CrimeNEWSನಮ್ಮರಾಜ್ಯಸಂಸ್ಕೃತಿ

ನನ್ನ ಸಾವಿಗೆ ನಾನೇ ಕಾರಣ ಯಾರನ್ನೂ ವಿಚಾರಣೆಗೆ ಒಳಪಡಿಸಬೇಡಿ : ನೇಗಿನಹಾಳ ಮಠದ ಶ್ರೀ

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ನಾನು ಯಾವುದೇ ತಪ್ಪು ಮಾಡಿಲ್ಲ, ನನ್ನ ಸಾವಿಗೆ ನಾನೇ ಕಾರಣ. ಯಾರನ್ನೂ ವಿಚಾರಣೆಗೆ ಒಳಪಡಿಸಬೇಡಿ ಎಂದು ಬೈಲಹೊಂಗಲದ ಮಡಿವಾಳೇಶ್ವರ ಮಠದ ಶ್ರೀ ಬಸವ ಸಿದ್ಧಲಿಂಗ ಸ್ವಾಮೀಜಿ ಆತ್ಮಹತ್ಯೆಗೂ ಮುನ್ನ ಡೆತ್ ನೋಟ್‌ ಬರೆದಿಟ್ಟಿದ್ದಾರೆ.

ಚಿತ್ರದುರ್ಗದ ಮುರುಘಾಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದ ಬಳಿಕ ಮಹಿಳೆಯರಿಬ್ಬರು ಮಾತನಾಡಿದ ಆಡಿಯೋ ವೈರಲ್ ಆಗಿತ್ತು. ಈ ಆಡಿಯೋದಲ್ಲಿ ಹಲವು ಪ್ರತಿಷ್ಠಿತ ಸ್ವಾಮೀಜಿಗಳ ವಿರುದ್ಧ ಮಹಿಳೆಯರು ಮಾತನಾಡಿದ್ದರು.

ಈ ಆಡಿಯೋದಲ್ಲಿ ನೇಗಿನಹಾಳ ಮಠದ ಶ್ರೀ ಬಸವ ಸಿದ್ಧಲಿಂಗ ಸ್ವಾಮೀಜಿಗಳ ಹೆಸರು ಉಲ್ಲೇಖಿಸಲಾಗಿತ್ತು. ಇದಾದ ಬೆನ್ನಲ್ಲೇ ಸ್ವಾಮೀಜಿ ನೇಣು ಬಿಗಿದುಕೊಂಡು ಮಠದಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದರು.

ಆತ್ಮಹತ್ಯೆಗೂ ಮುನ್ನ ಡೆತ್‍ನೋಟ್ ಬರೆದಿರುವುದು ಈಗ ಸಿಕ್ಕಿದ್ದು, ಅದರಲ್ಲಿ ಸ್ವಾಮೀಜಿ, ನಾನು ಯಾವುದೇ ತಪ್ಪು ಮಾಡಿಲ್ಲ, ನನ್ನ ಸಾವಿಗೆ ನಾನೇ ಕಾರಣ. ಯಾರನ್ನೂ ವಿಚಾರಣೆಗೆ ಒಳಪಡಿಸಬೇಡಿ. ಈ ಲೋಕದ ಗೊಡವೆ ಸಾಕು, ಹಡೆದ ತಾಯಿ ನನ್ನ ಕ್ಷಮಿಸು, ಮಠದ ಭಕ್ತರು ನನ್ನನ್ನು ಕ್ಷಮಿಸಿ. ನನ್ನ ನಡೆ ಮಡಿವಾಳೇಶ್ವರ ಕಡೆಗೆ. ಮಠದ ಕಮಿಟಿ, ಭಕ್ತರು ಮಠವನ್ನು ಮುನ್ನಡೆಸಿಕೊಂಡು ಹೋಗಿ ಎಂದು ಉಲ್ಲೇಖಿಸಿದ್ದಾರೆ.

ಇತ್ತ ಸ್ವಾಮೀಜಿಗಳು ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ವೈರಲ್ ಆದ ಆಡಿಯೋದಲ್ಲಿ ಮಾತನಾಡಿರುವ ಮಹಿಳೆಯರ ಬಂಧನ ಆಗಬೇಕು ಎಂದು ಮಠದ ಭಕ್ತರು ಆಗ್ರಹಿಸಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಎಸ್‌ಪಿ ಡಾ.ಸಂಜೀವ ಪಾಟೀಲ್, ಎಫ್‍ಎಸ್‍ಎಲ್ ತಂಡ ಪರಿಶೀಲನೆ ನಡೆಸಿದರು. ಬಳಿಕ ಮಾಹಿತಿ ನೀಡಿದ ಎಸ್‍ಪಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