- ಐದು ಆರು ಟ್ರಿಪ್ ಸಾಗಿಸಿರುವುದು ಅದು ಸಾರಿಗೆ ನೌಕರರನ್ನೂ ಅವರ ವೈಯುಕ್ತಿಕ ಕೆಲಸಕ್ಕೆ ಬಳಸಿಕೊಂಡ ಅಧಿಕಾರಿ
- ವಿಡಿಯೋದಲ್ಲಿ ಕಾಣುವ ಕೆಂಪು ಟೀ ಶರ್ಟ್ ಹಾಕಿಕೊಂಡಿರುವ ವ್ಯಕ್ತಿಯೆ ಡಿಟಿಒ
- ಕೆಎಸ್ಆರ್ಟಿಸಿ, ಸಿಬ್ಬಂದಿ, ಕಚೇರಿ ವಾಹನ ದುರುಪಯೋಗ
- ತನ್ನ ತೋಟಕ್ಕೆ ಬೇಕಾದ ಸಸಿಗಳನ್ನು ತರಲು ಇಲಾಖೆ ಸಿಬ್ಬಂದಿ, ವಾಹನ ದುರ್ಬಳಕೆ ವಿಡಿಯೋ ಸಹಿತ ಬಹಿರಂಗ
ದಾವಣಗೆರೆ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ದಾವಣಗೆರೆ ವಿಭಾಗದ ವಿಭಾಗೀಯ ಸಂಚಾರ ಅಧಿಕಾರಿ (ಡಿಟಿಒ) ಸಾರಿಗೆ ವಾಹನವನ್ನು ದುರುಪಯೋಗ ಪಡಿಸಿಕೊಂಡು ತನ್ನ ತೋಟಕ್ಕೆ ಬೇಕಾದ ಅಡಕೆ ಸಸ್ಯಗಳನ್ನು ತರಿಸಿಕೊಂಡಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಇನ್ನು ಸಾರಿಗೆ ನೌಕರರು ಮುಷ್ಕರ ಮಾಡಿದರು ಎಂಬ ಕಾರಣಕ್ಕೆ ವಜಾ, ಅಮಾನತು, ವರ್ಗಾವಣೆ ಮತ್ತು ಪೊಲೀಸ್ ಪ್ರಕರಣಗಳನ್ನು ದಾಖಲಿಸಿ ಇನ್ನಿಲ್ಲದ ಹಿಂಸೆ ನೀಡುತ್ತಿರುವ ಸಾರಿಗೆ ಆಡಳಿತ ವರ್ಗ ಈ ರೀತಿ ಸಾರಿಗೆ ವಾಹನ ಮತ್ತು ಸಾರಿಗೆ ನೌಕರರನ್ನು ತನ್ನ ವೈಯಕ್ತಿಕ ಕೆಲಸಕ್ಕೆ ಬಳಸಿಕೊಂಡ ಈ ಅಧಿಕಾರಿಯ ವಿರುದ್ಧ ಇನ್ನೂ ಏಕೆ ಕಾನೂನು ಕ್ರಮ ಜರುಗಿಸಿಲ್ಲ ಎಂಬುದುವುದು ಪ್ರಶ್ನೆಯಾಗಿಯೇ ಉಳಿದಿದೆ.
ಹೌದು! ಇಲ್ಲಿ ಅಧಿಕಾರಿಗಳಿಗೆ ಒಂದು ನ್ಯಾಯ ನೌಕರರಿಗೆ ಒಂದು ನ್ಯಾಯ ಎಂಬುವುದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ಆದರೂ ಸಂಬಂಧಪಟ್ಟ ಹಿರಿಯ ಅಧಿಕಾರಿಗಳು ಸಂಸ್ಥೆಯ ವಾಹನ ಮತ್ತು ನೌಕರರನ್ನು ದುರ್ಬಳಕೆ ಮಾಡಿಕೊಳ್ಳುವ ಅಧಿಕಾರಿಗಳನ್ನು ಶಿಕ್ಷಿಸುವ ಬದಲಿಗೆ ಮತ್ತೆ ನೌಕರರನ್ನು ಶಿಕ್ಷಿಸುವ ಪರಿಪಾಠವನ್ನು ಬೆಳೆಸಿಕೊಂಡಿದ್ದಾರೆ. ಇದರಿಂದ ಸಂಸ್ಥೆ ಲಾಭದಲ್ಲಿದ್ದರು ಇಂಥ ಅಧಿಕಾರಿಗಳಿಂದ ನಷ್ಟವನ್ನು ಅನುಭವಿಸುವಂತಾಗಿದೆ.
