EPS ಪಿಂಚಣಿದಾರರಿಗೆ ಕನಿಷ್ಠ ಪಿಂಚಣಿ ಜಾರಿಗೆ ಸಂಸತ್ತಿನಲ್ಲಿ ಒತ್ತಾಯಿಸಲು ಆಗ್ರಹಿಸಿ ಸಂಸದರ ಮನೆ ಮುಂದೆ ಧರಣಿಗೆ ನಿರ್ಧಾರ

ಮೈಸೂರು: ಇಪಿಎಸ್ ನಿವೃತ್ತ ನೌಕರರಿಗೆ ಕನಿಷ್ಠ ಪಿಂಚಣಿ 7500 ರೂ.+ ಇತರೆ ಸೌಲಭ್ಯಗಳನ್ನು ಜಾರಿ ಮಾಡುವ ಸಂಬಂಧ ಲೋಕಸಭೆ ಅಧಿವೇಶನದಲ್ಲಿ ಗಮನ ಸೆಳೆಯುವಂತೆ ಮೈಸೂರು ಹಾಗೂ ಚಾಮರಾಜನಗರ ಸಂಸದರ ಕಚೇರಿ, ಮನೆ ಮುಂದೆ ಧರಣಿ ನಡೆಸಲು ಇಪಿಎಸ್-95-ಎನ್ಎಸಿ ಸಂಘಟನೆ ನಿರ್ಧರಿಸಿದೆ.
ಇತ್ತೀಚೆಗೆ ನಗರದ ಹೈವೇ ವೃತ್ತದ ಬಳಿ ಇರುವ ಪುತಲೀ ಉದ್ಯಾನದಲ್ಲಿ ಆಯೋಜಿಸಿದ್ದ ಇಪಿಎಸ್-95-ಎನ್ಸಿ ಸಂಘಟನೆಯ 11ನೇ ಮೈಸೂರು ಜಿಲ್ಲಾ ಮಟ್ಟದ ಮಾಸಿಕ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ
ಇನ್ನು ವೇಳೆ ಮಾತನಾಡಿದ ಸಂಘಟನಾ ಕಾರ್ಯದರ್ಶಿ ವಿಜಯ್ ಕುಮಾರ್, ಹುಬ್ಬಳ್ಳಿಯಲ್ಲಿ ನಡೆದ ರಾಜ್ಯ ಮಟ್ಟದ ಸಮಾವೇಶ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ನಡೆಯುತ್ತಿರುವ ರಾಷ್ಟ್ರಮಟ್ಟದ ನಿವೃತ್ತ ನೌಕರರ ಧರಣಿಯಲ್ಲಿ ಕನಿಷ್ಠ ಪಿಂಚಣಿ ಜಾರಿ ಮಾಡಬೇಕು ಎಂದು ಆಗ್ರಹಿಸುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರ ಈವರೆಗೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಅಧ್ಯಕ್ಷತೆ ವಹಿ ಮಾತನಾಡಿದ ಸಂಘಟಣೆಯ ಜಿಲ್ಲಾ ಅಧ್ಯಕ್ಷ ಎಂ.ಷಡಕ್ಷರಿ, ಸಂಸದರ ಕಚೇರಿ, ಮನೆ ಮುಂದೆ ಧರಣಿ ಮಾಡಲು ನಾವೆಲ್ಲರೂ ಒಕ್ಕೋರಲಿನಿಂದ ನಿರ್ಧಾರಿಸಿದ್ದು, ನಮ್ಮ ಹೋರಾಟದ ಮುಂದಿನ ಭಾಗವಾಗಿ ಮೈಸೂರು ಮತ್ತು ಚಾಮರಾಜನಗರ ಸಂಸದರ ಮನೆ, ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದು. ಈಗ ನಡೆಯುತ್ತಿರುವ ಲೋಕಸಭಾ ಅಧಿವೇಶನದಲ್ಲಿ ಈ ಬಗ್ಗೆ ಪ್ರಸ್ತಾಪಿಸುವಂತೆ ಕೋರಲಾಗುವುದು ಎಂದು ಹೇಳಿದರು.
ಅಲ್ಲದೆ ಈಗಾಗಲೇ ಕಾರ್ಮಿಕ ಮತ್ತು ಹಣಕಾಸು ಸಚಿವರಿಗೆ ನಿವೃತ್ತ ನೌಕರರಿಗೆ ಕನಿಷ್ಠ ಪಿಂಚಣಿ 7500 ರೂ. ಜತೆಗೆ ಡಿಎ, ಉಚಿತ ವೈದ್ಯಕೀಯ ಸೌಲಭ್ಯ ನೀಡಬೇಕು ಎನ್ನುವ ಬೇಡಿಕೆಯನ್ನು ಪ್ರಬಲವಾಗಿ ಮುಂದಿಡಲಾಗಿದೆ ಎಂದರು.
