24 ತಿಂಗಳೊಳಗೆ ಸಿವಿಲ್ ಪ್ರಕರಣಗಳು ಇತ್ಯರ್ಥ: ಹೊಸ ಕಾಯ್ದೆ ತಕ್ಷಣದಿಂದಲೇ ಜಾರಿ- ಕಾನೂನು ಸಚಿವ ಪಾಟೀಲ್

ಬೆಂಗಳೂರು: ಇನ್ನು ಮುಂದೆ ಸಿವಿಲ್ ಪ್ರಕರಣಗಳು 24 ತಿಂಗಳೊಳಗೆ ಅಂದರೆ 2 ವರ್ಷದೊಳಗೆ ಅಂತಿಮ ತೀರ್ಪು ಬರಲಿದೆ. ಶಾಸಕಾಂಗ ಮಾಡಿದ ಈ ತಿದ್ದುಪಡಿಗೆ ರಾಷ್ಟ್ರಪತಿಗಳ ಅಂಕಿತ ದೊರಕಿದೆ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ.
ನ್ಯಾಯದಾನ ಪದ್ಧತಿಯಲ್ಲಿ ಸುಧಾರಣೆಗಾಗಿ ಕೇಂದ್ರದ ಕಾನೂನಾದ ಸಿವಿಲ್ ಪ್ರಕ್ರಿಯಾ ಸಂಹಿತೆ(ಸಿಪಿಸಿ)ಗೆ ಕರ್ನಾಟಕ ತಿದ್ದುಪಡಿಗಳನ್ನು ಮಾಡಿತ್ತು. ಈ ತಿದ್ದುಪಡಿಗಳು ರಾಷ್ಟ್ರದ ಕಾನೂನಿನಲ್ಲಿ ರಾಜ್ಯವ್ಯಾಪಿ ಜಾರಿಯಲ್ಲಿವೆ ಎಂದರು.
ಇನ್ನು ಸಿವಿಲ್ ನ್ಯಾಯಾಲಯಗಳಲ್ಲಿ ದಾಖಲಾಗುವ ಪ್ರಕರಣಗಳಿಗೆ ದಶಕ ವರ್ಷಗಳು ಕಾಯುವ/ ವಿಳಂಬಕ್ಕೆ ಮುಕ್ತಿ ನೀಡಲು ಕರ್ನಾಟಕ ಯಶಸ್ವಿಯಾಗಿ ಈ ದಿಟ್ಟ ಹೆಜ್ಜೆಯನ್ನಿಟ್ಟಿದೆ. ಕರ್ನಾಟಕ ಸರ್ಕಾರ ಕ್ರಾಂತಿಕಾರಕ ಈ ತಿದ್ದುಪಡಿಯನ್ನು ಸಿವಿಲ್ ಪ್ರಕ್ರಿಯಾ ಸಂಹಿತೆಗೆ ಮಾಡಿದೆ. ಈ ತಿದ್ದುಪಡಿಗೆ ರಾಷ್ಟ್ರಪತಿಗಳ ಅಂಕಿತ ದೊರಕಿದ್ದು, ಈ ಐತಿಹಾಸಿಕ ತಿದ್ದುಪಡಿ ರಾಷ್ಟ್ರದಲ್ಲಿಯೇ ಮೊದಲು ಎಂದ ಅವರು, ತಕ್ಷಣದಿಂದ ಈ ತಿದ್ದುಪಡಿ ಜಾರಿಗೆ ಬರಲಿದೆ ಎಂದು ವಿವರಿಸಿದರು.
