24 ತಿಂಗಳೊಳಗೆ ಸಿವಿಲ್ ಪ್ರಕರಣಗಳು ಇತ್ಯರ್ಥ: ಹೊಸ ಕಾಯ್ದೆ ತಕ್ಷಣದಿಂದಲೇ ಜಾರಿ- ಕಾನೂನು ಸಚಿವ ಪಾಟೀಲ್

ಬೆಂಗಳೂರು: ಇನ್ನು ಮುಂದೆ ಸಿವಿಲ್ ಪ್ರಕರಣಗಳು 24 ತಿಂಗಳೊಳಗೆ ಅಂದರೆ 2 ವರ್ಷದೊಳಗೆ ಅಂತಿಮ ತೀರ್ಪು ಬರಲಿದೆ. ಶಾಸಕಾಂಗ ಮಾಡಿದ ಈ ತಿದ್ದುಪಡಿಗೆ ರಾಷ್ಟ್ರಪತಿಗಳ ಅಂಕಿತ ದೊರಕಿದೆ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ.
ನ್ಯಾಯದಾನ ಪದ್ಧತಿಯಲ್ಲಿ ಸುಧಾರಣೆಗಾಗಿ ಕೇಂದ್ರದ ಕಾನೂನಾದ ಸಿವಿಲ್ ಪ್ರಕ್ರಿಯಾ ಸಂಹಿತೆ(ಸಿಪಿಸಿ)ಗೆ ಕರ್ನಾಟಕ ತಿದ್ದುಪಡಿಗಳನ್ನು ಮಾಡಿತ್ತು. ಈ ತಿದ್ದುಪಡಿಗಳು ರಾಷ್ಟ್ರದ ಕಾನೂನಿನಲ್ಲಿ ರಾಜ್ಯವ್ಯಾಪಿ ಜಾರಿಯಲ್ಲಿವೆ ಎಂದರು.
ಇನ್ನು ಸಿವಿಲ್ ನ್ಯಾಯಾಲಯಗಳಲ್ಲಿ ದಾಖಲಾಗುವ ಪ್ರಕರಣಗಳಿಗೆ ದಶಕ ವರ್ಷಗಳು ಕಾಯುವ/ ವಿಳಂಬಕ್ಕೆ ಮುಕ್ತಿ ನೀಡಲು ಕರ್ನಾಟಕ ಯಶಸ್ವಿಯಾಗಿ ಈ ದಿಟ್ಟ ಹೆಜ್ಜೆಯನ್ನಿಟ್ಟಿದೆ. ಕರ್ನಾಟಕ ಸರ್ಕಾರ ಕ್ರಾಂತಿಕಾರಕ ಈ ತಿದ್ದುಪಡಿಯನ್ನು ಸಿವಿಲ್ ಪ್ರಕ್ರಿಯಾ ಸಂಹಿತೆಗೆ ಮಾಡಿದೆ. ಈ ತಿದ್ದುಪಡಿಗೆ ರಾಷ್ಟ್ರಪತಿಗಳ ಅಂಕಿತ ದೊರಕಿದ್ದು, ಈ ಐತಿಹಾಸಿಕ ತಿದ್ದುಪಡಿ ರಾಷ್ಟ್ರದಲ್ಲಿಯೇ ಮೊದಲು ಎಂದ ಅವರು, ತಕ್ಷಣದಿಂದ ಈ ತಿದ್ದುಪಡಿ ಜಾರಿಗೆ ಬರಲಿದೆ ಎಂದು ವಿವರಿಸಿದರು.
ನಮ್ಮ ಶಾಸಕಾಂಗ ಮಾಡಿದ ಈ ತಿದ್ದುಪಡಿಯ ಮುಖಾಂತರ ಪ್ರತಿಯೊಂದು ಸಿವಿಲ್ ಪ್ರಕರಣಗಳು ರಾಜಿ ಸಂಧಾನದ ಮೂಲಕ ಬಗೆಹರಿಸಲು ಕಡ್ಡಾಯವಾದ ಪ್ರಯತ್ನ ಮಾಡಬೇಕು. ಎರಡು ತಿಂಗಳೊಳಗಾಗಿ ರಾಜಿ ಸಂಧಾನದ ಪ್ರಯತ್ನ ತಾರ್ಕಿಕ ಅಂತ್ಯ ಕಾಣಬೇಕು. ಸಾಧ್ಯವಾಗದಿದ್ದಾಗ, ನ್ಯಾಯಾಲಯ ಪ್ರಕರಣವನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಬೇಕು ಎಂಬ ಶಾಸನಾತ್ಮಕ ಅವಕಾಶ ದೊರೆತಿರುವುದು ಕಕ್ಷಿದಾರನ ಪಾಲಿಗೆ ತೆರೆದ ಭಾಗ್ಯದ ಬಾಗಿಲು ಎಂದು ಸಚಿವರು ಅಭಿಪ್ರಾಯಪಟ್ಟರು.
