NEWSದೇಶ-ವಿದೇಶಸಿನಿಪಥ

ರಾಜಸ್ಥಾನಲ್ಲಿ ‘ಡೆವಿಲ್’ ಸಿನಿಮಾ ಚಿತ್ರೀಕರಣ ಯಶಸ್ವಿ: ಬೆಂಗಳೂರಿನತ್ತ ದರ್ಶನ್ & ಟೀಮ್

ವಿಜಯಪಥ ಸಮಗ್ರ ಸುದ್ದಿ

ರಾಜಸ್ಥಾನ: ನಟ ದರ್ಶನ್ ಈಗ ‘ಡೆವಿಲ್’ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದು, ಈ ನಡುವೆ ಈ ಚಿತ್ರದ ಬಗ್ಗೆ ನವೀಕರಣವೊಂದು ಹೊರಬಿದ್ದಿದೆ. ರಾಜಸ್ಥಾನದಲ್ಲಿ ದರ್ಶನ್ ‘ಡೆವಿಲ್‌’ ಶೂಟಿಂಗ್‌ ಮಾಡಿ ಯಶಸ್ವಿಯಾಗಿ ಮುಗಿಸಿಕೊಂಡು ವಾಪಸ್‌ಆಗುತ್ತಿದ್ದಾರೆ.

ಇತ್ತೀಚೆಗೆ ಮೈಸೂರಿನಲ್ಲಿ ಈ ಸಿನಿಮಾ ಚಿತ್ರೀಕರಣ ಮಾಡಲಾಗಿತ್ತು. ಈ ಬೆನ್ನಲ್ಲೇ ರಾಜಸ್ಥಾನಕ್ಕೆ ‘ಡೆವಿಲ್’ ಟೀಮ್ ತೆರಳಿತ್ತು. ಒಂದು ವಾರ ರಾಜಸ್ಥಾನದಲ್ಲಿ ಚಿತ್ರೀಕರಣ ಮಾಡಿ ಮುಗಿಸಿರುವ ದರ್ಶನ್ & ಟೀಮ್ ಏ.2ರಂದು ಬೆಂಗಳೂರಿಗೆ ವಾಪಸ್ಸಾಗುತ್ತಿದೆ.

ಇನ್ನು ಮುಂದಿನ ಹಂತದ ಚಿತ್ರೀಕರಣವು ಹೈದರಾಬಾದ್‌ನಲ್ಲಿ ನಡೆಯಲಿದ್ದು ಬೆಂಗಳೂರಿಗೆ ಬಂದ ಬಳಿಕ ಮತ್ತೆ  ‘ಡೆವಿಲ್’ ಟೀಮ್  ಹೈದರಾಬಾದ್‌ಗೆ ತೆರಳಲಿದೆ. ಅಂದಹಾಗೆ, ಈ ವರ್ಷದ ಅಂತ್ಯದಲ್ಲಿ ಡೆವಿಲ್ ಸಿನಿಮಾ ರಿಲೀಸ್ ಮಾಡಲು ಚಿತ್ರತಂಡ ತೀರ್ಮಾನಿಸಿದೆ.

ಈ ಚಿತ್ರದಲ್ಲಿ ದರ್ಶನ್ ಜತೆ ಕರಾವಳಿ ನಟಿ ರಚನಾ ರೈ, ಶರ್ಮಿಳಾ ಮಾಂಡ್ರೆ, ಬಿಗ್ ಬಾಸ್ ವಿನಯ್ ಗೌಡ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ. ಈ ಹಿಂದೆ ತಾರಕ್ ನಿರ್ದೇಶನ ಮಾಡಿದ್ದ ಮಿಲನಾ ಪ್ರಕಾಶ್ ಅವರೇ ‘ಡೆವಿಲ್’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

Deva
the authorDeva

Leave a Reply

error: Content is protected !!
Latest news
KSRTC ಮೈಸೂರು ಡಿಸಿಗೆ- RC, FC ಚಾಲಕ ನಿರ್ವಾಹಕರ ಜವಾಬ್ದಾರಿನಾ?: ಹೇ ತಲೆಕೆಟ್ಟ ಡಿಸಿ ನೀನು ನಿಜವಾಗಲು ಜವಾಬ್ದಾರಿಯಿಂ... ಭಾರೀ ಮಳೆಗೆ ನೆಲಕಚ್ಚಿದ ಪರಂಗಿ ಅಡಿಕೆ ಗಿಡಗಳು -ಅಪಾರ ಪ್ರಮಾಣದ ಬೆಳೆ ಹಾನಿ ರೈತರ ಗೋಳಾಟ ಪ್ರೀತಿ ನಿರಾಕರಿಸಿದ್ದಕ್ಕೆ ಹೈಟೆನ್ಷನ್ ಕಂಬ ಹತ್ತಿ ಕುಳಿತಿರುವ ಪಾಗಲ್‌ ನಾಳೆಯಿಂದ ಹಮ್ಮಿಕೊಂಡಿದ್ದ ಅರ್ನಿದಿಷ್ಟವಾಧಿ ಸಾರಿಗೆ ನೌಕರರ ಮುಷ್ಕರ ವಾಪಸ್‌: ಜಂಟಿ ಕ್ರಿಯಾ ಸಮಿತಿ ಜಂಟಿ ಕ್ರಿಯಾ ಸಮಿತಿಗೆ ಶಾಕ್‌: KSRTC ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಹೈ ಕೋರ್ಟ್‌ ತಡೆ ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿದ್ದ ಮುಷ್ಕರದಿಂದ ಹಿಂದೆ ಸರಿದ ಮತ್ತೊಂದು KSRTC ನೌಕರರ ಸಂಘ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದ ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಸಾವು ಇಂದು ರಾತ್ರಿ 8.30ರಿಂದ 9.30ರವರೆಗೆ KSRTC ಎಂಡಿ ಅಕ್ರಮ್‌ ಪಾಷರ ಭೇಟಿ ಮಾಡಿ ಗೌಪ್ಯ ಸಭೆ ನಡೆಸಿದ ಜಂಟಿ ಮುಖಂಡರು! ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿದ್ದ ಮುಷ್ಕರದಿಂದ ಹಿಂದೆ ಸರಿದ KSRTC ಪ.ಜಾ.-ಪ.ಪಂ ನೌಕರರ ಸಂಘ ಗುಡುಗು ಸಿಡಿಲಿನ ಆರ್ಭಟ: ಮನೆ ಮುಂದೆ ನಿಂತಿದ್ದ ಶಿಕ್ಷಕ ಹೃದಯಾಘಾತಕ್ಕೆ ಬಲಿ