NEWSನಮ್ಮಜಿಲ್ಲೆ

ವನಮಹೋತ್ಸವದಲ್ಲಿ ತ್ರಿಚಕ್ರ ವಾಹನ ವಿತರಣೆ, ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವನಮಹೋತ್ಸವ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಣೆ ಹಾಗೂ ಸ್ವಚ್ಛತಾ ಕೆಲಸಕ್ಕಾಗಿ ನೂತನ ಆಟೋ ವಾಹನ ಮತ್ತು ಹಿಟಾಚಿ ವಾಹನಗಳಿಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಚಾಲನೆ ನೀಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ನಗರಾಭಿವೃದ್ಧಿ ಕೋಶ ಮತ್ತು ದೇವನಹಳ್ಳಿ ಪುರಸಭೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ “ತಾಯಿಯ ಹೆಸರಿನಲ್ಲಿ ಗಿಡ ನೆಡುವ” ಹಾಗೂ ಸ್ವಚ್ಛತಾ ಕಾರ್ಯಕ್ರಮದಲ್ಲಿ 150 ಗಿಡಗಳನ್ನು ನೆಡಲಾಯಿತು.

ವನಮಹೋತ್ಸವ ಕಾರ್ಯಕ್ರಮದಲ್ಲಿ ಅಂಗವಿಕಲರ ಶೇ.5 ರ ಯೋಜನೆಯಡಿ ತ್ರಿಚಕ್ರ ವಾಹನಗಳನ್ನು ಫಲಾನುಭವಿಗಳಾದ ಮೇಘನಾ. ಎಸ್, ಗಿರಿಜಾ ಜೆ, ಚಾಂದ್ ಪಾಷ, ರಾಜಪ್ಪ, ಶಶಿಕಲಾ ಇವರಿಗೆ ವಿತರಿಸಿದರು.

ಜತೆಗೆ ದೇವನಹಳ್ಳಿ ಪುರಸಭೆಗೆ ನೂತನ ಸ್ವಚ್ಛತಾ ವಾಹನಗಳನ್ನು (ಆಟೋ ಟಿಪ್ಪರ್ಸ್ ಅಥವಾ 15 ಫೈನಾನ್ಸ್) ಖಾಸಗಿ ಸಂಸ್ಥೆ ವತಿಯಿಂದ ಮೂರು ಆಟೋ ವಾಹನಗಳು ಮತ್ತು ಒಂದು ಹಿಟಾಚಿ ವಾಹನಕ್ಕೆ ಚಾಲನೆ ನೀಡಿದರು.

ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ಬಿ.ಎಸ್ ರಮೇಶ್, ದೇವನಹಳ್ಳಿ ಪುರಸಭೆಯ ಅಧ್ಯಕ್ಷರಾದ ಮುನಿಕೃಷ್ಣ, ಉಪಾಧ್ಯಕ್ಷರಾದ ಜಿ.ಎ ರವೀಂದ್ರ, ಸ್ಥಾಯಿ ಸಮಿತಿ ಅಧ್ಯಕ್ಷರು ಕೋಮಲ ಹಾಗೂ ದೇವನಹಳ್ಳಿ ಪುರಸಭೆಯ ಸದಸ್ಯರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