ಇನ್ನು ನ್ಯಾಯಾಲಯಗಳ ಕಲಾಪಗಳಲ್ಲಿ ವಿಳಂಬ ನಿರಾಕರಿಸುವ, ಚರಿತ್ರಾರ್ಹ ಸುಧಾರಣೆಗೆ ಶಾಸನಾತ್ಮಕ ಅಂಕುಶ ಹೊಂದಿರುವ ಈ ತಿದ್ದುಪಡಿ ಪ್ರಕರಣ ದಾಖಲಾದ ದಿನಾಂಕದಿಂದ 24 ತಿಂಗಳಲ್ಲಿ ಯಾವುದೇ ಸಿವಿಲ್ ಪ್ರಕರಣ ಇತ್ಯರ್ಥವಾಗಿ, ತಾರ್ಕಿಕ ಅಂತ್ಯ ಕಾಣುವುದಕ್ಕೆ ನಿಶ್ಚಿತಗೊಳಿಸುವ ಶಾಸನ ಜಾರಿಗೆ ಬಂದಿದೆ. ಈ ಪೂರ್ವಗಾಮಿ ಪ್ರಗತಿಯ ಜತೆ-ಜತೆಗೆ ಈ ಕಾನೂನು ನ್ಯಾಯಾಲಯಗಳಲ್ಲಿ ಆಗುವ ವಿಳಂಬಕ್ಕೆ ಇತಿಶ್ರೀ ಹಾಡಲಿದೆ. ಇನ್ನು ಮುಂದೆ ನ್ಯಾಯಾಲಯಗಳಲ್ಲಿ, ವಿಳಂಬವಿಲ್ಲದೇ ಪ್ರಕರಣಗಳು ಇತ್ಯರ್ಥವಾಗಲು ಶಾಸನ ಮಾಡಲಾಗಿದೆ ಎಂದರು.
ನ್ಯಾಯಾಲಯದಲ್ಲಿ ಪ್ರಕರಣ ದಾಖಲಾದ ದಿನದಂದು ಅಥವಾ ಮೊದಲ ವಿಚಾರಣೆಯ ದಿನದಂದು ಅಂತಿಮ ತೀರ್ಪು / ಆದೇಶದ ದಿನಾಂಕ ನಿರ್ಣಯವಾಗುವ ಅತ್ಯಂತ ಪರಿಣಾಮಕಾರಿ ಮಹತ್ವದ ಶ್ರೇಷ್ಠವಾದ ನ್ಯಾಯಾಂಗದ ಕಾರ್ಯ ನಿರ್ವಹಣೆಗೆ ಈ ತಿದ್ದುಪಡಿ ಇಂಬು ನೀಡಲಿದೆ ಎಂದು ತಿಳಿಸಿದರು.
ಕಳೆದ ಬೆಳಗಾವಿ ಅಧಿವೇಶನದಲ್ಲಿ 17.12.2024 ರಂದು ವಿಧಾನ ಸಭೆಯಲ್ಲಿ 18.12.2024 ವಿಧಾನ ಪರಿಷತ್ತಿನಲ್ಲಿ ಈ ಕಾನೂನು ಅಂಗೀಕರಿಸಲಾಗಿತ್ತು. ರಾಜ್ಯಪಾಲರು ಈ ವಿಧೇಯಕವನ್ನು ಸಂವಿಧಾನದ ಅನುಚ್ಛೇದ 200 ಮತ್ತು 254 ರಡಿಯಲ್ಲಿ ರಾಷ್ಟ್ರಪತಿಯವರ ಅಂಕಿತಕ್ಕೆ ಕಾಯ್ದಿರಿಸಿದ್ದರು. ಈ ಕಾನೂನಿಗೆ ರಾಷ್ಟ್ರಪತಿಯವರು 19.05.2025 ರಂದು ತಮ್ಮ ಅಂಕಿತ ಹಾಕಿದ್ದಾರೆ.
