NEWSಕೃಷಿದೇಶ-ವಿದೇಶ

ಭಾರಿ ಮಳೆಗೆ ಅಣೆಕಟ್ಟೆ ಕುಸಿತ: 50 ಮಂದಿ ಮೃತ, ಸಂಕಷ್ಟಕ್ಕೆ ಸಿಲುಕಿದ 2 ಲಕ್ಷ ಜನರು

ವಿಜಯಪಥ ಸಮಗ್ರ ಸುದ್ದಿ

ನೈರೋಬಿಯಾ: ಕೀನ್ಯಾದ ರಾಜಧಾನಿ ನೈರೋಬಿಯಾದ ಸಮೀಪದ ಗ್ರೇಟ್ ರಿಫ್ಟ್ ವ್ಯಾಲಿ ಪ್ರದೇಶದಲ್ಲಿ ಅಣೆಕಟ್ಟೆ ಕುಸಿತವಾಗಿ ಸಾವನ್ನಪ್ಪಿದವರ ಸಂಖ್ಯೆ 50ಕ್ಕೆ ಏರಿಕೆಯಾಗಿದೆ.

ಕೀನ್ಯಾದಲ್ಲಿ ಕಳೆದೊಂದು ವಾರದಿಂದ ಧಾರಾಕಾರ ಮಳೆಯಾಗುತ್ತಿದ್ದು, ಡ್ಯಾಂಗಳು ಭರ್ತಿಯಾಗಿವೆ. ಅವುಗಳಲ್ಲಿ ಭರ್ತಿಯಾಗಿದ್ದ ಕಿಜಾಬೆ ಅಣೆಕಟ್ಟು ಕುಸಿದ ಪರಿಣಾಮ ಜಲಾಶಯದ ನೀರು ಜನವಸತಿ ಪ್ರದೇಶಕ್ಕೆ ನುಗ್ಗಿ, ಈವರೆಗೆ 50 ಜನರು ಅಸುನೀಗಿದ್ದಾರೆ.

ಇನ್ನು ಕೀನ್ಯಾದ ರಾಜಧಾನಿ ನೈರೋಬಿಯಾದಿಂದ ಸುಮಾರು 60 ಕಿಮೀ ದೂರದಲ್ಲಿರುವ ಗ್ರೇಟ್ ರಿಫ್ಟ್ ವ್ಯಾಲಿ ಪ್ರದೇಶದ ಹಳೆಯ ಕಿಜಾಬೆ ಅಣೆಕಟ್ಟು ಕುಸಿತಗೊಂಡು ಇಂತದೊಂದು ದುರಂತ ಸಂಭವಿಸಿದೆ.

ಜಲಾಶಯ ಕುಸಿತದಿಂದ ಅಪಾರ ಪ್ರಮಾಣ ನೀರು ಜನವಸತಿ ಪ್ರದೇಶಕ್ಕೆ ನುಗ್ಗಿ, ಅಲ್ಲೋಲ ಕಲ್ಲೊಲ ಸೃಷ್ಟಿಸಿದೆ. ಮನೆಗಳು ರಸ್ತೆಗಳು ಕೆಸರು ಮಯವಾಗಿವೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆ ಇದೆ ಅಂತ ರಕ್ಷಣಾ ಪಡೆಗಳು ತಿಳಿಸಿವೆ.

ಇನ್ನು ಜೋರು ಮಳೆಯಿಂದಾಗಿ ಪೂರ್ವ ಆಫ್ರಿಕಾದ ಹಲವು ಪ್ರದೇಶಗಳು ಪ್ರವಾಹ ಭೀತಿ ಎದುರಿಸುತ್ತಿವೆ. ಟಾಂಜಾನಿಯಾದಲ್ಲಿ ಈಗಾಗಲೇ 155 ಜನರು ಮೃತಪಟ್ಟಿದ್ದಾರೆ. ಬುರುಂಡಿಯಲ್ಲಿ 2,00,000ಕ್ಕೂ ಹೆಚ್ಚು ಜನರು ಬಾಧಿತರಾಗಿದ್ದಾರೆ. ದೇಶದ ಎಲ್ಲ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ ನಿರಂತರ ಮಳೆ- BBMP ಎಲ್ಲ ಅಧಿಕಾರಿಗಳು ಸನ್ನದ್ಧರಾಗಿ: ತುಷಾರ್ ಗಿರಿನಾಥ್