ಇನ್ನು ಈ ವಿಷಯ ದಾವಣಗೆರೆ ವಿಭಾಗೀಯ ನಿಯಂತ್ರಣಾಧಿರಿ ಸಿದ್ದೇಶ್ ಅವರ ಗಮನಕ್ಕೂ ಬಂದಿದೆ. ಆದರೆ ಅವರು ಈ ಬಗ್ಗೆ ಮಂಜುನಾಥ್ ಅವರನ್ನು ವಿಚಾರಣೆಗೆ ಒಳಪಡಿ ವ್ಯವಸ್ಥಾಪಕ ನಿರ್ದೇಶಕರ ಗಮನಕ್ಕೆ ತರುವ ಬದಲಿಗೆ ಕೃತ್ಯವನ್ನು ಮುಚ್ಚಿಹಾಕುವ ಪ್ರಯತ್ನ ಮಾಡಿದ್ದಾರೆ. ಅಂದರೆ ಈ ರೀತಿ ವಾಹನ ದುರುಪಯೋಗ ಪಡಿಸಿಕೊಳ್ಳಲಿ ಡಿಸಿ ಸಿದ್ದೇಶ್ ಅವರು ಪರೋಕ್ಷವಾಗಿ ಕಾರಣರಾಗಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.
ಇಲ್ಲಿ ನೋಡಿ ದಾವಣಗೆರೆ ಡಿಟಿಒ ಮಂಜುನಾಥ ಸಂಸ್ಥೆಯ ವಾಹನದಲ್ಲಿ ಚನ್ನಗಿರಿ ಹತ್ತಿರದ ದೋಣಿಹಳ್ಳಿಯಿಂದ ಸಂತೇಬೆನ್ನೂರಿನಲ್ಲಿರುವ ಅವರ ತೋಟಕ್ಕೆ ಅಡಕೆ ಗಿಡಗಳನ್ನು ಇಲಾಖೆ ವಾಹನದಲ್ಲಿ ಸಾಗಿಸಿದ್ದಾರೆ. ಅದೂ ಒಂದು ಬಾರಿ ಅಲ್ಲ ಆರೇಳು ಟ್ರಿಪ್ ಸಾಗಿಸಿರುವುದು ಖಚಿತವಾಗಿದೆ.
ತನ್ನ ತೋಟಕ್ಕೆ ಅಡಕೆ ಗಿಡಗಳನ್ನು ಸಾಗಿಸಲು ಬೇರೆ ಕೂಲಿಗಾರರನ್ನೂ ಬಳಿಸಿಕೊಂಡಿಲ್ಲ ಬದಲಿಗೆ ಇವರು ಸಾರಿಗೆ ನೌಕರರನ್ನೇ ಬಳಸಿಕೊಂಡು ತನ್ನ ವೈಯುಕ್ತಿಕ ಕೆಲಸ ಮಾಡಿಸಿಕೊಂಡಿದ್ದಾರೆ. ಇವರ ಈ ನಡೆಯಿಂದ ಸಂಸ್ಥೆಗೆ ಅಂದಾಜು 15 ಸಾವಿರ ರೂ.ಗಳಿಗೂ ಹೆಚ್ಚು ನಷ್ಟವಾಗಿದೆ. ಜತೆಗೆ ಇವರು ಅಂದು ಕರ್ತವ್ಯಕ್ಕೆ ಹಾಜರಾಗಿಲ್ಲ ಅಂದರೆ ಅವರ ವೇತನ ಸೇರಿಸಿದರೆ ಕನಿಷ್ಠ 20 ಸಾವಿರ ರೂ.ವರೆಗೆ ಸಂಸ್ಥೆಗೆ ನಷ್ಟವಾಗಿದೆ.