ಲಿಖಿತ ಹೇಳಿಕೆ, ಸಾಕ್ಷ್ಯ ಸಂಗ್ರಹ ಎಲ್ಲದಕ್ಕೂ ಕಾಲಮಿತಿ ನಿಗದಿಪಡಿಸಲು ಶಾಸನ ಅವಕಾಶ ಕಲ್ಪಿಸಿದೆ. ಯಾವುದೇ ಹಂತದಲ್ಲಿ ಒಂದು ತಿಂಗಳೊಳಗಾಗಿ ಕೇವಲ 3 ಮುಂದೂಡಿಕೆ ಅಥವಾ 3 ದಿನಾಂಕಗಳ ಅವಕಾಶ ಮಾತ್ರ ಕಲ್ಪಿಸಲಾಗುವುದು. ಯಾವುದೇ ಹಂತದಲ್ಲಿ ಅರ್ಜಿದಾರ-ಪ್ರತಿವಾದಿ ಈ ಅವಕಾಶದಲ್ಲಿ ಸಲ್ಲಿಸದಿದ್ದರೆ, ಅಂಥವರ ಹೇಳಿಕೆಗಳನ್ನು ಶೂನ್ಯವೆಂದು ಪರಿಗಣಿಸಲು ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.
ಈ ಕಾನೂನಿನಲ್ಲಿ ಪ್ರಕರಣ ನಿರ್ವಹಣೆಯನ್ನು ಪುನರ್ ವ್ಯಾಖ್ಯಾನ ಮಾಡಲಾಗಿದೆ. ಸಾಕ್ಷ್ಯಗಳ ವಿಚಾರಣೆಗಳನ್ನು ನಿಗದಿತ ದಿನಾಂಕದಂದು ಕೈಗೊಳ್ಳಲು ಮತ್ತು ದೈನಂದಿನ ಅಥವಾ ಸಾಪ್ತಾಹಿಕ ಆಧಾರದಲ್ಲಿ ಈ ತಿದ್ದುಪಡಿಗೆ ಅವಕಾಶ ಕಲ್ಪಿಸಿರುವುದರಿಂದ ಯಾವುದೇ ಪ್ರಕರಣ ಅನಿರ್ದಿಷ್ಟಕಾಲ ವಿಳಂಬಕ್ಕೆ ಕಾರಣವಾಗುವುದಿಲ್ಲ. ಆಗದಂತೆ ಸುನಿಶ್ಚಿತಗೊಳಿಸುವ ಜನಪರ ಕಾನೂನು ಅಸ್ತಿತ್ವಕ್ಕೆ ತರಲಾಗಿದೆ.
ನ್ಯಾಯದಾನ ವ್ಯವಸ್ಥೆಯನ್ನು ಸಂಪೂರ್ಣವಾಗಿ, ಸುಧಾರಣೆಗೆ ಈ ಕಾನೂನು ಅವಕಾಶ ಕಲ್ಪಿಸಿದೆ. ರಾಜ್ಯದ ಕಕ್ಷಿದಾರರ ನ್ಯಾಯಾಲಯಕ್ಕೆ ವೃಥಾ ಅಲೆದಾಟ ತಪ್ಪಿಸಿ, ಆರ್ಥಿಕವಾಗಿ ಕೈಗೆಟಕುವ ರೀತಿಯಲ್ಲಿ ತ್ವರಿತ ನ್ಯಾಯದಾನ ವ್ಯವಸ್ಥೆಗೆ ಒಂದು ನಿರ್ವಹಣಾ ವ್ಯವಸ್ಥೆಯನ್ನು ಸಂಸದೀಯ ವ್ಯವಹಾರ ಮತ್ತು ಶಾಸನ ರಚನೆ ಇಲಾಖೆ ಕಲ್ಪಿಸಿ, ರೂಪಿಸಿ, ಅನುಷ್ಠಾನಗೊಳಿಸಿದೆ ಎಂದು ವಿವರಿಸಿದರು.
