ಹಾವೇರಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರ ಬೆಂಗಾವಲು ವಾಹನ ಗುದ್ದಿದ್ದು, ಎಸ್ಕಾರ್ಟ್ ವಾಹನದ ಮುಂಭಾಗವು ನಜ್ಜುಗುಜ್ಜಾದ ಘಟನೆ ಹಾವೇರಿಯಲ್ಲಿ ನಡೆದಿದೆ.

ನಗರದ ವಾಲ್ಮೀಕಿ ವೃತ್ತದಿಂದ ಹೊಸಮನಿ ಸಿದ್ದಪ್ಪ ವೃತ್ತದ ಕಡೆಗೆ ಹೊರಟ್ಡಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಎಸ್ಕಾರ್ಟ್ ವಾಹನದ ಚಾಲಕ ಚನ್ನಬಸಪ್ಪ ಅರ್ಚಕ್ ಅವರೇ ಇದಕ್ಕೆ ಕಾರಣ ಎಂದು ಅವರ ವಿರುದ್ಧ ದೂರು ದಾಖಲಾಗಿದೆ. ಅತೀವೇಗದ ಚಾಲನೆಯಿಂದ ಬಸ್ನ ಹಿಂಬದಿಗೆ ಗುದ್ದಿದ್ದಾನೆ ಎನ್ನಲಾಗಿದೆ.
ಈ ಬಸ್ಗೆ ಗುದಿದ ತೀವ್ರತೆಗೆ ಎಸ್ಕಾರ್ಟ್ ವಾಹನದ ಮುಂದಿನ ಭಾಗ ಮತ್ತು ಬಸ್ನ ಹಿಂದಿನ ಭಾಗ ಸಂಪೂರ್ಣ ಹಾನಿಯಾಗಿದೆ.
ಬಸ್ ಹಾವೇರಿಯಿಂದ ಗದಗ ಕಡೆಗೆ ಹೋಗುತ್ತಿದ್ದಾಗ ಹಿಂದಿನಿಂದ ವೇಗವಾಗಿ ಎಸ್ಕಾರ್ಟ್ ವಾಹನ ಡಿಕ್ಕಿ ಹೊಡೆದಿದೆ.
ಈ ಸಂಬಂಧ ಹಾವೇರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ತೆಗೆದುಕೊಂಡಿದ್ದಾರೆ.
Related


Megha








