NEWSಕೃಷಿನಮ್ಮರಾಜ್ಯ

ಖಾಲಿ ಬಿಂದಿಗೆ ಹೊತ್ತು ಕಾವೇರಿ ನೀರು ಉಳಿಸಿ ಧರಣಿ: ಫ್ರೀಡಂ ಪಾರ್ಕಲ್ಲಿ ಕಜಸಂಸ ಹೋರಾಟ ನಾಲ್ಕನೇ ದಿನವೂ ಮುಂದುವರಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ಬೆದರಿಕೆಗೆ ಅಂಜಿ ರಾಜ್ಯ ಸರ್ಕಾರ ತಮಿಳುನಾಡಿಗೆ ಹರಿಸುವ ನೀರು ನಿಲ್ಲಿಸದಿದ್ದರೆ ರಾಜ್ಯದ ಉದ್ದಗಲಕ್ಕೂ ಮಂತ್ರಿಗಳಿಗೆ ಘೇರಾವ್ ಮಾಡುವ ಚಳವಳಿಗೆ ಕರೆ ನೀಡಬೇಕಾಗುತ್ತದೆ. ಅಲ್ಲದೆ ದಸರಾ ಆಚರಣೆಗೆ ಅಡ್ಡಿ ಮಾಡಬೇಕಾಗುತ್ತದೆ ಎಂದು ಸರ್ಕಾರಕ್ಕೆ ರೈತ ಮುಖಂಡ ಕುರುಬೂರು ಶಾಂತಕುಮಾರ್ ಎಚ್ಚರಿಸಿದರು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಫ್ರೀಡಂ ಪಾರ್ಕಲ್ಲಿ ಕಾವೇರಿ ನೀರು ಉಳಿಸಿ ಎಂದು ಹಮ್ಮಿಕೊಂಡಿರುವ ಧರಣಿ ಗುರುವಾರವಾದ ಇಂದಿಗೆ ನಾಲ್ಕನೇ ದಿನ ಪೂರೈಸಿದ್ದು, ಐದನೇ ದಿನಕ್ಕೆ ಕಾಲಿಟ್ಟಿದೆ. ಈ ವೇಳೆ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿ, ನೀರಾವರಿ ಮಂತ್ರಿಗಳು ಇಂಡಿಯಾ ಒಕ್ಕೂಟ ಬೇಕೋ ಅಥವಾ ರಾಜ್ಯದ ಜನ ಬೇಕೋ ಎಂಬುದನ್ನು ನಿರ್ಧರಿಸಿ, ಪದೇಪದೆ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಮಾತಿನ ಒತ್ತಡಕ್ಕೆ ಅಂಜಬೇಡಿ ಎಂದು ಎಚ್ಚರಿಕೆ ಸಂದೇಶ ರವಾನಿಸಿದರು.

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಅವೈಜ್ಞಾನಿಕ ಆದೇಶದಿಂದ ರಾಜ್ಯದ ಜನರಿಗೆ ಆಗುತ್ತಿರುವ ಸಂಕಷ್ಟದ ಬಗ್ಗೆ ವಿವರಿಸಲು ಕೇಂದ್ರ ಸರ್ಕಾರದ ಗಮನ ಸಳೆಯಲು ಸದ್ಯದಲ್ಲಿಯೇ ಸಮಿತಿಯ ಮುಖಂಡರ ನಿಯೋಗ ದೆಹಲಿಗೆ ತೆರಳಲಿದೆ ಏಂದ ಅವರು, ಕಾವೇರಿ ಅಚ್ಚು ಕಟ್ಟು ಭಾಗದ ಎಲ್ಲ ಲೋಕಸಭಾ ಸದಸ್ಯರಿಗೆ ಪತ್ರ ಬರೆಯಲಾಗಿದೆ. ನಿಯೋಗದ ಜತೆ ಜಲಶಕ್ತಿ ಸಚಿವರ ಭೇಟಿಗೆ ಅವಕಾಶ ಕೋರಬೇಕೆಂದು ಲೋಕಸಭಾ ಸದಸ್ಯರಿಗೆ ವಿನಂತಿಸಲಾಗಿದೆ ಎಂದು ತಿಳಿಸಿದರು.

ಇನ್ನು ಇಂದು ಖಾಲಿ ಬಿಂದಿಗೆಗಳನ್ನು ತಲೆ ಮೇಲೆ ಹೊತ್ತು ಕಾವೇರಿ ನಮ್ಮದು ಕಾವೇರಿ ಉಳಿಸಿ ಎಂದು ಘೋಷಣೆ ಕೂಗುತ್ತಾ ಪ್ರತಿಭಟನಾಕಾರರು ನಾಲ್ಕನೇ ದಿನದ ಧರಣಿ ಮುಂದುವರಿಸಿದರು. ಧರಣಿಯಲ್ಲಿ ಕನ್ನಡ ಚಳವಳಿಯ ಗುರುದೇವ ನಾರಾಯಣ್, ಮುಖಂಡ ನಾಡ ಸೇನಾನಿ ಕೆಂಪೇಗೌಡ ಪ್ರತಿಷ್ಠಾನ ಅಧ್ಯಕ್ಷ ಮೋಹನ್, ದಲಿತ ಸಂಘಟನೆಗಳ ಒಕ್ಕೂಟದ ವೆಂಕಟಸ್ವಾಮಿ, ಅಮ್ಮಾ ಆದ್ಮಿ ಪಕ್ಷದ ವಿಶ್ವನಾಥ್ ಟಿ.ಸಾಹಿತಿ ಶ್ರೀನಿವಾಸ್, ಸೂರ್ಯನಾರಾಯಣ್ ರೈತ ಮುಖಂಡ ಗಜೇಂದ್ರ, ಕಮಲಮ್ಮ ಸೇರಿದಂತೆ ನೂರಾರು ಮಂದಿ ಭಾಗವಹಿಸಿದ್ದರು.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