Please assign a menu to the primary menu location under menu

NEWSಆರೋಗ್ಯನಮ್ಮಜಿಲ್ಲೆ

ದಾವಣಗೆರೆ: ಹೊನ್ನೂರು ಗ್ರಾಮದ ಎಲ್ಲ ನಿವಾಸಿಗಳಿಗೆ ಜ್ವರ, ಮೈ- ಕೈ ನೋವು

ವಿಜಯಪಥ ಸಮಗ್ರ ಸುದ್ದಿ

ದಾವಣಗೆರೆ: ರಾಜ್ಯದಲ್ಲಿ ಕೊರೊನಾ ಉಪತಳಿ ಜೆಎನ್‌.1 ಭಯ ಹುಟ್ಟಿಸಿರುವ ಬೆನ್ನಲ್ಲೇ ಜಿಲ್ಲೆಯ ಗ್ರಾಮವೊಂದರ ಎಲ್ಲ ಜನರಿಗೆ ಜ್ವರ, ಮೈ- ಕೈ ನೋವು ಕಣಿಸಿಕೊಂಡಿದ್ದು, ಅನಾರೋಗ್ಯದಿಂದ ಇಡೀ ಗ್ರಾಮದ ಮಂದಿಯೇ ಬಳಲುತ್ತಿದ್ದಾರೆ.

ದಾವಣಗೆರೆ ತಾಲೂಕಿನ ಹೊನ್ನೂರು ಗ್ರಾಮದ ಎಲ್ಲ ನಿವಾಸಿಗಳಿಗೂ ಕಳೆದ ವಾರದಿಂದ ಜ್ವರ, ಮೈ- ಕೈ ನೋವು ಕಾಣಿಸಿದೆ. ವಿಷಯ ತಿಳಿಯುತ್ತಿದ್ದಂತೆ ಕ್ಷೇತ್ರದ ಶಾಸಕ ಬಸವಂತಪ್ಪ ಗ್ರಾಮಕ್ಕೆ ಭೇಟಿ ನೀದ್ದಾರೆ. ಅಲ್ಲದೆ ಗ್ರಾಮಸ್ಥರ ಆರೋಗ್ಯ ತಪಾಸಣೆ ಮಾಡುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

ಶಾಸಕರ ಸೂಚನೆ ಮೇರೆಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ. ಈ ವೇಳೆ 25ಕ್ಕೂ ಹೆಚ್ಚು ಜನರಲ್ಲಿ ಚಿಕೂನ್ ಗುನ್ಯಾ ಇರುವುದು ದೃಢವಾಗಿದೆ. ಸೊಳ್ಳೆಯಿಂದ ಇಡೀ ಗ್ರಾಮಕ್ಕೆ ಚಿಕೂನ್ ಗುನ್ಯಾ ಹರಡಿದೆ ಎಂದು ಹೇಳಲಾಗಿದೆ. ಹೀಗಾಗಿ ಗ್ರಾಮದ ಜನರಿಗೆ ಔಷಧ ತೆಗೆದುಕೊಂಡು ಎಚ್ಚರಿಕೆಯಿಂದ ಇರುವಂತೆ ಸಲಹೆ ನೀಡಲಾಗಿದೆ.

ಚಳಿಗಾಲ ಬಂದರೆ ಜನರಲ್ಲಿ ಆರೋಗ್ಯ ಶಕ್ತಿ ಕ್ಷಿಣಿಸಿ ಅನಾರೋಗ್ಯಕ್ಕೆ ತುತ್ತಾಗುತ್ತಾರೆ. ಆದ್ದರಿಂದ ಪ್ರತಿಯೊಬ್ಬರು ಬೆಚ್ಚನೆಯ ಉಡುಪುಗಳನ್ನು ಧರಿಸಿಕೊಂಡು ಸಾಧ್ಯವಾದಷ್ಟು ಬಿಸಿ ಬಿಸಿ ಆಹಾರವನ್ನು ಸೇವಿಸಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ.

Leave a Reply

error: Content is protected !!
LATEST
ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಸೆರೆ ಬೀದರ್: ಸಿಬ್ಬಂದಿ ಹತ್ಯೆಮಾಡಿ 93 ಲಕ್ಷ ದೋಚಿ ಪರಾರಿಯಾಗಿದ್ದ ಖದೀಮರ ಬಂಧನ ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು ಎಟಿಎಂಗೆ ಹಣ ತುಂಬಲು ಬಂದ ಎಸ್‌ಬಿಐ ಸಿಬ್ಬಂದಿ ಮೇಲೆ ಖದೀಮರಿಂದ ಗುಂಡಿನ ದಾಳಿ- ಓರ್ವ ಸಾವು, ₹93 ಲಕ್ಷ ದೋಚಿ ಪರಾರಿ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌ ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು...