ಬೆಂಗಳೂರು: ಕರ್ನಾಟಕ ರಾಜ್ಯ ರಸೆ ಸಾರಿಗೆ ನಿಗಮದ ಬಸ್ಗಳು ಕರ್ನಾಟಕ ಮತ್ತು ಆಂಧ್ರಪ್ರದೇಶದ ಗಡಿ ಭಾಗದ ಹೆಚ್ಚಾಗಿ ಸಂಚರಿಸದಿರುವುದರಿಂದ ಗಡಿಯಲ್ಲಿರುವ ಮಂದಿ ಒಂದು ಕಡೆಯಿಂದ ಮತ್ತೊಂದು ಕಡೆಗೆ ಹೋಗಲು ತುಂಬ ಸಮಸ್ಯೆ ಎದುರಿಸುತ್ತಿದ್ದಾರೆ. ಹೀಗಾಗಿ ಎರಡೂ ರಾಜ್ಯಗಳ ಸಾರಿಗೆ ಎಂಡಿಗಳು ಗಡಿಬಾಗಗಳಲ್ಲಿ ಬಸ್ಸೇವೆಗಳನ್ನು ಹೆಚ್ಚಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಶ್ರೀಸಾಯಿ ಎಂಬುವರು ಮನವಿ ಮಾಡಿದ್ದಾರೆ.
ಅದರಲ್ಲೂ ಪ್ರಮುಖವಾಗಿ ಬೆಂಗಳೂರಿನಿಂದ – ಯಲಹಂಕ – ಚಿಂತಾಮಣಿ – ಮದನಪಲ್ಲಿ – ಪೈಲರ್ – ತಿರುಪತಿ ಮಾರ್ಗವಾಗಿ ಕಡಪ – ಮದನಪಲ್ಲಿಗೆ ಕೆಎಸ್ಆರ್ಟಿಸಿ ಬಸ್ಗಳ ನಿಯಮಿತ ಸೇವೆ ತೀರಾ ಕಡಿಮೆಯಿದೆ. ಹೀಗಾಗಿ ಈ ಮಾರ್ಗಗಳಲ್ಲಿ ಖಾಸಗಿ ಬಸ್ಗಳಿಂದ ಪ್ರಯಾಣಿಕರು ಹಲವಾರು ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.
ಬೆಂಗಳೂರಿನಿಂದ – ಚಿಕ್ಕಬಳ್ಳಾಪುರ ವಿಭಾಗದ ಚಿಂತಾಮಣಿ – ಮದನಪಲ್ಲಿ ಪೈಲರ್ ತಿರುಪತಿ ಮಾರ್ಗವಾಗಿ ಕಡಪ ಮದನಪಲ್ಲಿ ಕರ್ನಾಟಕ ಮತ್ತು ಆಂಧ್ರ ಪ್ರದೇಶದ ಗಡಿಗಳಾಗಿದ್ದು ಈ ಭಾಗದಲ್ಲಿ ಕೆಎಸ್ಆರ್ಟಿಸಿ ಬಸ್ಗಳಿಗೆ ಭಾರಿ ಬೇಡಿಕೆ ಇದೆ.
ಈ ಮಾರ್ಗಗಳಲ್ಲಿ ಖಾಸಗಿ ಬಸ್ಗಳು ಇವೆ. ಆದರೆ, ಬೆಂಗಳೂರಿನಿಂದ ಕಡಪ – ಮದನಪಲ್ಲಿಗೆ ಸಂಚರಿಸಬೇಕಿರುವ ಸಾರ್ವಜನಿಕರಿಗೆ ಹೊರೆಯಾಗುವಂತಹ ಪ್ರಯಾಣ ದರ ವಿಧಿಸುತ್ತಿದ್ದಾರೆ. ಇದರಿಂದ ಪ್ರಯಾಣಿಕರು ಹೆಚ್ಚು ಹಣ ಕೊಟ್ಟು ಪ್ರಯಾಣಿಸುವ ಸ್ಥಿತಿ ಬಂದಿದೆ.