ನಮ್ಮ ಶಾಸಕಾಂಗ ಮಾಡಿದ ಈ ತಿದ್ದುಪಡಿಯ ಮುಖಾಂತರ ಪ್ರತಿಯೊಂದು ಸಿವಿಲ್ ಪ್ರಕರಣಗಳು ರಾಜಿ ಸಂಧಾನದ ಮೂಲಕ ಬಗೆಹರಿಸಲು ಕಡ್ಡಾಯವಾದ ಪ್ರಯತ್ನ ಮಾಡಬೇಕು. ಎರಡು ತಿಂಗಳೊಳಗಾಗಿ ರಾಜಿ ಸಂಧಾನದ ಪ್ರಯತ್ನ ತಾರ್ಕಿಕ ಅಂತ್ಯ ಕಾಣಬೇಕು. ಸಾಧ್ಯವಾಗದಿದ್ದಾಗ, ನ್ಯಾಯಾಲಯ ಪ್ರಕರಣವನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಬೇಕು ಎಂಬ ಶಾಸನಾತ್ಮಕ ಅವಕಾಶ ದೊರೆತಿರುವುದು ಕಕ್ಷಿದಾರನ ಪಾಲಿಗೆ ತೆರೆದ ಭಾಗ್ಯದ ಬಾಗಿಲು ಎಂದು ಸಚಿವರು ಅಭಿಪ್ರಾಯಪಟ್ಟರು.
ಇನ್ನು ನ್ಯಾಯಾಲಯಗಳ ಕಲಾಪಗಳಲ್ಲಿ ವಿಳಂಬ ನಿರಾಕರಿಸುವ, ಚರಿತ್ರಾರ್ಹ ಸುಧಾರಣೆಗೆ ಶಾಸನಾತ್ಮಕ ಅಂಕುಶ ಹೊಂದಿರುವ ಈ ತಿದ್ದುಪಡಿ ಪ್ರಕರಣ ದಾಖಲಾದ ದಿನಾಂಕದಿಂದ 24 ತಿಂಗಳಲ್ಲಿ ಯಾವುದೇ ಸಿವಿಲ್ ಪ್ರಕರಣ ಇತ್ಯರ್ಥವಾಗಿ, ತಾರ್ಕಿಕ ಅಂತ್ಯ ಕಾಣುವುದಕ್ಕೆ ನಿಶ್ಚಿತಗೊಳಿಸುವ ಶಾಸನ ಜಾರಿಗೆ ಬಂದಿದೆ. ಈ ಪೂರ್ವಗಾಮಿ ಪ್ರಗತಿಯ ಜತೆ-ಜತೆಗೆ ಈ ಕಾನೂನು ನ್ಯಾಯಾಲಯಗಳಲ್ಲಿ ಆಗುವ ವಿಳಂಬಕ್ಕೆ ಇತಿಶ್ರೀ ಹಾಡಲಿದೆ. ಇನ್ನು ಮುಂದೆ ನ್ಯಾಯಾಲಯಗಳಲ್ಲಿ, ವಿಳಂಬವಿಲ್ಲದೇ ಪ್ರಕರಣಗಳು ಇತ್ಯರ್ಥವಾಗಲು ಶಾಸನ ಮಾಡಲಾಗಿದೆ ಎಂದರು.
ನ್ಯಾಯಾಲಯದಲ್ಲಿ ಪ್ರಕರಣ ದಾಖಲಾದ ದಿನದಂದು ಅಥವಾ ಮೊದಲ ವಿಚಾರಣೆಯ ದಿನದಂದು ಅಂತಿಮ ತೀರ್ಪು / ಆದೇಶದ ದಿನಾಂಕ ನಿರ್ಣಯವಾಗುವ ಅತ್ಯಂತ ಪರಿಣಾಮಕಾರಿ ಮಹತ್ವದ ಶ್ರೇಷ್ಠವಾದ ನ್ಯಾಯಾಂಗದ ಕಾರ್ಯ ನಿರ್ವಹಣೆಗೆ ಈ ತಿದ್ದುಪಡಿ ಇಂಬು ನೀಡಲಿದೆ ಎಂದು ತಿಳಿಸಿದರು.