ಅಂದರೆ, ಅಧಿಕಾರಿಯ ವೈಯಕ್ತಿಕ ಕೆಲಸಕ್ಕೆ ಸಾರಿಗೆ ವಾಹನ ಮತ್ತು ನೌಕರರನ್ನು ಬಳಸಿಕೊಂಡಿರುವುದು ಕಾನೂನಿನ ಪ್ರಕಾರ ಶಿಕ್ಷಾರ್ಹ ಅಪರಾಧವಾಗುತ್ತದೆ. ಆದರೂ ಈ ಕೃತ್ಯವನ್ನು ಅಧಿಕಾರಿ ಮಂಜುನಾಥ್ ಎಸಗಿ ಒಂದು ತಿಂಗಳು ಕಳೆಯುತ್ತಿದ್ದರೂ ಈವರೆಗೂ ಈತನ ವಿರುದ್ಧ ಯಾವುದೇ ಕ್ರಮ ಜರುಗಿಸದೆ ಇರುವುದು ಏಕೆ ಎಂಬ ಪ್ರಶ್ನೆ ಎದ್ದಿದೆ.
ಇನ್ನು ಅವರು ಸಾರಿಗೆ ವಾಹನವನ್ನು ಮತ್ತು ಸಿಬ್ಬಂದಿಯನ್ನು ದುರುಪಯೋಗ ಪಡಿಸಿಕೊಂಡಿರುವ ವಿಡಿಯೋ ವಿಜಯಪಥಕ್ಕೆ ಲಭ್ಯವಾಗಿದ್ದು ಅವರ ದುರ್ನಡತೆಯನ್ನು ಬಿಚ್ಚಿಡುತ್ತಿದೆ. ಇನ್ನು ಈ ಅಧಿಕಾರಿಯ ವಿರುದ್ಧ ಸಂಸ್ಥೆಯ ಎಂಡಿ ಮತ್ತು ಸಾರಿಗೆ ಸಚಿವರು ಸೇರಿದಂತೆ ಸರ್ಕಾರ ಯಾವ ಕ್ರಮ ಜರುಗಿಸುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
ಏನು ತಪ್ಪನ್ನು ಮಾಡದ ಅಮಾಯಕ ನೌಕರರನ್ನು ವಜಾ ಮಾಡಿರುವ ಸಂಸ್ಥೆಯ ಆಡಳಿತ ವರ್ಗ ಇಂಥ ಅಧಿಕಾರಿಗಳ ಬಗ್ಗೆ ಸೂಕ್ತ ದಾಖಲೆಗಳಿದ್ದರೂ ಏನೂ ಕಾಣದಂತೆ ವರ್ತಿಸುತ್ತಿರುವುದು ಏಕೆ? ಈ ಆಡಳಿತ ವರ್ಗಕ್ಕೆ ಇಂಥ ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವ ದಮ್ಮು ತಾಕತ್ತು ಇಲ್ಲದಷ್ಟು ನಿಸ್ಪ್ರಯೋಜಕವಾಗಿದೆಯೆ?.