Related

You Might Also Like
KSRTC: ಪ್ರಯಾಣಿಕ ಟಿಕೆಟ್ ಕಳೆದು ಕೊಂಡರೆ ನಿರ್ವಾಹಕರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳುವಂತಿಲ್ಲ-ಎಂಡಿ ಆದೇಶ
2020 ಫೆಬ್ರವರಿ 20ರಂದು ಅಂದಿನ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಶಿವಯೋಗಿ ಸಿ. ಕಳಸದ ಸುತ್ತೋಲೆ ಹೊರಡಿಸಿದ್ದಾರೆ ಬೆಂಗಳೂರು: ಪ್ರಯಾಣಿಕರು ಟಿಕೆಟ್ ಕಳೆದುಕೊಂಡ ಪಕ್ಷದಲ್ಲಿ ತನಿಖಾದಿಕಾರಿಗಳು ವಾಹನವೂ ತಪಾಸಣಾ ಗೋಳಪಡಿಸಿದಾಗ...
ವಿಧಾನಸೌಧ ಈಗ ಪ್ರವಾಸಿ ತಾಣ: ಸಾರ್ವಜನಿಕ ವೀಕ್ಷಣೆಗೆ ಮುಕ್ತ- ಯಾರಿಗೆ ಟಿಕೆಟ್ ಮತ್ತ್ಯಾರಿಗೆ ಉಚಿತ!
ಬೆಂಗಳೂರು: ರಾಜ್ಯದ ಶಕ್ತಿಸೌಧ ವಿಧಾನಸೌಧವನ್ನು ಒಮ್ಮೆಯಾದರೂ ನೋಡಬೇಕು ಎಂದು ರಾಜ್ಯದ ಅದೆಷ್ಟು ಮಂದಿ ಆಸೆಪಡುತ್ತಿದ್ದರು. ಅಲ್ಲಿಗೆ ನಾವು ಹೋಗುವುದು ಹೇಗೆ ಎಂದು ಹಲವರು ಹಳ್ಳಿಗಳ್ಳಲಿ ಮಾತನಾಡಿಕೊಳ್ಳುತ್ತಿದ್ದರು. ಅದಕ್ಕೆ...
KSRTC: ಸಾರಿಗೆ ನೌಕರರಿಗೆ ಈ ಕೂಡಲೇ ವೇತನ ಹೆಚ್ಚಳ ಮಾಡಿ- ಸಿಎಂಗೆ ಮನವಿ ಸಲ್ಲಿಸಿದ ಕುಕನೂರು ಪಪಂ ಸದಸ್ಯೆ ಫಿರ್ದೋಶ್ ಬೇಗಂ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಿಬ್ಬಂದಿಗಳಿಗೆ ವೇತನ ಹೆಚ್ಚಳ ಹಾಗೂ 38 ತಿಂಗಳ ಹಿಂಬಾಕಿ ಬಗ್ಗೆ ಕೂಡಲೇ ಆದೇಶ ಹೊರಡಿಸಬೇಕು ಎಂದು ಕುಕನೂರು ಪಟ್ಟಣಪಂಚಾಯಿತಿ ಸದಸ್ಯರಾದ...
KKRTC ಬೀದರ್: ಕಿರಿಯ ಸಹಾಯಕ 10ಹುದ್ದೆ ಖಾಲಿ ಇದ್ದರು ಬೇರೆ ಹುದ್ದೆ ಆಯ್ಕೆಗೆ ಮೃತ ನೌಕರರ ಮಕ್ಕಳಿಗೆ ಅಧಿಕಾರಿಗಳಿಂದ ಒತ್ತಡ !
ಬೀದರ್: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆಯ ಬೀದರ್ವಿಭಾಗದಲ್ಲಿ ಅನುಕಂಪ ಆಧಾರದ ಮೇಲಿನ ಕಿರಿಯ ಸಹಾಯಕ ಹುದ್ದೆ ನೇಮಕಾತಿ ನಡೆಯದೆ ಹಲವಾರು ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಬಲಿಯಾಗುತ್ತಿವೆ. ಇನ್ನು...