ಕಳೆದ ಬೆಳಗಾವಿ ಅಧಿವೇಶನದಲ್ಲಿ 17.12.2024 ರಂದು ವಿಧಾನ ಸಭೆಯಲ್ಲಿ 18.12.2024 ವಿಧಾನ ಪರಿಷತ್ತಿನಲ್ಲಿ ಈ ಕಾನೂನು ಅಂಗೀಕರಿಸಲಾಗಿತ್ತು. ರಾಜ್ಯಪಾಲರು ಈ ವಿಧೇಯಕವನ್ನು ಸಂವಿಧಾನದ ಅನುಚ್ಛೇದ 200 ಮತ್ತು 254 ರಡಿಯಲ್ಲಿ ರಾಷ್ಟ್ರಪತಿಯವರ ಅಂಕಿತಕ್ಕೆ ಕಾಯ್ದಿರಿಸಿದ್ದರು. ಈ ಕಾನೂನಿಗೆ ರಾಷ್ಟ್ರಪತಿಯವರು 19.05.2025 ರಂದು ತಮ್ಮ ಅಂಕಿತ ಹಾಕಿದ್ದಾರೆ.
ಲಿಖಿತ ಹೇಳಿಕೆ, ಸಾಕ್ಷ್ಯ ಸಂಗ್ರಹ ಎಲ್ಲದಕ್ಕೂ ಕಾಲಮಿತಿ ನಿಗದಿಪಡಿಸಲು ಶಾಸನ ಅವಕಾಶ ಕಲ್ಪಿಸಿದೆ. ಯಾವುದೇ ಹಂತದಲ್ಲಿ ಒಂದು ತಿಂಗಳೊಳಗಾಗಿ ಕೇವಲ 3 ಮುಂದೂಡಿಕೆ ಅಥವಾ 3 ದಿನಾಂಕಗಳ ಅವಕಾಶ ಮಾತ್ರ ಕಲ್ಪಿಸಲಾಗುವುದು. ಯಾವುದೇ ಹಂತದಲ್ಲಿ ಅರ್ಜಿದಾರ-ಪ್ರತಿವಾದಿ ಈ ಅವಕಾಶದಲ್ಲಿ ಸಲ್ಲಿಸದಿದ್ದರೆ, ಅಂಥವರ ಹೇಳಿಕೆಗಳನ್ನು ಶೂನ್ಯವೆಂದು ಪರಿಗಣಿಸಲು ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.
ಈ ಕಾನೂನಿನಲ್ಲಿ ಪ್ರಕರಣ ನಿರ್ವಹಣೆಯನ್ನು ಪುನರ್ ವ್ಯಾಖ್ಯಾನ ಮಾಡಲಾಗಿದೆ. ಸಾಕ್ಷ್ಯಗಳ ವಿಚಾರಣೆಗಳನ್ನು ನಿಗದಿತ ದಿನಾಂಕದಂದು ಕೈಗೊಳ್ಳಲು ಮತ್ತು ದೈನಂದಿನ ಅಥವಾ ಸಾಪ್ತಾಹಿಕ ಆಧಾರದಲ್ಲಿ ಈ ತಿದ್ದುಪಡಿಗೆ ಅವಕಾಶ ಕಲ್ಪಿಸಿರುವುದರಿಂದ ಯಾವುದೇ ಪ್ರಕರಣ ಅನಿರ್ದಿಷ್ಟಕಾಲ ವಿಳಂಬಕ್ಕೆ ಕಾರಣವಾಗುವುದಿಲ್ಲ. ಆಗದಂತೆ ಸುನಿಶ್ಚಿತಗೊಳಿಸುವ ಜನಪರ ಕಾನೂನು ಅಸ್ತಿತ್ವಕ್ಕೆ ತರಲಾಗಿದೆ.
