ಮುಖ್ಯಮಂತ್ರಿ, ಪ್ರಧಾನಿ 30 ದಿನ ಜೈಲಿನಲ್ಲಿ ಕಳೆದರೆ ವಜಾಗೊಳಿಸುವ ಕಾನೂನು ತರಲು ನಿರ್ಧಾರ: ಪ್ರಧಾನಿ ನರೇಂದ್ರ ಮೋದಿ

ಪಾಟ್ನಾ: ಬಂಧನದ ಬಳಿಕ ಸರ್ಕಾರಿ ಉದ್ಯೋಗಿಗಳು ಕೆಲಸ ಕಳೆದುಕೊಳಳುತ್ತಾರೆ. ಅಂದ ಮೇಲೆ ಪ್ರಧಾನಿ, ಸಿಎಂಗೆ ಯಾಕೆ ಹೀಗಾಗಬಾರದು ಎಂದು ಕ್ರಿಮಿನಲ್ ಕಾನೂನಿನ ವಿಚಾರದ ಕುರಿತು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
13 ಸಾವಿರ ಕೋಟಿ ರೂ.ಗಳಿಗೂ ಹೆಚ್ಚು ವೆಚ್ಚದ ರೈಲು, ರಸ್ತೆ, ವಿದ್ಯುತ್, ವಸತಿ, ನೀರು ಸರಬರಾಜು ಮತ್ತು ಆರೋಗ್ಯ ಕ್ಷೇತ್ರಗಳಿಗೆ ಸಂಬಂಧಿಸಿದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲು ಬೋಧ್ಗಯಾದ ಮಗಧ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು.
ಭ್ರಷ್ಟ ಮುಖ್ಯಮಂತ್ರಿ ಅಥವಾ ಪ್ರಧಾನಿ 30 ದಿನ ಜೈಲಿನಲ್ಲಿ ಕಳೆದರೆ ವಜಾಗೊಳಿಸಲು ಅವಕಾಶ ನೀಡುವ ಕಾನೂನನ್ನು ತರಲು ನಾವು ನಿರ್ಧರಿಸಿದ್ದೇವೆ. ಅಲ್ಪಾವಧಿಗೆ ಜೈಲಿನಲ್ಲಿದ್ದ ಒಬ್ಬ ಗುಮಾಸ್ತನನ್ನು ಅಮಾನತುಗೊಳಿಸಲಾಗುತ್ತದೆ. ಪ್ರಧಾನಿಯನ್ನು ಏಕೆ ಅಮಾನತುಗೊಳಿಸಬಾರದು? ಈ ಸಂಬಂಧ ನಾವು ಕಠಿಣ ಕಾನೂನನ್ನು ತಂದರೆ ಆರ್ಜೆಡಿ, ಕಾಂಗ್ರೆಸ್ ಮತ್ತು ಎಡಪಂಥಿಯರು ಆಕ್ರೋಶಗೊಂಡಿದ್ದಾರೆ. ಇದಕ್ಕಾಗಿ ಹಗಲು-ರಾತ್ರಿ ನನ್ನನ್ನು ನಿಂದಿಸುತ್ತಾರೆ. ಅವರು ತಮ್ಮ ಸ್ವಂತ ಪಾಪಗಳಿಗೆ ಶಿಕ್ಷೆಯನ್ನು ಎದುರಿಸುವ ಭಯದಿಂದ ನಮ್ಮ ಮೇಲೆ ಸಿಡುಕುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಇನ್ನು ಬಿಹಾರ ಚಂದ್ರಗುಪ್ತ ಮೌರ್ಯ ಮತ್ತು ಚಾಣಕ್ಯನ ನಾಡು. ಈ ನೆಲದಲ್ಲಿ ತೆಗೆದುಕೊಂಡ ಪ್ರತಿಯೊಂದು ನಿರ್ಣಯವೂ ಎಂದಿಗೂ ವ್ಯರ್ಥವಾಗುವುದಿಲ್ಲ. ಕಾಶ್ಮೀರದ ಪಹಲ್ಗಾಮ್ನಲ್ಲಿ ಭಯೋತ್ಪಾದಕ ದಾಳಿ ನಡೆದಾಗ ಬಿಹಾರದ ಈ ನೆಲದಿಂದ ನಿಂತು ಭಯೋತ್ಪಾದಕರನ್ನು ನಿರ್ಮೂಲನೆ ಮಾಡುವ ಬಗ್ಗೆ ಮಾತನಾಡಿದ್ದೆ. ಅಂದು ಬಿಹಾರದ ನೆಲದಿಂದ ತೆಗೆದುಕೊಂಡ ನಿರ್ಣಯವು ಈಡೇರಿದೆ ಎಂದು ಜಗತ್ತು ನೋಡುತ್ತಿದೆ ಎಂದರು.