ನಾಳೆ ಲಾಲ್ಬಾಗ್ ಆಭರಣದಲ್ಲಿ EPS ಪಿಂಚಣಿದಾರರ 89ನೇ ಮಾಸಿಕ ಸಭೆ
ಬೆಂಗಳೂರು: ಶತಮಾನಗಳ ಭವ್ಯ ಪರಂಪರೆಯನ್ನು ಹೊಂದಿರುವ, ನಡಿಗೆದಾರರ ಸ್ವರ್ಗ ಎಂದು ಕರೆಯುವ, ವಿಶ್ವ ವಿಖ್ಯಾತ ಲಾಲ್ಬಾಗ್ಗೂ ಇಪಿಎಸ್ ಪಿಂಚಣಿದಾರರಿಗೂ ಅವಿನವಬಾವ ಸಂಬಂಧ, ಈ ಸುಂದರ ಪರಿಸರ ತಾಣದಲ್ಲಿ...
ನಟ ದರ್ಶನ್ ಸಿನಿಮಾ ಚಿತ್ರೀಕರಣಕ್ಕಾಗಿ ವಿದೇಶಕ್ಕೆ ತೆರಳಲು ಕೋರ್ಟ್ ಅನುಮತಿ
ಬೆಂಗಳೂರು: ನಟ ದರ್ಶನ್ ಅವರಿಗೆ ಸಿನಿಮಾ ಚಿತ್ರೀಕರಣಕ್ಕಾಗಿ ವಿದೇಶಕ್ಕೆ ತೆರಳಲು 57ನೇ ಸಿಸಿಎಚ್ ನ್ಯಾಯಾಲಯ ಅನುಮತಿ ನೀಡಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 2ನೇ ಆರೋಪಿಯಾಗಿರುವ ದರ್ಶನ್...
NWKRTC: 2024-25ನೇ ಸಾಲಿನ ಐಚ್ಛಿಕ ಭ.ನಿ. ಚೀಟಿಗಳ ಆನ್ಲೈನ್ನಲ್ಲಿ ಡೌನ್ಲೋಡ್ ಮಾಡಿಕೊಳ್ಳಿ: ನೌಕರರಿಗೆ CAO ಆದೇಶ
ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲ ವಿಭಾಗಗಳ ಎಲ್ಲ ಅಧಿಕಾರಿಗಳ- ನೌಕರರ 2024-25ನೇ ಸಾಲಿನ ಭವಿಷ್ಯ ನಿಧಿ/ ಐಚ್ಛಿಕ ಭವಿಷ್ಯನಿಧಿ ಚೀಟಿಗಳನ್ನು ಆನ್ಲೈನ್ ಮೂಲಕ...
ಸಾಮಾಜಿಕ ಸ್ವಾಸ್ಥ್ಯ ಹಾಳುಗೆಡಹುತ್ತಿರುವವರ ಸರ್ಕಾರ ಮಟ್ಟಹಾಕದೆ ಬಿಡೆದು: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕರ್ನಾಟಕವನ್ನು ಸರ್ವಜನಾಂಗದ ಶಾಂತಿಯ ತೋಟವಾಗಿಸುವ ವಾಗ್ದಾನವನ್ನು ನಾಡಿನ ಜನತೆಗೆ ನಾವು ಚುನಾವಣಾ ಪೂರ್ವದಲ್ಲೇ ನೀಡಿದ್ದೆವು, ಅದರಂತೆ ಜನತೆ ನಮ್ಮ ಮೇಲೆ ವಿಶ್ವಾಸವಿಟ್ಟು ಬಹುಮತದ ಸರ್ಕಾರ ರಚನೆಗೆ...
KKRTC ಯಾದಗಿರಿ: ಇಬ್ಬರು ವಿಭಾಗಮಟ್ಟದ ಅಧಿಕಾರಗಳ ವಿರುದ್ಧ ಜಾತಿ ನಿಂದನೆ, ಲೈಂಗಿಕ ಕಿರುಕುಳ-2ಪ್ರತ್ಯೇಕ ಪ್ರಕಣಗಳು ದಾಖಲು
ಯಾದಗಿರಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಇಬ್ಬರು ಪ್ರಮುಖ ಅಧಿಕಾರಿಗಳ ವಿರುದ್ಧ ವಿಭಾಗದ ಸಿಬ್ಬಂದಿಗಳೇ ಪ್ರತ್ಯೇಕವಾಗಿ ದೂರು ನೀಡಿದ್ದು, ವಾರದೊಳಗೆ ಅಧಿಕಾರಿಗಳ ಮೇಲೆ ಪ್ರತ್ಯೇಕ ಎರಡು...