NEWSಕೃಷಿನಮ್ಮಜಿಲ್ಲೆ

ಜಗಜಿತ್ ದಲೈವಾಲ 53 ದಿನಗಳ ಉಪವಾಸ ಕೈ ಬಿಟ್ಟು ಚಿಕಿತ್ಸೆಗೆ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ: ಕುರುಬೂರ್ ಶಾಂತಕುಮಾರ್

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ದೆಹಲಿ ಗಡಿಯಲ್ಲಿ ದೇಶದ ರೈತರ ಹಿತಕ್ಕಾಗಿ ಹೋರಾಡುತ್ತಿದ್ದ ದಲೈವಾಲ 53 ದಿನಗಳ ಉಪವಾಸ ಕೈ ಬಿಟ್ಟು ವೈದ್ಯಕೀಯ ಚಿಕಿತ್ಸೆಗೆ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ ಬೆಳವಣಿಗೆ. ದೇಶದ ರೈತರೆಲ್ಲ ಅವರ ಪ್ರಾಣದ ಬಗ್ಗೆ ಆತಂಕಗೊಂಡಿದ್ದರು ಎಂದು ರೈತರತ್ನ ಕುರುಬೂರ್ ಶಾಂತಕುಮಾರ್ ಹೇಳಿದ್ದಾರೆ.

ಇಂದು (ಜ.20) ನಗರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ, ಕಾನೂನು ಜಾರಿಗಾಗಿ ಒತ್ತಾಯಿಸಿ ಸಂಯುಕ್ತ ಕಿಸಾನ್ ಮೋರ್ಚ ರಾಜಕೀಯೆತರ ಸಂಘಟನೆ ರಾಷ್ಟ್ರೀಯ ಸಂಚಾಲಕ ಜಗಜಿತ್ ಸಿಂಗ್ ದಲೈವಾಲ 53 ದಿನದ ಉಪವಾಸ ಸತ್ಯಾಗ್ರಹ ನಿಲ್ಲಿಸಿ ವೈದ್ಯಕೀಯ ಚಿಕಿತ್ಸೆಗೆ ಸಮ್ಮತಿ ಸೂಚಿಸಿದ್ದಾರೆ. ಆದರೆ, ಈ ನಡುವೆಯೂ ನಮ್ಮ ಬೇಡಿಕೆ ಈಡೆರುವ ತನಕ ಚಳವಳಿ ಮುಂದುವರಿಯುತ್ತದೆ ಎಂದು ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಕೃಷಿ ಇಲಾಖೆಯ ಜಂಟಿ ಕಾರ್ಯದರ್ಶಿ ಹಾಗೂ ಪಂಜಾಬ್ ಸರ್ಕಾರದ ಮುಖ್ಯ ಕಾರ್ಯದರ್ಶಿ, ಪೊಲೀಸ್ ಮಹಾ ನಿರ್ದೇಶಕರು ಅಧಿಕಾರಿಗಳ ತಂಡ ಚಳವಳಿ ನಡೆಯುತ್ತಿರುವ ಕನೋರಿ ಬಾರ್ಡರ್‌ಗೆ ಮೂರು ದಿನಗಳ ಹಿಂದೆ ತೆರಳಿ ಫೆಬ್ರವರಿ 14 ರಂದು ಚಂಡಿಗಡದಲ್ಲಿ ರೈತರ ಸಮಸ್ಯೆಗಳಿಗೆ ಸಭೆ ನಡೆಸಿ ಸಮಸ್ಯೆ ಬಗೆಹರಿಸುವ ಭರವಸೆ ಕೇಂದ್ರ ಸರ್ಕಾರದ ಲಿಖಿತ ಪತ್ರ ನೀಡಿ 3 ಗಂಟೆಗಳ ಕಾಲ ಚರ್ಚಿಸಿದ ನಂತರ ತೀರ್ಮಾನ ಕೈಗೊಳ್ಳಲಾಗಿದೆ.

ಇದು ಉಪವಾಸ ನಿರತ ದಲೈವಾಲ ನಿರ್ಧಾರ ರೈತರ ಹೋರಾಟದ ಶಕ್ತಿ ಹೆಚ್ಚಿಸಿದೆ. ಕಳೆದ ಮೂರು ದಿನಗಳಿಂದ 124 ರೈತರು ದಲೈವಾಲ ಉಪವಾಸ ಬೆಂಬಲಿಸಿ ನಾವು ಪ್ರಾಣ ತ್ಯಾಗಕ್ಕೆ ಸಿದ್ದ ಎಂದು ಉಪವಾಸ ಆರಂಭಿಸಿದರು. ಅವರು ಸಹ ಉಪವಾಸವನ್ನು ನಿನ್ನೆಯಿಂದ ಕೈಬಿಟ್ಟಿದ್ದಾರೆ. ಆದರೆ ಸಮಸ್ಯೆ ಬಗೆಹರಿಯುವ ತನಕ ಹೋರಾಟ ಮುಂದುವರಿಯುತ್ತದೆ ಎಂದರು.

