CRIMENEWSದೇಶ-ವಿದೇಶ

ಗೆಳೆಯ ನೀಡುತ್ತಿದ್ದ ಮಾನಸಿಕ ಕಿರುಕುಳಕ್ಕೆ ಬೇಸತ್ತು ದಂತ ವೈದ್ಯಕೀಯ ಸ್ನಾತಕೋತ್ತರ ವಿದ್ಯಾರ್ಥಿನಿ ಆತ್ಮಹತ್ಯೆ

ವಿಜಯಪಥ ಸಮಗ್ರ ಸುದ್ದಿ

ಮುಂಬೈ: ದಂತ ವೈದ್ಯಕೀಯ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿಯೊಬ್ಬರುಯ ಗೆಳೆಯನ ಮಾನಸಿಕ ಕಿರುಕುಳದಿಂದ ಬೇಸತ್ತು ಮುಂಬೈನ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮುಂಬೈ ನಗರದ ನಿವಾಸಿ ಸ್ತುತಿ ಸೋನ್ವಾನೆ (24) ಆತ್ಮಹತ್ಯೆ ಮಾಡಿಕೊಂಡ ಯುವತಿ. ಎಂಡಿಎಸ್‌ ವ್ಯಾಸಂಗ ಮಾಡುತ್ತಿದ್ದ ಸ್ತುತಿ, ಹುಡುಗನೊಬ್ಬನನ್ನು ಪ್ರೀತಿಸುತ್ತಿದ್ದಳು. ಈಕೆ ಮೋಸ ಮಾಡಿದ್ದಾಳೆಂದು ಗೆಳೆಯ ಅವಮಾನಿಸುತ್ತಿದ್ದ. ಜತೆಗೆ ಮನಸ್ಸಿಗೆ ನೋವುಂಟು ಮಾಡುವ ಹೇಳಿಕೆ ನೀಡುತ್ತಿದ್ದ.

ಹೀಗಾಗಿ ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ. ಈ ಈಕೆ ಬರೆದಿರುವ ಡೆತ್‌ನೋಟ್‌ನಲ್ಲಿ ದೆಹಲಿಯ ಹೃದಯವಿದ್ರಾವಕ ಶ್ರದ್ಧಾ ವಾಕರ್‌ ಹತ್ಯೆ ಪ್ರಕರಣವನ್ನು ಉಲ್ಲೇಖಿಸಿದ್ದಾಳೆ.

ಮುಂಬೈನ ಆಂಟೋಪ್ ಹಿಲ್ ಬಳಿ ಸ್ತುತಿ ತನ್ನ ಪೋಷಕರು ಮತ್ತು ಸಹೋದರಿಯೊಂದಿಗೆ ವಾಸಿಸುತ್ತಿದ್ದಳು. ನಿನ್ನೆ ಬೆಳಗ್ಗೆ 11 ಗಂಟೆಯವರೆಗೆ ಆಕೆ ತನ್ನ ಕೋಣೆಯಿಂದ ಹೊರಬರದಿದ್ದಾಗ, ಪೋಷಕರು ಕರೆ ಮಾಡಿದ್ದಾರೆ.

ಆದರೆ, ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ಕೋಣೆಯ ಬಾಗಿಲು ಒಡೆದು ನೋಡಿದಾಗ, ಅವಳು ಸೀಲಿಂಗ್‌ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ.

ಈ ಘಟನೆ ಸಂಬಂಧ ಪೊಲೀಸರು ಅಸಹಜ ಸಾವಿನ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಆಕೆಯ ಗೆಳೆಯನ ಪಾತ್ರದ ಬಗ್ಗೆ ತನಿಖೆ ನಡೆಸುತ್ತಿರುವ ಪೊಲೀಸರು ಆಕೆಯ ಕುಟುಂಬ ಸದಸ್ಯರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ.

Deva
the authorDeva

Leave a Reply

error: Content is protected !!
Latest news
ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ: ಶೇ.84ರಷ್ಟು ವಿದ್ಯಾರ್ಥಿಗಳು ಪಾಸ್‌ ಮೊದಲ ದಿನದ ಸಾರಿಗೆ ನೌಕರರ ಪಾದಯಾತ್ರೆ ಯಶಸ್ವಿ, ನಾಳೆ ಬೆಳಗ್ಗೆ 6 ಗಂಟೆಯಿಂದ ಮುಂದುವರಿಕೆ KSRTC: ಇಂದು ಸಾರಿಗೆ ಸಚಿವರ ಭೇಟಿಯಾದ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳು KSRTC: ಸಾರಿಗೆ ನೌಕರರ ಪಾದಯಾತ್ರೆ ಯಶಸ್ವಿಗಾಗಿ ಬೇರೆ ಸಂಘಟನೆಗಳೂ ಸಾಥ್‌! ಆಟೋ ಗ್ಯಾಸ್ ಕೊರತೆ - ವದಂತಿಗಳಿಗೆ ಕಿವಿಗೊಡಬೇಡಿ - ಸಾರ್ವಜನಿಕರಿಗೆ ಕರೆ