೊಸ ತಲೆಮಾರಿನ ಕಲಾ ಪ್ರತಿಭೆಗಳನ್ನು ಪ್ರೋತ್ಸಾಹಿಸುತ್ತಾ ಬಂದಿರುವ ಪರಮ್ ಫೌಂಡೇಶನ್‌ನ ಈ ಅಪರೂಪದ ಸಾಂಸ್ಕೃತಿಕ ಸಂಜೆಗೆ ಬೆಂಗಳೂರಿನ ಸಂಗೀತ ಮತ್ತು ನೃತ್ಯ ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಲಾವಿದರನ್ನು ಹುರಿದುಂಬಿಸಬೇಕಾಗಿ ಸಂಘಟಕರು ಕೋರಿದ್ದಾರೆ.

Deva
the authorDeva

Leave a Reply

error: Content is protected !!
Latest news
ಪ್ರಾಮಾಣಿಕತೆಗೆ ಅಂಬಾಸೆಡರ್‌ ಈ 75 ವರ್ಷದ ಪತ್ರಿಕಾ ವಿತರಕ ಸುಬ್ರಮಣಿ: ರಾಜಾಜಿನಗರ ಶಾಸಕ ಸುರೇಶ್‌ ಕುಮಾರ್‌ ಶ್ಲಾಘನೆ KSRTC ಬಸ್‌ ಲಾರಿಗೆ ಡಿಕ್ಕಿ: ಸಂಸ್ಥೆಯ ಚಾಲಕ ಸಾವು, ಕಂಡಕ್ಟರ್‌ ಕಾಲು ಮುರಿತ, 10 ಮಂದಿ ಪ್ರಯಾಣಿಕರಿಗೆ ಗಾಯ: 18 ಗಂಟೆ... ಮತ್ತೊಮ್ಮೆ ಸಾಂಸ್ಕೃತಿಕ ನಿನಾದ: 'ಪರಮ್ ವಿಹಾರ' ವೇದಿಕೆಯಲ್ಲಿ ಸುಗಮ ಸಂಗೀತ-ನೃತ್ಯ ಸಂಗಮ ಗೃಹಲಕ್ಷ್ಮಿ ಯೋಜನೆಯಲ್ಲಿ  ಯಾವುದೇ ಗೋಲ್‌ಮಾಲ್ ಆಗಿಲ್ಲ:  ಡೇಟಾ ಸಹಿತ ಮಹಿಳಾ ಇಲಾಖೆ  ಸ್ಪಷ್ಟನೆ  ವಾರ್ತಾ ಇಲಾಖೆ ನೂತನ ಆಯುಕ್ತರಾಗಿ ಡಿಐಜಿ ಅನುಚೇತ್ ಅಧಿಕಾರ ಸ್ವೀಕಾರ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮೆ ಮಾಡಿಸಲು ಅನ್ನದಾತರಿಗೆ ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕಿ ಕಲಾವತಿ ಕರೆ ಜೂ.27ರಂದು ನಾಡಪ್ರಭು ಕೆಂಪೇಗೌಡರ ಮೂಲಸ್ಥಳ ಆವತಿಯಿಂದ ಜ್ಯೋತಿ ರಥ ಯಾತ್ರೆ ಆರಂಭ KSRTC- BMTC ನೂತನ ಎಂಡಿಗಳ ಭೇಟಿ ಮಾಡಿದ ಕೂಟದ ಪದಾಧಿಕಾರಿಗಳು: ನೌಕರರ ಬೇಡಿಕೆ ಈಡೇರಿಕೆಗೆ ಸಭೆ ಕರೆಯಲು ಒತ್ತಾಯ ​NWKRTC ಸಂಸ್ಥೆಗೆ ಪ್ರಾಮಾಣಿಕ ಸೇವೆ ಸಲ್ಲಿಸಿ ನೂತನವಾಗಿ ನೇಮಕಗೊಂಡ ದರ್ಜೆ-2ರ ಅಧಿಕಾರಿಗಳಿಗೆ ಎಂಡಿ ಪ್ರಿಯಾಂಗಾ ಕರೆ BMTC ಘಟಕ-29ರ ಆವರಣದಲ್ಲೇ ನಡೆದ ಅಪಘಾತ: ಗಾಯಾಳು ಚಾಲಕನಿಗೆ 6 ಸಾವಿರ ಕೊಟ್ಟು ಸುಮ್ಮನಾದ ಅಧಿಕಾರಿಗಳು- ಬಸ್‌ ನಿಲ್ಲಿಸಿ...