ಹೀಗಾಗಿ ಚಿಂತಾಮಣಿ ಸಾರಿಗೆ ಘಟಕದಿಂದ ಅಂತಾರಾಜ್ಯ ಮಾರ್ಗಗಳಿಗೆ ಯಲಹಂಕ – ಚಿಂತಾಮಣಿ – ಮದನಪಲ್ಲಿ – ಪೈಲರ್ ತಿರುಪತಿ ಮಾರ್ಗವಾಗಿ, ಬೆಂಗಳೂರಿನಿಂದ ಕಡಪ – ಮದನಪಲ್ಲಿ – ತಿರುಪತಿಗೆ ಕೆಎಸ್ಆರ್ಟಿಸಿ ಬಸ್ ಸಂಖ್ಯೆಗಳನ್ನು ಹೆಚ್ಚಿಸಬೇಕು. ಇದರಿಂದ ಈ ಮಾರ್ಗವಾಗಿ ಪ್ರಯಾಣಿಸುವ ಸಾರ್ವಜನಿಕರಿಗೂ ಅನುಕೂಲವಾಗಲಿದ್ದು, ಖಾಸಗಿ ಬಸ್ಗಳಲ್ಲಿ ನಡೆಯುತ್ತಿರುವ ಸುಲಿಗೆಯನ್ನು ತಪ್ಪಿಸಬಹುದಾಗಿದೆ.
ವಾರದ ಕೊನೆ ಮತ್ತು ಹಬ್ಬ ಹರಿದಿನಗಳೂ ಸೇರಿದಂತೆ ಸಾಮಾನ್ಯ ದಿನಗಳಲ್ಲೂ ಬಸ್ ಸೇವೆ ಒದಗಿಸುವ ಮೂಲಕ ಅಂತಾರಾಜ್ಯ ಕೆಎಸ್ಆರ್ಟಿಸಿ ನಿಯಮಿತ ಸೇವಾ ಸಮಸ್ಯೆಗಳನ್ನು ಪರಿಹರಿಸಿ. ಕರ್ನಾಟಕ ಮತ್ತು ಆಂಧ್ರ ಗಡಿಗಳಿಂದ ಅಂತಾರಾಜ್ಯ ಪರಸ್ಪರ ಒಪ್ಪಂದದ ಕೆಎಸ್ಆರ್ಟಿಸಿ ಮತ್ತು ಎಪಿಎಸ್ಆರ್ಟಿಸಿ ಬಸ್ಗಳ ವ್ಯವಸ್ಥೆ ಮಾಡಿಕೊಡಿ ಎಂದು ವಿನಂತಿಸಿದ್ದಾರೆ ಶ್ರೀಸಾಯಿ.
Related

You Might Also Like
ಬೆಂ.ಗ್ರಾಮಾಂತರ: ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಆಗಮ- ವಾಹನ, ಸಾರ್ವಜನಿಕರ ಪ್ರವೇಶ ನಿಷೇಧ: ಡಿಸಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ನಾಳೆ (ಜೂ.20) ಬೆಂಗಳೂರು ಉತ್ತರ ತಾಲೂಕಿನ ನಗರೂರು ಗ್ರಾಮದಲ್ಲಿನ ಬಿ.ಜಿ.ಎಸ್ ಆಸ್ಪತ್ರೆಯ ನೂತನ ಘಟಕದ ಕಟ್ಟಡ...
ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ
ಬೆಂಗಳೂರು: ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ಸಂಸ್ಥೆಯು ಆರು ತಿಂಗಳ ಅವಧಿಯ ರೆಗ್ಯುಲರ್ ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿ ಪ್ರವೇಶಕ್ಕೆ ಅರ್ಜಿ...
ಮಾವಿನ ಬೆಂಬೆಲ ಬೆಲೆ ನಿಗದಿಗೆ ಆಹಾರ ಸಚಿವ ಮುನಿಯಪ್ಪ ಒತ್ತಾಯ
ಬೆಂಗಳೂರು: ಮಾವಿಗೆ ಬೆಂಬಲ ಬೆಲೆ ಷೋಷಣೆ ಮಾಡಲು ಸರ್ಕಾರವನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ಒತ್ತಾಯಿಸಿದ್ದಾರೆ. ಇಂದು ನಡೆದ ಸಚಿವ ಸಂಪುಟದ...