ಕಳೆದ ಏಳೂವರೆ ವರ್ಷದಿಂದ ಈ ಬಗ್ಗೆ ನೊಂದ ನಿವೃತ್ತ ನೌಕರರು ಹೋರಾಟ ಮಾಡುತ್ತಿದ್ದರೂ, ನಮ್ಮ ಸಂಸದರು ಈವರೆಗೆ ಮಾತನಾಡದೇ ಮೌನದಿಂದಿರುವುದು ದುರದೃಷ್ಟಕರ ಎಂದು ಸಂಸದರ ನಡೆಯ ಬಗ್ಗೆಯೂ ಅಸಮಾಧಾನ ಹೊರಹಾಕಿದರು.
ಮೈಸೂರು ಜಿಲ್ಲಾ ಸಂಘಟಣೆಯ ಟಿ.ಆರ್. ಶ್ರೀಕಂಠಪ್ರಸಾದ್, ಚಾಮರಾಜನಗರ ಜಿಲ್ಲೆಯ ಸಂಘಟಣೆ ಅಧ್ಯಕ್ಷ ಮಹದೇವ, ಕಾರ್ಯದರ್ಶಿ ಸೋಮಣ್ಣ, ಖಜಾಂಚಿ ನಂಜುಂಡಸ್ವಾಮಿ, ಸಂಘಟನಾ ಕಾರ್ಯದರ್ಶಿ ಕೆ. ಮಹದೇವು, ಜೆ.ಕೆ.ಟೈರ್ಸ್ ಯೂನಿಯನ್ ಪ್ರಧಾನ ಕಾರ್ಯದರ್ಶಿ ರಾಜಣ್ಣ, ಕಾರ್ಯದರ್ಶಿ ಚನ್ನಕೇಶವ, ಖಜಾಂಚಿ ಬಸವಣ್ಣ, ಉಪಾಧ್ಯಕ್ಷ ಬಸವರಾಜು, ರಾಮೇಗೌಡ, ಮುಖಂಡರಾದ ಆರ್. ಉಮೇಶ್ ಹಾಗೂ ಮಹಿಳಾ ನಿವೃತ್ತ ನೌಕರರು, ಸಕ್ಕರೆ ಕಾರ್ಖಾನೆ, ಕರಿಕಲ್ಲು ಗಾಣಿಗರಿಕೆ ಸೇರಿದಂತೆ ಇನ್ನಿತರೆ ಕಾರ್ಮಿಕರು ಇದ್ದರು.
Related

You Might Also Like
ಭೀಕರ ಅಪಘಾತ: ಲಾರಿಗೆ ಸರ್ಕಾರಿ ಬಸ್ ಡಿಕ್ಕಿ -ಮೂವರ ಸಾವು, 7ಮಂದಿಗೆ ಗಂಭೀರಗಾಯ
ಯಲ್ಲಾಪುರ: ನಿಂತಿದ್ದ ಲಾರಿಗೆ ಸರ್ಕಾರಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟು 7 ಮಂದಿ ಗಂಭೀರವಾಗಿ ಗಾಯಗೊಂಡಿೆಉವ ಘಟನೆ ಉತ್ತರಕನ್ನಡ...
KSRTC: ಯಾವುದೇ ಕಾರಣಕ್ಕೂ ನೌಕರರ ವಾರದ ರಜೆ ರದ್ದುಪಡಿಸಬಾರದು- ಹಿಂದಿನ ವ್ಯವಸ್ಥಾಪಕ ನಿರ್ದೇಶಕರ ಆದೇಶ
ವಾರದ ರಜೆ ರದ್ದು ಪಡಿಸಿದರೆ ಅಂಥ ಅಧಿಕಾರಿಯ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡುವ ಅಧಿಕಾರಿ ನೌಕರರಿಗೆ ಇದೆ ಬೆಂಗಳೂರು: ನೌಕರರಿಗೆ ವಾರದ ರಜೆಯನ್ನು ನಿಗದಿತ ದಿನದಂದು ನೀಡಬೇಕು...
ಚಂದ್ರಶೇಖರನಾಥ ಶ್ರೀಗಳ ಪೂರ್ವಾಶ್ರಮದ ಹೆಸರು ಕೆ.ಟಿ.ಗೋವಿಂದೇಗೌಡ
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧಿಪತಿ 80 ವರ್ಷದ ಶ್ರೀ ಚಂದ್ರಶೇಖರನಾಥ ಸ್ವಾಮಿಗಳು ಇಂದು ರಾತ್ರಿ 12.01 ರ ಸಮಯದಲ್ಲಿ ಇಹಲೋಕ ತ್ಯಜಿಸುವ ಮೂಲಕ ಶ್ರೀ ಕೃಷ್ಣನ...
ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ: ದೇವಕಿ ಸುತನ ವೇಷದಲ್ಲಿ ಮಿಂಚಿದ ಲಿಟಲ್ ಲಿಶಾನ್
ಬೆಂಗಳೂರು: ರಾಜ್ಯಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶನಿವಾರ ಅದ್ದೂರಿಯಾಗಿ ಆಚರಿಸುತ್ತಿದ್ದು, ಪುಟಾಣಿಗಳು ಶ್ರೀಕೃಷ್ಣ - ರಾಧೆ ವೇಷ ಧರಿಸಿ ಮಿಂಚುತ್ತಿದ್ದಾರೆ. ಈ ಪೈಕಿ ಮಕ್ಕಳ ಚಂದದ ಫೋಟೋಗಳನ್ನು...
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ನಿಧನ
ಬೆಂಗಳೂರು: ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಅವರು ಇಂದು ತಡರಾತ್ರಿ ನಿಧನಹೊಂದಿದ್ದಾರೆ. ಕೆಂಗೇರಿ ಸಮೀಪ ಶ್ರೀಮಠ ಸ್ಥಾಪನೆ ಮಾಡಿ ಶಿಕ್ಷಣ, ಆಧ್ಯಾತ್ಮಿಕ...
ರೇಣುಕಾಸ್ವಾಮಿ ಕೊಲೆ ಪ್ರಕರಣ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್: ಮತ್ತೆ ಜೈಲಿಗೆ ನಟ ದರ್ಶನ್ ಅಂಡ್ ಟೀಂ
ನ್ಯೂಡೆಲ್ಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲ ಆರೋಪಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಜಾಮೀನು...
ವಿಶ್ವವಿಖ್ಯಾತ ಮೈಸೂರು ದಸರಾ ನವ ತರುಣಿಯಂತೆ ಆಚರಣೆಯಲ್ಲಿರುವುದು ಕನ್ನಡಿಗರ-ಕರ್ನಾಟಕದ ಹೆಮ್ಮೆ!
ಮೈಸೂರು ಮಲ್ಲಿಗೆ, ಅರಮನೆಗಳ ನಗರಿ, ಪಾರಂಪರಿಕ ಕಟ್ಟಡಗಳುಳ್ಳ ಸಾಂಸ್ಕೃತಿಕ ನಗರಿ ಎಂಬಿತ್ಯಾದಿಯಾಗಿ ವರ್ಣನೆಗೆ ನಿಲುಕಿ ವಿಶ್ವದಲ್ಲೇ ಚಿರ ಪರಿಚಿತವಾಗಿರುವ ಮೈಸೂರು ಈಗ ಪ್ರವಾಸಿಗರ ಕೇಂದ್ರ ಬಿಂದು. ರಾಜರ...
ಮೈಸೂರು: ದಸರಾ ಆನೆಗಳಿಗೆ ನಿತ್ಯ ಅರಮನೆಯಿಂದ ಬನ್ನಿ ಮಂಟಪದವರೆಗೆ ಬೆಳಗ್ಗೆ-ಸಂಜೆ ದೈನಂದಿನ ನಡಿಗೆ ತಾಲೀಮು
ಮೈಸೂರು: ನಾಡಹಬ್ಬ ದಸರಾದ ಜಂಬೂ ಸವಾರಿ ಮೆರವಣಿಗೆ ತಾಲೀಮನ್ನು ಅಭಿಮನ್ಯು ನೇತೃತ್ವದ ದಸರಾ ಗಜಪಡೆ ಈಗಾಗಲೇ ಆರಂಭಿಸಿದ್ದು, ಈ ತಾಲೀಮಿನಲ್ಲಿ ಗಜಪಡೆಯ ಮೊದಲ ಹಂತದ 9 ಆನೆಗಳು...
ಸಾರಿಗೆ ನೌಕರರ ಮುಷ್ಕರಕ್ಕೆ ಸಿಎಂ, ಸಾರಿಗೆ ಸಚಿವರು, ಎಂಡಿಗಳೇ ನೇರ ಕಾರಣ: ಲಿಖಿತ ಸಮಜಾಯಿಷಿ ಕೊಡುತ್ತಿರುವ ನೌಕರರು
ಬೆಂಗಳೂರು: ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ನೌಕರರು ಮುಷ್ಕರ ಮಾಡಲು ಮೂಲ ಕಾರಣ ನಾಲ್ಕೂ ಸಂಸ್ಥೆಯ ಆಡಳಿತ ವರ್ಗದ ಮುಖ್ಯಸ್ಥರೇ ಎಂದು ಆಪಾದನಾ ಪತ್ರ ನೀಡಿರುವ ಶಿಸ್ತುಪಾಲನಾಧಿಕಾರಿಯೂ...