ಜನವರಿ 26 ರಂದು ದೇಶಾದ್ಯಂತ ಜಿಲ್ಲಾ ತಾಲೂಕು ಕೇಂದ್ರಗಳಲ್ಲಿ ಟ್ರ್ಯಾಕ್ಟರ್ ರ‍್ಯಾಲಿ ನಡೆಸಲು ಕರೆ ನೀಡಲಾಗಿದೆ, ಅದರಂತೆ ರಾಜ್ಯದಲ್ಲಿಯೂ ತಾಲೂಕು ಜಿಲ್ಲಾ ಮಟ್ಟದಲ್ಲಿ ಟ್ರ್ಯಾಕ್ಟರ್ ರ‍್ಯಾಲಿ ನಡೆಸಲಾಗುವುದು. ದೇಶದ ಸ್ವಾತಂತ್ರಕ್ಕಾಗಿ ಪ್ರಾಣ ಕಳೆದುಕೊಂಡ ಸ್ವತಂತ್ರ ಹೋರಾಟಗಾರರ ದೇಶದ ಗಡಿಯಲ್ಲಿ ಗಡಿ ರಕ್ಷಣೆಗಾಗಿ ಹುತಾತ್ಮರಾದ. ದೇಶದ ಜನರ ಆಹಾರ ಭದ್ರತೆಯಾಗಿ ದುಡಿದು ಹುತಾತ್ಮರಾದ ರೈತರ ನೆನಪಿನ ದಿನ ರಾಜ್ಯಮಟ್ಟದಲ್ಲಿ 30 ರಂದು ದಾವಣಗೆರೆಯಲ್ಲಿ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

ವಿಶ್ವ ಕಪ್ ಗೆದ್ದು ಜಯಭೇರಿ: ವಿಶ್ವಕಪ್ ಖೋ ಖೋ ಪಂದ್ಯದಲ್ಲಿ ವಿಶ್ವ ಕಪ್ ಗೆದ್ದು ಜಯಭೇರಿ ಬಾರಿಸಿದ ಪುರುಷ. ಮಹಿಳೆಯರ ತಂಡಕ್ಕೆ ಅಭಿನಂದನೆ ಸಲ್ಲಿಸುತ್ತೇವೆ. ಮಹಿಳೆಯರ ಭಾರತ ತಂಡದಲಿ ಉತ್ತಮ ಆಟ ಆಡುವ ಮೂಲಕ ಪ್ರಶಸ್ತಿಗೆ ಬಾಜನರಾಗಿರುವ ನಮ್ಮ ರಾಜ್ಯದ ಹಿರಿಮೆ ಹೆಚ್ಚಿಸಿದ ನಮ್ಮ ಊರಿನ ಚೈತ್ರಳಿಗೆ ಅಭಿನಂದನೆ ಸಲ್ಲಿಸುತ್ತೇನೆ.

ರಾಜ್ಯ ಸರ್ಕಾರ ಅಭಿನಂದನೆ ಹೇಳಿದರೆ ಸಾಲದು. ಇಂಥ ಕ್ರೀಡಾಪಟುಗಳಿಗೆ ವಿಶೇಷ ಪ್ರೋತ್ಸಾಹ ನೀಡಲು ಮುಂದಾಗಬೇಕು. ಈಗಾಗಲೇ ಮಹಾರಾಷ್ಟ್ರ ಸರ್ಕಾರ ಅಲ್ಲಿನ ಕ್ರೀಡಾಪಟುಗೆ 3 ಕೋಟಿ ರೂಪಾಯಿ ಪ್ರೋತ್ಸಾಹ ಧನ ನೀಡುವ ಘೋಷಣೆ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಬಗ್ಗೆ ವಿಶೇಷ ಗಮನ ಹರಿಸಬೇಕು ಎಂದು ಒತ್ತಾಯಿಸಿದರು.

ತಿ.ನರಸೀಪುರ ತಾಲೂಕಿನ ಸರ್ವ ಸಂಘ ಸಂಸ್ಥೆಗಳು ಸಾರ್ವಜನಿಕರಿಂದ ನಾಳೆ ಚೈತ್ರಳನ್ನು ಅಭೂತಪೂರ್ವ ಸ್ವಾಗತ ನೀಡಿ ಅಭಿನಂದನಾ ಸಮಾರಂಭ ನಡೆಸಲಾಗುತಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ದೇವನೂರು ವಿಜಯೇಂದ್ರ, ಸಾತಗಳ್ಳಿ ಬಸವರಾಜು, ಹಳ್ಳಿಕೆರೆಹುಂಡಿ ಪ್ರಭುಸ್ವಾಮಿ, ಕುರುಬೂರ್ ಪ್ರದೀಪ್, ವಾಜಮಂಗಲ ನಾಗೇಂದ್ರ ಇದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