ನ್ಯಾಯದಾನ ವ್ಯವಸ್ಥೆಯನ್ನು ಸಂಪೂರ್ಣವಾಗಿ, ಸುಧಾರಣೆಗೆ ಈ ಕಾನೂನು ಅವಕಾಶ ಕಲ್ಪಿಸಿದೆ. ರಾಜ್ಯದ ಕಕ್ಷಿದಾರರ ನ್ಯಾಯಾಲಯಕ್ಕೆ ವೃಥಾ ಅಲೆದಾಟ ತಪ್ಪಿಸಿ, ಆರ್ಥಿಕವಾಗಿ ಕೈಗೆಟಕುವ ರೀತಿಯಲ್ಲಿ ತ್ವರಿತ ನ್ಯಾಯದಾನ ವ್ಯವಸ್ಥೆಗೆ ಒಂದು ನಿರ್ವಹಣಾ ವ್ಯವಸ್ಥೆಯನ್ನು ಸಂಸದೀಯ ವ್ಯವಹಾರ ಮತ್ತು ಶಾಸನ ರಚನೆ ಇಲಾಖೆ ಕಲ್ಪಿಸಿ, ರೂಪಿಸಿ, ಅನುಷ್ಠಾನಗೊಳಿಸಿದೆ ಎಂದು ವಿವರಿಸಿದರು.
Related


You Might Also Like
ಬೆಳ್ಳಂಬೆಳಗ್ಗೆ ಅನಿರೀಕ್ಷಿತ ಭೇಟಿ ನೀಡಿ ಹಾಜರಾತಿ ಪರಿಶೀಲಿಸಿದ ಆಯುಕ್ತರು: ಪೌರ ಕಾರ್ಮಿಕರ ಮೇಲ್ವಿಚಾರಕರಿಬ್ಬರ ಮೇಲೆ ಕ್ರಮ
ಬೆಂಗಳೂರು: ಸರ್ವಜ್ಞನಗರ ಕ್ಷೇತ್ರದ ಬಾಣಸವಾಡಿಯ ಬಿಎಸ್ಎನ್ಎಲ್ ಮಸ್ಟರಿಂಗ್ ಪಾಯಿಂಟ್ (ಭುವನಗಿರಿ ಪಾರ್ಕ್) ನಲ್ಲಿ ಇಂದು ಮುಂಜಾನೆ ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್...
ನಾಡಹಬ್ಬ ದಸರಾಗೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ ಅಧಿಕೃತವಾಗಿ ಆಹ್ವಾನಿಸಿದ ಜಿಲ್ಲಾ ಉಸ್ತುವಾರಿ ಸಚಿವ HCM
ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ ಅಧಿಕೃತವಾಗಿ ಆಹ್ವಾನಿಸಿದರು. ಇದೇ ಸೆ.22 ರಂದು ಪ್ರಾರಂಭವಾಗಲಿರುವ...
ಮೊಸಳೆಹೊಸಳ್ಳಿ ದುರಂತ: ಮೃತರ ಮನೆಗಳಿಗೆ ವ್ಹೀಲ್ ಚೇರ್ನಲ್ಲೇ ತೆರಳಿ ಸಾಂತ್ವನ ಹೇಳಿದ ಮಾಜಿ ಪ್ರಧಾನಿ ಎಚ್ಡಿಡಿ
ಹಾಸನ: ಜಿಲ್ಲೆಯ ಮೊಸಳೆಹೊಸಳ್ಳಿಯಲ್ಲಿ ಮೊನ್ನೆ ನಡೆದ ಅಪಘಾತ ಪ್ರಕರಣ ನಿಜಕ್ಕೂ ಘನಘೋರ. ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಚಂದನ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈ ಮೂಲಕ...
ಸಾಲಬಾಧೆ-ಗಂಡ, ಇಬ್ಬರು ಮಕ್ಕಳು ಸೇರಿ ನಾಲ್ವರು ಆತ್ಮಹತ್ಯೆಗೆ ಯತ್ನ ಮೂವರು ಮೃತ: ಸಾವು ಬದುಕಿನ ನಡುವೆ ತಾಯಿ ಸೆಣಸಾಟ
ಹೊಸಕೋಟೆ: ಸಾಲಬಾಧೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಈ ಪೈಕಿ ಮೂವರು ಮೃತಪಟ್ಟಿರುವ ಘಟನೆ ತಾಲೂಕಿನ ಗೊಣಕನಹಳ್ಳಿಯಲ್ಲಿ ಗ್ರಾಮದಲ್ಲಿ ನಡೆದಿದೆ. ಗಂಡ, ಇಬ್ಬರು ಮಕ್ಕಳನ್ನು...