ಜತೆಗೆ ಸಂವಿಧಾನ (130ನೇ ತಿದ್ದುಪಡಿ) ಮಸೂದೆ, ಚುನಾವಣಾ ಆಯೋಗ ಬಿಹಾರದಲ್ಲಿ ಪ್ರಸ್ತುತ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ ಬಗ್ಗೆ ಪ್ರಸ್ತಾಪಿಸಿದ ಅವರು, ಅಧಿಕಾರದ ಉನ್ನತ ಸ್ಥಾನದಲ್ಲಿರುವ ಜನರು ಜೈಲಿನಿಂದ ಸರ್ಕಾರಗಳನ್ನು ನಡೆಸುತ್ತಿದ್ದಾರೆ. ಕಂಬಿಗಳ ಹಿಂದಿನಿಂದ ಫೈಲ್ಗಳಿಗೆ ಸಹಿ ಮಾಡುತ್ತಿದ್ದಾರೆ. ಸಾಂವಿಧಾನಿಕ ಔಚಿತ್ಯವನ್ನು ಹರಿದು ಹಾಕುತ್ತಿದ್ದಾರೆ ಎಂಬ ವಿಷಾದಕರ ಪರಿಸ್ಥಿತಿಯನ್ನು ನಾವು ನೋಡಿದ್ದೇವೆ. ಅಲ್ಲದೆ, ತಮ್ಮ 11 ವರ್ಷಗಳ ಸರ್ಕಾರದಲ್ಲಿ ಭ್ರಷ್ಟಾಚಾರದ ಕಲೆ ಇಲ್ಲ ಎಂದು ಹೇಳಿದರು.
ಈ ಮಧ್ಯೆ, ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅನುಪಸ್ಥಿತಿಯಲ್ಲಿ ಕೋಲ್ಕತ್ತಾದಲ್ಲಿ ಮೆಟ್ರೋ ಮಾರ್ಗವನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು. 9 ಹೊಸ ವಂದೇ ಭಾರತ್ ರೈಲುಗಳನ್ನು ಕೂಡ ಘೋಷಿಸಿದರು.
पावन नगरी गया जी में विकास कार्यों को लेकर मेरे परिवारजनों ने जो उत्साह दिखाया है, उससे एक नई ऊर्जा मिली है। pic.twitter.com/brdRClbJ4C
— Narendra Modi (@narendramodi) August 22, 2025
Related

You Might Also Like
ಕುಷ್ಠರೋಗ ಮುಕ್ತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಿ: ಡಾ.ಪ್ರದೀಪ್ತಾ ಕುಮಾರ್ ನಾಯಕ್
ಬೆಂಗಳೂರು: ಮನುಷ್ಯನ ಆರೋಗ್ಯಕ್ಕೆ ಸಂಬಂಧಿಸಿದಂತೆ ಕುಷ್ಠರೋಗವು ಒಂದು ಬಾಧಿತ ರೋಗವಾಗಿದ್ದು, ಕುಷ್ಠರೋಗ ಮುಕ್ತ ಸಮಾಜ ನಿರ್ಮಿಸಲು ಅಧಿಕಾರಿಗಳು ನಿರಂತರ ಕಾರ್ಯ ಪ್ರವೃತ್ತರಾಗಿರಬೇಕು ಎಂದು ಕೇಂದ್ರ ಮಾನವ ಹಕ್ಕುಗಳ...
NWKRTC: 45 ವರ್ಷದ ಮಹಿಳೆಗೆ ಅನುಕಂಪದ ಆಧಾರದಡಿ ಹುದ್ದೆಕೊಡಿ- ಹೈಕೋರ್ಟ್ ಆದೇಶ
ಬೆಂಗಳೂರು: ವಯೋಮಿತಿ ಮೀರಿದ ಮಹಿಳೆಗೆ ವಿಶೇಷ ಪ್ರಕರಣವೆಂದು ಅನುಕಂಪದ ಹುದ್ದೆ ನೀಡಬೇಕು ಎಂದು ಹೈಕೋರ್ಟ್ ಮಹತ್ವ ಆದೇಶ ಹೊರಡಿಸಿದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೌಕರನ...
