NEWSದೇಶ-ವಿದೇಶರಾಜಕೀಯ

ದೆಹಲಿ: ಮೇಯರ್‌, ಉಪಮೇಯರ್‌ ಚುನಾವಣೆ – ಬಿಜೆಪಿಯಿಂದಲೂ ಅಭ್ಯರ್ಥಿಗಳ ಘೋಷಣೆ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ದೆಹಲಿ ಮಹಾನಗರ ಪಾಲಿಕೆಗೆ ಮೇಯರ್‌, ಉಪಮೇಯರ್‌ ಆಯ್ಕೆಗೆ ಜ.6ರಂದು ಚುನಾವಣೆ ನಡೆಯಲಿದ್ದು, ಆಮ್‌ ಆದ್ಮಿ ಪಕ್ಷ ಮೇಯರ್‌ ಹಾಗೂ ಉಪಮೇಯರ್‌ ಅಭ್ಯರ್ಥಿಗಳ ಹೆಸರು ಘೋಷಿಸಿದ ಬೆನ್ನಲ್ಲೇ ಬಿಜೆಪಿ ಕೂಡ ಈ ಚುನಾವಣೆಗೆ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಮೂಲಕ ಕುತೂಹಲ ಹೆಚ್ಚಿಸಿದೆ.

ಈ ಚುನಾವಣೆಯಲ್ಲಿ ಬಿಜೆಪಿಯ ರೇಖಾ ಗುಪ್ತಾ ಮತ್ತು ಕಮಲ್‌ ಬಾಗ್ಡಿ ಕ್ರಮವಾಗಿ ಮೇಯರ್‌ ಹಾಗೂ ಉಪಮೇಯರ್‌ ಅಭ್ಯರ್ಥಿಗಳಾಗಿದ್ದಾರೆ ಎಂದು ಮಂಗಳವಾರ ಇವರ ಹೆಸರನ್ನು ಘೋಷಣೆ ಮಾಡಿದೆ.

ಇನ್ನು ರೇಖಾ ಗುಪ್ತಾ, ಶಾಲಿಮಾರ್‌ ಬಾಗ್‌ನಿಂದ ಮೂರು ಬಾರಿ ಪಾಲಿಕೆ ಸದಸ್ಯರಾಗಿ ಆಯ್ಕೆಗೊಂಡಿದ್ದರೆ, ಕಮಲ್‌ ಬಾಗ್ಡಿ ರಾಮ್‌ ನಗರ್‌ನಿಂದ ಮೊದಲ ಸಲ ಪಾಲಿಕೆ ಸದಸ್ಯರಾಗಿ ಚುನಾಯಿತರಾಗಿದ್ದಾರೆ.

ಇನ್ನು ಈಗಾಗಲೇ ಶೆಲ್ಲಿ ಒಬೆರಾಯ್‌ ಮೇಯರ್‌ ಮತ್ತು ಮಹಮ್ಮದ್‌ ಇಕ್ಬಾಲ್‌ ಉಪಮೇಯರ್‌ ಸ್ಥಾನದ ಅಭ್ಯರ್ಥಿಗಳು ಎಂದು ಎಎಪಿ ಘೋಷಣೆ ಮಾಡಿದೆ. ಶೆಲ್ಲಿ ಅವರು ಪೂರ್ವ ಪಟೇಲ್‌ ನಗರ ವಾರ್ಡ್‌ನಿಂದ ಮೊದಲ ಸಲ ಆಯ್ಕೆಯಾಗಿದ್ದು, ಇಕ್ಬಾಲ್‌, ಚಾಂದಿನಿ ಮಹಲ್‌ ವಾರ್ಡ್‌ನಿಂದ ಎರಡನೇ ಬಾರಿಗೆ ಸದಸ್ಯರಾಗಿದ್ದಾರೆ.

ಶೆಲ್ಲಿ ಒಬೆರಾಯ್‌ ಅತಿಥಿ ಉಪನ್ಯಾಸಕಿಯಾಗಿದ್ದರು. ಇನ್ನು ಎಎಪಿ ಶಾಸಕ ಶೋಯಬ್‌ ಇಕ್ಬಾಲ್‌ ಅವರ ಪುತ್ರ ಈ ಇಕ್ಬಾಲ್‌. ದೆಹಲಿ ಮೇಯರ್‌ ಹುದ್ದೆ 5 ವರ್ಷ ಅವಧಿಗೆ ಮಹಿಳೆಗೆ ಮೀಸಲಾಗಿದೆ. ಇನ್ನು ಸದಸ್ಯರಾಗಿ ಪಾಲಿಕೆ ಚುನಾಯಿತರಾಗಿರುವ 250 ಮಂದಿಯೂ ಜ.6ರಂದು ಪ್ರಮಾಣವಚನ ಸ್ವೀಕರಿಸಲಿದ್ದು ಅಂದೇ ಮೇಯರ್‌ ಆಯ್ಕೆ ಮಾಡಲಿದ್ದಾರೆ. ಅಂದು ಆಯ್ಕೆಯಾದವರು 2023ರ ಏಪ್ರಿಲ್‌ವರೆಗೆ ಮೇಯರ್‌ ಸ್ಥಾನದಲ್ಲಿರಲಿದ್ದಾರೆ. ಆದರೂ ಏಪ್ರಿಲ್‌ನಲ್ಲಿ ಮತ್ತೆ ಮೇಯರ್‌ ಆಯ್ಕೆ ನಡೆಯಲಿದೆ.

ಇದೇ ಡಿ.7ರಂದು ನಡೆದ ಪಾಲಿಕೆ ಚುನಾವಣೆಯಲ್ಲಿ ಆಮ್‌ ಆದ್ಮಿ 134 ಸ್ಥಾನ ಗೆದ್ದಿದ್ದು, ಬಿಜೆಪಿ 104 ಸ್ಥಾನದಲ್ಲಿ ಜಯ ಗಳಿಸಿದೆ. ಇನ್ನು ಎಎಪಿ ಗೆಲುವಿನ ಹೊರತಾಗಿಯೂ ತಮ್ಮ ಪಕ್ಷದವರೇ ಮೇಯರ್‌ ಆಗಲಿದ್ದಾರೆ ಎಂಬ ವಿಶ್ವಾಸವನ್ನು ಬಿಜೆಪಿಯ ಕೆಲ ನಾಯಕರು ವ್ಯಕ್ತಪಡಿಸಿದ್ದು, ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಹೀಗಾಗಿ ಮೇಯರ್‌ ಆಯ್ಕೆ ಚುನಾವಣೆ ಬಹು ಕುತೂಹಲಕ್ಕೆ ಕಾರಣವಾಗಿದೆ.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...