NEWSಉದ್ಯೋಗನಮ್ಮರಾಜ್ಯ

ಸರ್ಕಾರಿ ನೌಕರರ 100 ಕುಟುಂಬಗಳಿಗೆ ಅನುಕಂಪದ ನೇಮಕಾತಿ ಆದೇಶ ಪತ್ರ ವಿತರಣೆ: ಸಚಿವ ದಿನೇಶ್ ಗುಂಡೂರಾವ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಿವೃತ್ತಿಗೂ ಮೊದಲೇ ನಿಧನರಾದ 100 ಸರ್ಕಾರಿ ನೌಕರರ ಕುಟುಂಬದವರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅನುಕಂಪದ ಆಧಾರದ ಮೇಲೆ ಉದ್ಯೋಗ ಕಲ್ಪಿಸಿಕೊಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಬುಧವಾರ ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಫಲಾನುಭವಿಗಳಿಗೆ ನೇಮಕಾತಿ ಆದೇಶ ಪತ್ರ ವಿತರಿಸಿದ ಬಳಿಕ ಮಾತನಾಡಿದ ಸಚಿವರು, ಕುಟಂಬಕ್ಕೆ ಆರ್ಥಿಕ ಬೆನ್ನೆಲುಬಾಗಿದ್ದವರನ್ನು ಕಳೆದುಕೊಂಡಾಗ ದೊಡ್ಡ ಆಘಾತವಾಗುತ್ತದೆ. ಕುಟುಂಬ ನಿರ್ವಹಣೆ ಕಷ್ಟವಾಗುತ್ತದೆ. ಅನುಕಂಪದ ಆಧಾರದಲ್ಲಿ ಕೆಲಸ ನೀಡಬೇಕೆನ್ನುವ ನಿಯಮವಿದ್ದರೂ ಸಾಕಷ್ಟು ವಿಳಂಬವಾಗುತ್ತದೆ. ಆದರೆ, ನಮ್ಮ ಸರ್ಕಾರ ಯಾರನ್ನೂ ಅಲೆದಾಡಿಸದೇ ತಕ್ಷಣ ಉದ್ಯೋಗ ನೀಡಿದೆ ಎಂದು ತಿಳಿಸಿದರು.

ಸದ್ಯ 116 ಮಂದಿಗೆ ಅನುಕಂಪದ ಆಧಾರದಲ್ಲಿ ಉದ್ಯೋಗ ನೀಡಲಾಗಿದ್ದು, ಇನ್ನೂ 60 ಪ್ರಕರಣಗಳು ಬಾಕಿ ಉಳಿದಿವೆ. ಅವುಗಳನ್ನು ಕೂಡ ಅತಿ ಶೀಘ್ರದಲ್ಲಿಯೇ ಇತ್ಯರ್ಥಗೊಳಿಸುವುದಾಗಿ ಇದೇ ವೇಳೆ ಸಚಿವ ಗುಂಡೂರಾವ್ ಭರವಸೆ ನೀಡಿದರು. ‌

ಸರ್ಕಾರಿ ಕೆಲಸ ಪಡೆದುಕೊಂಡವರು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಇಲಾಖೆಗೆ, ಸಮಾಜಕ್ಕೆ ಮಾದರಿಯಾಗಬೇಕು. ಆರೋಗ್ಯ ಇಲಾಖೆ ಅಧಿಕಾರಿಗಳು ತಕ್ಷಣ ನೇಮಕಾತಿಗೆ ಬೇಕಾದ ಎಲ್ಲ ಪ್ರಕ್ರಿಯೆ ಪೂರ್ಣಗೊಳಿಸಿ ಶೀಘ್ರ ಉದ್ಯೋಗ ಸಿಗುವಂತೆ ಮಾಡಿರುವ ಕೆಲಸ ಶ್ಲಾಘನೀಯ ಎಂದರು.

ಇನ್ನು ಅಭ್ಯರ್ಥಿಗಳ ವಿದ್ಯಾರ್ಹತೆಗೆ ಅನುಸಾರವಾಗಿ ಆರೋಗ್ಯ ಇಲಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕ, ದ್ವಿತೀಯ ದರ್ಜೆ ಸಹಾಯಕ, ಆರೋಗ್ಯಾಧಿಕಾರಿ, ಗ್ರೂಪ್ ಡಿ ದರ್ಜೆ ಹುದ್ದೆಗಳನ್ನು ನೀಡಲಾಗಿದೆ ಎಂದು ತಿಳಿಸಿದರು.‌

ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆ ಆಯುಕ್ತ ಕೆ.ಬಿ. ಶಿವಕುಮಾರ್, ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಉಪಸ್ಥಿತರಿದ್ದರು.

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