BBMP: ಗಣೇಶ ಮೂರ್ತಿ ವಿಸರ್ಜನೆಗೆ 41ಕೆರೆಗಳು, 489 ಸಂಚಾರಿ ವಾಹನಗಳ ವ್ಯವಸ್ಥೆ
ಬೆಂಗಳೂರು: ಗಣೇಶ ಮೂರ್ತಿ ವಿಸರ್ಜನೆಗಾಗಿ ಕೆರೆ ಅಂಗಳ, ತಾತ್ಕಾಲಿಕ ಕಲ್ಯಾಣಿ, ಸಂಚಾರಿ ವಾಹನ (ಮೊಬೈಲ್ ಟ್ಯಾಂಕ್)/ ಗಳ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ. 41ಕೆರೆ,...
ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಕಲಾವಿದರು-ಕಲಾತಂಡದವರಿಂದ ಅರ್ಜಿ ಆಹ್ವಾನ
ಶಿವಮೊಗ್ಗ: ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವ ಕಲಾವಿದರು ಅಥವಾ ಕಲಾ ತಂಡದವರಿಂದ ಅರ್ಜಿ ಆಹ್ವಾನಿಸಲಾಗಿದೆ. ಇದು ಮಹಾನಗರ ಪಾಲಿಕೆವತಿಯಿಂದ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬಯಸುವ...
NWKRTC: ಆ.22ರಿಂದ 26ರವರೆಗೆ ಹೆಚ್ಚುವರಿ 265 ವಿಶೇಷ ಸಾರಿಗೆ ಬಸ್ಗಳ ಸೌಲಭ್ಯ
ಬೆಂಗಳೂರು: ಗಣೇಶ ಚತುರ್ಥಿ ಸಮೀಪಿಸುತ್ತಿರುವ ಹಿನ್ನೆಲೆ ಸಾರ್ವಜನಿಕರು ತಮ್ಮ ಊರುಗಳಿಗೆ ತೆರಳುವುದರಿಂದ ಹೆಚ್ಚುವರಿ 265 ವಿಶೇಷ ಸಾರಿಗೆ ಬಸ್ಸುಗಳು ಬೆಂಗಳೂರಿನಿಂದ ರಾಜ್ಯ ಹಾಗೂ ಅಂತರರಾಜ್ಯಗಳಿಗೆ ಕಾರ್ಯಾಚರಣೆ ನಡೆಸಲಿವೆ....
BMTC: ಸ್ಕೂಟರ್ ಸ್ಕಿಡ್ಆಗಿ ಬಿದ್ದ ಬಾಲಕಿ ಬಸ್ ಹಿಂದಿನ ಚಕ್ರಕ್ಕೆ ಸಿಲುಕಿ ಸಾವು
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್ 10 ವರ್ಷದ ಬಾಲಕಿ ಮೇಲೆ ಹರಿದ ಪರಿಣಾಮ ಆಕೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಯಲಹಂಕ ಕೋಗಿಲು ಕ್ರಾಸ್...
ಆದಿ ಜಾಂಬವ ಅಭಿವೃದ್ಧಿ ನಿಗಮದಲ್ಲಿ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ
ಬೆಂಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ 2025-26ನೇ ಸಾಲಿಗೆ ಸಂಬಂಧಿಸಿದಂತೆ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಅಭಿವೃದ್ದಿಗಾಗಿ ಆದಿ ಜಾಂಬವ ಅಭಿವೃದ್ಧಿ ನಿಗಮಗದಿಂದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ಫಲಾಪೇಕ್ಷಿಗಳಿಂದ...
ಉತ್ತರಾಖಂಡ್ನ 6ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ-ಸದಸ್ಯರ ನಿಯೋಗ ಗ್ರಾಮಾಂತರ ಜಿಲ್ಲೆಗೆ ಭೇಟಿ
ಬೆಂಂಗಳೂರು ಗ್ರಾಮಾಂತರ: ಉತ್ತರಾಖಂಡ್ ರಾಜ್ಯದ 6ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ರವಿಶಂಕರ್, ಸದಸ್ಯರಾದ ಜಂಗ್ಪಂಗಿ, ಎಂ.ಸಿ. ಜೋಷಿ ಅವರ ನಿಯೋಗವು ಅಧ್ಯಯನಕ್ಕಾಗಿ ಇಂದು ಜಿಲ್ಲೆಗೆ ಭೇಟಿ...