ಅದೇ ಒಬ್ಬ ನೌಕರ ಏನೊಂದು ತಪ್ಪು ಮಾಡದಿದ್ದರೂ ಕೂಡಲೇ ಅಮಾನತು, ವಜಾ ಮಾಡುತ್ತೀರಿ ಅದಕ್ಕೆ ನೌಕರರ ಹೇಳಿಕೆಯನ್ನು ಪಡೆಯುವುದಿಲ್ಲ. ಈಗ ಮಾತ್ರ ಇಂಥ ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲು ನಿಮಗೆ ಬೇಕಾದ ಸಾಕ್ಷಿ ಸಹಿತ ದಾಖಲೆಗಳು ಕಣ್ಣಮುಂದೆ ಇದ್ದರೂ ಅವುಗಳು ನಿಮ್ಮ ಕಣ್ಣಿಗೆ ಕಾಣುವುದಿಲ್ಲ ಅಲ್ಲ. ಏಕೆ ಈ ರೀತಿಯ ಮಲತಾಯಿ ಧೋರಣೆ. ತಪ್ಪು ಮಾಡಿದವರಿಗೆ ಶಿಕ್ಷೆ ಕೊಡಬೇಕು. ಅದನ್ನು ಮೊದಲು ಸಂಬಂಧಪಟ್ಟ ವ್ಯವಸ್ಥಾಪಕ ನಿರ್ದೇಶಕರು ಮತ್ತು ಸಚಿವರು ಮಾಡಬೇಕು ಎಂಬ ಆಗ್ರಹ ಕೇಳಿ ಬಂದಿದೆ.
Related

You Might Also Like
ವಾಣಿಜ್ಯ ಗ್ಯಾಸ್ ಸಿಲಿಂಡರ್ ಬಳಕೆದಾರರಿಗೆ ಗುಡ್ ನ್ಯೂಸ್: ಬೆಲೆಯಲ್ಲಿ ಭಾರಿ ಇಳಿಕೆ
ನ್ಯೂಡೆಲ್ಲಿ: ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. 19 ಕೆಜಿ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್...
BMTC: ಚಾಲಕ ಹುದ್ದೆಯಿಂದ ಚಾಲಕ ಕಂ ನಿರ್ವಾಹಕ ಹುದ್ದೆಗೆ ನಿಯೋಜಿಸಿದ್ದ ಆದೇಶ ಹಿಂಪಡೆಯಲು ಸಿಟಿಎಂ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನಿಯಮ 17/1 ರ ಅಡಿಯಲ್ಲಿ ಚಾಲಕ ಹುದ್ದೆಯಿಂದ ಚಾಲಕ-ಕಂ-ನಿರ್ವಾಹಕ ಹುದ್ದೆಗೆ ನಿಯೋಜಿಸಿರುವ ಆದೇಶಗಳನ್ನು ಜುಲೈ 1ರಿಂದಲೇ ಹಂತ ಹಂತವಾಗಿ ಹಿಂಪಡೆದು...
ಕಾವೇರಿ ತಾಯಿಗೆ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮಂಡ್ಯ: ಸೋತ ಗಿರಾಕಿಗಳು ಸರ್ಕಾರ ಬಿದ್ದೋಗತ್ತೆ ಎಂದು ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ನನ್ನ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಡುವಿನ ವಿಶ್ವಾಸ ಸರಿ ಇಲ್ಲ ಎಂದು ಬುರುಡೆ...
ವನಮಹೋತ್ಸವದಲ್ಲಿ ತ್ರಿಚಕ್ರ ವಾಹನ ವಿತರಣೆ, ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ
ಬೆಂಗಳೂರು ಗ್ರಾಮಾಂತ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವನಮಹೋತ್ಸವ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಣೆ ಹಾಗೂ ಸ್ವಚ್ಛತಾ ಕೆಲಸಕ್ಕಾಗಿ ನೂತನ ಆಟೋ ವಾಹನ ಮತ್ತು ಹಿಟಾಚಿ...