ವಿವೇಚನಾತ್ಮಕವಾಗಿ ನೈಸರ್ಗಿಕ ಸಂಪತ್ ಬಳಸಿದರಷ್ಟೇ ಉಳಿಗಾಲ: ಸಚಿವ ಈಶ್ವರ ಖಂಡ್ರೆ
ಪಳೆಯುಳಿಕೆ ಇಂಧನಕ್ಕೆ ಪರ್ಯಾಯವಾಗಿ ನವೀಕೃತ ಮತ್ತು ಜೈವಿಕ ಇಂಧನ ಬಳಕೆಗೆ ಕರೆ ಬೆಂಗಳೂರು: ಪರಿಸರ ಸ್ನೇಹಿಯಾದ ನವೀಕರಿಸಬಹುದಾದ ಮತ್ತು ಜೈವಿಕ ಇಂಧನ ಬಳಕೆಗೆ ಹೆಚ್ಚಿನ ಒತ್ತು ನೀಡುವ...
KKRTC ಕಂಡಕ್ಟರ್ ಮೇಲೆ ಹಲ್ಲೆ: ಮೂವರಿಗೆ ₹75 ಸಾವಿರ ದಂಡ- ಕಟ್ಟಲಾಗದಿದ್ದರೆ 6 ತಿಂಗಳು ಜೈಲು ಶಿಕ್ಷೆ- ಕೋರ್ಟ್ ಮಹತ್ವದ ತೀರ್ಪು
ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ನಿರ್ವಾಹಕರ ಮೇಲೆ ಹಲ್ಲೆ ಮಾಡಿದ ಮೂವರಿಗೆ ಅಫಜಲಪುರ ಪ್ರಧಾನ ದಿವಾಣಿ ನ್ಯಾಯಾಲಯ ಮತ್ತು ಜೆಎಂಎಫ್ಸಿ ನ್ಯಾಯಾಲಯ ತಲಾ...
KKRTC ವಿಜಯಪುರ: ತಂದೆ ನಿಧನರಾದ ನಾಲ್ಕೇ ದಿನಕ್ಕೆ ಡ್ಯೂಟಿಗೆ ಬರಬೇಕಿತ್ತು ಅಂತ ಚಾಲಕನಿಗೆ ಗೈರುಹಾಜರಿ ಮಾಡಿದ ಡಿಸಿ ನಾರಾಯಣಪ್ಪ ಕುರುಬರ
ಒಟ್ಟು 58 ದಿನ ರಜೆಯಲ್ಲಿದ್ದ ಚಾಲಕ ಕಂ ನಿರ್ವಾಹಕನಿಗೆ ಹಿಂದೆ ಮುಂದೆ ಗೈರು ಹಾಜರಿ ತೋರಿಸಿ 7ದಿನ ರಜೆ ಮಂಜೂರು ಮಾಡಿದ ಡಿಸಿಯ ನಡೆ ಅನುಮಾನಕ್ಕೆ ಎಡೆ...
BMTC: ಯುವತಿ ಮೇಲೆ ಬಸ್ ನುಗ್ಗಿಸಲು ಯತ್ನ ಪ್ರಕರಣದ FIRಗೆ ಹೈ ಕೋರ್ಟ್ ತಡೆ
ಬಿಎಂಟಿಸಿ ಚಾಲಕನ ಪರ ವಕ್ಕಾಲತ್ತು ವಹಿಸಿದ್ದ ಸುಪ್ರೀಂ ಕೋರ್ಟ್ ಹಾಗೂ ಹೈ ಕೋರ್ಟ್ ವಕೀಲ ಎಚ್.ಬಿ.ಶಿವರಾಜು ಬಹುತೇಕ ಸಾರಿಗೆ ನೌಕರರ ಎಲ್ಲ ಪ್ರಕರಣಗಳಲ್ಲೂ ಜಾಣ್ಮೆಯ ವಾದ ಮಂಡಿಸಿ...
KSRTC ನೂತನ 2000 ಚಾಲಕ ಕಂ ನಿರ್ವಾಹಕರಿಗೆ ನಿಯೋಜನಾ ಆದೇಶ ಪತ್ರ ವಿತರಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಎಂಟು ವರ್ಷಗಳ ಬಳಿಕ ಬೃಹತ್ ನೇಮಕಾತಿ ನಡೆದಿದ್ದು, 2000 ಚಾಲಕ ಕಂ ನಿರ್ವಾಹಕ ಅಭ್ಯರ್ಥಿಗಳ ನೇಮಕಾತಿಯು ಪಾರದರ್ಶಕವಾಗಿ ಮಾಡಲಾಗಿದೆ....
ಜೂ.21ರಂದು 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಡಿಸಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಜಿಲ್ಲಾ ಮಟ್ಟದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ 21 ರಂದು ದೇವನಹಳ್ಳಿ ಟೌನ್ ನಲ್ಲಿರುವ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ....