ಬೆಂಗಳೂರು ಗ್ರಾಮಾಂತರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ-2025″ ವನ್ನು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್. ಮುನಿಯಪ್ಪ ಉದ್ಘಾಟಿಸಿದರು.
ನಂತರ ಮಾತನಾಡಿದ ಸಚಿವರು ಜಿಲ್ಲೆಯ ಮಾವು, ಹಲಸು ಹಾಗೂ ಇತರೆ ಹಣ್ಣುಗಳನ್ನು ಬೆಳೆಯುತ್ತಿರುವ ರೈತರಿಗೆ ಉತ್ತಮ ಬೆಲೆ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಹಾಗೂ ರೈತರನ್ನು ಪ್ರೋತ್ಸಾಹಿಸಲು, ಗ್ರಾಹಕರಿಗೆ ಉತ್ತಮ ಗುಣಮಟ್ಟದ ನೈಸರ್ಗಿಕವಾಗಿ ಹಣ್ಣುಗಳು ಸಿಗುವಂತೆ ಮಾಡಲು ಮೇಳ ಆಯೋಜನೆ ಮಾಡಲಾಗಿದೆ.
ವಿವಿಧ ತಳಿಯ ಮಾವು, ಹಲಸು ಹಾಗೂ ಇತರೆ ಹಣ್ಣುಗಳ ಮಾರಾಟ ಮಾಡಲಾಗುತ್ತಿದೆ. ಸರ್ಕಾರ ನಿಗದಿ ಮಾಡಿರುವ ಬೆಲೆಯಲ್ಲಿ ರಿಯಾಯಿತಿ ದರದಲ್ಲಿ ಗ್ರಾಹಕರು ಹಣ್ಣುಗಳನ್ನು ಖರೀದಿ ಮಾಡಬಹುದಾಗಿದೆ ಎಂದರು.
ಮೇಳವು ದೇವನಹಳ್ಳಿ ತಾಲ್ಲೂಕಿನ ಹೋಟೆಲ್ ನಂದಿ ಉಪಚಾರ ಮುಂಭಾಗ (ನಂದಿ ಬೆಟ್ಟಕ್ಕೆ ಹೋಗುವ ರಸ್ತೆ, ರಾಣಿ ಕ್ರಾಸ್) ಆಯೋಜಿಸಲಾಗಿದ್ದು ಜೂನ್ 13 ರಿಂದ 15 ವರೆಗೆ 2 ದಿನಗಳ ಕಾಲ ಇರಲಿದೆ. ಸಾರ್ವಜನಿಕರು ಕೂಡ ಗುಣಮಟ್ಟದ ವಿವಿಧ ತಳಿಯ ಹಣ್ಣುಗಳು ಹಾಗೂ ತಾಜಾ ಹಣ್ಣುಗಳನ್ನು ಒಂದೇ ವೇದಿಕೆಯಲ್ಲಿ ಖರೀದಿ ಮಾಡಲು ಉತ್ತಮ ಅವಕಾಶ ಇದಾಗಿದೆ.
ಸಸ್ಯ ಸಂತೆ ಕಾರ್ಯಕ್ರಮವನ್ನು ಮೇಳದಲ್ಲಿ ಏರ್ಪಡಿಸಲಾಗಿದ್ದು ಜಿಲ್ಲೆಯ ಎಲ್ಲಾ ತೋಟಗಾರಿಕೆ ಕ್ಷೇತ್ರ ಮತ್ತು ನರ್ಸರಿಗಳಿಂದ ವಿವಿಧ ಜಾತಿಯ ಹಣ್ಣಿನ ಕಸಿ/ಸಸಿ ಗಿಡಗಳನ್ನು ಅಲಂಕಾರಿಕ ಗಿಡಗಳನ್ನು ಪ್ರದರ್ಶನಕ್ಕೆ ಹಾಗೂ ಇಲಾಖೆ ನಿಗದಿಪಡಿಸಿದ ದರದಲ್ಲಿ ಮಾರಾಟ ಮಾಡುವ ವ್ಯವಸ್ಥೆಯನ್ನು ಸಹ ಕಲ್ಪಿಸಲಾಗಿದೆ.
ಮೇಳದಲ್ಲಿ ಕಂಡು ಬಂದ ವಿವಿಧ ತಳಿಯ ಮಾವು-ಹಲಸು, ಸೀಬೆ, ತೋತಾಪುರಿ, ಸೇಂದೂರ, ಬಂಗನಪಲ್ಲಿ, ಬಾದಾಮಿ, ರಸಪೂರಿ, ಮಲ್ಲಿಕಾ, ಕೇಸರ್, ದಶೇರಿ, ಕುಲ್ ಪಂದ್, ಹಿಮಾಪಸಂದ್,ಮಲಗೋವ, ಸಕ್ಕರೆಗುತ್ತಿ, ಡ್ರಾಗನ್ ಪ್ರೋಟ್ಸ್(ಕೆಂಪು), ಸೀಬೆ(ತೈವಾನ್, ಅಲಹಾಬಾದ್), ಹಲಸು(ಪ್ಯಾಕೆಟ್).
ಖುದ್ದು ಸಚಿವರು ಎಲ್ಲ ಮಳಿಗೆಗೆಳಿಗೆ ಭೇಟಿ ನೀಡಿ ರೈತರೊಟ್ಟಿಗೆ ಸಮಾಲೋಚಿಸಿ ವಿವಿಧ ತಳಿಯ ಮಾವು, ಹಲಸು ಹಾಗೂ ಇತರೆ ಹಣ್ಣುಗಳ ಬಗ್ಗೆ ಮಾಹಿತಿ ಪಡೆದುಕೊಂಡು, ಅವುಗಳ ರುಚಿ ಸವಿದು ಹಣ್ಣುಗಳನ್ನು ಖರೀದಿಸಿದರು.
ಕಾರ್ಯಕ್ರಮದಲ್ಲಿ ಸಿಇಒ ಡಾ.ಕೆ.ಎನ್ ಅನುರಾಧ, ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ಗುಣವಂತ, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಕಲಾವತಿ, ಬಯಪ ಅಧ್ಯಕ್ಷ ಶಾಂತಕುಮಾರ್, ಪುರಸಭೆ ಅಧ್ಯಕ್ಷ ಮುನಿಕೃಷ್ಣ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ರೈತ ಬಾಂಧವರು, ಗ್ರಾಹಕರು ಇದ್ದರು.
Related

You Might Also Like
ಹಾಳಾಗಿರುವ ಒಳಚರಂಡಿ ಸ್ಲ್ಯಾಬ್ ಬದಲಾಯಿಸಿ: ಅಧಿಕಾರಿಗಳಿಗೆ ಸ್ನೇಹಲ್ ತಾಕೀತು
ಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯಲ್ಲಿ ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಲು ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ಜಲಮಡಂಳಿ ಅಧಿಕಾರಿಗಳಿಗೆ ತಾಕೀತು ಮಾಡಿದರು. ಪೂರ್ವ ವಲಯ...
ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ: ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ವಸ್ತ್ರದ್ ಸಲಹೆ
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಸ್ವೀಪ್ ಕಾರ್ಯ ಚಟುವಟಿಕೆಗಳನ್ನು ನಿರಂತರವಾಗಿ ಕೈಗೊಳ್ಳುವ ಮೂಲಕ ಮತದಾರರಿಗೆ ಜಾಗೃತಿ ಮೂಡಿಸಿ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ...
ಗ್ರಾಪಂ- ಮನೆ ಬಾಗಿಲಿಗೆ ಇ-ಸ್ವತ್ತು ಖಾತೆ ವಿತರಣೆ: ಜಿಪಂ ಸಿಇಒ ಡಾ.ಅನುರಾಧ
ಪಂಚಾಯತ್ ರಾಜ್ ಇಲಾಖೆಯಿಂದ ಮಹತ್ವಕಾಂಕ್ಷಿ ಕಾರ್ಯಕ್ರಮ ಗ್ರಾಮಠಾಣಾ ವ್ಯಾಪ್ತಿಯ ಮನೆ ಬಾಗಿಲಿಗೇ ಈ ಸ್ವತ್ತು ಖಾತೆ ನೀಡುವ ಯೋಜನೆ ಆರಂಭ ಬೆಂಗಳೂರು ಗ್ರಾಮಾಂತರ: ಪಂಚಾಯತ್ ರಾಜ್ ಮತ್ತು...
ಖಾಸಗಿ ಕಂಪನಿಯ ಮುಖ್ಯ ಕಾನೂನು ಸಲಹೆಗಾರರಾಗಿ ನೇಮಕಗೊಂಡ ವಕೀಲ ಶಿವರಾಜುರಿಗೆ ಅಭಿನಂದನೆಗಳು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಹಲವು ನೌಕರರು ಸೇರಿದಂತೆ ಇತರರಿಗೆ ಉಚಿತವಾಗಿ ಕಾನೂನು ಸೇವೆ ನೀಡಿದ ಫಲವಾಗಿ ವಕೀಲರಾದ ಎಚ್.ಬಿ.ಶಿವರಾಜು ಅವರಿಗೆ ಕೈ...
KSRTC ನೂತನ ಎಂಡಿ ಅಕ್ರಮ್ ಪಾಷಗೆ ಸ್ವಾಗತ ಕೋರಿದ ನಿಗಮದ ಪ್ರಭಾರ ಎಂಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಐಎಎಸ್ ಅಧಿಕಾರಿ ಅಕ್ರಮ್ ಪಾಷ ಇಂದು ಅಧಿಕಾರ ಸ್ವೀಕರಿಸಿದರು. ನಿಗಮದ ಪ್ರಭಾರ ಎಂಡಿಯಾಗಿದ್ದ ಬಿಎಂಟಿಸಿ...
ಟೇಕಾಫ್ ಆದ ಕೆಲವೇ ಕ್ಷಣದ ಏರ್ ಇಂಡಿಯಾ ವಿಮಾನ ಪತನ: ಇಬ್ಬರು ಸೇಫ್
ಅಹಮದಾಬಾದ್: ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನ ಪತನಗೊಂಡ ಘಟನೆಗೆ ಸಂಬಂಧಿಸಿದಂತೆ 240 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ವಿಮಾನದಲ್ಲಿ...
KSRTC ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಅಕ್ರಮ್ ಪಾಷ ನೇಮಕ: ಸರ್ಕಾರ ಆದೇಶ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಅಕ್ರಂಪಾಷಾ ಅವರನ್ನು ನೇಮಿಸಿ ಸರ್ಕಾರ ಗುರುವಾರ (ಜೂ.12) ಆದೇಶ ಹೊರಡಿಸಿದೆ. ಇದೇ ಜೂನ್ 2ರ ಸೋಮವಾರ...
NWKRTC: ವರುಣನ ಅಬ್ಬರಕ್ಕೆ ಕಾರವಾರದ ಬಸ್ ಡಿಪೋ ಜಲಾವೃತ- ಮಳೆ ನೀರಿನಲ್ಲೇ ನಿಂತು ಹೆರಿಗೆ ಮಾಡಿಸಿದ ವೈದ್ಯರು
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಧಾರಾಕರ ಮಳೆಯಾಗುತ್ತಿದ್ದು, ಈ ಮಳೆಗೆ ವಾಯುವ್ಯ ರಸ್ತೆ ಸಾರಿಗೆ ನಿಮಗದ ಘಟಕ ಸಂಪೂರ್ಣ ಜಲಾವೃತವಾಗಿದ್ದು, ಬಸ್ಗಳನ್ನು ತೆಗೆಯುವುದಕ್ಕೂ ಸಿಬ್ಬಂದಿ ಪರದಾಡಿತ...
BMTC: ಮಾರ್ಗ ಮಧ್ಯೆ ಬಸ್ ನಿಲ್ಲಿಸಲಿಲ್ಲ ಅಂತ ಚಾಲಕನಿಗೆ ಚಪ್ಪಲಿಯಿಂದ ಹಲ್ಲೆ ಮಾಡಿದ ಮಹಿಳೆ- ಎಫ್ಐಆರ್ ದಾಖಲು
ಬೆಂಗಳೂರು: ಮಾರ್ಗಮಧ್ಯೆ ಕೇಳಿದ ಸ್ಥಳದಲ್ಲಿ ಬಸ್ ನಿಲ್ಲಿಸಲಿಲ್ಲ ಎಂದು ಪ್ರಯಾಣಿಕ ಮಹಿಳೆಯೊಬ್ಬರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಚಾಲಕನಿಗೆ ಚಪ್ಪಲಿಯಿಂದ ಹಲ್ಲೆ ಮಾಡಿರುವ ಘಟನೆ ಕೈಕೊಂಡನಹಳ್ಳಿ ಬಸ್...