9 ಎಕರೆಯಲ್ಲಿ ಕೆಂಪೇಗೌಡರ ವಸ್ತು ಸಂಗ್ರಹಾಲಯ ನಿರ್ಮಾಣ: ಉಸ್ತುವಾರಿ ಸಚಿವ ಕೆಎಚ್ಎಂ
ನಾಡಪ್ರಭು ಕೆಂಪೇಗೌಡರ 516 ನೇ ಜಯಂತ್ಯೋತ್ಸವ ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಮೂಲ ಸ್ಥಳವಾದ ಆವತಿ ಗ್ರಾಮದ ಬಳಿ 9.10 ಎಕರೆ ಪ್ರದೇಶದಲ್ಲಿ ನಾಡಪ್ರಭು ಕೆಂಪೇಗೌಡರ ಜೀವನ ಚರಿತ್ರೆ,...
ಲೋಕಾಯುಕ್ತರು ರಾಜಿನಾಮೆ ನೀಡಬೇಕು, ಅಬಕಾರಿ ಸಚಿವರ ವಜಾಗೊಳಿಸಲು ಆಗ್ರಹಿಸಿ KRS ಪಕ್ಷದಿಂದ ಬೃಹತ್ ಪ್ರತಿಭಟನೆ
ಬೆಂಗಳೂರು: ಲೋಕಾಯುಕ್ತರು ರಾಜಿನಾಮೆ ನೀಡಲಿ, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರನ್ನು ವಜಾಗೊಳಿಸಿ, ನ್ಯಾಯಾಂಗದ ಉಸ್ತುವಾರಿಯಲ್ಲಿ ಸಿಬಿಐ ತನಿಖೆಗೆ ವಹಿಸಿ ಎಂದು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ...
ಸರ್ಕಾರ ಅತೀ ಶೀಘ್ರದಲ್ಲೇ ಸಾರಿಗೆ ನೌಕರರಿಗೆ ಕೊಟ್ಟ ಭರವಸೆ ಈಡೇರಿಸಲಿದೆ: ಡಿಸಿಎಂ ಡಿಕೆಶಿ
ಬೆಂಗಳೂರು: ಚುನಾವಣಾ ಪೂರ್ವ ಪ್ರಣಾಳಿಕೆ ಭರವಸೆಯಂತೆ ಸಾರಿಗೆ ನೌಕರರಿಗೆ ಸರ್ಕಾರಿ ನೌಕರರಂತೆ ಸಮಾನ ವೇತನ ನೀಡುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸಾರಿಗೆ ನೌಕರರ ಕೂಟದ ರಾಜ್ಯಾಧ್ಯಕ್ಷ...
KKRTC: ತನ್ನದಲ್ಲದ ಆಧಾರ್ ಕಾರ್ಡ್ ತೋರಿಸಿ ಟಿಕೆಟ್ ಕೇಳಿದ ಮಹಿಳೆ- ಪ್ರಶ್ನಿಸಿದ್ದಕ್ಕೆ ಪ್ರಜ್ಞೆ ತಪ್ಪುವವರೆಗೂ ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ ಸಂಬಂಧಿಕರು
ಕಲಬುರಗಿ: ಬೇರೆಯವರ ಆಧಾರ್ ಕಾರ್ಡ್ ತೋರಿಸಿ ಟಿಕೆಟ್ ಪಡೆದುಕೊಳ್ಳಲು ಮುಂದಾದ ಮಹಿಳೆಗೆ ಇದು ನಿಮ್ಮ ಆಧಾರ ಕಾರ್ಡ್ ಅಲ್ಲ ನಿಮ್ಮದನ್ನು ಕೊಡಿ ಎಂದು ನಿರ್ವಾಹಕರು ಹೇಳಿದ್ದಕ್ಕೆ ಮಹಿಳೆ...
KSRTC: ಟೈರ್ ಬ್ಲಾಸ್ಟಾಗಿ ಮನೆಗೆ ನುಗ್ಗಿದ ಬಸ್-10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ತಿಪಟೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಟೈರ್ ಬ್ಲಾಸ್ಟ್ ಆಗಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಮನೆಗೆ ಬಸ್ ನುಗ್ಗಿದ ಘಟನೆ ತಾಲೂಕಿನ ಸಿದ್ದಾಪುರ...