KSRTC ಹಾಸನ: ಸತ್ಯ ಮರೆಮಾಚಿದ ತನಿಖಾ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಮುಂದಾದ ಡಿಸಿ
ಹಾಸನ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಹಾಸನ ವಿಭಾಗದ ತನಿಖಾ ಸಿಬ್ಬಂದಿ ಸತ್ಯ ಮರೆಮಾಚಲು ಬಾಡಿ ಕ್ಯಾಮರಾ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಕೆಲವೊಂದು ಸಮಯದಲ್ಲಿ ಹ್ಯಾಂಗ್...
KSRTC ಹಾಸನ: ತನಿಖಾಧಿಕಾರಿಗಳ ಬಾಡಿ ಕ್ಯಾಮೆರಾದ ವಿಡಿಯೋ ರೆಕಾರ್ಡಿಂಗ್ ಕೊಡಲು ವಿಫಲ- ಆರೋಪ ಪತ್ರ ಜಾರಿ ಮಾಡಿದ ಡಿಸಿ
ಹಾಸನ: ಸಾರಿಗೆ ಸಂಸ್ಥೆಯ ಮಾರ್ಗ ತನಿಖಾಧಿಕಾರಿಗಳು ಬಾಡಿ ಕ್ಯಾಮೆರಾವನ್ನು ಹಾಕಿಕೊಂಡು ತನಿಖೆ ಮಾಡದ ಪರಿಣಾಮ ಮಾಹಿತಿ ಆಯೋಗದಲ್ಲಿ ಪ್ರಕರಣ ದಾಖಲು ಮಾಡಿದ ನೌಕರನಿಗೆ ವಿಡಿಯೋ ರೆಕಾರ್ಡಿಂಗ್ ಕೊಡಲು...
ಮೆಜೆಸ್ಟಿಕ್ BMTC: ಟೀ ಚೆನ್ನಾಗಿರುವುದಿಲ್ಲ ಬೇರೆ ಅಂಗಡಿಗೆ ಹೋಗೋಣ ಎಂದಿದ್ದಕ್ಕೆ ಚಾಲಕನ ಮೇಲೆ ಹಲ್ಲೆ- ಆರೋಪಿ ಬಂಧನ
ಬೆಂಗಳೂರು: ಈ ಅಂಗಡಿಯಲ್ಲಿ ಬೇಡ ಇಲ್ಲಿ ಟೀ ಚೆನ್ನಾಗಿರುವುದಿಲ್ಲ ಎಂದು ಹೇಳಿ ಅಲ್ಲಿಯೇ ಪಕ್ಕದಲ್ಲಿದ್ದ ಟೀ ಅಂಗಡಿಗೆ ಹೋಗೋಣ ಎಂದು ಸಹೋದ್ಯೋಗಿಗೆ ಹೇಳಿದ್ದಕ್ಕೆ ಕುಪಿತನಾದ ಟೀ ಮಾರುವ...
KRSTC: ಅನ್ಯಮಾರ್ಗದಲ್ಲಿ ಹೋಗಲು ಮಹಿಳಾ ಕಂಡಕ್ಟರನ್ನು ರಾತ್ರಿ ಅರ್ಧದಲ್ಲೇ ಇಳಿಸಿಹೋದ ಸಹೋದ್ಯೋಗಿಗಳು…!
ಸಾರಿಗೆ ಚಾಲನಾ ಸಿಬ್ಬಂದಿಗಳಲ್ಲಿ ಒಬ್ಬರಿಗೊಬ್ಬರು ಆಗುವುದಿಲ್ಲ ಎಂಬುದಕ್ಕೆ ಇದು ಮತ್ತೊಂದು ನಿದರ್ಶನ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಬಹುತೇಕ ಎಲ್ಲ ಚಾಲನಾ ಸಿಬ್ಬಂದಿಗಳಲ್ಲಿ...
ಸೆ.22ರಿಂದ ಅ.7ರವರೆಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಇದೇ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರವರೆಗೆ ಹೊಸದಾಗಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ಎಲ್ಲರೂ...